Homeಮುಖಪುಟರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

ರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

- Advertisement -
- Advertisement -

ತಮ್ಮ ಮನೆ ಹೊರಗೆ ಅಂಟಿಸಿದ್ದ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಪೋಸ್ಟರ್‌ ತೆಗೆಯಲು ಆಕ್ಷೇಪ ವ್ಯಕ್ತಪಡಿಸಿದ 21 ವರ್ಷದ ದಲಿತ ಯುವಕನ ಮೇಲೆ ದಾಳಿ ನಡೆಸಿ ಕೊಲೆ ಮಾಡಿರುವ ಘಟನೆ ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯಲ್ಲಿ ನಡೆದಿದೆ.

ಭೀಮ್ ಸೈನ್ಯದ ಸದಸ್ಯರಾಗಿದ್ದ ವಿನೋದ್ ಬಾಮ್ನಿಯಾ ಅವರ ಮೇಲೆ ಜೂನ್ 5 ರಂದು ರಾಜಸ್ಥಾನದ ಹನುಮನ್‌ಗಢ ಜಿಲ್ಲೆಯ ಕಿಕ್ರಲಿಯಾ ಗ್ರಾಮದಲ್ಲಿರುವ ಅವರ ಮನೆಯ ಗೋಡೆಯ ಮೇಲೆ ಅಂಬೇಡ್ಕರ್‌ ಅವರ ಪೋಸ್ಟರ್‌ ಅಂಟಿಸಿದ್ದರು. ಇವುಗಳನ್ನು ತೆರವುಗೊಳಿಸುವಂತೆ ಒಬಿಸಿ ಸಮುದಾಯಕ್ಕೆ ಸೇರಿದ ಯುವಕರ ಗುಂಪು ಆಗ್ರಹಿಸಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿನೋದ್‌ ಮೇಲೆ ಹಲ್ಲೆ ಮಾಡಲಾಗಿದೆ. ಎರಡು ದಿನಗಳ ನಂತರ ಶ್ರೀಗಂಗನಗರದ ಆಸ್ಪತ್ರೆಯಲ್ಲಿ ಗಾಯಾಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟರ್ ಘಟನೆಯ ಬಗ್ಗೆ ಮೃತ ವಿನೋದ್ ಬಾಮ್ನಿಯಾ ಅವರ ಕುಟುಂಬದವರು ದಾಖಲಿಸಿದ್ದ ಎಫ್‌ಐಆರ್‌ ಆಧರಿಸಿ ಅನಿಲ್ ಸಿಹಾಗ್ ಮತ್ತು ರಾಕೇಶ್ ಸಿಹಾಗ್ ಇಬ್ಬರನ್ನು ಬಂಧಿಸಲಾಗಿದೆ. ಇನ್ನೂ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆ ವೇಳೆ ಆರೋಪಿಗಳು ಜಾತಿವಾದಿ ಗಲಾಟೆ ಮಾಡಿದ್ದಾರೆ. ಇವತ್ತು ನಿಮಗೆ ನಿಮ್ಮ ಅಂಬೇಡ್ಕರ್‌ ವಾದವನ್ನು ನೆನಪಿಸುತ್ತೇವೆ ಎಂದು ಹೇಳುತ್ತಾ ಹಲ್ಲೆ ಮಾಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರ ತನಿಖೆಯ ವಿಳಂಬದ ಬಗ್ಗೆ ಭೀಮ್ ಸೈನ್ಯ ಪ್ರತಿಭಟನೆ ನಡೆಸಿದೆ. ತನಿಖೆಯ ವಿಳಂಬ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ.

ಇದನ್ನೂ ಓದಿ: ದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಿ: ರಾಜ್ಯಾದ್ಯಂತ ಹಕ್ಕೊತ್ತಾಯ ಸಲ್ಲಿಕೆ

ಮೃತ ವಿನೋದ್ ಬಾಮ್ನಿಯಾ ಈ ವರ್ಷದ ಆರಂಭದಲ್ಲಿ ಎರಡು ಬಾರಿ ವಿವಿಧ ವಿಷಯಗಳ ಬಗ್ಗೆ ದೂರುಗಳನ್ನು ದಾಖಲಿಸಿದ್ದರು. ಶಾಲೆಯಲ್ಲಿ ಹನುಮಾನ್ ಚಾಲೀಸಾ ಪ್ರತಿಗಳನ್ನು ವಿತರಿಸುವುದನ್ನು ಆಕ್ಷೇಪಿಸಿ, ಬೆದರಿಕೆ ಕರೆಗಳನ್ನು ಸ್ವೀಕರಿಸಿದ್ದರು. ತಮ್ಮ ಕುಟುಂಬಕ್ಕೆ ರಸ್ತೆ ನಿರ್ಬಂಧವನ್ನು ಆಕ್ಷೇಪಿಸಿದ್ದಕ್ಕಾಗಿ ಗ್ರಾಮದ ನಿವಾಸಿಗಳು ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಿಸಿದ್ದರು.

