HomeUncategorizedದೇವರನ್ನು ಅವಮಾನಿಸಿದ ಆರೋಪ: ದಲಿತ ಗಾಯಕನ ತಲೆ ಮೇಲೆ ಚಪ್ಪಲಿ ಇರಿಸಿ ಕ್ಷಮೆ ಕೇಳಿಸಿದ ಸವರ್ಣೀಯರು

ದೇವರನ್ನು ಅವಮಾನಿಸಿದ ಆರೋಪ: ದಲಿತ ಗಾಯಕನ ತಲೆ ಮೇಲೆ ಚಪ್ಪಲಿ ಇರಿಸಿ ಕ್ಷಮೆ ಕೇಳಿಸಿದ ಸವರ್ಣೀಯರು

- Advertisement -
- Advertisement -

ರಾಜಸ್ಥಾನದ ಚಿತ್ತೋರ್‌ಗಢ್‌ನ ದುಗರ್ ಗ್ರಾಮದಲ್ಲಿ 70 ವರ್ಷದ ದಲಿತ ಬಗ್ದಾವತ್ ಭಜನ್ (ಭಕ್ತಿಗೀತೆ) ಗಾಯಕನೊಬ್ಬ ತನ್ನ ಭಜನೆಯಲ್ಲಿ ಸ್ಥಳೀಯ ದೇವರನ್ನು ಅವಮಾನಿಸಿದ ಆರೋಪದ ಮೇಲೆ ‘ಶಿಕ್ಷೆ’ಯ ರೂಪವಾಗಿ ಆತನ ತಲೆಯ ಮೇಲೆ ಚಪ್ಪಲಿಯನ್ನು ಹೊರಿಸಿ, ಕ್ಷಮೆ ಕೇಳುವಂತೆ ಮಾಡಿರುವ ವೀಡಿಯೊ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ತಡರಾತ್ರಿ 10 ಜನರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್ 16 ರಂದು, ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಜನಾ ಗಾಯಕ ದಾಲ್ಚಂದ್ ಬಾಲಾಯ್ ಅವರು ತಮ್ಮ ತಲೆಯ ಮೇಲೆ ಪಾದರಕ್ಷೆಗಳನ್ನು ಹೊತ್ತುಕೊಂಡು ಸುಮಾರು 60 ರಿಂದ 70 ಜನರ ಎದುರು ಸಾರ್ವಜನಿಕವಾಗಿ ‘ಕ್ಷಮೆ’ ಕೇಳುವಂತೆ ಒತ್ತಾಯಿಸಲಾಯಿತು. ಅವರು ಬಗ್ದಾವತ್ ಹಾಡಿನ ನಿರೂಪಣೆಯ ಸಮಯದಲ್ಲಿ ಗುರ್ಜರ್ ಸಮುದಾಯದ ದೇವತೆಯಾದ ಸಾದು ಮಾತೆಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಹಿಂದಿ ಸುದ್ದಿವಾಹಿನಿಯೊಂದು ವರದಿ ಮಾಡಿದೆ.

ಘಟನೆ ಬಗ್ಗೆ ಮಾತನಾಡಿದ ಚಿತ್ತೋರ್‌ಗಢ ಪೊಲೀಸ್ ವರಿಷ್ಠಾಧಿಕಾರಿ ರಾಜನ್ ದುಶ್ಯಂತ್, ”ದುಗರ್ ಗ್ರಾಮದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ದಾಲು ಸಾಲ್ವಿ ಈ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಗುಜ್ಜರ್ ಸಮುದಾಯವನ್ನು ಕೆರಳಿಸಿತು ಮತ್ತು ನೂರಾರು ಜನರು ಜಾತಿ ಪಂಚಾಯತಿಗಾಗಿ ಜಮಾಯಿಸಿದರು ಮತ್ತು ಸಾಲ್ವಿಯನ್ನು ಕ್ಷಮೆಯಾಚಿಸಲು ಕೇಳಿದರು” ಎಂದು ತಿಳಿಸಿದ್ದಾರೆ.

ಸಾಲ್ವಿ ಭಯಭೀತರಾಗಿದ್ದರು ಮತ್ತು ಪೊಲೀಸರಿಗೆ ತಿಳಿಸುವ ಮೊದಲು ಕ್ಷಮೆಯಾಚಿಸಲು ತಲೆಯ ಮೇಲೆ ಬೂಟುಗಳನ್ನು ಇಟ್ಟುಕೊಂಡಿದ್ದರು. ಘಟನೆಯ ಬಗ್ಗೆ ನನಗೆ ತಿಳಿದಾಗ, ನಾನು ಸ್ಥಳೀಯ ಠಾಣಾಧಿಕಾರಿಯನ್ನು ಸಾಲ್ವಿ ಅವರ ಮನೆಗೆ ಕಳುಹಿಸಿದೆ ಆದರೆ ಅವರು ದೂರು ನೀಡಲು ನಿರಾಕರಿಸಿದರು. ಘಟನೆಯ ವಿಡಿಯೋ ಬುಧವಾರ ವೈರಲ್ ಆದಾಗ ನಾವು ಪ್ರಕರಣ ದಾಖಲಿಸಿಕೊಂಡೆವು” ಎಂದು ದುಶ್ಯಂತ್ ಹೇಳಿದರು.

