Homeದಲಿತ್ ಫೈಲ್ಸ್ರಾಜಸ್ಥಾನ | ಮಡಕೆಯಿಂದ ನೀರು ಕುಡಿದ ದಲಿತ ಯುವಕನ ಮೇಲೆ ಸವರ್ಣೀಯರಿಂದ ಥಳಿತ

ರಾಜಸ್ಥಾನ | ಮಡಕೆಯಿಂದ ನೀರು ಕುಡಿದ ದಲಿತ ಯುವಕನ ಮೇಲೆ ಸವರ್ಣೀಯರಿಂದ ಥಳಿತ

- Advertisement -
- Advertisement -

ದಿನಸಿ ಅಂಗಡಿಯ ಹೊರಗೆ ಇಟ್ಟಿದ್ದ ಮಡಕೆಯಿಂದ ನೀರು ಕುಡಿದಿದ್ದಕ್ಕಾಗಿ ದಲಿತ ಯುವಕನ ಮೇಲೆ ದೌರ್ಜನ್ಯ ನಡೆಸಿ ಥಳಿಸಿರುವ ಘಟನೆ ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಖಿನ್ವ್ಸರ್ ಉಪವಿಭಾಗದ ಕಾಂತಿಯಾ ಗ್ರಾಮದಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದೆ. ರಾಜಸ್ಥಾನ | ಮಡಕೆಯಿಂದ

ಸಂತ್ರಸ್ತ ಯುವಕನನ್ನು ಓಂಪ್ರಕಾಶ್ ಮೇಘವಾಲ್ ಎಂದು ಗುರುತಿಸಲಾಗಿದ್ದು, ಅವರು ಸಂಬಂಧಿಕರ ಕಾರ್ಯಕ್ರಮಕ್ಕೆ ಹೋಗುವಾಗ ಸ್ನೇಹಿತನೊಂದಿಗೆ ಅಂಗಡಿಯ ಬಳಿ ನಿಂತಿದ್ದರು. ಈ ವೇಳೆ ಅಂಗಡಿಯ ಹೊರಗೆ ಇಟ್ಟಿದ್ದ ಮಡಕೆಯಿಂದ ನೀರು ಕುಡಿಯಲು ಲೋಹದ ಟಂಬ್ಲರ್ (ಲೋಟಾ) ಬಳಸಿದ್ದರು.

ಸ್ವಲ್ಪ ಸಮಯದ ನಂತರ, ಅಂಗಡಿ ಮಾಲೀಕ ಕಲುರಾಮ್ ಜಾಟ್, ನರಸಿರಾಮ್ ಮತ್ತು ಓಂಪ್ರಕಾಶ್ ಎಂಬ ಇನ್ನೊಬ್ಬ ವ್ಯಕ್ತಿ ಅವರ ಹೆಸರು ಮತ್ತು ಜಾತಿಯನ್ನು ಕೇಳಿದ್ದರು. ಅವರು ಪರಿಶಿಷ್ಟ ಜಾತಿಗೆ ಸೇರಿದವರು ಎಂದು ತಿಳಿದಾಗ, ಅವರು ಜಾತಿ ನಿಂದನೆ ಮಾಡಿ, ಅವರನ್ನು ಥಳಿಸಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಈ ವೇಳೆ ಅವರನ್ನು ಸಮಾಧಾನ ಪಡೆಸಲು ಓಂಪ್ರಕಾಶ್ ಅವರು ಮಡಕೆಯನ್ನು ಮರಳಿನಿಂದ ಸ್ವಚ್ಛಗೊಳಿಸಲು ಪ್ರಯತ್ನಿಸಿದರು ಎಂದು ಹೇಳಿದ್ದಾರೆ. ಅದಾಗ್ಯೂ, ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ಮತ್ತು ಅವಮಾನವನ್ನು ಮುಂದುವರೆಸಿದ್ದರು. ಇದರಿಂದಾಗಿ ಅವರು ಭಯಭೀತರಾಗಿ ಓಡಿಹೋಗಿ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ.

ಅಂದು ರಾತ್ರಿ ಸುಮಾರು 11:30 ರ ಸುಮಾರಿಗೆ, ಆರೋಪಿಗಳು ಕ್ಯಾಂಪರ್ ವಾಹನದಲ್ಲಿ ಪ್ರದೇಶವನ್ನು ಹಲವು ಬಾರಿ ಸುತ್ತುವರೆದು, ನಿವಾಸಿಗಳನ್ನು ಬೆದರಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕೃತ್ಯವು ಪ್ರದೇಶದ ಬಡ ದಲಿತ ಕುಟುಂಬಗಳಲ್ಲಿ ಭೀತಿಯನ್ನುಂಟುಮಾಡಿದೆ ಎಂದು ವರದಿಯಾಗಿದೆ.

