Homeಮುಖಪುಟರಾಜಸ್ಥಾನ: ಪೊಲೀಸ್ ರಕ್ಷಣೆಯಲ್ಲಿ ದಲಿತ ಮಧುಮಗನ ಕುದುರೆ ಸವಾರಿ - ಮೊಳಗಿದ ಜೈಭೀಮ್ ಘೋಷಣೆಗಳು

ರಾಜಸ್ಥಾನ: ಪೊಲೀಸ್ ರಕ್ಷಣೆಯಲ್ಲಿ ದಲಿತ ಮಧುಮಗನ ಕುದುರೆ ಸವಾರಿ – ಮೊಳಗಿದ ಜೈಭೀಮ್ ಘೋಷಣೆಗಳು

ಕಳೆದ 10 ವರ್ಷಗಳಲ್ಲಿ ದಲಿತರು ತಮ್ಮ ಮದುವೆ ಸಂದರ್ಭದಲ್ಲಿ ಮಧುಮಗ ಕುದುರೆ ಸವಾರಿ ಮಾಡಿದ್ದಕ್ಕಾಗಿ ಮೇಲ್ಜಾತಿಯವರಿಂದ ಹಲ್ಲೆಗೊಳಗಾದ 76 ಪ್ರಕರಣಗಳು ಪೊಲೀಸ್ ಠಾಣೆ ಮೆಟ್ಟಿಲೇರಿವೆ.

- Advertisement -
- Advertisement -

ಭಾರತವಿನ್ನು ಜಾತಿಗ್ರಸ್ತ ದೇಶವಾಗಿಯೇ ಉಳಿದುಕೊಂಡಿದೆ. ನಾವು ಎಷ್ಟೇ ಮುಂದೆ ಸಾಗಿದರೂ, ಕೋವಿಡ್‌ನಂತಹ ಕರಾಳ ರೋಗಗಳು ಬಂದರೂ ಸಹ ಹಲವಾರು ಮೇಲ್ಜಾತಿ ಎಂದು ಕರೆಸಿಕೊಳ್ಳುವವರ ಮನಸ್ಸಿನಲ್ಲಿನ ಜಾತಿ ರೋಗ ಮಾತ್ರ ನಾಶವಾಗಿಲ್ಲ. ದಲಿತರು, ತಳಸಮುದಾಯವರು ಹೊಸ ಬಟ್ಟೆ ಧರಿಸುವಂತಿಲ್ಲ, ವಾಚ್ ಹಾಕುವಂತಿಲ್ಲ, ಅಂಬೇಡ್ಕರ್ ರಿಂಗ್ ಟೋನ್ ಹಾಕಿಕೊಳ್ಳುವಂತಿಲ್ಲ ಎಂದು ಕಟ್ಟಳೆಗಳನ್ನು ವಿಧಿಸಿ, ದೌರ್ಜನ್ಯವೆಸಗಿರುವ ಕ್ರೂರ ಘಟನೆಗಳಿಗೆ ನಾವು ಸಾಕ್ಷಿಯಾಗಿದ್ದೇವೆ. ಭಾರತದ ರಾಜಸ್ಥಾನದಲ್ಲಿ ಕಳೆದ 10 ವರ್ಷಗಳಲ್ಲಿ ದಲಿತರು ತಮ್ಮ ಮದುವೆ ಸಂದರ್ಭದಲ್ಲಿ ಮಧುಮಗ ಕುದುರೆ ಸವಾರಿ ಮಾಡಿದ್ದಕ್ಕಾಗಿ ಮೇಲ್ಜಾತಿಯವರಿಂದ ಹಲ್ಲೆಗೊಳಗಾದ 76 ಪ್ರಕರಣಗಳು ಪೊಲೀಸ್ ಠಾಣೆ ಮೆಟ್ಟಿಲೇರಿವೆ. ಅಂದರೆ ‘ದಲಿತರು ಯಾವಗಾಲೂ ಕೆಳಗಿರುವವರು, ಕೆಳಗೇ ಇರಬೇಕು ಅಷ್ಟೇ. ಅವರು ಮೇಲೆ ಬಂದರೆ ನಾವು ಅದನ್ನು ಸಹಿಸುವುದಿಲ್ಲ’ ಎಂದು ಮೇಲ್ಜಾತಿ ಕ್ರೂರ ಮನಸ್ಸುಗಳು ದೌರ್ಜನ್ಯದ ಮೂಲಕ ಸಾರಿ ಹೇಳುತ್ತಿವೆ. ಇದರ ತಾತ್ಪರ್ಯವೆಂದರೆ ದಲಿತರು, ಕೆಳಜಾತಿಯವರು ನಮ್ಮ ಸೇವೆ ಮಾಡಿಕೊಂಡು ಬಿದ್ದಿರಬೇಕು ಹೊರತು ಮೇಲೆ ಬರಬಾರದು ಎಂಬ ಮನುಸ್ಮೃತಿಯ ಹೇರಿಕೆಯಾಗಿದೆ.

