Homeಅಂಕಣಗಳುರಾಜಸ್ಥಾನ: ಬುಡಕಟ್ಟು ಶಾಲೆಗಳು ಪಾಳುಬಿದ್ದ ಸ್ಥಿತಿ, ಮರದಡಿಯಲ್ಲಿ ಪಾಠ ಕಲಿಯುತ್ತಿರುವ ವಿದ್ಯಾರ್ಥಿಗಳು

ರಾಜಸ್ಥಾನ: ಬುಡಕಟ್ಟು ಶಾಲೆಗಳು ಪಾಳುಬಿದ್ದ ಸ್ಥಿತಿ, ಮರದಡಿಯಲ್ಲಿ ಪಾಠ ಕಲಿಯುತ್ತಿರುವ ವಿದ್ಯಾರ್ಥಿಗಳು

- Advertisement -
- Advertisement -

ಬನ್ಸ್ವಾರಾ: ಸರಕಾರದ ನಿರ್ಲಕ್ಷ್ಯವು ರಾಜಸ್ಥಾನದ ಬುಡಕಟ್ಟು ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಭೀಕರವಾಗಿ ಪಾಳುಬೀಳುವಂತೆ ಮಾಡಿದೆ. ತರಗತಿ ಕೊಠಡಿಗಳು ಸಂಪೂರ್ಣವಾಗಿ ಶಿಥಿಲಗೊಂಡಿವೆ, ಅಡುಗೆ ಕೋಣೆಗಳು ದಟ್ಟವಾದ ಹೊಗೆಯಿಂದ ಕಪ್ಪಾಗಿವೆ, ಮತ್ತು ಮುರಿದ ಕಾಂಪೌಂಡ್ ಗೋಡೆಗಳು ಯಾವುದೇ ಭದ್ರತೆಯನ್ನು ಒದಗಿಸುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ಬಯಲು ಪ್ರದೇಶದ ಮರದಡಿಯಲ್ಲಿ ಕಲಿಯುವಂತಾಗಿದೆ.

ಈ ದಯನೀಯ ಪರಿಸ್ಥಿತಿಯು ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಅಮರ್ಥುನ್‌ನಲ್ಲಿ, ರೊಚ್ಚಿಗೆದ್ದ ಪೋಷಕರು ಶಿಕ್ಷಣ ಅಧಿಕಾರಿಗಳನ್ನು ಸುತ್ತುವರಿದು, ಅಪಾಯಕಾರಿಯಾಗಿ ಶಿಥಿಲಗೊಂಡ ಶಾಲಾ ಕಟ್ಟಡಗಳು ಮತ್ತು ಎಂಟು ಶಿಕ್ಷಕರ ಹುದ್ದೆಗಳು ಖಾಲಿ ಇರುವ ಬಗ್ಗೆ ತೀವ್ರ ಪ್ರತಿಭಟನೆ ನಡೆಸಿದರು.

ನಮ್ಮ ಶಾಲೆಗಳನ್ನು ತಕ್ಷಣವೇ ದುರಸ್ತಿ ಮಾಡಿ, ಇಲ್ಲವಾದರೆ ನಾವು ನಮ್ಮ ಎಲ್ಲಾ ಮಕ್ಕಳನ್ನು ಶಾಲೆಗಳಿಂದ ಹೊರಗೆ ಕರೆದುಕೊಂಡು ಹೋಗುತ್ತೇವೆ ಎಂದು ಸಮುದಾಯದವರು ಎಚ್ಚರಿಕೆ ನೀಡಿದರು. ಗುಣಮಟ್ಟದ ಶಿಕ್ಷಣ ಮತ್ತು ಕೇವಲ ದೈಹಿಕ ಶ್ರಮದ ಕೆಲಸಗಳಿಗೆ ಸೀಮಿತಗೊಳ್ಳದೆ ಭವಿಷ್ಯವನ್ನು ಕಟ್ಟಿಕೊಳ್ಳುವ ಬುಡಕಟ್ಟು ಮಕ್ಕಳ ಹಕ್ಕನ್ನು ರಾಜ್ಯ ಸರ್ಕಾರ ಉದ್ದೇಶಪೂರ್ವಕವಾಗಿ ನಿರಾಕರಿಸುತ್ತಿದೆ ಎಂದು ಅವರು ಆಪಾದಿಸಿದ್ದಾರೆ.

