Homeದಲಿತ್ ಫೈಲ್ಸ್ರಾಜಸ್ಥಾನ | ದಲಿತ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅವರ ಮೇಲೆ ಮೂತ್ರ ವಿಸರ್ಜನೆ...

ರಾಜಸ್ಥಾನ | ದಲಿತ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅವರ ಮೇಲೆ ಮೂತ್ರ ವಿಸರ್ಜನೆ ಮಾಡಿ ಥಳಿಸಿದ ದುಷ್ಕರ್ಮಿಗಳು

- Advertisement -
- Advertisement -

ರಾಜಸ್ಥಾನದ ಸಿಕಾರ್ ಜಿಲ್ಲೆಯ 19 ವರ್ಷದ ಯುವಕನ ಮೇಲೆ ಇಬ್ಬರು ದುಷ್ಕರ್ಮಿಗಳು ಲೈಂಗಿಕ ದೌರ್ಜನ್ಯ ಎಸಗಿ, ಮೂತ್ರ ವಿಸರ್ಜಿಸಿ, ಜಾತಿಯ ಆಧಾರದ ಮೇಲೆ ನಿಂದಿನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಆರೋಪಿಗಳು ಯುವಕನಿಗೆ ಮದ್ಯದ ಬಾಟಲಿಯಿಂದ ಹೊಡೆದು, ದೂರು ನೀಡಿದರೆ ಅವರನ್ನು ಮತ್ತು ಅವರ ಕುಟುಂಬವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತ ಯುವಕ ಆರೋಪಿಸಿದ್ದಾರೆ. ರಾಜಸ್ಥಾನ

ಆಪಾದಿತ ಅಪರಾಧವು ಏಪ್ರಿಲ್ 8 ರಂದು ಸಿಕಾರ್ ಜಿಲ್ಲೆಯ ಫತೇಪುರ್ ಪ್ರದೇಶದಲ್ಲಿ ನಡೆದಿದ್ದು, ಏಪ್ರಿಲ್ 16 ರಂದು ಪ್ರಕರಣ ದಾಖಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ತಾನು ಭಯಭೀತರಾಗಿರುವುದಿಂರ ದೂರು ದಾಖಲಿಸಲು ವಿಳಂಬ ಮಾಡಿರುವುದಾಗಿ ಅವರು ಹೇಳಿದ್ದಾರೆ. ಅಷ್ಟೆ ಅಲ್ಲದೆ, ಆರೋಪಿಗಳು ತಮ್ಮ ಕೃತ್ಯಗಳ ವೀಡಿಯೊಗಳನ್ನು ಚಿತ್ರೀಕರಿಸಿ ವೀಡಿಯೊಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆ ದಲಿತ ಯುವಕ ಹೇಳಿದ್ದಾರೆ.

ಏಪ್ರಿಲ್ 8 ರಂದು ಆಪಾದಿತ ಅಪರಾಧ ನಡೆದ ಸಮಯದಲ್ಲಿ, ದಲಿತ ವ್ಯಕ್ತಿಯ ಕುಟುಂಬವು ಅವರ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಭಾಗವಹಿಸಲು ತೆರಳಿತ್ತು ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.. “ಡಿಜೆ ಮದುವೆ ಮನೆಯ ಬಳಿ ಬಂದಾಗ, ನಾನು ಕೂಡ ಅದನ್ನು ವೀಕ್ಷಿಸಲು ನನ್ನ ಮನೆಯಿಂದ ಹೊರಟೆ. ನಾನು ಹೋಗುವಾಗ, [ಆರೋಪಿಗಳು] ನನ್ನನ್ನು ತಡೆದು, [ಬಸ್] ನಿಲ್ದಾಣಕ್ಕೆ ಅವರೊಂದಿಗೆ ಕೆಲಸಕ್ಕಾಗಿ ಬರುವಂತೆ ಕೇಳಿಕೊಂಡರು.”

