Homeಮುಖಪುಟರಾಜಸ್ಥಾನ: ಪೊಲೀಸ್ ರಕ್ಷಣೆಯಲ್ಲಿ ದಲಿತ ಮಧುಮಗನ ಕುದುರೆ ಸವಾರಿ - ಮೊಳಗಿದ ಜೈಭೀಮ್ ಘೋಷಣೆಗಳು

ರಾಜಸ್ಥಾನ: ಪೊಲೀಸ್ ರಕ್ಷಣೆಯಲ್ಲಿ ದಲಿತ ಮಧುಮಗನ ಕುದುರೆ ಸವಾರಿ – ಮೊಳಗಿದ ಜೈಭೀಮ್ ಘೋಷಣೆಗಳು

ಕಳೆದ 10 ವರ್ಷಗಳಲ್ಲಿ ದಲಿತರು ತಮ್ಮ ಮದುವೆ ಸಂದರ್ಭದಲ್ಲಿ ಮಧುಮಗ ಕುದುರೆ ಸವಾರಿ ಮಾಡಿದ್ದಕ್ಕಾಗಿ ಮೇಲ್ಜಾತಿಯವರಿಂದ ಹಲ್ಲೆಗೊಳಗಾದ 76 ಪ್ರಕರಣಗಳು ಪೊಲೀಸ್ ಠಾಣೆ ಮೆಟ್ಟಿಲೇರಿವೆ.

- Advertisement -
- Advertisement -

ಭಾರತವಿನ್ನು ಜಾತಿಗ್ರಸ್ತ ದೇಶವಾಗಿಯೇ ಉಳಿದುಕೊಂಡಿದೆ. ನಾವು ಎಷ್ಟೇ ಮುಂದೆ ಸಾಗಿದರೂ, ಕೋವಿಡ್‌ನಂತಹ ಕರಾಳ ರೋಗಗಳು ಬಂದರೂ ಸಹ ಹಲವಾರು ಮೇಲ್ಜಾತಿ ಎಂದು ಕರೆಸಿಕೊಳ್ಳುವವರ ಮನಸ್ಸಿನಲ್ಲಿನ ಜಾತಿ ರೋಗ ಮಾತ್ರ ನಾಶವಾಗಿಲ್ಲ. ದಲಿತರು, ತಳಸಮುದಾಯವರು ಹೊಸ ಬಟ್ಟೆ ಧರಿಸುವಂತಿಲ್ಲ, ವಾಚ್ ಹಾಕುವಂತಿಲ್ಲ, ಅಂಬೇಡ್ಕರ್ ರಿಂಗ್ ಟೋನ್ ಹಾಕಿಕೊಳ್ಳುವಂತಿಲ್ಲ ಎಂದು ಕಟ್ಟಳೆಗಳನ್ನು ವಿಧಿಸಿ, ದೌರ್ಜನ್ಯವೆಸಗಿರುವ ಕ್ರೂರ ಘಟನೆಗಳಿಗೆ ನಾವು ಸಾಕ್ಷಿಯಾಗಿದ್ದೇವೆ. ಭಾರತದ ರಾಜಸ್ಥಾನದಲ್ಲಿ ಕಳೆದ 10 ವರ್ಷಗಳಲ್ಲಿ ದಲಿತರು ತಮ್ಮ ಮದುವೆ ಸಂದರ್ಭದಲ್ಲಿ ಮಧುಮಗ ಕುದುರೆ ಸವಾರಿ ಮಾಡಿದ್ದಕ್ಕಾಗಿ ಮೇಲ್ಜಾತಿಯವರಿಂದ ಹಲ್ಲೆಗೊಳಗಾದ 76 ಪ್ರಕರಣಗಳು ಪೊಲೀಸ್ ಠಾಣೆ ಮೆಟ್ಟಿಲೇರಿವೆ. ಅಂದರೆ ‘ದಲಿತರು ಯಾವಗಾಲೂ ಕೆಳಗಿರುವವರು, ಕೆಳಗೇ ಇರಬೇಕು ಅಷ್ಟೇ. ಅವರು ಮೇಲೆ ಬಂದರೆ ನಾವು ಅದನ್ನು ಸಹಿಸುವುದಿಲ್ಲ’ ಎಂದು ಮೇಲ್ಜಾತಿ ಕ್ರೂರ ಮನಸ್ಸುಗಳು ದೌರ್ಜನ್ಯದ ಮೂಲಕ ಸಾರಿ ಹೇಳುತ್ತಿವೆ. ಇದರ ತಾತ್ಪರ್ಯವೆಂದರೆ ದಲಿತರು, ಕೆಳಜಾತಿಯವರು ನಮ್ಮ ಸೇವೆ ಮಾಡಿಕೊಂಡು ಬಿದ್ದಿರಬೇಕು ಹೊರತು ಮೇಲೆ ಬರಬಾರದು ಎಂಬ ಮನುಸ್ಮೃತಿಯ ಹೇರಿಕೆಯಾಗಿದೆ.