ಅಮರ್ಥುನ್‌ನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪೋಷಕರ ಆಕ್ರೋಶಕ್ಕೆ ಕಾರಣವಾಗುವ ದೃಶ್ಯಗಳು ಕಂಡುಬಂದವು. ಕೋಪಗೊಂಡ ಪೋಷಕರು, ಶಾಲಾ ಸಮಿತಿಗಳು ಮತ್ತು ಗ್ರಾಮಸ್ಥರು ಪ್ರಾಂಶುಪಾಲರು ಮತ್ತು ಯೋಜನಾ ಅಧಿಕಾರಿ (ಪಿಒ) ಅರುಣ್ ವ್ಯಾಸ್ ಅವರನ್ನು ಸುತ್ತುವರಿದು, ಶಾಲೆಯ ಮೂಲಸೌಕರ್ಯದ ಭಯಾನಕ ಮತ್ತು ಅಪಾಯಕಾರಿ ಸ್ಥಿತಿಯ ಬಗ್ಗೆ ಆಡಳಿತ ಮಂಡಳಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಛಾವಣಿ ಮತ್ತು ಗೋಡೆಗಳು ಕುಸಿಯುವ ಭೀತಿಯ ನಡುವೆಯೂ ವಿದ್ಯಾರ್ಥಿಗಳು ಶಿಥಿಲಗೊಂಡ, ಮಳೆಯಿಂದ ಹಾಳಾದ ತರಗತಿಗಳಲ್ಲಿ ಕಲಿಯುವಂತಹ ಬುಡಕಟ್ಟು-ಪ್ರಧಾನ ಬನ್ಸ್ವಾರಾ ಜಿಲ್ಲೆಯ ಈ ಶಾಲೆಯ ಸ್ಥಿತಿಯು ಪೋಷಕರ ಪ್ರತಿಭಟನೆಗೆ ಕಾರಣವನ್ನು ಎತ್ತಿ ತೋರಿಸಿದೆ.

ಸಂಬಂಧಿತ ಅಧಿಕಾರಿಗಳೊಂದಿಗೆ ಹಲವು ಬಾರಿ ಪತ್ರ ವ್ಯವಹಾರ ನಡೆಸಿದ್ದರೂ, ಕಳೆದ ನಾಲ್ಕು ದಶಕಗಳಿಂದ ಶಾಲೆಯ ದುರಸ್ತಿ ಅಥವಾ ನಿರ್ವಹಣೆಗಾಗಿ ಯಾವುದೇ ಬಜೆಟ್ ಸಿಕ್ಕಿಲ್ಲ ಎಂದು ಪೋಷಕರು ಹೇಳುತ್ತಾರೆ.

“ನಮ್ಮ ಮಕ್ಕಳು ಇಡೀ ದಿನ ಬಿಸಿಲಿನಲ್ಲಿ ಕುಳಿತುಕೊಳ್ಳಬೇಕಾಗಿದೆ. ಅವರು ಅನಾರೋಗ್ಯಕ್ಕೊಳಗಾದರೆ ಯಾರು ಜವಾಬ್ದಾರರು?” ಎಂದು ಆಡಳಿತಾಧಿಕಾರಿ ರಾಜೇಂದ್ರ ಕುಮಾರ್ ಚರ್ಪೋಟಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಒಬ್ಬ ಕೋಪಗೊಂಡ ಪೋಷಕರು ಪ್ರಶ್ನಿಸಿದರು.

ಅಧಿಕಾರಿಗಳ ಉದಾಸೀನತೆಯಿಂದ ಬೇಸತ್ತ ಪೋಷಕರು ಶಿಕ್ಷಣ ಅಧಿಕಾರಿಗಳಿಗೆ 15 ದಿನಗಳ ಗಡುವು ನೀಡಿದರು. ದುರಸ್ತಿ ಕಾರ್ಯಕ್ಕೆ ಅನುಮೋದನೆ ನೀಡಿ ತಕ್ಷಣವೇ ಬಜೆಟ್ ಹಂಚಿಕೆ ಮಾಡದಿದ್ದರೆ, ತಮ್ಮ ಎಲ್ಲಾ ಮಕ್ಕಳನ್ನು ಶಾಲೆಯಿಂದ ಕರೆದು ಟಿಸಿ (ವರ್ಗಾವಣೆ ಪ್ರಮಾಣಪತ್ರ) ಪಡೆಯುವುದಾಗಿ ಬೆದರಿಕೆ ಹಾಕಿದರು.

