Homeಮುಖಪುಟರಾಜಸ್ಥಾನ: ದಲಿತ ಯುವಕನ ಬರ್ಬರ ಗುಂಪು ಹತ್ಯೆ, ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಆಕ್ರೋಶ

ರಾಜಸ್ಥಾನ: ದಲಿತ ಯುವಕನ ಬರ್ಬರ ಗುಂಪು ಹತ್ಯೆ, ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಆಕ್ರೋಶ

- Advertisement -
- Advertisement -

ರಾಜಸ್ಥಾನದ ಹನುಮಾನ್‌ಘರ್ ಜಿಲ್ಲೆಯ ಪ್ರೇಂಪುರ ಎಂಬಲ್ಲಿ ದಲಿತ ಯುವಕನೊಬ್ಬನನ್ನು ಗುಂಪೊಂದು ತೀವ್ರ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ. ಆರೋಪಿಗಳು ಯುವಕನನ್ನು ಹಲ್ಲೆ ಮಾಡುತ್ತಿರುವುದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಆಕ್ರೋಶಗೊಂಡ ಯುವಕನ ಕುಟುಂಬ ಮತ್ತು ದಲಿತ ಸಮುದಾಯ ತೀವ್ರ ಪ್ರತಿಭಟನೆ ನಡೆಸಿದ ಕಾರಣಕ್ಕಾಗಿ 11 ಜನರ ಮೇಲೆ ಎಫ್‌ಐಆರ್ ದಾಖಲಿಸಿದ್ದು, ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಒಬ್ಬ ಅಪ್ರಾಪ್ತನನ್ನು ವಶಕ್ಕೆ ಪಡೆದಿದ್ದಾರೆ.

ಹಲವು ದಲಿತ ಸಂಘಟನೆಗಳು ಯುವಕನ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ನಾಲ್ವರನ್ನು ಬಂಧಿಸಿ, ಉಳಿದ ಆರೋಪಿಗಳ ಬಂಧನದ ಆಶ್ವಾಸನೆ ನೀಡಿದ ಬಳಿಕವಷ್ಟೇ ಮೃತನ ಶವಸಂಸ್ಕಾರ ಮಾಡಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಜಗದೀಶ್ ಮೇಘವಾಲ್ ಎಂಬ ಯುವಕ ಅನ್ಯ ಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆತನಿಗೆ ಗುಂಪು ಕಟ್ಟಿ ಥಳಿಸಿ, ಹತ್ಯೆ ಮಾಡಲಾಗಿದೆ ಎಂದು ಸಂತ್ರಸ್ತನ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಯುವಕನನ್ನು ಹೊಲಕ್ಕೆ ಎಳೆದೊಯ್ದು ಕೈಕಟ್ಟಿ ಮೊಣಕಾಲಿನಲ್ಲಿ ಕೂರಿಸಿ ದೊಣ್ಣೆಗಳಿಂದ ಮನಬಂದಂತೆ ಥಳಿಸಲಾಗಿದೆ. ಆತನ ಕೊನೆಯ ಉಸಿರಿರುವರೆಗೂ ಹಲ್ಲೆ ನಡೆಸಲಾಗಿದೆ. ನಂತರ ಶವವನ್ನು ಆತನ ಮನೆ ಮುಂದೆ ಎಸೆಯಲಾಗಿದೆ. ಆಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಆ ವಿಡಿಯೋ ವೈರಲ್ ಆಗಿದೆ ಎನ್ನಲಾಗಿದೆ.

ಈ ಘಟನೆಯನ್ನು ಪ್ರತಿಪಕ್ಷ ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಕೂಡಲೇ ಎಲ್ಲಾ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದೆ. “ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ದಲಿತರ ಮೇಲಿನ ಹಲ್ಲೆಗಳು ಶೇ.21 ರಷ್ಟು ಹೆಚ್ಚಾಗಿವೆ. ಆದರೆ ಕೇಂದ್ರ ಕಾಂಗ್ರೆಸ್ ನಾಯಕರು ರಾಜಕೀಯ ಪ್ರವಾಸ ಮಾಡುತ್ತಿದ್ದಾರೆ. ಅವರಿಗೆ ರಾಜಸ್ಥಾನ ಕಾಣುತ್ತಿಲ್ಲ” ಎಂದು ಬಿಜೆಪಿ ಮುಖ್ಯಸ್ಥ ಸತೀಶ್ ಪುನಿಯಾ ಆರೋಪಿಸಿದ್ದಾರೆ.

