Homeಮುಖಪುಟರಾಜಸ್ಥಾನ: ದಲಿತ ಯುವಕನ ಬರ್ಬರ ಗುಂಪು ಹತ್ಯೆ, ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಆಕ್ರೋಶ

ರಾಜಸ್ಥಾನ: ದಲಿತ ಯುವಕನ ಬರ್ಬರ ಗುಂಪು ಹತ್ಯೆ, ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಆಕ್ರೋಶ

- Advertisement -
- Advertisement -

ರಾಜಸ್ಥಾನದ ಹನುಮಾನ್‌ಘರ್ ಜಿಲ್ಲೆಯ ಪ್ರೇಂಪುರ ಎಂಬಲ್ಲಿ ದಲಿತ ಯುವಕನೊಬ್ಬನನ್ನು ಗುಂಪೊಂದು ತೀವ್ರ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ. ಆರೋಪಿಗಳು ಯುವಕನನ್ನು ಹಲ್ಲೆ ಮಾಡುತ್ತಿರುವುದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಆಕ್ರೋಶಗೊಂಡ ಯುವಕನ ಕುಟುಂಬ ಮತ್ತು ದಲಿತ ಸಮುದಾಯ ತೀವ್ರ ಪ್ರತಿಭಟನೆ ನಡೆಸಿದ ಕಾರಣಕ್ಕಾಗಿ 11 ಜನರ ಮೇಲೆ ಎಫ್‌ಐಆರ್ ದಾಖಲಿಸಿದ್ದು, ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಒಬ್ಬ ಅಪ್ರಾಪ್ತನನ್ನು ವಶಕ್ಕೆ ಪಡೆದಿದ್ದಾರೆ.

ಹಲವು ದಲಿತ ಸಂಘಟನೆಗಳು ಯುವಕನ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ನಾಲ್ವರನ್ನು ಬಂಧಿಸಿ, ಉಳಿದ ಆರೋಪಿಗಳ ಬಂಧನದ ಆಶ್ವಾಸನೆ ನೀಡಿದ ಬಳಿಕವಷ್ಟೇ ಮೃತನ ಶವಸಂಸ್ಕಾರ ಮಾಡಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಜಗದೀಶ್ ಮೇಘವಾಲ್ ಎಂಬ ಯುವಕ ಅನ್ಯ ಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆತನಿಗೆ ಗುಂಪು ಕಟ್ಟಿ ಥಳಿಸಿ, ಹತ್ಯೆ ಮಾಡಲಾಗಿದೆ ಎಂದು ಸಂತ್ರಸ್ತನ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಯುವಕನನ್ನು ಹೊಲಕ್ಕೆ ಎಳೆದೊಯ್ದು ಕೈಕಟ್ಟಿ ಮೊಣಕಾಲಿನಲ್ಲಿ ಕೂರಿಸಿ ದೊಣ್ಣೆಗಳಿಂದ ಮನಬಂದಂತೆ ಥಳಿಸಲಾಗಿದೆ. ಆತನ ಕೊನೆಯ ಉಸಿರಿರುವರೆಗೂ ಹಲ್ಲೆ ನಡೆಸಲಾಗಿದೆ. ನಂತರ ಶವವನ್ನು ಆತನ ಮನೆ ಮುಂದೆ ಎಸೆಯಲಾಗಿದೆ. ಆಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಆ ವಿಡಿಯೋ ವೈರಲ್ ಆಗಿದೆ ಎನ್ನಲಾಗಿದೆ.

ಈ ಘಟನೆಯನ್ನು ಪ್ರತಿಪಕ್ಷ ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಕೂಡಲೇ ಎಲ್ಲಾ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದೆ. “ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ದಲಿತರ ಮೇಲಿನ ಹಲ್ಲೆಗಳು ಶೇ.21 ರಷ್ಟು ಹೆಚ್ಚಾಗಿವೆ. ಆದರೆ ಕೇಂದ್ರ ಕಾಂಗ್ರೆಸ್ ನಾಯಕರು ರಾಜಕೀಯ ಪ್ರವಾಸ ಮಾಡುತ್ತಿದ್ದಾರೆ. ಅವರಿಗೆ ರಾಜಸ್ಥಾನ ಕಾಣುತ್ತಿಲ್ಲ” ಎಂದು ಬಿಜೆಪಿ ಮುಖ್ಯಸ್ಥ ಸತೀಶ್ ಪುನಿಯಾ ಆರೋಪಿಸಿದ್ದಾರೆ.

