HomeUncategorizedದೇವರನ್ನು ಅವಮಾನಿಸಿದ ಆರೋಪ: ದಲಿತ ಗಾಯಕನ ತಲೆ ಮೇಲೆ ಚಪ್ಪಲಿ ಇರಿಸಿ ಕ್ಷಮೆ ಕೇಳಿಸಿದ ಸವರ್ಣೀಯರು

ದೇವರನ್ನು ಅವಮಾನಿಸಿದ ಆರೋಪ: ದಲಿತ ಗಾಯಕನ ತಲೆ ಮೇಲೆ ಚಪ್ಪಲಿ ಇರಿಸಿ ಕ್ಷಮೆ ಕೇಳಿಸಿದ ಸವರ್ಣೀಯರು

- Advertisement -
- Advertisement -

ರಾಜಸ್ಥಾನದ ಚಿತ್ತೋರ್‌ಗಢ್‌ನ ದುಗರ್ ಗ್ರಾಮದಲ್ಲಿ 70 ವರ್ಷದ ದಲಿತ ಬಗ್ದಾವತ್ ಭಜನ್ (ಭಕ್ತಿಗೀತೆ) ಗಾಯಕನೊಬ್ಬ ತನ್ನ ಭಜನೆಯಲ್ಲಿ ಸ್ಥಳೀಯ ದೇವರನ್ನು ಅವಮಾನಿಸಿದ ಆರೋಪದ ಮೇಲೆ ‘ಶಿಕ್ಷೆ’ಯ ರೂಪವಾಗಿ ಆತನ ತಲೆಯ ಮೇಲೆ ಚಪ್ಪಲಿಯನ್ನು ಹೊರಿಸಿ, ಕ್ಷಮೆ ಕೇಳುವಂತೆ ಮಾಡಿರುವ ವೀಡಿಯೊ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ತಡರಾತ್ರಿ 10 ಜನರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್ 16 ರಂದು, ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಜನಾ ಗಾಯಕ ದಾಲ್ಚಂದ್ ಬಾಲಾಯ್ ಅವರು ತಮ್ಮ ತಲೆಯ ಮೇಲೆ ಪಾದರಕ್ಷೆಗಳನ್ನು ಹೊತ್ತುಕೊಂಡು ಸುಮಾರು 60 ರಿಂದ 70 ಜನರ ಎದುರು ಸಾರ್ವಜನಿಕವಾಗಿ ‘ಕ್ಷಮೆ’ ಕೇಳುವಂತೆ ಒತ್ತಾಯಿಸಲಾಯಿತು. ಅವರು ಬಗ್ದಾವತ್ ಹಾಡಿನ ನಿರೂಪಣೆಯ ಸಮಯದಲ್ಲಿ ಗುರ್ಜರ್ ಸಮುದಾಯದ ದೇವತೆಯಾದ ಸಾದು ಮಾತೆಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಹಿಂದಿ ಸುದ್ದಿವಾಹಿನಿಯೊಂದು ವರದಿ ಮಾಡಿದೆ.

ಘಟನೆ ಬಗ್ಗೆ ಮಾತನಾಡಿದ ಚಿತ್ತೋರ್‌ಗಢ ಪೊಲೀಸ್ ವರಿಷ್ಠಾಧಿಕಾರಿ ರಾಜನ್ ದುಶ್ಯಂತ್, ”ದುಗರ್ ಗ್ರಾಮದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ದಾಲು ಸಾಲ್ವಿ ಈ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಗುಜ್ಜರ್ ಸಮುದಾಯವನ್ನು ಕೆರಳಿಸಿತು ಮತ್ತು ನೂರಾರು ಜನರು ಜಾತಿ ಪಂಚಾಯತಿಗಾಗಿ ಜಮಾಯಿಸಿದರು ಮತ್ತು ಸಾಲ್ವಿಯನ್ನು ಕ್ಷಮೆಯಾಚಿಸಲು ಕೇಳಿದರು” ಎಂದು ತಿಳಿಸಿದ್ದಾರೆ.

ಸಾಲ್ವಿ ಭಯಭೀತರಾಗಿದ್ದರು ಮತ್ತು ಪೊಲೀಸರಿಗೆ ತಿಳಿಸುವ ಮೊದಲು ಕ್ಷಮೆಯಾಚಿಸಲು ತಲೆಯ ಮೇಲೆ ಬೂಟುಗಳನ್ನು ಇಟ್ಟುಕೊಂಡಿದ್ದರು. ಘಟನೆಯ ಬಗ್ಗೆ ನನಗೆ ತಿಳಿದಾಗ, ನಾನು ಸ್ಥಳೀಯ ಠಾಣಾಧಿಕಾರಿಯನ್ನು ಸಾಲ್ವಿ ಅವರ ಮನೆಗೆ ಕಳುಹಿಸಿದೆ ಆದರೆ ಅವರು ದೂರು ನೀಡಲು ನಿರಾಕರಿಸಿದರು. ಘಟನೆಯ ವಿಡಿಯೋ ಬುಧವಾರ ವೈರಲ್ ಆದಾಗ ನಾವು ಪ್ರಕರಣ ದಾಖಲಿಸಿಕೊಂಡೆವು” ಎಂದು ದುಶ್ಯಂತ್ ಹೇಳಿದರು.

