Homeದಲಿತ್ ಫೈಲ್ಸ್ರಾಜಸ್ಥಾನ | ಮಡಕೆಯಿಂದ ನೀರು ಕುಡಿದ ದಲಿತ ಯುವಕನ ಮೇಲೆ ಸವರ್ಣೀಯರಿಂದ ಥಳಿತ

ರಾಜಸ್ಥಾನ | ಮಡಕೆಯಿಂದ ನೀರು ಕುಡಿದ ದಲಿತ ಯುವಕನ ಮೇಲೆ ಸವರ್ಣೀಯರಿಂದ ಥಳಿತ

- Advertisement -
- Advertisement -

ದಿನಸಿ ಅಂಗಡಿಯ ಹೊರಗೆ ಇಟ್ಟಿದ್ದ ಮಡಕೆಯಿಂದ ನೀರು ಕುಡಿದಿದ್ದಕ್ಕಾಗಿ ದಲಿತ ಯುವಕನ ಮೇಲೆ ದೌರ್ಜನ್ಯ ನಡೆಸಿ ಥಳಿಸಿರುವ ಘಟನೆ ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಖಿನ್ವ್ಸರ್ ಉಪವಿಭಾಗದ ಕಾಂತಿಯಾ ಗ್ರಾಮದಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದೆ. ರಾಜಸ್ಥಾನ | ಮಡಕೆಯಿಂದ

ಸಂತ್ರಸ್ತ ಯುವಕನನ್ನು ಓಂಪ್ರಕಾಶ್ ಮೇಘವಾಲ್ ಎಂದು ಗುರುತಿಸಲಾಗಿದ್ದು, ಅವರು ಸಂಬಂಧಿಕರ ಕಾರ್ಯಕ್ರಮಕ್ಕೆ ಹೋಗುವಾಗ ಸ್ನೇಹಿತನೊಂದಿಗೆ ಅಂಗಡಿಯ ಬಳಿ ನಿಂತಿದ್ದರು. ಈ ವೇಳೆ ಅಂಗಡಿಯ ಹೊರಗೆ ಇಟ್ಟಿದ್ದ ಮಡಕೆಯಿಂದ ನೀರು ಕುಡಿಯಲು ಲೋಹದ ಟಂಬ್ಲರ್ (ಲೋಟಾ) ಬಳಸಿದ್ದರು.

ಸ್ವಲ್ಪ ಸಮಯದ ನಂತರ, ಅಂಗಡಿ ಮಾಲೀಕ ಕಲುರಾಮ್ ಜಾಟ್, ನರಸಿರಾಮ್ ಮತ್ತು ಓಂಪ್ರಕಾಶ್ ಎಂಬ ಇನ್ನೊಬ್ಬ ವ್ಯಕ್ತಿ ಅವರ ಹೆಸರು ಮತ್ತು ಜಾತಿಯನ್ನು ಕೇಳಿದ್ದರು. ಅವರು ಪರಿಶಿಷ್ಟ ಜಾತಿಗೆ ಸೇರಿದವರು ಎಂದು ತಿಳಿದಾಗ, ಅವರು ಜಾತಿ ನಿಂದನೆ ಮಾಡಿ, ಅವರನ್ನು ಥಳಿಸಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಈ ವೇಳೆ ಅವರನ್ನು ಸಮಾಧಾನ ಪಡೆಸಲು ಓಂಪ್ರಕಾಶ್ ಅವರು ಮಡಕೆಯನ್ನು ಮರಳಿನಿಂದ ಸ್ವಚ್ಛಗೊಳಿಸಲು ಪ್ರಯತ್ನಿಸಿದರು ಎಂದು ಹೇಳಿದ್ದಾರೆ. ಅದಾಗ್ಯೂ, ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ಮತ್ತು ಅವಮಾನವನ್ನು ಮುಂದುವರೆಸಿದ್ದರು. ಇದರಿಂದಾಗಿ ಅವರು ಭಯಭೀತರಾಗಿ ಓಡಿಹೋಗಿ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ.

ಅಂದು ರಾತ್ರಿ ಸುಮಾರು 11:30 ರ ಸುಮಾರಿಗೆ, ಆರೋಪಿಗಳು ಕ್ಯಾಂಪರ್ ವಾಹನದಲ್ಲಿ ಪ್ರದೇಶವನ್ನು ಹಲವು ಬಾರಿ ಸುತ್ತುವರೆದು, ನಿವಾಸಿಗಳನ್ನು ಬೆದರಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕೃತ್ಯವು ಪ್ರದೇಶದ ಬಡ ದಲಿತ ಕುಟುಂಬಗಳಲ್ಲಿ ಭೀತಿಯನ್ನುಂಟುಮಾಡಿದೆ ಎಂದು ವರದಿಯಾಗಿದೆ.