ಇಂತಹ ಮನುಸ್ಮೃತಿಯನ್ನು ಧಿಕ್ಕರಿಸಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಕೊಟ್ಟ ಸಂವಿಧಾನವನ್ನು ಬಳಸಿ ಅದೇ ರಾಜಸ್ಥಾನದ ದಲಿತ ಮಧುಮಗನೊಬ್ಬ ಪೊಲೀಸರ ರಕ್ಷಣೆಯೊಂದಿಗೆ ಕುದುರೆ ಸವಾರಿ ಮಾಡಿದ ಐತಿಹಾಸಿಕ, ಅಪರೂಪದ, ದಿಟ್ಟ ಪ್ರತಿರೋಧದ ಘಟನೆ ಸೋಮವಾರ ನಡೆದಿದೆ. ಬುಂಡಿ ಜಿಲ್ಲೆಯ ಛಾಡಿ ಗ್ರಾಮದ 27 ವರ್ಷದ ಶ್ರೀರಾಮ್ ಮೇಘವಾಲ್ ಎಂಬ ಯುವಕ ಶೇರ್ವಾನಿಯ ಹೊಸ ಧಿರಿಸು ಧರಿಸಿ, ಸೊಂಟಕ್ಕೆ ಕತ್ತಿ ಧರಿಸಿ, ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕುದುರೆಯೇರಿ ಊರಿನ ಸುತ್ತ ಮೆರವಣಿಗೆ ನಡೆಸಿ ಕಲ್ಯಾಣ ಮಂಟಪಕ್ಕೆ ತೆರಳಿದರು. ಸುತ್ತಲೂ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ವರನ ಸ್ನೇಹಿತರು ಜೈಭೀಮ್ ಘೋಷಣೆ ಕೂಗಿದರು. ಡಿ.ಜೆ ಸೌಂಡ್ ಆರ್ಭಟ ನಡೆಯಿತು. ಬಾಲಿವುಡ್ ಹಾಡುಗಳನ್ನು ಹಾಕಲಾಯಿತು. ಮಕ್ಕಳು ಮತ್ತು ಮಹಿಳೆಯರು ನೃತ್ಯ ಮಾಡಿದರು.

ಊರಿನ ಸುತ್ತಲೂ ಕುದುರೆ ಸವಾರಿ ಮುಗಿಸಿದ ವರ ನೇರವಾಗಿ ವೇದಿಕೆ ಏರಿದರು. ಹಿಂದೆ ಡಾ.ಬಿ.ಆರ್ ಅಂಬೇಡ್ಕರ್‌ರವರ ಬೃಹತ್ ಪೋಟೊ ಇದ್ದ ಬ್ಯಾಕ್‌ಡ್ರಾಪ್ ಹಾಕಲಾಗಿತ್ತು. ವೇದಿಕೆ ಮುಂಭಾಗದಲ್ಲಿ ಕಾವಲಿದ್ದ ತನ್ನ ಸ್ನೇಹಿತರಿಗೆ ವರ ಕೈಕುಲುಕಿ ಧನ್ಯವಾದ ತಿಳಿಸಿದರು. ಮದುವೆ ಸಾಂಗವಾಗಿ ನಡೆಯಿತು. ಆದರೆ ಅದಕ್ಕೂ ಮೊದಲು 60 ಪೊಲೀಸರು ಇಡೀ ಗ್ರಾಮದ ಸುತ್ತ ಪರೇಡ್ ನಡೆಸಿದ್ದರು. ಮೇಲ್ಜಾತಿ ಗೂಂಡಾಗಳು ಎಲ್ಲಿ ದಾಳಿ ಮಾಡುತ್ತಾರೆ ಎಂದು ಕಣ್ಣಲ್ಲಿ ಕಣ್ಣಿಟ್ಟು ಕಾದಿದ್ದರು!

