Homeಮುಖಪುಟರಾಜಸ್ಥಾನ: ಪೊಲೀಸ್ ರಕ್ಷಣೆಯಲ್ಲಿ ದಲಿತ ಮಧುಮಗನ ಕುದುರೆ ಸವಾರಿ - ಮೊಳಗಿದ ಜೈಭೀಮ್ ಘೋಷಣೆಗಳು

ರಾಜಸ್ಥಾನ: ಪೊಲೀಸ್ ರಕ್ಷಣೆಯಲ್ಲಿ ದಲಿತ ಮಧುಮಗನ ಕುದುರೆ ಸವಾರಿ – ಮೊಳಗಿದ ಜೈಭೀಮ್ ಘೋಷಣೆಗಳು

ಕಳೆದ 10 ವರ್ಷಗಳಲ್ಲಿ ದಲಿತರು ತಮ್ಮ ಮದುವೆ ಸಂದರ್ಭದಲ್ಲಿ ಮಧುಮಗ ಕುದುರೆ ಸವಾರಿ ಮಾಡಿದ್ದಕ್ಕಾಗಿ ಮೇಲ್ಜಾತಿಯವರಿಂದ ಹಲ್ಲೆಗೊಳಗಾದ 76 ಪ್ರಕರಣಗಳು ಪೊಲೀಸ್ ಠಾಣೆ ಮೆಟ್ಟಿಲೇರಿವೆ.

- Advertisement -
- Advertisement -

ಭಾರತವಿನ್ನು ಜಾತಿಗ್ರಸ್ತ ದೇಶವಾಗಿಯೇ ಉಳಿದುಕೊಂಡಿದೆ. ನಾವು ಎಷ್ಟೇ ಮುಂದೆ ಸಾಗಿದರೂ, ಕೋವಿಡ್‌ನಂತಹ ಕರಾಳ ರೋಗಗಳು ಬಂದರೂ ಸಹ ಹಲವಾರು ಮೇಲ್ಜಾತಿ ಎಂದು ಕರೆಸಿಕೊಳ್ಳುವವರ ಮನಸ್ಸಿನಲ್ಲಿನ ಜಾತಿ ರೋಗ ಮಾತ್ರ ನಾಶವಾಗಿಲ್ಲ. ದಲಿತರು, ತಳಸಮುದಾಯವರು ಹೊಸ ಬಟ್ಟೆ ಧರಿಸುವಂತಿಲ್ಲ, ವಾಚ್ ಹಾಕುವಂತಿಲ್ಲ, ಅಂಬೇಡ್ಕರ್ ರಿಂಗ್ ಟೋನ್ ಹಾಕಿಕೊಳ್ಳುವಂತಿಲ್ಲ ಎಂದು ಕಟ್ಟಳೆಗಳನ್ನು ವಿಧಿಸಿ, ದೌರ್ಜನ್ಯವೆಸಗಿರುವ ಕ್ರೂರ ಘಟನೆಗಳಿಗೆ ನಾವು ಸಾಕ್ಷಿಯಾಗಿದ್ದೇವೆ. ಭಾರತದ ರಾಜಸ್ಥಾನದಲ್ಲಿ ಕಳೆದ 10 ವರ್ಷಗಳಲ್ಲಿ ದಲಿತರು ತಮ್ಮ ಮದುವೆ ಸಂದರ್ಭದಲ್ಲಿ ಮಧುಮಗ ಕುದುರೆ ಸವಾರಿ ಮಾಡಿದ್ದಕ್ಕಾಗಿ ಮೇಲ್ಜಾತಿಯವರಿಂದ ಹಲ್ಲೆಗೊಳಗಾದ 76 ಪ್ರಕರಣಗಳು ಪೊಲೀಸ್ ಠಾಣೆ ಮೆಟ್ಟಿಲೇರಿವೆ. ಅಂದರೆ ‘ದಲಿತರು ಯಾವಗಾಲೂ ಕೆಳಗಿರುವವರು, ಕೆಳಗೇ ಇರಬೇಕು ಅಷ್ಟೇ. ಅವರು ಮೇಲೆ ಬಂದರೆ ನಾವು ಅದನ್ನು ಸಹಿಸುವುದಿಲ್ಲ’ ಎಂದು ಮೇಲ್ಜಾತಿ ಕ್ರೂರ ಮನಸ್ಸುಗಳು ದೌರ್ಜನ್ಯದ ಮೂಲಕ ಸಾರಿ ಹೇಳುತ್ತಿವೆ. ಇದರ ತಾತ್ಪರ್ಯವೆಂದರೆ ದಲಿತರು, ಕೆಳಜಾತಿಯವರು ನಮ್ಮ ಸೇವೆ ಮಾಡಿಕೊಂಡು ಬಿದ್ದಿರಬೇಕು ಹೊರತು ಮೇಲೆ ಬರಬಾರದು ಎಂಬ ಮನುಸ್ಮೃತಿಯ ಹೇರಿಕೆಯಾಗಿದೆ.