”ಸಾಲ್ವಿಯನ್ನು ಈ ರೀತಿಯಾಗಿ ಕ್ಷಮೆಯಾಚಿಸಲು ಪ್ರೇರೇಪಿಸಿದಕ್ಕಾಗಿ ಭಾರತೀಯ ದಂಡ ಸಂಹಿತೆ ಮತ್ತು ಕಟ್ಟುನಿಟ್ಟಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯಿದೆಯಡಿಯಲ್ಲಿ ಹನ್ನೆರಡು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ದುಶ್ಯಂತ್ ಹೇಳಿದ್ದಾರೆ.

ಸಾಲ್ವಿಯ ಸಹ ಗಾಯಕ ಭೂರಾ ಗುಜ್ಜರ್‌ಗೆ ಜಾತಿ ಪಂಚಾಯತ್ ₹1,100 ದಂಡವನ್ನು ವಿಧಿಸಿದೆ. ಪಂಚಾಯತಿಯು ತನ್ನ ವಿರುದ್ಧ ದಂಡವನ್ನು ಘೋಷಿಸುವ ಮೊದಲು, ಕೆಲವರು ಕೂಗಲು ಪ್ರಾರಂಭಿಸಿದರು ಮತ್ತು ತನ್ನನ್ನು ಹಿಂಸಿಸಲು ಪ್ರಯತ್ನಿಸಿದರು ಎಂದು ಸಾಲ್ವಿ ಪೊಲೀಸರಿಗೆ ತಿಳಿಸಿದರು. ಅವರು ಭಯಭೀತರಾಗಿದ್ದರು ಮತ್ತು ಅದಕ್ಕಾಗಿಯೇ ಅವರು ತಮ್ಮ ಬೂಟುಗಳನ್ನು ತೆಗೆದುಕೊಂಡು ತಮ್ಮ ಮೇಲೆ ಹಲ್ಲೆ ನಡೆಸುತ್ತಾರೆ ಎಂಬ ಭಯದಿಂದ ತಲೆಯ ಮೇಲೆ ಇಟ್ಟುಕೊಂಡರು.

”ಧಾರ್ಮಿಕ ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿದ್ದರು ಮತ್ತು ಅವರಲ್ಲಿ ಹಲವರು ವೀಡಿಯೊಗಳನ್ನು ಮಾಡುತ್ತಿದ್ದರು. ಆಗ ನನ್ನ ಹೇಳಿಕೆಗೆ ಆಕ್ಷೇಪಗಳು ಬರಲಿಲ್ಲ ಆದರೆ ಒಂದು ವಾರದ ನಂತರ ವ್ಯಕ್ತಿಯೊಬ್ಬರು ನನಗೆ ಫೋನ್ ಮಾಡಿ, ಜಾತಿ ನಿಂದನೆ ಮಾಡಿದ್ದಾರೆ” ಎಂದು ಸಾಲ್ವಿ ಹೇಳಿಕೊಂಡಿದ್ದಾರೆ.

ದಲಿತ ಸಂಘಟನೆಗಳು ನನ್ನ ಬೆಂಬಲಕ್ಕೆ ನಿಂತು ಚಿತ್ತೋರ್‌ಗಢ ಜಿಲ್ಲಾಧಿಕಾರಿಗಳಿಗೆ ಜ್ಞಾಪಕ ಪತ್ರವನ್ನು ನೀಡಿದೆವು. ಆಗ ನಾನು ಪೊಲೀಸ್ ದೂರು ದಾಖಲಿಸಿದೆ ಎಂದು ಸಾಲ್ವಿ ಹೇಳಿದರು.

ಸಾಲ್ವಿಯನ್ನು ಬೆದರಿಸಿದ ವ್ಯಕ್ತಿಗಳನ್ನು ಗುರುತಿಸಲು, ಈ ಪ್ರಕರಣದ ತನಿಖೆ ಮಾಡಲು ಮತ್ತು ಆರೋಪಿಗಳನ್ನು ಬಂಧಿಸಲು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ದುಶ್ಯಂತ್ ಹೇಳಿದರು. ಹೆಚ್ಚಿನ ಬಂಧನಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ದಲಿತರು, ಮುಸ್ಲಿಮರ ಕುರಿತ ರಾಹುಲ್ ಮಾತಿನಲ್ಲಿ ಕಹಿಸತ್ಯವಿದೆ: ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...