Homeಮುಖಪುಟರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

ರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

- Advertisement -
- Advertisement -

ತಮ್ಮ ಮನೆ ಹೊರಗೆ ಅಂಟಿಸಿದ್ದ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಪೋಸ್ಟರ್‌ ತೆಗೆಯಲು ಆಕ್ಷೇಪ ವ್ಯಕ್ತಪಡಿಸಿದ 21 ವರ್ಷದ ದಲಿತ ಯುವಕನ ಮೇಲೆ ದಾಳಿ ನಡೆಸಿ ಕೊಲೆ ಮಾಡಿರುವ ಘಟನೆ ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯಲ್ಲಿ ನಡೆದಿದೆ.

ಭೀಮ್ ಸೈನ್ಯದ ಸದಸ್ಯರಾಗಿದ್ದ ವಿನೋದ್ ಬಾಮ್ನಿಯಾ ಅವರ ಮೇಲೆ ಜೂನ್ 5 ರಂದು ರಾಜಸ್ಥಾನದ ಹನುಮನ್‌ಗಢ ಜಿಲ್ಲೆಯ ಕಿಕ್ರಲಿಯಾ ಗ್ರಾಮದಲ್ಲಿರುವ ಅವರ ಮನೆಯ ಗೋಡೆಯ ಮೇಲೆ ಅಂಬೇಡ್ಕರ್‌ ಅವರ ಪೋಸ್ಟರ್‌ ಅಂಟಿಸಿದ್ದರು. ಇವುಗಳನ್ನು ತೆರವುಗೊಳಿಸುವಂತೆ ಒಬಿಸಿ ಸಮುದಾಯಕ್ಕೆ ಸೇರಿದ ಯುವಕರ ಗುಂಪು ಆಗ್ರಹಿಸಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿನೋದ್‌ ಮೇಲೆ ಹಲ್ಲೆ ಮಾಡಲಾಗಿದೆ. ಎರಡು ದಿನಗಳ ನಂತರ ಶ್ರೀಗಂಗನಗರದ ಆಸ್ಪತ್ರೆಯಲ್ಲಿ ಗಾಯಾಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟರ್ ಘಟನೆಯ ಬಗ್ಗೆ ಮೃತ ವಿನೋದ್ ಬಾಮ್ನಿಯಾ ಅವರ ಕುಟುಂಬದವರು ದಾಖಲಿಸಿದ್ದ ಎಫ್‌ಐಆರ್‌ ಆಧರಿಸಿ ಅನಿಲ್ ಸಿಹಾಗ್ ಮತ್ತು ರಾಕೇಶ್ ಸಿಹಾಗ್ ಇಬ್ಬರನ್ನು ಬಂಧಿಸಲಾಗಿದೆ. ಇನ್ನೂ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆ ವೇಳೆ ಆರೋಪಿಗಳು ಜಾತಿವಾದಿ ಗಲಾಟೆ ಮಾಡಿದ್ದಾರೆ. ಇವತ್ತು ನಿಮಗೆ ನಿಮ್ಮ ಅಂಬೇಡ್ಕರ್‌ ವಾದವನ್ನು ನೆನಪಿಸುತ್ತೇವೆ ಎಂದು ಹೇಳುತ್ತಾ ಹಲ್ಲೆ ಮಾಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರ ತನಿಖೆಯ ವಿಳಂಬದ ಬಗ್ಗೆ ಭೀಮ್ ಸೈನ್ಯ ಪ್ರತಿಭಟನೆ ನಡೆಸಿದೆ. ತನಿಖೆಯ ವಿಳಂಬ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ.

ಇದನ್ನೂ ಓದಿ: ದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಿ: ರಾಜ್ಯಾದ್ಯಂತ ಹಕ್ಕೊತ್ತಾಯ ಸಲ್ಲಿಕೆ

ಮೃತ ವಿನೋದ್ ಬಾಮ್ನಿಯಾ ಈ ವರ್ಷದ ಆರಂಭದಲ್ಲಿ ಎರಡು ಬಾರಿ ವಿವಿಧ ವಿಷಯಗಳ ಬಗ್ಗೆ ದೂರುಗಳನ್ನು ದಾಖಲಿಸಿದ್ದರು. ಶಾಲೆಯಲ್ಲಿ ಹನುಮಾನ್ ಚಾಲೀಸಾ ಪ್ರತಿಗಳನ್ನು ವಿತರಿಸುವುದನ್ನು ಆಕ್ಷೇಪಿಸಿ, ಬೆದರಿಕೆ ಕರೆಗಳನ್ನು ಸ್ವೀಕರಿಸಿದ್ದರು. ತಮ್ಮ ಕುಟುಂಬಕ್ಕೆ ರಸ್ತೆ ನಿರ್ಬಂಧವನ್ನು ಆಕ್ಷೇಪಿಸಿದ್ದಕ್ಕಾಗಿ ಗ್ರಾಮದ ನಿವಾಸಿಗಳು ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಿಸಿದ್ದರು.