ಮದುವೆ ನಂತರ ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡಿದ ಮಧುಮಗ “ಈ ರಸ್ತೆಗಳಲ್ಲಿ ಕುದುರೆ ಸವಾರಿ ಮಾಡಿದ ಮೊದಲ ದಲಿತ ವರ ನಾನು. ಇದರಿಂದ ದಲಿತರು ಕೆಳಗಿದ್ದಾರೆ, ಕೆಳಗೇ ಉಳಿಯಬೇಕು ಎಂಬ ಮನಸ್ಥಿತಿ ಬದಲಾಗಲಿದೆ. ಇದು ಸಮಾನತೆಯತ್ತ ಒಂದು ಹೆಜ್ಜೆಯಾಗಿದೆ. ಇನ್ನು ಮುಂದೆ ಹಲವಾರು ದಲಿತ ಯುವಕರು ತಮ್ಮ ಮದುವೆಗಳಲ್ಲಿ ಕುದುರೆ ಸವಾರಿ ಮಾಡುತ್ತಾರೆ. ನಮ್ಮ ಸಮಾಜ ಬದಲಾಗುತ್ತದೆ” ಎಂದಿದ್ದಾರೆ.

ಗ್ರಾಮ ಪಂಚಾಯಿತಿಯಲ್ಲಿ ಗುತ್ತಿಗೆ ನೌಕರನಾಗಿರುವ ಶ್ರೀರಾಮ್ ಮೇಘವಾಲ್ ದ್ರೌಪದಿ ಎಂಬುವವರನ್ನು ವರಿಸಿದರು. ಜಿಲ್ಲೆಯಲ್ಲಿ ಈಗಾಗಲೇ ಈ ರೀತಿಯ ಕುದುರೆ ಸವಾರಿ ವೇಳೆ ದಲಿತರ ಮೇಲೆ ದೌರ್ಜನ್ಯಗಳು ನಡೆದಿದ್ದರಿಂದ ಅವರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಬುಂಡಿ ಜಿಲ್ಲಾಡಳಿತ ಒಂದು ಸಮಿತಿ ರಚಿಸಿ ಅದರ ಮೇಲುಸ್ತುವಾರಿಯಲ್ಲಿ ಈ ಮದುವೆ ಆಯೋಜಿಸಿತ್ತು. ಅದಕ್ಕೆ ‘ಆಪರೇಷನ್ ಸಮಂತಾ (ಆಪರೇಷನ್ ಸಮಾನತೆ)’ ಎಂದು ಹೆಸರಿಡಲಾಗಿತ್ತು. ದಲಿತ ಸಮುದಾಯದ ಮದುವೆಗಳಿಗೆ ಕಾನೂನು ರೀತ್ಯಾ ರಕ್ಷಣೆ ಒದಗಿಸಿ, ಯಾವುದೇ ದೌರ್ಜನ್ಯ ನಡೆಯದಂತೆ ತಡೆಯುವುದು ಅದರ ಗುರಿಯಾಗಿದೆ. ಈ ಸಮಿತಿಯು ದಲಿತ ಸಮುದಾಯಗಳನ್ನು ಭೇಟಿ ಮಾಡಿ ಧೈರ್ಯದಿಂದ ಮದುವೆ ಮಾಡಿಕೊಳ್ಳಿ, ಏನಾದರೂ ಸಹಾಯ ಬೇಕಾದರೂ ನೀಡುತ್ತೇವೆ ಎಂದು ತಿಳಿಸುತ್ತಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮದುವೆಗೂ ಮುಂಚೆಯೇ ಎಲ್ಲಾ ಸಮುದಾಯಗಳ ಸಭೆ ಸೇರಿಸಿ ಶಾಂತಿ ಕಾಪಾಡಲು ಮನವಿ ಮಾಡಿದ್ದರು. ಎಲ್ಲಾ ಸಮುದಾಯಗಳು ಬೆಂಬಲ ನೀಡಿದರು ಎಂದು ಅವರು ತಿಳಿಸಿದ್ದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರಾಜಸ್ಥಾನದಲ್ಲಿ ವಿವಾಹದ ಸಂದರ್ಭದಲ್ಲಿ ಸಿಂಗಾರಗೊಂಡ ವರ ಊರಿನ ಸುತ್ತಾ ಕುದುರೆ ಸವಾರಿ ಮಾಡುವ ಸಂಪ್ರದಾಯವಿದೆ. ಇತ್ತೀಚೆಗೆ ದಲಿತರು ಸಹ ಕುದುರೆ ಸವಾರಿ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ಕ್ರೂರ ಜಾತೀಯತೆಯ ಇತಿಹಾಸ ಹೊಂದಿರುವ ರಾಜಸ್ಥಾನದಲ್ಲಿ ಅದು ತಮ್ಮ ಪ್ರತಿಷ್ಟೆಗೆ ಧಕ್ಕೆ ಎಂದು ಭಾವಿಸಿರುವ ಮೇಲ್ಜಾತಿ ಗೂಂಡಾಗಳು ಅದನ್ನು ತಡೆಯಲು ಹಲ್ಲೆ, ದೌರ್ಜನ್ಯ ನಡೆಸಿದ್ದಾರೆ. ಇದುವರೆಗೂ 76 ಪ್ರಕರಣಗಳು ದಾಖಲಾಗಿವೆ ಎನ್ನುತ್ತಾರೆ ರಾಜಸ್ಥಾನ ಪೊಲೀಸರು. ಆದರೆ 77 ನೇ ಮದುವೆಯಲ್ಲಿ ಬದಲಾವಣೆಯ ಗಾಳಿ ಬೀಸಿದೆ. ಜಿಲ್ಲಾಡಳಿತದ ನೆರವು ಪಡೆದು ದಲಿತ ವರನೊಬ್ಬ ಕುದುರೆ ಸವಾರಿ ನಡೆಸಿಯೇ ತಮ್ಮ ಮದುವೆ ಮಾಡಿಕೊಂಡಿದ್ದಾರೆ.

