Homeಮುಖಪುಟರಾಜಸ್ಥಾನ: ಪೊಲೀಸ್ ರಕ್ಷಣೆಯಲ್ಲಿ ದಲಿತ ಮಧುಮಗನ ಕುದುರೆ ಸವಾರಿ - ಮೊಳಗಿದ ಜೈಭೀಮ್ ಘೋಷಣೆಗಳು

ರಾಜಸ್ಥಾನ: ಪೊಲೀಸ್ ರಕ್ಷಣೆಯಲ್ಲಿ ದಲಿತ ಮಧುಮಗನ ಕುದುರೆ ಸವಾರಿ – ಮೊಳಗಿದ ಜೈಭೀಮ್ ಘೋಷಣೆಗಳು

ಕಳೆದ 10 ವರ್ಷಗಳಲ್ಲಿ ದಲಿತರು ತಮ್ಮ ಮದುವೆ ಸಂದರ್ಭದಲ್ಲಿ ಮಧುಮಗ ಕುದುರೆ ಸವಾರಿ ಮಾಡಿದ್ದಕ್ಕಾಗಿ ಮೇಲ್ಜಾತಿಯವರಿಂದ ಹಲ್ಲೆಗೊಳಗಾದ 76 ಪ್ರಕರಣಗಳು ಪೊಲೀಸ್ ಠಾಣೆ ಮೆಟ್ಟಿಲೇರಿವೆ.

- Advertisement -
- Advertisement -

ಭಾರತವಿನ್ನು ಜಾತಿಗ್ರಸ್ತ ದೇಶವಾಗಿಯೇ ಉಳಿದುಕೊಂಡಿದೆ. ನಾವು ಎಷ್ಟೇ ಮುಂದೆ ಸಾಗಿದರೂ, ಕೋವಿಡ್‌ನಂತಹ ಕರಾಳ ರೋಗಗಳು ಬಂದರೂ ಸಹ ಹಲವಾರು ಮೇಲ್ಜಾತಿ ಎಂದು ಕರೆಸಿಕೊಳ್ಳುವವರ ಮನಸ್ಸಿನಲ್ಲಿನ ಜಾತಿ ರೋಗ ಮಾತ್ರ ನಾಶವಾಗಿಲ್ಲ. ದಲಿತರು, ತಳಸಮುದಾಯವರು ಹೊಸ ಬಟ್ಟೆ ಧರಿಸುವಂತಿಲ್ಲ, ವಾಚ್ ಹಾಕುವಂತಿಲ್ಲ, ಅಂಬೇಡ್ಕರ್ ರಿಂಗ್ ಟೋನ್ ಹಾಕಿಕೊಳ್ಳುವಂತಿಲ್ಲ ಎಂದು ಕಟ್ಟಳೆಗಳನ್ನು ವಿಧಿಸಿ, ದೌರ್ಜನ್ಯವೆಸಗಿರುವ ಕ್ರೂರ ಘಟನೆಗಳಿಗೆ ನಾವು ಸಾಕ್ಷಿಯಾಗಿದ್ದೇವೆ. ಭಾರತದ ರಾಜಸ್ಥಾನದಲ್ಲಿ ಕಳೆದ 10 ವರ್ಷಗಳಲ್ಲಿ ದಲಿತರು ತಮ್ಮ ಮದುವೆ ಸಂದರ್ಭದಲ್ಲಿ ಮಧುಮಗ ಕುದುರೆ ಸವಾರಿ ಮಾಡಿದ್ದಕ್ಕಾಗಿ ಮೇಲ್ಜಾತಿಯವರಿಂದ ಹಲ್ಲೆಗೊಳಗಾದ 76 ಪ್ರಕರಣಗಳು ಪೊಲೀಸ್ ಠಾಣೆ ಮೆಟ್ಟಿಲೇರಿವೆ. ಅಂದರೆ ‘ದಲಿತರು ಯಾವಗಾಲೂ ಕೆಳಗಿರುವವರು, ಕೆಳಗೇ ಇರಬೇಕು ಅಷ್ಟೇ. ಅವರು ಮೇಲೆ ಬಂದರೆ ನಾವು ಅದನ್ನು ಸಹಿಸುವುದಿಲ್ಲ’ ಎಂದು ಮೇಲ್ಜಾತಿ ಕ್ರೂರ ಮನಸ್ಸುಗಳು ದೌರ್ಜನ್ಯದ ಮೂಲಕ ಸಾರಿ ಹೇಳುತ್ತಿವೆ. ಇದರ ತಾತ್ಪರ್ಯವೆಂದರೆ ದಲಿತರು, ಕೆಳಜಾತಿಯವರು ನಮ್ಮ ಸೇವೆ ಮಾಡಿಕೊಂಡು ಬಿದ್ದಿರಬೇಕು ಹೊರತು ಮೇಲೆ ಬರಬಾರದು ಎಂಬ ಮನುಸ್ಮೃತಿಯ ಹೇರಿಕೆಯಾಗಿದೆ.

