Homeದಲಿತ್ ಫೈಲ್ಸ್ರಾಜಸ್ಥಾನ | ಮಡಕೆಯಿಂದ ನೀರು ಕುಡಿದ ದಲಿತ ಯುವಕನ ಮೇಲೆ ಸವರ್ಣೀಯರಿಂದ ಥಳಿತ

ರಾಜಸ್ಥಾನ | ಮಡಕೆಯಿಂದ ನೀರು ಕುಡಿದ ದಲಿತ ಯುವಕನ ಮೇಲೆ ಸವರ್ಣೀಯರಿಂದ ಥಳಿತ

- Advertisement -
- Advertisement -

ದಿನಸಿ ಅಂಗಡಿಯ ಹೊರಗೆ ಇಟ್ಟಿದ್ದ ಮಡಕೆಯಿಂದ ನೀರು ಕುಡಿದಿದ್ದಕ್ಕಾಗಿ ದಲಿತ ಯುವಕನ ಮೇಲೆ ದೌರ್ಜನ್ಯ ನಡೆಸಿ ಥಳಿಸಿರುವ ಘಟನೆ ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಖಿನ್ವ್ಸರ್ ಉಪವಿಭಾಗದ ಕಾಂತಿಯಾ ಗ್ರಾಮದಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದೆ. ರಾಜಸ್ಥಾನ | ಮಡಕೆಯಿಂದ

ಸಂತ್ರಸ್ತ ಯುವಕನನ್ನು ಓಂಪ್ರಕಾಶ್ ಮೇಘವಾಲ್ ಎಂದು ಗುರುತಿಸಲಾಗಿದ್ದು, ಅವರು ಸಂಬಂಧಿಕರ ಕಾರ್ಯಕ್ರಮಕ್ಕೆ ಹೋಗುವಾಗ ಸ್ನೇಹಿತನೊಂದಿಗೆ ಅಂಗಡಿಯ ಬಳಿ ನಿಂತಿದ್ದರು. ಈ ವೇಳೆ ಅಂಗಡಿಯ ಹೊರಗೆ ಇಟ್ಟಿದ್ದ ಮಡಕೆಯಿಂದ ನೀರು ಕುಡಿಯಲು ಲೋಹದ ಟಂಬ್ಲರ್ (ಲೋಟಾ) ಬಳಸಿದ್ದರು.

ಸ್ವಲ್ಪ ಸಮಯದ ನಂತರ, ಅಂಗಡಿ ಮಾಲೀಕ ಕಲುರಾಮ್ ಜಾಟ್, ನರಸಿರಾಮ್ ಮತ್ತು ಓಂಪ್ರಕಾಶ್ ಎಂಬ ಇನ್ನೊಬ್ಬ ವ್ಯಕ್ತಿ ಅವರ ಹೆಸರು ಮತ್ತು ಜಾತಿಯನ್ನು ಕೇಳಿದ್ದರು. ಅವರು ಪರಿಶಿಷ್ಟ ಜಾತಿಗೆ ಸೇರಿದವರು ಎಂದು ತಿಳಿದಾಗ, ಅವರು ಜಾತಿ ನಿಂದನೆ ಮಾಡಿ, ಅವರನ್ನು ಥಳಿಸಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಈ ವೇಳೆ ಅವರನ್ನು ಸಮಾಧಾನ ಪಡೆಸಲು ಓಂಪ್ರಕಾಶ್ ಅವರು ಮಡಕೆಯನ್ನು ಮರಳಿನಿಂದ ಸ್ವಚ್ಛಗೊಳಿಸಲು ಪ್ರಯತ್ನಿಸಿದರು ಎಂದು ಹೇಳಿದ್ದಾರೆ. ಅದಾಗ್ಯೂ, ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ಮತ್ತು ಅವಮಾನವನ್ನು ಮುಂದುವರೆಸಿದ್ದರು. ಇದರಿಂದಾಗಿ ಅವರು ಭಯಭೀತರಾಗಿ ಓಡಿಹೋಗಿ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ.