ಓಂಪ್ರಕಾಶ್ ಮರುದಿನ ಪೊಲೀಸ್ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಉಪ ಪೊಲೀಸ್ ವರಿಷ್ಠಾಧಿಕಾರಿ ರಾಮಪ್ರತಾಪ್ ವಿಷ್ಣೋಯ್ ನೇತೃತ್ವದ ತಂಡ ಗ್ರಾಮಕ್ಕೆ ಭೇಟಿ ನೀಡಿದ್ದು, ಆದರೆ ಆರೋಪಿಗಳು ಈಗಾಗಲೇ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ಶೋಧದ ನಂತರ, ಪೊಲೀಸರು ಮೂವರನ್ನೂ ಬಂಧಿಸಿದ್ದು, ಅವರ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಇತರ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ನಾಗೌರ್ ಎಸ್‌ಪಿ ನಾರಾಯಣ್ ಟೋಗಾಸ್ ಹೇಳಿದ್ದಾರೆ. ವಿವರವಾದ ತನಿಖೆ ನಡೆಯುತ್ತಿದೆ.

ಆರಂಭದಲ್ಲಿ ಪೊಲೀಸರು ಪ್ರಕರಣವನ್ನು ನಿರ್ಲಕ್ಷಿಸಲು ಪ್ರಯತ್ನಿಸಿದರು ಎಂದು ಸಂತ್ರಸ್ತ ಯುವಕನ ಕುಟುಂಬ ಹೇಳಿಕೊಂಡಿದೆ. ಘಟನೆ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದ್ದರೂ ಪೊಲೀಸ್ ಅಧಿಕಾರಿಗಳು ಮೌನವಾಗಿದ್ದರು. ಮಂಗಳವಾರವೂ ಸಹ, ಸ್ಥಳೀಯ ಪೊಲೀಸರು ವರದಿಗಾರರ ಪ್ರಶ್ನೆಗೆ ಸ್ಪಷ್ಟ ಉತ್ತರಗಳನ್ನು ನೀಡಿರಲಿಲ್ಲ ಎಂದು ವರದಿಯಾಗಿದೆ. ಸಾರ್ವಜನಿಕ ಒತ್ತಡ ಹೆಚ್ಚಿ ವೀಡಿಯೊ ವೈರಲ್ ಆದ ನಂತರವೇ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಆಜಾದ್ ಸಮಾಜ ಪಕ್ಷದ ಮುಖ್ಯಸ್ಥ ಮತ್ತು ನಗೀನಾ ಸಂಸದ ಚಂದ್ರಶೇಖರ್ ಆಜಾದ್ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇದು ಭಾರತದಲ್ಲಿ ಬೇರೂರಿರುವ ಜಾತಿ ತಾರತಮ್ಯದ ಕರಾಳ ಜ್ಞಾಪನೆ ಎಂದು ಕರೆದಿದ್ದಾರೆ.

“ಕಾಂಟಿಯಾ ಗ್ರಾಮದಲ್ಲಿ, ದಲಿತ ಯುವಕರನ್ನು ನಿಂದಿಸಲಾಯಿತು, ಅವಮಾನಿಸಲಾಯಿತು ಮತ್ತು ಕುಡಿಯುವ ನೀರಿಗಾಗಿ ಪಾತ್ರೆಗಳನ್ನು ಸ್ವಚ್ಛಗೊಳಿಸಲು ಒತ್ತಾಯಿಸಲಾಯಿತು. ಇದು ಕೇವಲ ವಿವಾದವಲ್ಲ – ಇದು ವ್ಯವಸ್ಥಿತ, ಶತಮಾನಗಳಷ್ಟು ಹಳೆಯ ದ್ವೇಷದ ಪ್ರತಿಬಿಂಬವಾಗಿದೆ” ಎಂದು ಅವರು ಹೇಳಿದ್ದು, “ದಲಿತನಿಗೆ ಇನ್ನೂ ನೀರು ಕುಡಿಯುವ ಹಕ್ಕಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಈ ಘಟನೆಯು 2022 ರಲ್ಲಿ ಜಾಲೋರ್‌ನಲ್ಲಿ ನಡೆದ ಪ್ರಕರಣಕ್ಕೆ ಹೋಲುತ್ತದೆ. ಈ ಘಟನೆಯಲ್ಲಿ ಸವರ್ಣೀಯರಿಗೆ ಮೀಸಲಾದ ಮಡಕೆಯಿಂದ ನೀರು ಕುಡಿದಿದ್ದಕ್ಕಾಗಿ ಶಾಲಾ ಶಿಕ್ಷಕರಿಂದ ದಲಿತ ವಿದ್ಯಾರ್ಥಿಯನ್ನು ಹೊಡೆದು ಕೊಲ್ಲಲಾಗಿತ್ತು. ರಾಜಸ್ಥಾನ | ಮಡಕೆಯಿಂದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕಣ್ತಪ್ಪಿನಿಂದ ಭಾರತೀಯ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿದ ಅಸ್ಸಾಂ ಬಿಜೆಪಿ ಸರ್ಕಾರ!

ಕಣ್ತಪ್ಪಿನಿಂದ ಭಾರತೀಯ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿದ ಅಸ್ಸಾಂ ಬಿಜೆಪಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...