ಸರಕಾರಿ ಆಡಳಿತದ ಸಹಾಯಕ್ಕಾಗಿ ಕಾಯದೆ, ಸಮುದಾಯದವರು ಶಾಲೆಯ ಸಮಸ್ಯೆಯ ವಿಷಯಗಳನ್ನು ತಾವು ಕೈಗೆ ತೆಗೆದುಕೊಂಡರು. ತಾತ್ಕಾಲಿಕವಾಗಿ ವಿದ್ಯಾರ್ಥಿಗಳಿಗೆ ಆಶ್ರಯ ನೀಡಲು, ಪ್ರತಿಯೊಂದು ಮನೆಯಿಂದ ಬಿದಿರು, ಮರದ ಹಲಗೆಗಳು ಮತ್ತು ಮೇಲ್ಛಾವಣಿಯ ಸಾಮಗ್ರಿಗಳನ್ನು ಸಂಗ್ರಹಿಸಿ, ತಾತ್ಕಾಲಿಕವಾದ ಬಿದಿರಿನ ಗುಡಿಸಲನ್ನು ಕಟ್ಟಲು ಆರಂಭಿಸಿದರು.

ಖಾಲಿ ಹುದ್ದೆಗಳಿಂದ ಶಿಕ್ಷಣಕ್ಕೆ ಅಡ್ಡಿ

ತೀವ್ರ ಸಿಬ್ಬಂದಿ ಕೊರತೆಯಿಂದ ಜನರ ಕೋಪ ಮತ್ತಷ್ಟು ಹೆಚ್ಚಾಗಿದೆ. ಶಾಲೆಯಲ್ಲಿ ಪ್ರಮುಖ ಹುದ್ದೆಗಳಾದ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಉಪನ್ಯಾಸಕರು, ಹಿರಿಯ ಗಣಿತ ಶಿಕ್ಷಕರು, ಉಪ-ಪ್ರಾಂಶುಪಾಲರು ಮತ್ತು ಗ್ರೂಪ್-ಡಿ ನೌಕರರು ಸೇರಿದಂತೆ ಎಂಟು ಹುದ್ದೆಗಳು ಖಾಲಿ ಇವೆ. ಈ ಖಾಲಿ ಹುದ್ದೆಗಳು ಶಿಕ್ಷಣಕ್ಕೆ ತೀವ್ರ ಅಡ್ಡಿ ಉಂಟು ಮಾಡುತ್ತಿವೆ ಎಂದು ಪೋಷಕರು ಆರೋಪಿಸಿದ್ದಾರೆ.

“ನಮ್ಮ ಮಕ್ಕಳು ಇಡೀ ದಿನ ಸುಮ್ಮನೆ ಕುಳಿತಿರುತ್ತಾರೆ. ನಾವು ಅವರನ್ನು ಓದಲು ಶಾಲೆಗೆ ಕಳುಹಿಸುತ್ತೇವೆ, ಗೈರುಹಾಜರಾದ ಸಿಬ್ಬಂದಿಯ ಕೆಲಸಗಳಾದ ಸ್ವಚ್ಛತೆ, ಗಿಡ ನೆಡುವುದು ಅಥವಾ ಜಿಯೋ-ಟ್ಯಾಗಿಂಗ್ ಕೆಲಸ ಮಾಡಲು ಕಳುಹಿಸುವುದಿಲ್ಲ,” ಎಂದು ಸಭೆಯಲ್ಲಿ ಒಬ್ಬರು ಮಾತನಾಡುತ್ತಾ, ಬಡ ಬುಡಕಟ್ಟು ಮಕ್ಕಳಿಗೆ ಆಗುತ್ತಿರುವ ಈ ಅನ್ಯಾಯಕ್ಕೆ ನೇರವಾಗಿ ಪ್ರಾಂಶುಪಾಲ ವ್ಯಾಸ್ ಅವರನ್ನು ಹೊಣೆ ಮಾಡಿದರು.

ಈ ಪ್ರತಿಭಟನೆ ರಾಜಕೀಯ ತಿರುವು ಪಡೆದುಕೊಂಡಿತು. ಬುಡಕಟ್ಟು ಪ್ರದೇಶದ ಯುವಕರ ವಿರುದ್ಧ ರಾಜ್ಯ ಸರ್ಕಾರ ಉದ್ದೇಶಪೂರ್ವಕವಾಗಿ ಷಡ್ಯಂತ್ರ ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. “ನಕಲಿ ಪದವಿ” ಹೊಂದಿರುವ ಇತರ ಜಿಲ್ಲೆಗಳ ಶಿಕ್ಷಕರನ್ನು ನೇಮಕ ಮಾಡುವಾಗ ಸ್ಥಳೀಯ ನಿರುದ್ಯೋಗಿ ಯುವಕರನ್ನು ಕಡೆಗಣಿಸಲಾಗುತ್ತಿದೆ. ಅಂತಹ ಶಿಕ್ಷಕರು ಬೇಗನೆ ವರ್ಗಾವಣೆ ಪಡೆದು ಹೋಗುವುದರಿಂದ ಹುದ್ದೆಗಳು ಖಾಲಿ ಉಳಿದು, ಶಿಕ್ಷಣಕ್ಕೆ ಅಡ್ಡಿ ಉಂಟಾಗುತ್ತಿದೆ ಎಂದು ಆರೋಪಿಸಿದರು.