ರಾಹುಲ್ ಜೀ, ಲಖಿಂಪುರದ ಬಗ್ಗೆ ಚಿಂತಿಸಬೇಡಿ, ಅಲ್ಲಿ ಯೋಗಿ ಸರ್ಕಾರದಲ್ಲಿದ್ದಾರೆ ಮತ್ತು ನೀವು ಪ್ರಿಯ ಗೆಹ್ಲೋಟ್ ಜೀ ಅಲ್ಲ. ರಾಜಸ್ಥಾನದ ಪ್ರೇಂಪುರದಲ್ಲಿ ನಡೆದ ದಲಿತ ಯುವಕನ ಕೊಲೆಯ ಬಗ್ಗೆ ಮಾತನಾಡಲು ಸ್ವಲ್ಪ ಧೈರ್ಯ ತೋರಿಸಿ. ಇದರಿಂದ ನೀವು ಎಷ್ಟು ಸತ್ಯವಂತರು ಎಂದು ಜನರಿಗೆ ತಿಳಿಯುತ್ತದೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಕಾವತ್ ಕಿಡಿಕಾರಿದ್ದಾರೆ.

ಘಟನೆಯ ಕುರಿತು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಪ್ರತಿಕ್ರಿಯಿಸಿ, “ರಾಜಸ್ಥಾನದ ದಲಿತ ವ್ಯಕ್ತಿಯ ಗುಂಪು ಹತ್ಯೆ ತೀರಾ ವಿಷಾಧನೀಯ ಮತ್ತು ಖಂಡನೀಯವಾಗಿದೆ. ಆದರೆ ಈ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ಏಕೆ ನಿಶಬ್ದವಾಗಿದೆ? ಪಂಜಾಬ್ ಮತ್ತು ಛತ್ತಿಸ್‌ಘಡ ಮುಖ್ಯಮಂತ್ರಿಗಳು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿ 50 ಲಕ್ಷ ಪರಿಹಾರ ನೀಡುತ್ತಾರೆಯೇ? ಈ ಬಗ್ಗೆ ಕಾಂಗ್ರೆಸ್ ಉತ್ತರಿಸಬೇಕು ಇಲ್ಲ ದಲಿತರ ಹೆಸರಿನಲ್ಲಿ ಮೊಸಳೆ ಕಣ್ಣೀರು ಸುರಿಸುವುದನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದ್ದಾರೆ.

“ರಾಜಸ್ಥಾನ ಮತ್ತು ಉತ್ತರ ಪ್ರದೇಶ ಸರ್ಕಾರಗಳಲ್ಲಿ ಕೇವಲ ಪಕ್ಷಗಳ ವ್ಯತ್ಯಾಸವಿದೆ. ದಲಿತ ದಬ್ಬಾಳಿಕೆಯ ವಿಷಯದಲ್ಲಿ ಎರಡೂ ಸರ್ಕಾರಗಳು ಒಂದೇ ಆಗಿರುತ್ತವೆ. ಹನುಮಾನ್‌ಘರ್‌ನಲ್ಲಿನ ದಲಿತರ ಹತ್ಯೆ ನೋವಿನಿಂದ ಕೂಡಿದೆ. ಅಶೋಕ್ ಗೆಹ್ಲೋಟ್‌ರವರೆ ನೀವು ತಮಾಷೆ ನೋಡಲು ಕುಳಿತಿದ್ದೀರಾ? ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ” ಎಂದು ಅಜಾದ್ ಸಮಾಜ್ ಪಕ್ಷದ ಮುಖಂಡ ಚಂದ್ರಶೇಖರ್ ಅಜಾದ್ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮಂಗಳೂರು: ಮತ್ತೊಂದು ಅನೈತಿಕ ಪೊಲೀಸ್‌ಗಿರಿ; ಇಬ್ಬರು ಬಜರಂಗದಳ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...