Homeಮುಖಪುಟರಾಜಸ್ಥಾನ: ದಲಿತ ಯುವಕನ ಬರ್ಬರ ಗುಂಪು ಹತ್ಯೆ, ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಆಕ್ರೋಶ

ರಾಜಸ್ಥಾನ: ದಲಿತ ಯುವಕನ ಬರ್ಬರ ಗುಂಪು ಹತ್ಯೆ, ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಆಕ್ರೋಶ

- Advertisement -
- Advertisement -

ರಾಜಸ್ಥಾನದ ಹನುಮಾನ್‌ಘರ್ ಜಿಲ್ಲೆಯ ಪ್ರೇಂಪುರ ಎಂಬಲ್ಲಿ ದಲಿತ ಯುವಕನೊಬ್ಬನನ್ನು ಗುಂಪೊಂದು ತೀವ್ರ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ. ಆರೋಪಿಗಳು ಯುವಕನನ್ನು ಹಲ್ಲೆ ಮಾಡುತ್ತಿರುವುದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಆಕ್ರೋಶಗೊಂಡ ಯುವಕನ ಕುಟುಂಬ ಮತ್ತು ದಲಿತ ಸಮುದಾಯ ತೀವ್ರ ಪ್ರತಿಭಟನೆ ನಡೆಸಿದ ಕಾರಣಕ್ಕಾಗಿ 11 ಜನರ ಮೇಲೆ ಎಫ್‌ಐಆರ್ ದಾಖಲಿಸಿದ್ದು, ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಒಬ್ಬ ಅಪ್ರಾಪ್ತನನ್ನು ವಶಕ್ಕೆ ಪಡೆದಿದ್ದಾರೆ.

ಹಲವು ದಲಿತ ಸಂಘಟನೆಗಳು ಯುವಕನ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ನಾಲ್ವರನ್ನು ಬಂಧಿಸಿ, ಉಳಿದ ಆರೋಪಿಗಳ ಬಂಧನದ ಆಶ್ವಾಸನೆ ನೀಡಿದ ಬಳಿಕವಷ್ಟೇ ಮೃತನ ಶವಸಂಸ್ಕಾರ ಮಾಡಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಜಗದೀಶ್ ಮೇಘವಾಲ್ ಎಂಬ ಯುವಕ ಅನ್ಯ ಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆತನಿಗೆ ಗುಂಪು ಕಟ್ಟಿ ಥಳಿಸಿ, ಹತ್ಯೆ ಮಾಡಲಾಗಿದೆ ಎಂದು ಸಂತ್ರಸ್ತನ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಯುವಕನನ್ನು ಹೊಲಕ್ಕೆ ಎಳೆದೊಯ್ದು ಕೈಕಟ್ಟಿ ಮೊಣಕಾಲಿನಲ್ಲಿ ಕೂರಿಸಿ ದೊಣ್ಣೆಗಳಿಂದ ಮನಬಂದಂತೆ ಥಳಿಸಲಾಗಿದೆ. ಆತನ ಕೊನೆಯ ಉಸಿರಿರುವರೆಗೂ ಹಲ್ಲೆ ನಡೆಸಲಾಗಿದೆ. ನಂತರ ಶವವನ್ನು ಆತನ ಮನೆ ಮುಂದೆ ಎಸೆಯಲಾಗಿದೆ. ಆಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಆ ವಿಡಿಯೋ ವೈರಲ್ ಆಗಿದೆ ಎನ್ನಲಾಗಿದೆ.

ಈ ಘಟನೆಯನ್ನು ಪ್ರತಿಪಕ್ಷ ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಕೂಡಲೇ ಎಲ್ಲಾ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದೆ. “ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ದಲಿತರ ಮೇಲಿನ ಹಲ್ಲೆಗಳು ಶೇ.21 ರಷ್ಟು ಹೆಚ್ಚಾಗಿವೆ. ಆದರೆ ಕೇಂದ್ರ ಕಾಂಗ್ರೆಸ್ ನಾಯಕರು ರಾಜಕೀಯ ಪ್ರವಾಸ ಮಾಡುತ್ತಿದ್ದಾರೆ. ಅವರಿಗೆ ರಾಜಸ್ಥಾನ ಕಾಣುತ್ತಿಲ್ಲ” ಎಂದು ಬಿಜೆಪಿ ಮುಖ್ಯಸ್ಥ ಸತೀಶ್ ಪುನಿಯಾ ಆರೋಪಿಸಿದ್ದಾರೆ.

