Homeಮುಖಪುಟರಾಜಸ್ಥಾನ ದಲಿತ ಬಾಲನಕ ಹತ್ಯೆ ಹಿನ್ನೆಲೆ: ತನ್ನ ತಂದೆ ಎದುರಿಸಿದ ಜಾತಿ ತಾರತಮ್ಯ ನೆನಪಿಸಿಕೊಂಡ ಮಾಜಿ...

ರಾಜಸ್ಥಾನ ದಲಿತ ಬಾಲನಕ ಹತ್ಯೆ ಹಿನ್ನೆಲೆ: ತನ್ನ ತಂದೆ ಎದುರಿಸಿದ ಜಾತಿ ತಾರತಮ್ಯ ನೆನಪಿಸಿಕೊಂಡ ಮಾಜಿ ಸ್ಪೀಕರ್ ಮೀರಾ ಕುಮಾರ್!

- Advertisement -
- Advertisement -

ಲೋಕಸಭೆಯ ಮಾಜಿ ಸ್ಪೀಕರ್ ಮತ್ತು ಕೇಂದ್ರ ಸಚಿವೆ ಮೀರಾ ಕುಮಾರ್ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ತಂದೆ ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರು ಕೂಡಾ ಜಾತಿ ವ್ಯವಸ್ಥೆಯಿಂದಾಗಿ ಎದುರಿಸಿದ್ದ ತಾರತಮ್ಯವನ್ನು ಬಹಿರಂಗಪಡಿಸಿದ್ದಾರೆ. ಇತ್ತೀಚೆಗೆ ರಾಜಸ್ಥಾನದಲ್ಲಿ ದಲಿತ ಬಾಲಕನೊಬ್ಬ ಸವರ್ಣೀಯರಿಗೆ ಮೀಸಲಾದ ಪಾತ್ರೆಯಲ್ಲಿ ನೀರು ಕುಡಿಸಿದ್ದಾರೆಂದು ಆರೋಪಕ್ಕೊಳಗಾಗಿ ಶಿಕ್ಷಕನಿಂದ ಹತ್ಯೆಯಾದ ಪ್ರಕರಣದ ವಿರುದ್ಧ ಮೀರಾ ಕುಮಾರ್ ಮಾತನಾಡಿದ್ದಾರೆ.

ಸೋಮವಾರದಂದು ಟ್ವೀಟ್‌ ಮಾಡಿರುವ ಮೀರಾ ಕುಮಾರ್ ಅವರು, “100 ವರ್ಷಗಳ ಹಿಂದೆ, ನನ್ನ ತಂದೆ ಬಾಬು ಜಗಜೀವನ್ ರಾಮ್ ಅವರಿಗೆ ಶಾಲೆಯಲ್ಲಿ ಸವರ್ಣ ಹಿಂದೂಗಳಿಗೆ ಮೀಸಲಾದ ಪಾತ್ರೆಯಿಂದ ನೀರನ್ನು ಕುಡಿಯಬಾರದು ಎಂದು ನಿಷೇಧಿಸಿದ್ದರು. ಆಗ ಅವರ ಪ್ರಾಣ ಉಳಿದಿದ್ದು ಒಂದು ಪವಾಡ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಂದು, ಅದೇ ಕಾರಣಕ್ಕಾಗಿ ಒಂಬತ್ತು ವರ್ಷದ ದಲಿತ ಬಾಲಕನನ್ನು ಕೊಲ್ಲಲಾಗಿದೆ. ಸ್ವಾತಂತ್ರ್ಯದ 75 ವರ್ಷಗಳ ನಂತರ, ಜಾತಿ ವ್ಯವಸ್ಥೆಯು ನಮ್ಮ ದೊಡ್ಡ ಶತ್ರುವಾಗಿ ಉಳಿದಿದೆ” ಎಂದು ಅವರು ಹೇಳಿದ್ದಾರೆ.

ಮಂಗಳವಾರ ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮೀರಾ ಕುಮಾರ್ ತನ್ನ ತಂದೆಯನ್ನು “ಅವಮಾನಗೊಳಿಸಲಾಗಿತ್ತು” ಮತ್ತು ಅವರು ತಮ್ಮ ಅಧಿಕಾರಾವಧಿಯಲ್ಲಿ ಜಾತಿವಾದಿ ನಿಂದನೆಗಳನ್ನು ಎದುರಿಸಬೇಕಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮ್ಯಾನೇಜ್‌ಮೆಂಟ್‌ ಸರ್ಕಾರ | ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

1978 ರಲ್ಲಿ ವಾರಣಾಸಿಯಲ್ಲಿ ನಡೆದ ಘಟನೆಯೊಂದರ ಬಗ್ಗೆ ಮಾತನಾಡಿದ ಅವರು, ತಂದೆ ಸಂಪೂರ್ಣಾನಂದರ ಪ್ರತಿಮೆಯನ್ನು ಅನಾವರಣಗೊಳಿಸಲು ಹೋಗಿದ್ದರು. ಅಲ್ಲಿ ಅವರಿಗೆ “ಜಗಜೀವನ್‌ ‘ಚಮ್ಮಾರ್’ ಇಲ್ಲಿಂದ ಹೋಗು” ಎಂದು ಹೇಳಲಾಗಿತ್ತು” ಎಂದು ಹೇಳಿದ್ದಾರೆ.