ಇಂತಹ ಮನುಸ್ಮೃತಿಯನ್ನು ಧಿಕ್ಕರಿಸಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಕೊಟ್ಟ ಸಂವಿಧಾನವನ್ನು ಬಳಸಿ ಅದೇ ರಾಜಸ್ಥಾನದ ದಲಿತ ಮಧುಮಗನೊಬ್ಬ ಪೊಲೀಸರ ರಕ್ಷಣೆಯೊಂದಿಗೆ ಕುದುರೆ ಸವಾರಿ ಮಾಡಿದ ಐತಿಹಾಸಿಕ, ಅಪರೂಪದ, ದಿಟ್ಟ ಪ್ರತಿರೋಧದ ಘಟನೆ ಸೋಮವಾರ ನಡೆದಿದೆ. ಬುಂಡಿ ಜಿಲ್ಲೆಯ ಛಾಡಿ ಗ್ರಾಮದ 27 ವರ್ಷದ ಶ್ರೀರಾಮ್ ಮೇಘವಾಲ್ ಎಂಬ ಯುವಕ ಶೇರ್ವಾನಿಯ ಹೊಸ ಧಿರಿಸು ಧರಿಸಿ, ಸೊಂಟಕ್ಕೆ ಕತ್ತಿ ಧರಿಸಿ, ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕುದುರೆಯೇರಿ ಊರಿನ ಸುತ್ತ ಮೆರವಣಿಗೆ ನಡೆಸಿ ಕಲ್ಯಾಣ ಮಂಟಪಕ್ಕೆ ತೆರಳಿದರು. ಸುತ್ತಲೂ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ವರನ ಸ್ನೇಹಿತರು ಜೈಭೀಮ್ ಘೋಷಣೆ ಕೂಗಿದರು. ಡಿ.ಜೆ ಸೌಂಡ್ ಆರ್ಭಟ ನಡೆಯಿತು. ಬಾಲಿವುಡ್ ಹಾಡುಗಳನ್ನು ಹಾಕಲಾಯಿತು. ಮಕ್ಕಳು ಮತ್ತು ಮಹಿಳೆಯರು ನೃತ್ಯ ಮಾಡಿದರು.

ಊರಿನ ಸುತ್ತಲೂ ಕುದುರೆ ಸವಾರಿ ಮುಗಿಸಿದ ವರ ನೇರವಾಗಿ ವೇದಿಕೆ ಏರಿದರು. ಹಿಂದೆ ಡಾ.ಬಿ.ಆರ್ ಅಂಬೇಡ್ಕರ್‌ರವರ ಬೃಹತ್ ಪೋಟೊ ಇದ್ದ ಬ್ಯಾಕ್‌ಡ್ರಾಪ್ ಹಾಕಲಾಗಿತ್ತು. ವೇದಿಕೆ ಮುಂಭಾಗದಲ್ಲಿ ಕಾವಲಿದ್ದ ತನ್ನ ಸ್ನೇಹಿತರಿಗೆ ವರ ಕೈಕುಲುಕಿ ಧನ್ಯವಾದ ತಿಳಿಸಿದರು. ಮದುವೆ ಸಾಂಗವಾಗಿ ನಡೆಯಿತು. ಆದರೆ ಅದಕ್ಕೂ ಮೊದಲು 60 ಪೊಲೀಸರು ಇಡೀ ಗ್ರಾಮದ ಸುತ್ತ ಪರೇಡ್ ನಡೆಸಿದ್ದರು. ಮೇಲ್ಜಾತಿ ಗೂಂಡಾಗಳು ಎಲ್ಲಿ ದಾಳಿ ಮಾಡುತ್ತಾರೆ ಎಂದು ಕಣ್ಣಲ್ಲಿ ಕಣ್ಣಿಟ್ಟು ಕಾದಿದ್ದರು!