ಇಂತಹ ಮನುಸ್ಮೃತಿಯನ್ನು ಧಿಕ್ಕರಿಸಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಕೊಟ್ಟ ಸಂವಿಧಾನವನ್ನು ಬಳಸಿ ಅದೇ ರಾಜಸ್ಥಾನದ ದಲಿತ ಮಧುಮಗನೊಬ್ಬ ಪೊಲೀಸರ ರಕ್ಷಣೆಯೊಂದಿಗೆ ಕುದುರೆ ಸವಾರಿ ಮಾಡಿದ ಐತಿಹಾಸಿಕ, ಅಪರೂಪದ, ದಿಟ್ಟ ಪ್ರತಿರೋಧದ ಘಟನೆ ಸೋಮವಾರ ನಡೆದಿದೆ. ಬುಂಡಿ ಜಿಲ್ಲೆಯ ಛಾಡಿ ಗ್ರಾಮದ 27 ವರ್ಷದ ಶ್ರೀರಾಮ್ ಮೇಘವಾಲ್ ಎಂಬ ಯುವಕ ಶೇರ್ವಾನಿಯ ಹೊಸ ಧಿರಿಸು ಧರಿಸಿ, ಸೊಂಟಕ್ಕೆ ಕತ್ತಿ ಧರಿಸಿ, ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕುದುರೆಯೇರಿ ಊರಿನ ಸುತ್ತ ಮೆರವಣಿಗೆ ನಡೆಸಿ ಕಲ್ಯಾಣ ಮಂಟಪಕ್ಕೆ ತೆರಳಿದರು. ಸುತ್ತಲೂ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ವರನ ಸ್ನೇಹಿತರು ಜೈಭೀಮ್ ಘೋಷಣೆ ಕೂಗಿದರು. ಡಿ.ಜೆ ಸೌಂಡ್ ಆರ್ಭಟ ನಡೆಯಿತು. ಬಾಲಿವುಡ್ ಹಾಡುಗಳನ್ನು ಹಾಕಲಾಯಿತು. ಮಕ್ಕಳು ಮತ್ತು ಮಹಿಳೆಯರು ನೃತ್ಯ ಮಾಡಿದರು.

ಊರಿನ ಸುತ್ತಲೂ ಕುದುರೆ ಸವಾರಿ ಮುಗಿಸಿದ ವರ ನೇರವಾಗಿ ವೇದಿಕೆ ಏರಿದರು. ಹಿಂದೆ ಡಾ.ಬಿ.ಆರ್ ಅಂಬೇಡ್ಕರ್‌ರವರ ಬೃಹತ್ ಪೋಟೊ ಇದ್ದ ಬ್ಯಾಕ್‌ಡ್ರಾಪ್ ಹಾಕಲಾಗಿತ್ತು. ವೇದಿಕೆ ಮುಂಭಾಗದಲ್ಲಿ ಕಾವಲಿದ್ದ ತನ್ನ ಸ್ನೇಹಿತರಿಗೆ ವರ ಕೈಕುಲುಕಿ ಧನ್ಯವಾದ ತಿಳಿಸಿದರು. ಮದುವೆ ಸಾಂಗವಾಗಿ ನಡೆಯಿತು. ಆದರೆ ಅದಕ್ಕೂ ಮೊದಲು 60 ಪೊಲೀಸರು ಇಡೀ ಗ್ರಾಮದ ಸುತ್ತ ಪರೇಡ್ ನಡೆಸಿದ್ದರು. ಮೇಲ್ಜಾತಿ ಗೂಂಡಾಗಳು ಎಲ್ಲಿ ದಾಳಿ ಮಾಡುತ್ತಾರೆ ಎಂದು ಕಣ್ಣಲ್ಲಿ ಕಣ್ಣಿಟ್ಟು ಕಾದಿದ್ದರು!