”ಸಾಲ್ವಿಯನ್ನು ಈ ರೀತಿಯಾಗಿ ಕ್ಷಮೆಯಾಚಿಸಲು ಪ್ರೇರೇಪಿಸಿದಕ್ಕಾಗಿ ಭಾರತೀಯ ದಂಡ ಸಂಹಿತೆ ಮತ್ತು ಕಟ್ಟುನಿಟ್ಟಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯಿದೆಯಡಿಯಲ್ಲಿ ಹನ್ನೆರಡು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ದುಶ್ಯಂತ್ ಹೇಳಿದ್ದಾರೆ.

ಸಾಲ್ವಿಯ ಸಹ ಗಾಯಕ ಭೂರಾ ಗುಜ್ಜರ್‌ಗೆ ಜಾತಿ ಪಂಚಾಯತ್ ₹1,100 ದಂಡವನ್ನು ವಿಧಿಸಿದೆ. ಪಂಚಾಯತಿಯು ತನ್ನ ವಿರುದ್ಧ ದಂಡವನ್ನು ಘೋಷಿಸುವ ಮೊದಲು, ಕೆಲವರು ಕೂಗಲು ಪ್ರಾರಂಭಿಸಿದರು ಮತ್ತು ತನ್ನನ್ನು ಹಿಂಸಿಸಲು ಪ್ರಯತ್ನಿಸಿದರು ಎಂದು ಸಾಲ್ವಿ ಪೊಲೀಸರಿಗೆ ತಿಳಿಸಿದರು. ಅವರು ಭಯಭೀತರಾಗಿದ್ದರು ಮತ್ತು ಅದಕ್ಕಾಗಿಯೇ ಅವರು ತಮ್ಮ ಬೂಟುಗಳನ್ನು ತೆಗೆದುಕೊಂಡು ತಮ್ಮ ಮೇಲೆ ಹಲ್ಲೆ ನಡೆಸುತ್ತಾರೆ ಎಂಬ ಭಯದಿಂದ ತಲೆಯ ಮೇಲೆ ಇಟ್ಟುಕೊಂಡರು.

”ಧಾರ್ಮಿಕ ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿದ್ದರು ಮತ್ತು ಅವರಲ್ಲಿ ಹಲವರು ವೀಡಿಯೊಗಳನ್ನು ಮಾಡುತ್ತಿದ್ದರು. ಆಗ ನನ್ನ ಹೇಳಿಕೆಗೆ ಆಕ್ಷೇಪಗಳು ಬರಲಿಲ್ಲ ಆದರೆ ಒಂದು ವಾರದ ನಂತರ ವ್ಯಕ್ತಿಯೊಬ್ಬರು ನನಗೆ ಫೋನ್ ಮಾಡಿ, ಜಾತಿ ನಿಂದನೆ ಮಾಡಿದ್ದಾರೆ” ಎಂದು ಸಾಲ್ವಿ ಹೇಳಿಕೊಂಡಿದ್ದಾರೆ.

ದಲಿತ ಸಂಘಟನೆಗಳು ನನ್ನ ಬೆಂಬಲಕ್ಕೆ ನಿಂತು ಚಿತ್ತೋರ್‌ಗಢ ಜಿಲ್ಲಾಧಿಕಾರಿಗಳಿಗೆ ಜ್ಞಾಪಕ ಪತ್ರವನ್ನು ನೀಡಿದೆವು. ಆಗ ನಾನು ಪೊಲೀಸ್ ದೂರು ದಾಖಲಿಸಿದೆ ಎಂದು ಸಾಲ್ವಿ ಹೇಳಿದರು.

ಸಾಲ್ವಿಯನ್ನು ಬೆದರಿಸಿದ ವ್ಯಕ್ತಿಗಳನ್ನು ಗುರುತಿಸಲು, ಈ ಪ್ರಕರಣದ ತನಿಖೆ ಮಾಡಲು ಮತ್ತು ಆರೋಪಿಗಳನ್ನು ಬಂಧಿಸಲು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ದುಶ್ಯಂತ್ ಹೇಳಿದರು. ಹೆಚ್ಚಿನ ಬಂಧನಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ದಲಿತರು, ಮುಸ್ಲಿಮರ ಕುರಿತ ರಾಹುಲ್ ಮಾತಿನಲ್ಲಿ ಕಹಿಸತ್ಯವಿದೆ: ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...