ಮದುವೆ ನಂತರ ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡಿದ ಮಧುಮಗ “ಈ ರಸ್ತೆಗಳಲ್ಲಿ ಕುದುರೆ ಸವಾರಿ ಮಾಡಿದ ಮೊದಲ ದಲಿತ ವರ ನಾನು. ಇದರಿಂದ ದಲಿತರು ಕೆಳಗಿದ್ದಾರೆ, ಕೆಳಗೇ ಉಳಿಯಬೇಕು ಎಂಬ ಮನಸ್ಥಿತಿ ಬದಲಾಗಲಿದೆ. ಇದು ಸಮಾನತೆಯತ್ತ ಒಂದು ಹೆಜ್ಜೆಯಾಗಿದೆ. ಇನ್ನು ಮುಂದೆ ಹಲವಾರು ದಲಿತ ಯುವಕರು ತಮ್ಮ ಮದುವೆಗಳಲ್ಲಿ ಕುದುರೆ ಸವಾರಿ ಮಾಡುತ್ತಾರೆ. ನಮ್ಮ ಸಮಾಜ ಬದಲಾಗುತ್ತದೆ” ಎಂದಿದ್ದಾರೆ.

ಗ್ರಾಮ ಪಂಚಾಯಿತಿಯಲ್ಲಿ ಗುತ್ತಿಗೆ ನೌಕರನಾಗಿರುವ ಶ್ರೀರಾಮ್ ಮೇಘವಾಲ್ ದ್ರೌಪದಿ ಎಂಬುವವರನ್ನು ವರಿಸಿದರು. ಜಿಲ್ಲೆಯಲ್ಲಿ ಈಗಾಗಲೇ ಈ ರೀತಿಯ ಕುದುರೆ ಸವಾರಿ ವೇಳೆ ದಲಿತರ ಮೇಲೆ ದೌರ್ಜನ್ಯಗಳು ನಡೆದಿದ್ದರಿಂದ ಅವರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಬುಂಡಿ ಜಿಲ್ಲಾಡಳಿತ ಒಂದು ಸಮಿತಿ ರಚಿಸಿ ಅದರ ಮೇಲುಸ್ತುವಾರಿಯಲ್ಲಿ ಈ ಮದುವೆ ಆಯೋಜಿಸಿತ್ತು. ಅದಕ್ಕೆ ‘ಆಪರೇಷನ್ ಸಮಂತಾ (ಆಪರೇಷನ್ ಸಮಾನತೆ)’ ಎಂದು ಹೆಸರಿಡಲಾಗಿತ್ತು. ದಲಿತ ಸಮುದಾಯದ ಮದುವೆಗಳಿಗೆ ಕಾನೂನು ರೀತ್ಯಾ ರಕ್ಷಣೆ ಒದಗಿಸಿ, ಯಾವುದೇ ದೌರ್ಜನ್ಯ ನಡೆಯದಂತೆ ತಡೆಯುವುದು ಅದರ ಗುರಿಯಾಗಿದೆ. ಈ ಸಮಿತಿಯು ದಲಿತ ಸಮುದಾಯಗಳನ್ನು ಭೇಟಿ ಮಾಡಿ ಧೈರ್ಯದಿಂದ ಮದುವೆ ಮಾಡಿಕೊಳ್ಳಿ, ಏನಾದರೂ ಸಹಾಯ ಬೇಕಾದರೂ ನೀಡುತ್ತೇವೆ ಎಂದು ತಿಳಿಸುತ್ತಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮದುವೆಗೂ ಮುಂಚೆಯೇ ಎಲ್ಲಾ ಸಮುದಾಯಗಳ ಸಭೆ ಸೇರಿಸಿ ಶಾಂತಿ ಕಾಪಾಡಲು ಮನವಿ ಮಾಡಿದ್ದರು. ಎಲ್ಲಾ ಸಮುದಾಯಗಳು ಬೆಂಬಲ ನೀಡಿದರು ಎಂದು ಅವರು ತಿಳಿಸಿದ್ದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರಾಜಸ್ಥಾನದಲ್ಲಿ ವಿವಾಹದ ಸಂದರ್ಭದಲ್ಲಿ ಸಿಂಗಾರಗೊಂಡ ವರ ಊರಿನ ಸುತ್ತಾ ಕುದುರೆ ಸವಾರಿ ಮಾಡುವ ಸಂಪ್ರದಾಯವಿದೆ. ಇತ್ತೀಚೆಗೆ ದಲಿತರು ಸಹ ಕುದುರೆ ಸವಾರಿ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ಕ್ರೂರ ಜಾತೀಯತೆಯ ಇತಿಹಾಸ ಹೊಂದಿರುವ ರಾಜಸ್ಥಾನದಲ್ಲಿ ಅದು ತಮ್ಮ ಪ್ರತಿಷ್ಟೆಗೆ ಧಕ್ಕೆ ಎಂದು ಭಾವಿಸಿರುವ ಮೇಲ್ಜಾತಿ ಗೂಂಡಾಗಳು ಅದನ್ನು ತಡೆಯಲು ಹಲ್ಲೆ, ದೌರ್ಜನ್ಯ ನಡೆಸಿದ್ದಾರೆ. ಇದುವರೆಗೂ 76 ಪ್ರಕರಣಗಳು ದಾಖಲಾಗಿವೆ ಎನ್ನುತ್ತಾರೆ ರಾಜಸ್ಥಾನ ಪೊಲೀಸರು. ಆದರೆ 77 ನೇ ಮದುವೆಯಲ್ಲಿ ಬದಲಾವಣೆಯ ಗಾಳಿ ಬೀಸಿದೆ. ಜಿಲ್ಲಾಡಳಿತದ ನೆರವು ಪಡೆದು ದಲಿತ ವರನೊಬ್ಬ ಕುದುರೆ ಸವಾರಿ ನಡೆಸಿಯೇ ತಮ್ಮ ಮದುವೆ ಮಾಡಿಕೊಂಡಿದ್ದಾರೆ.