ರಾಹುಲ್ ಜೀ, ಲಖಿಂಪುರದ ಬಗ್ಗೆ ಚಿಂತಿಸಬೇಡಿ, ಅಲ್ಲಿ ಯೋಗಿ ಸರ್ಕಾರದಲ್ಲಿದ್ದಾರೆ ಮತ್ತು ನೀವು ಪ್ರಿಯ ಗೆಹ್ಲೋಟ್ ಜೀ ಅಲ್ಲ. ರಾಜಸ್ಥಾನದ ಪ್ರೇಂಪುರದಲ್ಲಿ ನಡೆದ ದಲಿತ ಯುವಕನ ಕೊಲೆಯ ಬಗ್ಗೆ ಮಾತನಾಡಲು ಸ್ವಲ್ಪ ಧೈರ್ಯ ತೋರಿಸಿ. ಇದರಿಂದ ನೀವು ಎಷ್ಟು ಸತ್ಯವಂತರು ಎಂದು ಜನರಿಗೆ ತಿಳಿಯುತ್ತದೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಕಾವತ್ ಕಿಡಿಕಾರಿದ್ದಾರೆ.

ಘಟನೆಯ ಕುರಿತು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಪ್ರತಿಕ್ರಿಯಿಸಿ, “ರಾಜಸ್ಥಾನದ ದಲಿತ ವ್ಯಕ್ತಿಯ ಗುಂಪು ಹತ್ಯೆ ತೀರಾ ವಿಷಾಧನೀಯ ಮತ್ತು ಖಂಡನೀಯವಾಗಿದೆ. ಆದರೆ ಈ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ಏಕೆ ನಿಶಬ್ದವಾಗಿದೆ? ಪಂಜಾಬ್ ಮತ್ತು ಛತ್ತಿಸ್‌ಘಡ ಮುಖ್ಯಮಂತ್ರಿಗಳು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿ 50 ಲಕ್ಷ ಪರಿಹಾರ ನೀಡುತ್ತಾರೆಯೇ? ಈ ಬಗ್ಗೆ ಕಾಂಗ್ರೆಸ್ ಉತ್ತರಿಸಬೇಕು ಇಲ್ಲ ದಲಿತರ ಹೆಸರಿನಲ್ಲಿ ಮೊಸಳೆ ಕಣ್ಣೀರು ಸುರಿಸುವುದನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದ್ದಾರೆ.

“ರಾಜಸ್ಥಾನ ಮತ್ತು ಉತ್ತರ ಪ್ರದೇಶ ಸರ್ಕಾರಗಳಲ್ಲಿ ಕೇವಲ ಪಕ್ಷಗಳ ವ್ಯತ್ಯಾಸವಿದೆ. ದಲಿತ ದಬ್ಬಾಳಿಕೆಯ ವಿಷಯದಲ್ಲಿ ಎರಡೂ ಸರ್ಕಾರಗಳು ಒಂದೇ ಆಗಿರುತ್ತವೆ. ಹನುಮಾನ್‌ಘರ್‌ನಲ್ಲಿನ ದಲಿತರ ಹತ್ಯೆ ನೋವಿನಿಂದ ಕೂಡಿದೆ. ಅಶೋಕ್ ಗೆಹ್ಲೋಟ್‌ರವರೆ ನೀವು ತಮಾಷೆ ನೋಡಲು ಕುಳಿತಿದ್ದೀರಾ? ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ” ಎಂದು ಅಜಾದ್ ಸಮಾಜ್ ಪಕ್ಷದ ಮುಖಂಡ ಚಂದ್ರಶೇಖರ್ ಅಜಾದ್ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮಂಗಳೂರು: ಮತ್ತೊಂದು ಅನೈತಿಕ ಪೊಲೀಸ್‌ಗಿರಿ; ಇಬ್ಬರು ಬಜರಂಗದಳ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...