ಮೃತ ವಿನೋದ್ ಬಾಮ್ನಿಯಾ

“ಇತ್ತೀಚೆಗೆ, ನಮ್ಮ ಹಳ್ಳಿಯಲ್ಲಿ ವಾಸಿಸುವ ಅನಿಲ್ ಸಿಹಾಗ್ ಮತ್ತು ರಾಕೇಶ್ ಸಿಹಾಗ್ ಸೇರಿದಂತೆ ಕೆಲವು ಯುವಕರು ಏಪ್ರಿಲ್ 14 ರಂದು ಅಂಬೇಡ್ಕರ್ ಜಯಂತಿಯ ನಂತರ ನಮ್ಮ ಮನೆಯ ಹೊರಗೆ ಹಾಕಿದ್ದ ಬಾಬಾಸಾಹೇಬ್ ಅಂಬೇಡ್ಕರ್ ಅವರ ಬ್ಯಾನರ್‌ಗಳನ್ನು ಹರಿದು ಹಾಕಿದ್ದರು. ನಾವು ಅವರನ್ನು ಗುರುತಿಸಿ ಅವರ ಕುಟುಂಬಗಳಿಗೆ ವಿಷಯ ತಿಳಿಸಿದ್ದೇವು. ಈ ವಿಷಯವನ್ನು ಪಂಚಾಯಿತಿಯ ಮಧ್ಯಸ್ಥಿಕೆಯೊಂದಿಗೆ ಬಗೆಹರಿಸಲಾಗಿತ್ತು. ಯುವಕರ ಪರವಾಗಿ ಅವರ ಕುಟುಂಬ ಸದಸ್ಯರು ಕ್ಷಮೆಯಾಚಿಸಿದ್ದರು” ಎಂದು ಮೃತ ವಿನೋದ್ ಸೋದರಸಂಬಂಧಿ ಮುಖೇಶ್ ಹೇಳಿದ್ದಾರೆ.

“ಆದರೆ ನಿಜವಾದ ಅಪರಾಧಿಗಳು ಈ ಘಟನೆಗೆ ಸೇಡು ತೀರಿಸಿಕೊಳ್ಳಲು ಬಯಸಿದ್ದರು. ಜೂನ್ 5 ರಂದು ವಿನೋದ್ ಮತ್ತು ನಾನು ಹಳ್ಳಿಯ ನಮ್ಮ ಹೊಲಗಳಿಗೆ ಹೋಗುವಾಗ ರಾಕೇಶ್, ಅನಿಲ್ ಮತ್ತು ಇನ್ನೂ ಕೆಲವರು ನಮ್ಮ ಮೇಲೆ ಹಲ್ಲೆ ನಡೆಸಿದ್ದರು. ಸಣ್ಣಪುಟ್ಟ ಗಾಯಗಳೊಂದಿಗೆ ನಾನು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೆ. ಆದರೆ ಅವರು ವಿನೋದ್ ಅವರನ್ನು ಹಾಕಿ ಸ್ಟಿಕ್‌ಗಳಿಂದ ಸುಮಾರು 20-30 ಬಾರಿ ಮನ ಬಂದಂತೆ ಥಳಿಸಿದರು. ವಿನೋದ್‌ನನ್ನು ಹನುಮನ್‌ಗಢ ಮತ್ತು ಶ್ರೀಗಂಗನಗರ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿತ್ತು. ಆದರು ಚಿಕಿತ್ಸೆ ಫಲಿಸದೇ ವಿನೋದ್ ಸಾವನ್ನಪ್ಪಿದ್ದಾರೆ” ಎಂದು ಮುಖೇಶ್ ತಿಳಿಸಿದರು.

ಐಪಿಸಿ ಸೆಕ್ಷನ್‌ಗಳು 307 (ಕೊಲೆ ಯತ್ನ), 323 (ಸ್ವಯಂಪ್ರೇರಣೆಯಿಂದ ನೋವನ್ನುಂಟು ಮಾಡಿದ ಶಿಕ್ಷೆ), 341, 143  ಮತ್ತು ಎಸ್‌ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಸೆಕ್ಷನ್‌ಗಳ ಅಡಿಯಲ್ಲಿ ಹಲ್ಲೆಯ ಆರಂಭಿಕ ಎಫ್‌ಐಆರ್ ಅನ್ನು ಪೊಲೀಸರು ದಾಖಲಿಸಿದ್ದರು. ವಿನೋದ್ ಮರಣದ ನಂತರ, ಕೊಲೆ ಯತ್ನದ ಆರೋಪವನ್ನು ಐಪಿಸಿ ಸೆಕ್ಷನ್ 302 ರ ಅಡಿಯಲ್ಲಿ ಕೊಲೆ ಎಂದು ಬದಲಾಯಿಸಲಾಗಿದೆ.


ಇದನ್ನೂ ಓದಿ: ಮೇಲ್ಜಾತಿ ಹುಡುಗಿಗೆ ಮೊಬೈಲ್‌ ನೀಡಿದ್ದಕ್ಕೆ ದಲಿತ ಯುವಕರ ತಲೆ ಬೋಳಿಸಿ, ಎಂಜಲು ತಿನ್ನಿಸಿದ ಅಮಾವೀಯ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಲಿತ ಯುವಕನನ್ನು ಕೊಂದವರಿಗೆ ಕಟಿಣ ಶಿಕ್ಷೆ ಆಗಬೇಕು. ದುರಂತವೆಂದರೆ ಇಲ್ಲಿ ಕೊಲೆ ಮಾಡಿರುವವರು ಮೇಲ್ಜಾತಿಯವರಲ್ಲ, ಹಿಂದುಳಿದ ಜಾತಿಯವರು!

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...