ವರನ ತಂದೆ ಬಾಬುಲಾಲ್ ಮೇಘಾವಾಲ್ ತನ್ನ ಮಗನ ಮದುವೆ ಸಾಂಗವಾಗಿ ನೆರವೇರಿದ್ದಕ್ಕಾಗಿ ಜಿಲ್ಲಾಡಳಿತ ಮತ್ತು ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ. “ಈ ಮೊದಲು ಹಲ್ಲೆ, ದೌರ್ಜನ್ಯದ ಭಯದಿಂದ ದಲಿತ ಮಧುಮಕ್ಕಳು ಕುದುರೆ ಸವಾರಿ ಮಾಡುತ್ತಿರಲಿಲ್ಲ. ಆದರೆ ನನ್ನ ಮಗ ಅದನ್ನು ಬದಲಿಸಿದ್ದಾನೆ” ಎಂದು ಅವರು ತಿಳಿಸಿದ್ದಾರೆ.

ರಾಜಸ್ಥಾನದ ಈ ಘಟನೆಯು ದಲಿತ ಸಮುದಾಯದೊಳಗಿನ ಪ್ರಜ್ಞೆ ಮತ್ತು ಪ್ರತಿರೋಧದ ಮನೋಭಾವವನ್ನು ತೋರುತ್ತದೆ. ಇತ್ತೀಚಿನ ದಿನಗಳಲ್ಲಿ ದಲಿತ ಮತ್ತು ತಳ ಸಮುದಾಯಗಳ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಕರ್ನಾಟಕದಲ್ಲಿಯೂ ಸಹ ದೇವಾಸ್ಥಾನ ಪ್ರವೇಶಕ್ಕಾಗಿ ಹಲವಾರು ಗ್ರಾಮಗಳಲ್ಲಿ ಹೋರಾಟ ಆರಂಭವಾಗಿದೆ. ಅದಕ್ಕೆ ಮೇಲ್ಜಾತಿಗಳಿಂದ ವಿರೋಧ, ಹಲ್ಲೆ ಎದುರಾದ ಹಲವಾರು ಪ್ರಕರಣಗಳು ವರದಿಯಾಗಿವೆ. ರಾಜಸ್ಥಾನ ಜಿಲ್ಲಾಡಳಿತದ ಆಪರೇಷನ್ ಸಮಾನತೆ ಒಳ್ಳೆಯ ನಡೆಯಾಗಿದ್ದು ಹಲವರಿಗೆ ಧೈರ್ಯ ನೀಡಲಿದೆ. ಇದು ಎಲ್ಲಾ ರಾಜ್ಯಗಳಲ್ಲಿಯೂ ಜಾರಿಗೆ ಬರಬೇಕಿದೆ.


ಇದನ್ನೂ ಓದಿ: ‘ಧೀರ ಭಗತ್ ರಾಯ್‌’ ಮೂಲಕ ಮೀಸಲು ಕ್ಷೇತ್ರದ ರಾಜಕೀಯ ಕಥೆಯನ್ನು ಹೇಳಲು ಹೊರಟಿರುವ ನಿರ್ದೇಶಕ ಕರ್ಣನ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. After many decades of freedom this country is not yet ready to allow the untouchable Enjoy the freedom. This country wants the untouchable to be like decades ago. It’s unfortunate!! Hats off to the bride, family and police department.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...