ಮದುವೆ ನಂತರ ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡಿದ ಮಧುಮಗ “ಈ ರಸ್ತೆಗಳಲ್ಲಿ ಕುದುರೆ ಸವಾರಿ ಮಾಡಿದ ಮೊದಲ ದಲಿತ ವರ ನಾನು. ಇದರಿಂದ ದಲಿತರು ಕೆಳಗಿದ್ದಾರೆ, ಕೆಳಗೇ ಉಳಿಯಬೇಕು ಎಂಬ ಮನಸ್ಥಿತಿ ಬದಲಾಗಲಿದೆ. ಇದು ಸಮಾನತೆಯತ್ತ ಒಂದು ಹೆಜ್ಜೆಯಾಗಿದೆ. ಇನ್ನು ಮುಂದೆ ಹಲವಾರು ದಲಿತ ಯುವಕರು ತಮ್ಮ ಮದುವೆಗಳಲ್ಲಿ ಕುದುರೆ ಸವಾರಿ ಮಾಡುತ್ತಾರೆ. ನಮ್ಮ ಸಮಾಜ ಬದಲಾಗುತ್ತದೆ” ಎಂದಿದ್ದಾರೆ.

ಗ್ರಾಮ ಪಂಚಾಯಿತಿಯಲ್ಲಿ ಗುತ್ತಿಗೆ ನೌಕರನಾಗಿರುವ ಶ್ರೀರಾಮ್ ಮೇಘವಾಲ್ ದ್ರೌಪದಿ ಎಂಬುವವರನ್ನು ವರಿಸಿದರು. ಜಿಲ್ಲೆಯಲ್ಲಿ ಈಗಾಗಲೇ ಈ ರೀತಿಯ ಕುದುರೆ ಸವಾರಿ ವೇಳೆ ದಲಿತರ ಮೇಲೆ ದೌರ್ಜನ್ಯಗಳು ನಡೆದಿದ್ದರಿಂದ ಅವರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಬುಂಡಿ ಜಿಲ್ಲಾಡಳಿತ ಒಂದು ಸಮಿತಿ ರಚಿಸಿ ಅದರ ಮೇಲುಸ್ತುವಾರಿಯಲ್ಲಿ ಈ ಮದುವೆ ಆಯೋಜಿಸಿತ್ತು. ಅದಕ್ಕೆ ‘ಆಪರೇಷನ್ ಸಮಂತಾ (ಆಪರೇಷನ್ ಸಮಾನತೆ)’ ಎಂದು ಹೆಸರಿಡಲಾಗಿತ್ತು. ದಲಿತ ಸಮುದಾಯದ ಮದುವೆಗಳಿಗೆ ಕಾನೂನು ರೀತ್ಯಾ ರಕ್ಷಣೆ ಒದಗಿಸಿ, ಯಾವುದೇ ದೌರ್ಜನ್ಯ ನಡೆಯದಂತೆ ತಡೆಯುವುದು ಅದರ ಗುರಿಯಾಗಿದೆ. ಈ ಸಮಿತಿಯು ದಲಿತ ಸಮುದಾಯಗಳನ್ನು ಭೇಟಿ ಮಾಡಿ ಧೈರ್ಯದಿಂದ ಮದುವೆ ಮಾಡಿಕೊಳ್ಳಿ, ಏನಾದರೂ ಸಹಾಯ ಬೇಕಾದರೂ ನೀಡುತ್ತೇವೆ ಎಂದು ತಿಳಿಸುತ್ತಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮದುವೆಗೂ ಮುಂಚೆಯೇ ಎಲ್ಲಾ ಸಮುದಾಯಗಳ ಸಭೆ ಸೇರಿಸಿ ಶಾಂತಿ ಕಾಪಾಡಲು ಮನವಿ ಮಾಡಿದ್ದರು. ಎಲ್ಲಾ ಸಮುದಾಯಗಳು ಬೆಂಬಲ ನೀಡಿದರು ಎಂದು ಅವರು ತಿಳಿಸಿದ್ದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರಾಜಸ್ಥಾನದಲ್ಲಿ ವಿವಾಹದ ಸಂದರ್ಭದಲ್ಲಿ ಸಿಂಗಾರಗೊಂಡ ವರ ಊರಿನ ಸುತ್ತಾ ಕುದುರೆ ಸವಾರಿ ಮಾಡುವ ಸಂಪ್ರದಾಯವಿದೆ. ಇತ್ತೀಚೆಗೆ ದಲಿತರು ಸಹ ಕುದುರೆ ಸವಾರಿ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ಕ್ರೂರ ಜಾತೀಯತೆಯ ಇತಿಹಾಸ ಹೊಂದಿರುವ ರಾಜಸ್ಥಾನದಲ್ಲಿ ಅದು ತಮ್ಮ ಪ್ರತಿಷ್ಟೆಗೆ ಧಕ್ಕೆ ಎಂದು ಭಾವಿಸಿರುವ ಮೇಲ್ಜಾತಿ ಗೂಂಡಾಗಳು ಅದನ್ನು ತಡೆಯಲು ಹಲ್ಲೆ, ದೌರ್ಜನ್ಯ ನಡೆಸಿದ್ದಾರೆ. ಇದುವರೆಗೂ 76 ಪ್ರಕರಣಗಳು ದಾಖಲಾಗಿವೆ ಎನ್ನುತ್ತಾರೆ ರಾಜಸ್ಥಾನ ಪೊಲೀಸರು. ಆದರೆ 77 ನೇ ಮದುವೆಯಲ್ಲಿ ಬದಲಾವಣೆಯ ಗಾಳಿ ಬೀಸಿದೆ. ಜಿಲ್ಲಾಡಳಿತದ ನೆರವು ಪಡೆದು ದಲಿತ ವರನೊಬ್ಬ ಕುದುರೆ ಸವಾರಿ ನಡೆಸಿಯೇ ತಮ್ಮ ಮದುವೆ ಮಾಡಿಕೊಂಡಿದ್ದಾರೆ.