ಮೃತ ವಿನೋದ್ ಬಾಮ್ನಿಯಾ

“ಇತ್ತೀಚೆಗೆ, ನಮ್ಮ ಹಳ್ಳಿಯಲ್ಲಿ ವಾಸಿಸುವ ಅನಿಲ್ ಸಿಹಾಗ್ ಮತ್ತು ರಾಕೇಶ್ ಸಿಹಾಗ್ ಸೇರಿದಂತೆ ಕೆಲವು ಯುವಕರು ಏಪ್ರಿಲ್ 14 ರಂದು ಅಂಬೇಡ್ಕರ್ ಜಯಂತಿಯ ನಂತರ ನಮ್ಮ ಮನೆಯ ಹೊರಗೆ ಹಾಕಿದ್ದ ಬಾಬಾಸಾಹೇಬ್ ಅಂಬೇಡ್ಕರ್ ಅವರ ಬ್ಯಾನರ್‌ಗಳನ್ನು ಹರಿದು ಹಾಕಿದ್ದರು. ನಾವು ಅವರನ್ನು ಗುರುತಿಸಿ ಅವರ ಕುಟುಂಬಗಳಿಗೆ ವಿಷಯ ತಿಳಿಸಿದ್ದೇವು. ಈ ವಿಷಯವನ್ನು ಪಂಚಾಯಿತಿಯ ಮಧ್ಯಸ್ಥಿಕೆಯೊಂದಿಗೆ ಬಗೆಹರಿಸಲಾಗಿತ್ತು. ಯುವಕರ ಪರವಾಗಿ ಅವರ ಕುಟುಂಬ ಸದಸ್ಯರು ಕ್ಷಮೆಯಾಚಿಸಿದ್ದರು” ಎಂದು ಮೃತ ವಿನೋದ್ ಸೋದರಸಂಬಂಧಿ ಮುಖೇಶ್ ಹೇಳಿದ್ದಾರೆ.

“ಆದರೆ ನಿಜವಾದ ಅಪರಾಧಿಗಳು ಈ ಘಟನೆಗೆ ಸೇಡು ತೀರಿಸಿಕೊಳ್ಳಲು ಬಯಸಿದ್ದರು. ಜೂನ್ 5 ರಂದು ವಿನೋದ್ ಮತ್ತು ನಾನು ಹಳ್ಳಿಯ ನಮ್ಮ ಹೊಲಗಳಿಗೆ ಹೋಗುವಾಗ ರಾಕೇಶ್, ಅನಿಲ್ ಮತ್ತು ಇನ್ನೂ ಕೆಲವರು ನಮ್ಮ ಮೇಲೆ ಹಲ್ಲೆ ನಡೆಸಿದ್ದರು. ಸಣ್ಣಪುಟ್ಟ ಗಾಯಗಳೊಂದಿಗೆ ನಾನು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೆ. ಆದರೆ ಅವರು ವಿನೋದ್ ಅವರನ್ನು ಹಾಕಿ ಸ್ಟಿಕ್‌ಗಳಿಂದ ಸುಮಾರು 20-30 ಬಾರಿ ಮನ ಬಂದಂತೆ ಥಳಿಸಿದರು. ವಿನೋದ್‌ನನ್ನು ಹನುಮನ್‌ಗಢ ಮತ್ತು ಶ್ರೀಗಂಗನಗರ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿತ್ತು. ಆದರು ಚಿಕಿತ್ಸೆ ಫಲಿಸದೇ ವಿನೋದ್ ಸಾವನ್ನಪ್ಪಿದ್ದಾರೆ” ಎಂದು ಮುಖೇಶ್ ತಿಳಿಸಿದರು.

ಐಪಿಸಿ ಸೆಕ್ಷನ್‌ಗಳು 307 (ಕೊಲೆ ಯತ್ನ), 323 (ಸ್ವಯಂಪ್ರೇರಣೆಯಿಂದ ನೋವನ್ನುಂಟು ಮಾಡಿದ ಶಿಕ್ಷೆ), 341, 143  ಮತ್ತು ಎಸ್‌ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಸೆಕ್ಷನ್‌ಗಳ ಅಡಿಯಲ್ಲಿ ಹಲ್ಲೆಯ ಆರಂಭಿಕ ಎಫ್‌ಐಆರ್ ಅನ್ನು ಪೊಲೀಸರು ದಾಖಲಿಸಿದ್ದರು. ವಿನೋದ್ ಮರಣದ ನಂತರ, ಕೊಲೆ ಯತ್ನದ ಆರೋಪವನ್ನು ಐಪಿಸಿ ಸೆಕ್ಷನ್ 302 ರ ಅಡಿಯಲ್ಲಿ ಕೊಲೆ ಎಂದು ಬದಲಾಯಿಸಲಾಗಿದೆ.


ಇದನ್ನೂ ಓದಿ: ಮೇಲ್ಜಾತಿ ಹುಡುಗಿಗೆ ಮೊಬೈಲ್‌ ನೀಡಿದ್ದಕ್ಕೆ ದಲಿತ ಯುವಕರ ತಲೆ ಬೋಳಿಸಿ, ಎಂಜಲು ತಿನ್ನಿಸಿದ ಅಮಾವೀಯ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಲಿತ ಯುವಕನನ್ನು ಕೊಂದವರಿಗೆ ಕಟಿಣ ಶಿಕ್ಷೆ ಆಗಬೇಕು. ದುರಂತವೆಂದರೆ ಇಲ್ಲಿ ಕೊಲೆ ಮಾಡಿರುವವರು ಮೇಲ್ಜಾತಿಯವರಲ್ಲ, ಹಿಂದುಳಿದ ಜಾತಿಯವರು!

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...