ವರನ ತಂದೆ ಬಾಬುಲಾಲ್ ಮೇಘಾವಾಲ್ ತನ್ನ ಮಗನ ಮದುವೆ ಸಾಂಗವಾಗಿ ನೆರವೇರಿದ್ದಕ್ಕಾಗಿ ಜಿಲ್ಲಾಡಳಿತ ಮತ್ತು ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ. “ಈ ಮೊದಲು ಹಲ್ಲೆ, ದೌರ್ಜನ್ಯದ ಭಯದಿಂದ ದಲಿತ ಮಧುಮಕ್ಕಳು ಕುದುರೆ ಸವಾರಿ ಮಾಡುತ್ತಿರಲಿಲ್ಲ. ಆದರೆ ನನ್ನ ಮಗ ಅದನ್ನು ಬದಲಿಸಿದ್ದಾನೆ” ಎಂದು ಅವರು ತಿಳಿಸಿದ್ದಾರೆ.

ರಾಜಸ್ಥಾನದ ಈ ಘಟನೆಯು ದಲಿತ ಸಮುದಾಯದೊಳಗಿನ ಪ್ರಜ್ಞೆ ಮತ್ತು ಪ್ರತಿರೋಧದ ಮನೋಭಾವವನ್ನು ತೋರುತ್ತದೆ. ಇತ್ತೀಚಿನ ದಿನಗಳಲ್ಲಿ ದಲಿತ ಮತ್ತು ತಳ ಸಮುದಾಯಗಳ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಕರ್ನಾಟಕದಲ್ಲಿಯೂ ಸಹ ದೇವಾಸ್ಥಾನ ಪ್ರವೇಶಕ್ಕಾಗಿ ಹಲವಾರು ಗ್ರಾಮಗಳಲ್ಲಿ ಹೋರಾಟ ಆರಂಭವಾಗಿದೆ. ಅದಕ್ಕೆ ಮೇಲ್ಜಾತಿಗಳಿಂದ ವಿರೋಧ, ಹಲ್ಲೆ ಎದುರಾದ ಹಲವಾರು ಪ್ರಕರಣಗಳು ವರದಿಯಾಗಿವೆ. ರಾಜಸ್ಥಾನ ಜಿಲ್ಲಾಡಳಿತದ ಆಪರೇಷನ್ ಸಮಾನತೆ ಒಳ್ಳೆಯ ನಡೆಯಾಗಿದ್ದು ಹಲವರಿಗೆ ಧೈರ್ಯ ನೀಡಲಿದೆ. ಇದು ಎಲ್ಲಾ ರಾಜ್ಯಗಳಲ್ಲಿಯೂ ಜಾರಿಗೆ ಬರಬೇಕಿದೆ.


ಇದನ್ನೂ ಓದಿ: ‘ಧೀರ ಭಗತ್ ರಾಯ್‌’ ಮೂಲಕ ಮೀಸಲು ಕ್ಷೇತ್ರದ ರಾಜಕೀಯ ಕಥೆಯನ್ನು ಹೇಳಲು ಹೊರಟಿರುವ ನಿರ್ದೇಶಕ ಕರ್ಣನ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. After many decades of freedom this country is not yet ready to allow the untouchable Enjoy the freedom. This country wants the untouchable to be like decades ago. It’s unfortunate!! Hats off to the bride, family and police department.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...