“ಬುಡಕಟ್ಟು ಪ್ರದೇಶದ ಮಕ್ಕಳನ್ನು ಅಧಿಕಾರಿಗಳನ್ನಾಗಿಸದೆ ಕಾರ್ಮಿಕರನ್ನಾಗಿಸುವ ರಾಜ್ಯ ಸರ್ಕಾರದ ಷಡ್ಯಂತ್ರವಿದು,” ಎಂದು ಒಬ್ಬ ಸಮುದಾಯ ಮುಖಂಡರು ದೃಢವಾಗಿ ಹೇಳಿದರು. ಬಿ.ಎಡ್. ಪದವಿ ಪಡೆಯಲು ತಮ್ಮ ಕುಟುಂಬದ ಜಮೀನನ್ನು ಮಾರಾಟ ಮಾಡಿದ ಸ್ಥಳೀಯ ಬುಡಕಟ್ಟು ಯುವಕನ ಪ್ರಕರಣವನ್ನು ಉದಾಹರಣೆಯಾಗಿ ನೀಡಲಾಯಿತು. ಆತ ಈಗಲೂ ನಿರುದ್ಯೋಗಿಯಾಗಿದ್ದಾನೆ ಎಂದು ಹೇಳಲಾಯಿತು.

ಸಭೆಯಲ್ಲಿ, ಸ್ಥಳೀಯ ನೋಡೆಲ್ ಶಾಲೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಗುಲಾಬ್‌ಪುರ ಮತ್ತು ಖೇರ್ಲಿ ಪಾದ ಗ್ರಾಮಗಳ ಪ್ರಾಥಮಿಕ ಶಾಲೆಗಳ ದಯನೀಯ ಸ್ಥಿತಿಯ ಬಗ್ಗೆಯೂ ಕಳವಳ ವ್ಯಕ್ತಪಡಿಸಲಾಯಿತು. ಅಂಬಾ ಪಾದ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡ ನಿರ್ಮಾಣ ಎರಡು ವರ್ಷಗಳ ನಂತರವೂ ಅಪೂರ್ಣವಾಗಿರುವುದರಿಂದ, ಶಾಲೆ ಇನ್ನೂ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಹೋರಾಟ ಸಮಿತಿಯು ಒಂದು ನಿರ್ಣಯವನ್ನು ಅಂಗೀಕರಿಸಿದ್ದು, ಜಿಲ್ಲಾಡಳಿತ, ಸ್ಥಳೀಯ ಶಾಸಕರು ಮತ್ತು ಹಿರಿಯ ಶಿಕ್ಷಣ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲು ನಿರ್ಧರಿಸಲಾಗಿದೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು, ಪ್ರಮುಖ ದುರಸ್ತಿ ಕಾರ್ಯಗಳು, ಮತ್ತು ಹೊಸ ತರಗತಿ ಕೊಠಡಿಗಳು, ಪ್ರಯೋಗಾಲಯಗಳು, ಕಾಂಪೌಂಡ್ ಗೋಡೆ ಮತ್ತು ಹೆಣ್ಣು ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ತಕ್ಷಣದ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಮೂಲ: ಗೇತಾ ಸುನಿಲ್ ಪಿಳ್ಳೈ, ಮೂಕ್‌‌ನಾಯಕ್‌ ಪತ್ರಿಕೆ

ಸಮಾಜವಾದಿ ಪಕ್ಷದಿಂದ ಟಿಎಂಸಿ, ಬಿಜೆಡಿ ಮತ್ತು ಎಎಪಿಯವರೆಗೆ: ಮತದಾರರ ಪಟ್ಟಿಯ ಅಕ್ರಮಗಳೊಂದಿಗೆ ರಾಜಕೀಯ ಪಕ್ಷಗಳು ಚುನಾವಣಾ ಆಯೋಗದ ಬಾಗಿಲು ತಟ್ಟಿದ ಬಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...