ವರನ ತಂದೆ ಬಾಬುಲಾಲ್ ಮೇಘಾವಾಲ್ ತನ್ನ ಮಗನ ಮದುವೆ ಸಾಂಗವಾಗಿ ನೆರವೇರಿದ್ದಕ್ಕಾಗಿ ಜಿಲ್ಲಾಡಳಿತ ಮತ್ತು ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ. “ಈ ಮೊದಲು ಹಲ್ಲೆ, ದೌರ್ಜನ್ಯದ ಭಯದಿಂದ ದಲಿತ ಮಧುಮಕ್ಕಳು ಕುದುರೆ ಸವಾರಿ ಮಾಡುತ್ತಿರಲಿಲ್ಲ. ಆದರೆ ನನ್ನ ಮಗ ಅದನ್ನು ಬದಲಿಸಿದ್ದಾನೆ” ಎಂದು ಅವರು ತಿಳಿಸಿದ್ದಾರೆ.

ರಾಜಸ್ಥಾನದ ಈ ಘಟನೆಯು ದಲಿತ ಸಮುದಾಯದೊಳಗಿನ ಪ್ರಜ್ಞೆ ಮತ್ತು ಪ್ರತಿರೋಧದ ಮನೋಭಾವವನ್ನು ತೋರುತ್ತದೆ. ಇತ್ತೀಚಿನ ದಿನಗಳಲ್ಲಿ ದಲಿತ ಮತ್ತು ತಳ ಸಮುದಾಯಗಳ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಕರ್ನಾಟಕದಲ್ಲಿಯೂ ಸಹ ದೇವಾಸ್ಥಾನ ಪ್ರವೇಶಕ್ಕಾಗಿ ಹಲವಾರು ಗ್ರಾಮಗಳಲ್ಲಿ ಹೋರಾಟ ಆರಂಭವಾಗಿದೆ. ಅದಕ್ಕೆ ಮೇಲ್ಜಾತಿಗಳಿಂದ ವಿರೋಧ, ಹಲ್ಲೆ ಎದುರಾದ ಹಲವಾರು ಪ್ರಕರಣಗಳು ವರದಿಯಾಗಿವೆ. ರಾಜಸ್ಥಾನ ಜಿಲ್ಲಾಡಳಿತದ ಆಪರೇಷನ್ ಸಮಾನತೆ ಒಳ್ಳೆಯ ನಡೆಯಾಗಿದ್ದು ಹಲವರಿಗೆ ಧೈರ್ಯ ನೀಡಲಿದೆ. ಇದು ಎಲ್ಲಾ ರಾಜ್ಯಗಳಲ್ಲಿಯೂ ಜಾರಿಗೆ ಬರಬೇಕಿದೆ.


ಇದನ್ನೂ ಓದಿ: ‘ಧೀರ ಭಗತ್ ರಾಯ್‌’ ಮೂಲಕ ಮೀಸಲು ಕ್ಷೇತ್ರದ ರಾಜಕೀಯ ಕಥೆಯನ್ನು ಹೇಳಲು ಹೊರಟಿರುವ ನಿರ್ದೇಶಕ ಕರ್ಣನ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. After many decades of freedom this country is not yet ready to allow the untouchable Enjoy the freedom. This country wants the untouchable to be like decades ago. It’s unfortunate!! Hats off to the bride, family and police department.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...