ಇಂತಹ ಮನುಸ್ಮೃತಿಯನ್ನು ಧಿಕ್ಕರಿಸಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಕೊಟ್ಟ ಸಂವಿಧಾನವನ್ನು ಬಳಸಿ ಅದೇ ರಾಜಸ್ಥಾನದ ದಲಿತ ಮಧುಮಗನೊಬ್ಬ ಪೊಲೀಸರ ರಕ್ಷಣೆಯೊಂದಿಗೆ ಕುದುರೆ ಸವಾರಿ ಮಾಡಿದ ಐತಿಹಾಸಿಕ, ಅಪರೂಪದ, ದಿಟ್ಟ ಪ್ರತಿರೋಧದ ಘಟನೆ ಸೋಮವಾರ ನಡೆದಿದೆ. ಬುಂಡಿ ಜಿಲ್ಲೆಯ ಛಾಡಿ ಗ್ರಾಮದ 27 ವರ್ಷದ ಶ್ರೀರಾಮ್ ಮೇಘವಾಲ್ ಎಂಬ ಯುವಕ ಶೇರ್ವಾನಿಯ ಹೊಸ ಧಿರಿಸು ಧರಿಸಿ, ಸೊಂಟಕ್ಕೆ ಕತ್ತಿ ಧರಿಸಿ, ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕುದುರೆಯೇರಿ ಊರಿನ ಸುತ್ತ ಮೆರವಣಿಗೆ ನಡೆಸಿ ಕಲ್ಯಾಣ ಮಂಟಪಕ್ಕೆ ತೆರಳಿದರು. ಸುತ್ತಲೂ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ವರನ ಸ್ನೇಹಿತರು ಜೈಭೀಮ್ ಘೋಷಣೆ ಕೂಗಿದರು. ಡಿ.ಜೆ ಸೌಂಡ್ ಆರ್ಭಟ ನಡೆಯಿತು. ಬಾಲಿವುಡ್ ಹಾಡುಗಳನ್ನು ಹಾಕಲಾಯಿತು. ಮಕ್ಕಳು ಮತ್ತು ಮಹಿಳೆಯರು ನೃತ್ಯ ಮಾಡಿದರು.

ಊರಿನ ಸುತ್ತಲೂ ಕುದುರೆ ಸವಾರಿ ಮುಗಿಸಿದ ವರ ನೇರವಾಗಿ ವೇದಿಕೆ ಏರಿದರು. ಹಿಂದೆ ಡಾ.ಬಿ.ಆರ್ ಅಂಬೇಡ್ಕರ್‌ರವರ ಬೃಹತ್ ಪೋಟೊ ಇದ್ದ ಬ್ಯಾಕ್‌ಡ್ರಾಪ್ ಹಾಕಲಾಗಿತ್ತು. ವೇದಿಕೆ ಮುಂಭಾಗದಲ್ಲಿ ಕಾವಲಿದ್ದ ತನ್ನ ಸ್ನೇಹಿತರಿಗೆ ವರ ಕೈಕುಲುಕಿ ಧನ್ಯವಾದ ತಿಳಿಸಿದರು. ಮದುವೆ ಸಾಂಗವಾಗಿ ನಡೆಯಿತು. ಆದರೆ ಅದಕ್ಕೂ ಮೊದಲು 60 ಪೊಲೀಸರು ಇಡೀ ಗ್ರಾಮದ ಸುತ್ತ ಪರೇಡ್ ನಡೆಸಿದ್ದರು. ಮೇಲ್ಜಾತಿ ಗೂಂಡಾಗಳು ಎಲ್ಲಿ ದಾಳಿ ಮಾಡುತ್ತಾರೆ ಎಂದು ಕಣ್ಣಲ್ಲಿ ಕಣ್ಣಿಟ್ಟು ಕಾದಿದ್ದರು!