ಓಂಪ್ರಕಾಶ್ ಮರುದಿನ ಪೊಲೀಸ್ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಉಪ ಪೊಲೀಸ್ ವರಿಷ್ಠಾಧಿಕಾರಿ ರಾಮಪ್ರತಾಪ್ ವಿಷ್ಣೋಯ್ ನೇತೃತ್ವದ ತಂಡ ಗ್ರಾಮಕ್ಕೆ ಭೇಟಿ ನೀಡಿದ್ದು, ಆದರೆ ಆರೋಪಿಗಳು ಈಗಾಗಲೇ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ಶೋಧದ ನಂತರ, ಪೊಲೀಸರು ಮೂವರನ್ನೂ ಬಂಧಿಸಿದ್ದು, ಅವರ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಇತರ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ನಾಗೌರ್ ಎಸ್‌ಪಿ ನಾರಾಯಣ್ ಟೋಗಾಸ್ ಹೇಳಿದ್ದಾರೆ. ವಿವರವಾದ ತನಿಖೆ ನಡೆಯುತ್ತಿದೆ.

ಆರಂಭದಲ್ಲಿ ಪೊಲೀಸರು ಪ್ರಕರಣವನ್ನು ನಿರ್ಲಕ್ಷಿಸಲು ಪ್ರಯತ್ನಿಸಿದರು ಎಂದು ಸಂತ್ರಸ್ತ ಯುವಕನ ಕುಟುಂಬ ಹೇಳಿಕೊಂಡಿದೆ. ಘಟನೆ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದ್ದರೂ ಪೊಲೀಸ್ ಅಧಿಕಾರಿಗಳು ಮೌನವಾಗಿದ್ದರು. ಮಂಗಳವಾರವೂ ಸಹ, ಸ್ಥಳೀಯ ಪೊಲೀಸರು ವರದಿಗಾರರ ಪ್ರಶ್ನೆಗೆ ಸ್ಪಷ್ಟ ಉತ್ತರಗಳನ್ನು ನೀಡಿರಲಿಲ್ಲ ಎಂದು ವರದಿಯಾಗಿದೆ. ಸಾರ್ವಜನಿಕ ಒತ್ತಡ ಹೆಚ್ಚಿ ವೀಡಿಯೊ ವೈರಲ್ ಆದ ನಂತರವೇ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಆಜಾದ್ ಸಮಾಜ ಪಕ್ಷದ ಮುಖ್ಯಸ್ಥ ಮತ್ತು ನಗೀನಾ ಸಂಸದ ಚಂದ್ರಶೇಖರ್ ಆಜಾದ್ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇದು ಭಾರತದಲ್ಲಿ ಬೇರೂರಿರುವ ಜಾತಿ ತಾರತಮ್ಯದ ಕರಾಳ ಜ್ಞಾಪನೆ ಎಂದು ಕರೆದಿದ್ದಾರೆ.

“ಕಾಂಟಿಯಾ ಗ್ರಾಮದಲ್ಲಿ, ದಲಿತ ಯುವಕರನ್ನು ನಿಂದಿಸಲಾಯಿತು, ಅವಮಾನಿಸಲಾಯಿತು ಮತ್ತು ಕುಡಿಯುವ ನೀರಿಗಾಗಿ ಪಾತ್ರೆಗಳನ್ನು ಸ್ವಚ್ಛಗೊಳಿಸಲು ಒತ್ತಾಯಿಸಲಾಯಿತು. ಇದು ಕೇವಲ ವಿವಾದವಲ್ಲ – ಇದು ವ್ಯವಸ್ಥಿತ, ಶತಮಾನಗಳಷ್ಟು ಹಳೆಯ ದ್ವೇಷದ ಪ್ರತಿಬಿಂಬವಾಗಿದೆ” ಎಂದು ಅವರು ಹೇಳಿದ್ದು, “ದಲಿತನಿಗೆ ಇನ್ನೂ ನೀರು ಕುಡಿಯುವ ಹಕ್ಕಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಈ ಘಟನೆಯು 2022 ರಲ್ಲಿ ಜಾಲೋರ್‌ನಲ್ಲಿ ನಡೆದ ಪ್ರಕರಣಕ್ಕೆ ಹೋಲುತ್ತದೆ. ಈ ಘಟನೆಯಲ್ಲಿ ಸವರ್ಣೀಯರಿಗೆ ಮೀಸಲಾದ ಮಡಕೆಯಿಂದ ನೀರು ಕುಡಿದಿದ್ದಕ್ಕಾಗಿ ಶಾಲಾ ಶಿಕ್ಷಕರಿಂದ ದಲಿತ ವಿದ್ಯಾರ್ಥಿಯನ್ನು ಹೊಡೆದು ಕೊಲ್ಲಲಾಗಿತ್ತು. ರಾಜಸ್ಥಾನ | ಮಡಕೆಯಿಂದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕಣ್ತಪ್ಪಿನಿಂದ ಭಾರತೀಯ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿದ ಅಸ್ಸಾಂ ಬಿಜೆಪಿ ಸರ್ಕಾರ!

ಕಣ್ತಪ್ಪಿನಿಂದ ಭಾರತೀಯ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿದ ಅಸ್ಸಾಂ ಬಿಜೆಪಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...