“ಪ್ರತಿಮೆ ‘ಕಲುಷಿತ’ವಾಗಿದೆ ಎಂದು ಅವರು ಅದನ್ನು ಗಂಗಾಜಲದಿಂದ ತೊಳೆದರು… ಜಾತಿ ವ್ಯವಸ್ಥೆಯು ಪ್ರತಿಯೊಬ್ಬರನ್ನು ಆವರಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಲಂಡನ್‌ನಲ್ಲಿ ಬಾಡಿಗೆಗೆ ಸ್ಥಳವನ್ನು ಹುಡುಕುತ್ತಿರುವಾಗ ತನ್ನ ಜಾತಿಯ ಕುರಿತು ಕೇಳಿರುವ ಬಗ್ಗೆ ಮೀರಾ ಕುಮಾರ್ ಅವರು ನೆನಪಿಸಿಕೊಂಡಿದ್ದಾರೆ. “ಮನೆಯನ್ನು ಬಾಡಿಗೆಗೆ ನೀಡಲು ಹೊರಟಿದ್ದ ವ್ಯಕ್ತಿ ಹಿಂದೂ ಕೂಡ ಆಗಿರಲಿಲ್ಲ. ಅವರು ಕ್ರಿಶ್ಚಿಯನ್‌ ಆಗಿದ್ದರೂ… ಅವರು ನನ್ನನ್ನು ‘ನೀವು ಬ್ರಾಹ್ಮಣರೆ?’ ಎಂದು ಕೇಳಿದರು. ನಾನು, ‘ಅಲ್ಲ, ನಾನು ಬ್ರಾಹ್ಮಣನಲ್ಲ, ಪರಿಶಿಷ್ಟ ಜಾತಿ. ನಿಮಗೆ ಏನಾದರೂ ತೊಂದರೆ ಇದೆಯೇ?’ ಎಂದೆ. ಆಗ ಅವರು, ‘ಇಲ್ಲ’ ಎಂದರು. ಆದರೆ ಅವರು ನನಗೆ ಮನೆ ಕೊಡಲೇ ಇಲ್ಲ!” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಶಿಕ್ಷಕನಿಂದ ದಲಿತ ಬಾಲಕನ ಹತ್ಯೆ ಪ್ರಕರಣ; ರಾಜಕೀಯ ಬಿಕ್ಕಟ್ಟಿನಲ್ಲಿ ಸಿಎಂ ಗೆಹ್ಲೋಟ್‌

“ಈ ಬಗ್ಗೆ ನಾನು ನನ್ನ ತಂದೆಯನ್ನು, ‘ನೀವು ಸ್ವಾತಂತ್ರ್ಯಕ್ಕಾಗಿ ಏಕೆ ಹೋರಾಡಿದ್ದೀರಿ? ಈ ದೇಶ ನಿಮಗಾಗಿ ಏನನ್ನೂ ಮಾಡಿಲ್ಲ. ಅದು ನಿಮಗೆ ಅಥವಾ ನಿಮ್ಮ ಪೂರ್ವಜರಿಗೂ ಏನನ್ನೂ ನೀಡಿಲ್ಲ… ಎಂದು ಕೇಳಿದ್ದೆ’ ಅದಕ್ಕೆ ಅವರು, ‘ಸ್ವತಂತ್ರ ಭಾರತವು ಬದಲಾಗಲಿದ್ದು, ಜಾತಿ ರಹಿತ ಸಮಾಜ ನಿರ್ಮಾಣವಾಗಲಿದೆ’ ಎಂದು ಹೇಳಿದ್ದರು” ಎಂದು ಮೀರಾ ಅವರು ನೆನಪಿಸಿಕೊಂಡಿದ್ದಾರೆ.

“ಸ್ವಾತಂತ್ರ್ಯದ 75 ವರ್ಷಗಳ ನಂತರ ಕೂಡಾ ಭಾರತ ಬದಲಾಗಿಲ್ಲ ಎಂಬುವುದನ್ನು ನೋಡಲು ಅವರು ಈಗ ಇಲ್ಲ ಎಂಬುವುದೆ ನನಗೆ ಖುಷಿಯ ವಿಚಾರವಾಗಿದೆ” ಎಂದು ಮೀರಾ ಹೇಳಿದ್ದಾರೆ.

ಇದನ್ನೂ ಓದಿ: ಮಹಿಳೆಯ ಬಗ್ಗೆ ಮೋದಿ ಆಡಿದ ಮಾತಿಗೆ ಅರ್ಥವಿಲ್ಲವೆ?: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆ ಬಳಿಕ ಪ್ರತಿಪಕ್ಷಗಳ ವಾಗ್ದಾಳಿ

ಜಲೋರ್‌ನ ಒಂಬತ್ತು ವರ್ಷದ ದಲಿತ ಬಾಲಕನ ಸಾವಿನ ಬಗ್ಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಪ್ರತಿಪಕ್ಷಗಳು ಮತ್ತು ಕಾಂಗ್ರೆಸ್‌ನ ಒಂದು ಬಣ ಕಿಡಿಕಾರಿದ್ದಾರೆ. ಅಲ್ಲದೆ ಬರನ್-ಅತ್ರು ಕ್ಷೇತ್ರದ ಕಾಂಗ್ರೆಸ್ ಶಾಸಕ ಪನಾ ಚಂದ್ ಮೇಘವಾಲ್ ಅವರು ಸೋಮವಾರ ವಿಧಾನಸಭೆ ಸ್ಪೀಕರ್ ಸಿಪಿ ಜೋಶಿ ಮತ್ತು ಸಿಎಂಗೆ ರಾಜೀನಾಮೆ ಸಲ್ಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....