ಮದುವೆ ನಂತರ ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡಿದ ಮಧುಮಗ “ಈ ರಸ್ತೆಗಳಲ್ಲಿ ಕುದುರೆ ಸವಾರಿ ಮಾಡಿದ ಮೊದಲ ದಲಿತ ವರ ನಾನು. ಇದರಿಂದ ದಲಿತರು ಕೆಳಗಿದ್ದಾರೆ, ಕೆಳಗೇ ಉಳಿಯಬೇಕು ಎಂಬ ಮನಸ್ಥಿತಿ ಬದಲಾಗಲಿದೆ. ಇದು ಸಮಾನತೆಯತ್ತ ಒಂದು ಹೆಜ್ಜೆಯಾಗಿದೆ. ಇನ್ನು ಮುಂದೆ ಹಲವಾರು ದಲಿತ ಯುವಕರು ತಮ್ಮ ಮದುವೆಗಳಲ್ಲಿ ಕುದುರೆ ಸವಾರಿ ಮಾಡುತ್ತಾರೆ. ನಮ್ಮ ಸಮಾಜ ಬದಲಾಗುತ್ತದೆ” ಎಂದಿದ್ದಾರೆ.

ಗ್ರಾಮ ಪಂಚಾಯಿತಿಯಲ್ಲಿ ಗುತ್ತಿಗೆ ನೌಕರನಾಗಿರುವ ಶ್ರೀರಾಮ್ ಮೇಘವಾಲ್ ದ್ರೌಪದಿ ಎಂಬುವವರನ್ನು ವರಿಸಿದರು. ಜಿಲ್ಲೆಯಲ್ಲಿ ಈಗಾಗಲೇ ಈ ರೀತಿಯ ಕುದುರೆ ಸವಾರಿ ವೇಳೆ ದಲಿತರ ಮೇಲೆ ದೌರ್ಜನ್ಯಗಳು ನಡೆದಿದ್ದರಿಂದ ಅವರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಬುಂಡಿ ಜಿಲ್ಲಾಡಳಿತ ಒಂದು ಸಮಿತಿ ರಚಿಸಿ ಅದರ ಮೇಲುಸ್ತುವಾರಿಯಲ್ಲಿ ಈ ಮದುವೆ ಆಯೋಜಿಸಿತ್ತು. ಅದಕ್ಕೆ ‘ಆಪರೇಷನ್ ಸಮಂತಾ (ಆಪರೇಷನ್ ಸಮಾನತೆ)’ ಎಂದು ಹೆಸರಿಡಲಾಗಿತ್ತು. ದಲಿತ ಸಮುದಾಯದ ಮದುವೆಗಳಿಗೆ ಕಾನೂನು ರೀತ್ಯಾ ರಕ್ಷಣೆ ಒದಗಿಸಿ, ಯಾವುದೇ ದೌರ್ಜನ್ಯ ನಡೆಯದಂತೆ ತಡೆಯುವುದು ಅದರ ಗುರಿಯಾಗಿದೆ. ಈ ಸಮಿತಿಯು ದಲಿತ ಸಮುದಾಯಗಳನ್ನು ಭೇಟಿ ಮಾಡಿ ಧೈರ್ಯದಿಂದ ಮದುವೆ ಮಾಡಿಕೊಳ್ಳಿ, ಏನಾದರೂ ಸಹಾಯ ಬೇಕಾದರೂ ನೀಡುತ್ತೇವೆ ಎಂದು ತಿಳಿಸುತ್ತಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮದುವೆಗೂ ಮುಂಚೆಯೇ ಎಲ್ಲಾ ಸಮುದಾಯಗಳ ಸಭೆ ಸೇರಿಸಿ ಶಾಂತಿ ಕಾಪಾಡಲು ಮನವಿ ಮಾಡಿದ್ದರು. ಎಲ್ಲಾ ಸಮುದಾಯಗಳು ಬೆಂಬಲ ನೀಡಿದರು ಎಂದು ಅವರು ತಿಳಿಸಿದ್ದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರಾಜಸ್ಥಾನದಲ್ಲಿ ವಿವಾಹದ ಸಂದರ್ಭದಲ್ಲಿ ಸಿಂಗಾರಗೊಂಡ ವರ ಊರಿನ ಸುತ್ತಾ ಕುದುರೆ ಸವಾರಿ ಮಾಡುವ ಸಂಪ್ರದಾಯವಿದೆ. ಇತ್ತೀಚೆಗೆ ದಲಿತರು ಸಹ ಕುದುರೆ ಸವಾರಿ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ಕ್ರೂರ ಜಾತೀಯತೆಯ ಇತಿಹಾಸ ಹೊಂದಿರುವ ರಾಜಸ್ಥಾನದಲ್ಲಿ ಅದು ತಮ್ಮ ಪ್ರತಿಷ್ಟೆಗೆ ಧಕ್ಕೆ ಎಂದು ಭಾವಿಸಿರುವ ಮೇಲ್ಜಾತಿ ಗೂಂಡಾಗಳು ಅದನ್ನು ತಡೆಯಲು ಹಲ್ಲೆ, ದೌರ್ಜನ್ಯ ನಡೆಸಿದ್ದಾರೆ. ಇದುವರೆಗೂ 76 ಪ್ರಕರಣಗಳು ದಾಖಲಾಗಿವೆ ಎನ್ನುತ್ತಾರೆ ರಾಜಸ್ಥಾನ ಪೊಲೀಸರು. ಆದರೆ 77 ನೇ ಮದುವೆಯಲ್ಲಿ ಬದಲಾವಣೆಯ ಗಾಳಿ ಬೀಸಿದೆ. ಜಿಲ್ಲಾಡಳಿತದ ನೆರವು ಪಡೆದು ದಲಿತ ವರನೊಬ್ಬ ಕುದುರೆ ಸವಾರಿ ನಡೆಸಿಯೇ ತಮ್ಮ ಮದುವೆ ಮಾಡಿಕೊಂಡಿದ್ದಾರೆ.