“ಆದರೆ, ಕುಡಿದ ಮತ್ತಿನಲ್ಲಿದ್ದ ಇಬ್ಬರೂ ಆರೋಪಿಗಳು, ತನ್ನನ್ನು ಗ್ರಾಮದ ಹೊರಗಿನ ನಿರ್ಜನ ಸ್ಥಳಕ್ಕೆ ಕರೆದೊಯ್ದು ಜಾತಿ ನಿಂದನೆ ಮಾಡಲು ಪ್ರಾರಂಭಿಸಿದರು. ಅವರು ನನ್ನ ತಂದೆಯನ್ನು ಕೊಲ್ಲಲು ಬಯಸಿದ್ದಾಗಿ ಹೇಳಿದ್ದು, ಆದರೆ ಅವರು ದೇಶದ ಹೊರಗಿರುವುದರಿಂದ, ಈಗ ನಿನ್ನ ಸರದಿ [ಹೊಡೆಯುವುದು]” ಎಂದು ಅವರು ಹೇಳಿದ್ದಾರೆ ಎಂದು ಸಂತ್ರಸ್ತ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

“ನಂತರ ಆರೋಪಿಗಳು ನನ್ನೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿ ನನ್ನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಅದರ ವೀಡಿಯೊವನ್ನು ರೆಕಾರ್ಡ್ ಮಾಡಿದ್ದಾರೆ. ಅವರಲ್ಲಿ ಒಬ್ಬ ವ್ಯಕ್ತಿ ನನ್ನ ಬೆನ್ನು, ತೋಳುಗಳು, ಹೊಟ್ಟೆ ಮತ್ತು ಜನನಾಂಗಗಳಿಗೆ ಕೋಲಿನಿಂದ ಹೊಡೆದಿದ್ದಾರೆ” ಎಂದು ಅವರು ಹೇಳಿದ್ದಾರೆ. ಈ ವೇಳೆ ಹತ್ತಿರದ ಪ್ರದೇಶದ ಇಬ್ಬರು ವ್ಯಕ್ತಿಗಳು ಮಧ್ಯಪ್ರವೇಶಿಸಿ ತನ್ನನ್ನು ರಕ್ಷಿಸಿದ್ದಾಗಿ ದೂರುದಾರ ಯುವಕ ಹೇಳಿದ್ದಾರೆ.

ಸಂತ್ರಸ್ತ ಯುವಕ ಘಟನೆಯ ಬಗ್ಗೆ ಆರಂಭದಲ್ಲಿ ತಮ್ಮ ಕುಟುಂಬಕ್ಕೆ ತಿಳಿಸಿರಲಿಲ್ಲ, ಆದರೆ ನಂತರ ಮೂತ್ರ ವಿಸರ್ಜನೆಯಲ್ಲಿ ತೊಂದರೆಯಾದ ನಂತರ ಅವರ ಬಳಿ ಈ ಹೇಳಿಕೊಂಡರು ಎಂದು ಹೇಳಿದ್ದಾರೆ. ಅವರ ದೂರಿನ ನಂತರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ವಿವಿಧ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಫತೇಪುರದ ಉಪ ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್ ಕುಮಾರ್ ಜಾಟ್ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ರಾಜಸ್ಥಾನ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸುಪ್ರೀಂ ಕೋರ್ಟ್ ಕಾನೂನುಗಳನ್ನು ರೂಪಿಸುವುದಾದರೆ ಸಂಸತ್ ಕಟ್ಟಡವನ್ನು ಮುಚ್ಚಿ: ಬಿಜೆಪಿಯ ಸಂಸದ ನಿಶಿಕಾಂತ್ ದುಬೆ

ಸುಪ್ರೀಂ ಕೋರ್ಟ್ ಕಾನೂನುಗಳನ್ನು ರೂಪಿಸುವುದಾದರೆ ಸಂಸತ್ ಕಟ್ಟಡವನ್ನು ಮುಚ್ಚಿ: ಬಿಜೆಪಿಯ ಸಂಸದ ನಿಶಿಕಾಂತ್ ದುಬೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...