ಅಂದು ರಾತ್ರಿ ಸುಮಾರು 11:30 ರ ಸುಮಾರಿಗೆ, ಆರೋಪಿಗಳು ಕ್ಯಾಂಪರ್ ವಾಹನದಲ್ಲಿ ಪ್ರದೇಶವನ್ನು ಹಲವು ಬಾರಿ ಸುತ್ತುವರೆದು, ನಿವಾಸಿಗಳನ್ನು ಬೆದರಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕೃತ್ಯವು ಪ್ರದೇಶದ ಬಡ ದಲಿತ ಕುಟುಂಬಗಳಲ್ಲಿ ಭೀತಿಯನ್ನುಂಟುಮಾಡಿದೆ ಎಂದು ವರದಿಯಾಗಿದೆ.

ಓಂಪ್ರಕಾಶ್ ಮರುದಿನ ಪೊಲೀಸ್ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಉಪ ಪೊಲೀಸ್ ವರಿಷ್ಠಾಧಿಕಾರಿ ರಾಮಪ್ರತಾಪ್ ವಿಷ್ಣೋಯ್ ನೇತೃತ್ವದ ತಂಡ ಗ್ರಾಮಕ್ಕೆ ಭೇಟಿ ನೀಡಿದ್ದು, ಆದರೆ ಆರೋಪಿಗಳು ಈಗಾಗಲೇ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ಶೋಧದ ನಂತರ, ಪೊಲೀಸರು ಮೂವರನ್ನೂ ಬಂಧಿಸಿದ್ದು, ಅವರ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಇತರ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ನಾಗೌರ್ ಎಸ್‌ಪಿ ನಾರಾಯಣ್ ಟೋಗಾಸ್ ಹೇಳಿದ್ದಾರೆ. ವಿವರವಾದ ತನಿಖೆ ನಡೆಯುತ್ತಿದೆ.

ಆರಂಭದಲ್ಲಿ ಪೊಲೀಸರು ಪ್ರಕರಣವನ್ನು ನಿರ್ಲಕ್ಷಿಸಲು ಪ್ರಯತ್ನಿಸಿದರು ಎಂದು ಸಂತ್ರಸ್ತ ಯುವಕನ ಕುಟುಂಬ ಹೇಳಿಕೊಂಡಿದೆ. ಘಟನೆ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದ್ದರೂ ಪೊಲೀಸ್ ಅಧಿಕಾರಿಗಳು ಮೌನವಾಗಿದ್ದರು. ಮಂಗಳವಾರವೂ ಸಹ, ಸ್ಥಳೀಯ ಪೊಲೀಸರು ವರದಿಗಾರರ ಪ್ರಶ್ನೆಗೆ ಸ್ಪಷ್ಟ ಉತ್ತರಗಳನ್ನು ನೀಡಿರಲಿಲ್ಲ ಎಂದು ವರದಿಯಾಗಿದೆ. ಸಾರ್ವಜನಿಕ ಒತ್ತಡ ಹೆಚ್ಚಿ ವೀಡಿಯೊ ವೈರಲ್ ಆದ ನಂತರವೇ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಆಜಾದ್ ಸಮಾಜ ಪಕ್ಷದ ಮುಖ್ಯಸ್ಥ ಮತ್ತು ನಗೀನಾ ಸಂಸದ ಚಂದ್ರಶೇಖರ್ ಆಜಾದ್ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇದು ಭಾರತದಲ್ಲಿ ಬೇರೂರಿರುವ ಜಾತಿ ತಾರತಮ್ಯದ ಕರಾಳ ಜ್ಞಾಪನೆ ಎಂದು ಕರೆದಿದ್ದಾರೆ.