ವರನ ತಂದೆ ಬಾಬುಲಾಲ್ ಮೇಘಾವಾಲ್ ತನ್ನ ಮಗನ ಮದುವೆ ಸಾಂಗವಾಗಿ ನೆರವೇರಿದ್ದಕ್ಕಾಗಿ ಜಿಲ್ಲಾಡಳಿತ ಮತ್ತು ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ. “ಈ ಮೊದಲು ಹಲ್ಲೆ, ದೌರ್ಜನ್ಯದ ಭಯದಿಂದ ದಲಿತ ಮಧುಮಕ್ಕಳು ಕುದುರೆ ಸವಾರಿ ಮಾಡುತ್ತಿರಲಿಲ್ಲ. ಆದರೆ ನನ್ನ ಮಗ ಅದನ್ನು ಬದಲಿಸಿದ್ದಾನೆ” ಎಂದು ಅವರು ತಿಳಿಸಿದ್ದಾರೆ.

ರಾಜಸ್ಥಾನದ ಈ ಘಟನೆಯು ದಲಿತ ಸಮುದಾಯದೊಳಗಿನ ಪ್ರಜ್ಞೆ ಮತ್ತು ಪ್ರತಿರೋಧದ ಮನೋಭಾವವನ್ನು ತೋರುತ್ತದೆ. ಇತ್ತೀಚಿನ ದಿನಗಳಲ್ಲಿ ದಲಿತ ಮತ್ತು ತಳ ಸಮುದಾಯಗಳ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಕರ್ನಾಟಕದಲ್ಲಿಯೂ ಸಹ ದೇವಾಸ್ಥಾನ ಪ್ರವೇಶಕ್ಕಾಗಿ ಹಲವಾರು ಗ್ರಾಮಗಳಲ್ಲಿ ಹೋರಾಟ ಆರಂಭವಾಗಿದೆ. ಅದಕ್ಕೆ ಮೇಲ್ಜಾತಿಗಳಿಂದ ವಿರೋಧ, ಹಲ್ಲೆ ಎದುರಾದ ಹಲವಾರು ಪ್ರಕರಣಗಳು ವರದಿಯಾಗಿವೆ. ರಾಜಸ್ಥಾನ ಜಿಲ್ಲಾಡಳಿತದ ಆಪರೇಷನ್ ಸಮಾನತೆ ಒಳ್ಳೆಯ ನಡೆಯಾಗಿದ್ದು ಹಲವರಿಗೆ ಧೈರ್ಯ ನೀಡಲಿದೆ. ಇದು ಎಲ್ಲಾ ರಾಜ್ಯಗಳಲ್ಲಿಯೂ ಜಾರಿಗೆ ಬರಬೇಕಿದೆ.


ಇದನ್ನೂ ಓದಿ: ‘ಧೀರ ಭಗತ್ ರಾಯ್‌’ ಮೂಲಕ ಮೀಸಲು ಕ್ಷೇತ್ರದ ರಾಜಕೀಯ ಕಥೆಯನ್ನು ಹೇಳಲು ಹೊರಟಿರುವ ನಿರ್ದೇಶಕ ಕರ್ಣನ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. After many decades of freedom this country is not yet ready to allow the untouchable Enjoy the freedom. This country wants the untouchable to be like decades ago. It’s unfortunate!! Hats off to the bride, family and police department.

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...