ರಾಹುಲ್ ಜೀ, ಲಖಿಂಪುರದ ಬಗ್ಗೆ ಚಿಂತಿಸಬೇಡಿ, ಅಲ್ಲಿ ಯೋಗಿ ಸರ್ಕಾರದಲ್ಲಿದ್ದಾರೆ ಮತ್ತು ನೀವು ಪ್ರಿಯ ಗೆಹ್ಲೋಟ್ ಜೀ ಅಲ್ಲ. ರಾಜಸ್ಥಾನದ ಪ್ರೇಂಪುರದಲ್ಲಿ ನಡೆದ ದಲಿತ ಯುವಕನ ಕೊಲೆಯ ಬಗ್ಗೆ ಮಾತನಾಡಲು ಸ್ವಲ್ಪ ಧೈರ್ಯ ತೋರಿಸಿ. ಇದರಿಂದ ನೀವು ಎಷ್ಟು ಸತ್ಯವಂತರು ಎಂದು ಜನರಿಗೆ ತಿಳಿಯುತ್ತದೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಕಾವತ್ ಕಿಡಿಕಾರಿದ್ದಾರೆ.

ಘಟನೆಯ ಕುರಿತು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಪ್ರತಿಕ್ರಿಯಿಸಿ, “ರಾಜಸ್ಥಾನದ ದಲಿತ ವ್ಯಕ್ತಿಯ ಗುಂಪು ಹತ್ಯೆ ತೀರಾ ವಿಷಾಧನೀಯ ಮತ್ತು ಖಂಡನೀಯವಾಗಿದೆ. ಆದರೆ ಈ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ಏಕೆ ನಿಶಬ್ದವಾಗಿದೆ? ಪಂಜಾಬ್ ಮತ್ತು ಛತ್ತಿಸ್‌ಘಡ ಮುಖ್ಯಮಂತ್ರಿಗಳು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿ 50 ಲಕ್ಷ ಪರಿಹಾರ ನೀಡುತ್ತಾರೆಯೇ? ಈ ಬಗ್ಗೆ ಕಾಂಗ್ರೆಸ್ ಉತ್ತರಿಸಬೇಕು ಇಲ್ಲ ದಲಿತರ ಹೆಸರಿನಲ್ಲಿ ಮೊಸಳೆ ಕಣ್ಣೀರು ಸುರಿಸುವುದನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದ್ದಾರೆ.

“ರಾಜಸ್ಥಾನ ಮತ್ತು ಉತ್ತರ ಪ್ರದೇಶ ಸರ್ಕಾರಗಳಲ್ಲಿ ಕೇವಲ ಪಕ್ಷಗಳ ವ್ಯತ್ಯಾಸವಿದೆ. ದಲಿತ ದಬ್ಬಾಳಿಕೆಯ ವಿಷಯದಲ್ಲಿ ಎರಡೂ ಸರ್ಕಾರಗಳು ಒಂದೇ ಆಗಿರುತ್ತವೆ. ಹನುಮಾನ್‌ಘರ್‌ನಲ್ಲಿನ ದಲಿತರ ಹತ್ಯೆ ನೋವಿನಿಂದ ಕೂಡಿದೆ. ಅಶೋಕ್ ಗೆಹ್ಲೋಟ್‌ರವರೆ ನೀವು ತಮಾಷೆ ನೋಡಲು ಕುಳಿತಿದ್ದೀರಾ? ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ” ಎಂದು ಅಜಾದ್ ಸಮಾಜ್ ಪಕ್ಷದ ಮುಖಂಡ ಚಂದ್ರಶೇಖರ್ ಅಜಾದ್ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮಂಗಳೂರು: ಮತ್ತೊಂದು ಅನೈತಿಕ ಪೊಲೀಸ್‌ಗಿರಿ; ಇಬ್ಬರು ಬಜರಂಗದಳ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...