“ಕಾಂಟಿಯಾ ಗ್ರಾಮದಲ್ಲಿ, ದಲಿತ ಯುವಕರನ್ನು ನಿಂದಿಸಲಾಯಿತು, ಅವಮಾನಿಸಲಾಯಿತು ಮತ್ತು ಕುಡಿಯುವ ನೀರಿಗಾಗಿ ಪಾತ್ರೆಗಳನ್ನು ಸ್ವಚ್ಛಗೊಳಿಸಲು ಒತ್ತಾಯಿಸಲಾಯಿತು. ಇದು ಕೇವಲ ವಿವಾದವಲ್ಲ – ಇದು ವ್ಯವಸ್ಥಿತ, ಶತಮಾನಗಳಷ್ಟು ಹಳೆಯ ದ್ವೇಷದ ಪ್ರತಿಬಿಂಬವಾಗಿದೆ” ಎಂದು ಅವರು ಹೇಳಿದ್ದು, “ದಲಿತನಿಗೆ ಇನ್ನೂ ನೀರು ಕುಡಿಯುವ ಹಕ್ಕಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಈ ಘಟನೆಯು 2022 ರಲ್ಲಿ ಜಾಲೋರ್‌ನಲ್ಲಿ ನಡೆದ ಪ್ರಕರಣಕ್ಕೆ ಹೋಲುತ್ತದೆ. ಈ ಘಟನೆಯಲ್ಲಿ ಸವರ್ಣೀಯರಿಗೆ ಮೀಸಲಾದ ಮಡಕೆಯಿಂದ ನೀರು ಕುಡಿದಿದ್ದಕ್ಕಾಗಿ ಶಾಲಾ ಶಿಕ್ಷಕರಿಂದ ದಲಿತ ವಿದ್ಯಾರ್ಥಿಯನ್ನು ಹೊಡೆದು ಕೊಲ್ಲಲಾಗಿತ್ತು. ರಾಜಸ್ಥಾನ | ಮಡಕೆಯಿಂದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕಣ್ತಪ್ಪಿನಿಂದ ಭಾರತೀಯ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿದ ಅಸ್ಸಾಂ ಬಿಜೆಪಿ ಸರ್ಕಾರ!

ಕಣ್ತಪ್ಪಿನಿಂದ ಭಾರತೀಯ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿದ ಅಸ್ಸಾಂ ಬಿಜೆಪಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...

ಪ್ರಬಲಜಾತಿ ಯುವತಿಯೊಂದಿಗೆ ಗ್ರಾಮ ತೊರೆದ ದಲಿತ ಯುವಕ; ಕುಟುಂಬದ ಮೇಲೆ ದಾಳಿ ಮಾಡಿದ ಹದಿಮೂರು ಜನರ ಬಂಧನ

ಸೂರತ್ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಮಹಿಳೆ ಮತ್ತು ಆಕೆಯ ಇಬ್ಬರು ವಯಸ್ಕ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಶನಿವಾರ ಒಂದೇ ಕುಟುಂಬದ 13 ಸದಸ್ಯರನ್ನು ಬಂಧಿಸಿದ್ದಾರೆ. ಆಕೆಯ...

‘ದೆಹಲಿ ಖಾಲಿಸ್ತಾನವಾಗಲಿದೆ’: 10 ಶಾಲೆಗಳು, ಸಂಸತ್ತಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ನಂತರ ವಿದ್ಯಾರ್ಥಿಗಳ ಸ್ಥಳಾಂತರ

ಸೋಮವಾರ ರಾಷ್ಟ್ರ ರಾಜಧಾನಿ ಮತ್ತು ಸಂಸತ್ತಿನ ಕನಿಷ್ಠ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ಭಾರಿ ಭದ್ರತಾ ಪ್ರತಿಕ್ರಿಯೆ ನೀಡಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು (ಡಿಎಫ್‌ಎಸ್) ತಿಳಿಸಿವೆ. ಡಿಎಫ್‌ಎಸ್ ಪ್ರಕಾರ, ಬೆಳಿಗ್ಗೆ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ...