HomeUncategorizedದೇವರನ್ನು ಅವಮಾನಿಸಿದ ಆರೋಪ: ದಲಿತ ಗಾಯಕನ ತಲೆ ಮೇಲೆ ಚಪ್ಪಲಿ ಇರಿಸಿ ಕ್ಷಮೆ ಕೇಳಿಸಿದ ಸವರ್ಣೀಯರು

ದೇವರನ್ನು ಅವಮಾನಿಸಿದ ಆರೋಪ: ದಲಿತ ಗಾಯಕನ ತಲೆ ಮೇಲೆ ಚಪ್ಪಲಿ ಇರಿಸಿ ಕ್ಷಮೆ ಕೇಳಿಸಿದ ಸವರ್ಣೀಯರು

- Advertisement -
- Advertisement -

ರಾಜಸ್ಥಾನದ ಚಿತ್ತೋರ್‌ಗಢ್‌ನ ದುಗರ್ ಗ್ರಾಮದಲ್ಲಿ 70 ವರ್ಷದ ದಲಿತ ಬಗ್ದಾವತ್ ಭಜನ್ (ಭಕ್ತಿಗೀತೆ) ಗಾಯಕನೊಬ್ಬ ತನ್ನ ಭಜನೆಯಲ್ಲಿ ಸ್ಥಳೀಯ ದೇವರನ್ನು ಅವಮಾನಿಸಿದ ಆರೋಪದ ಮೇಲೆ ‘ಶಿಕ್ಷೆ’ಯ ರೂಪವಾಗಿ ಆತನ ತಲೆಯ ಮೇಲೆ ಚಪ್ಪಲಿಯನ್ನು ಹೊರಿಸಿ, ಕ್ಷಮೆ ಕೇಳುವಂತೆ ಮಾಡಿರುವ ವೀಡಿಯೊ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ತಡರಾತ್ರಿ 10 ಜನರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್ 16 ರಂದು, ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಜನಾ ಗಾಯಕ ದಾಲ್ಚಂದ್ ಬಾಲಾಯ್ ಅವರು ತಮ್ಮ ತಲೆಯ ಮೇಲೆ ಪಾದರಕ್ಷೆಗಳನ್ನು ಹೊತ್ತುಕೊಂಡು ಸುಮಾರು 60 ರಿಂದ 70 ಜನರ ಎದುರು ಸಾರ್ವಜನಿಕವಾಗಿ ‘ಕ್ಷಮೆ’ ಕೇಳುವಂತೆ ಒತ್ತಾಯಿಸಲಾಯಿತು. ಅವರು ಬಗ್ದಾವತ್ ಹಾಡಿನ ನಿರೂಪಣೆಯ ಸಮಯದಲ್ಲಿ ಗುರ್ಜರ್ ಸಮುದಾಯದ ದೇವತೆಯಾದ ಸಾದು ಮಾತೆಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಹಿಂದಿ ಸುದ್ದಿವಾಹಿನಿಯೊಂದು ವರದಿ ಮಾಡಿದೆ.

ಘಟನೆ ಬಗ್ಗೆ ಮಾತನಾಡಿದ ಚಿತ್ತೋರ್‌ಗಢ ಪೊಲೀಸ್ ವರಿಷ್ಠಾಧಿಕಾರಿ ರಾಜನ್ ದುಶ್ಯಂತ್, ”ದುಗರ್ ಗ್ರಾಮದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ದಾಲು ಸಾಲ್ವಿ ಈ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಗುಜ್ಜರ್ ಸಮುದಾಯವನ್ನು ಕೆರಳಿಸಿತು ಮತ್ತು ನೂರಾರು ಜನರು ಜಾತಿ ಪಂಚಾಯತಿಗಾಗಿ ಜಮಾಯಿಸಿದರು ಮತ್ತು ಸಾಲ್ವಿಯನ್ನು ಕ್ಷಮೆಯಾಚಿಸಲು ಕೇಳಿದರು” ಎಂದು ತಿಳಿಸಿದ್ದಾರೆ.

ಸಾಲ್ವಿ ಭಯಭೀತರಾಗಿದ್ದರು ಮತ್ತು ಪೊಲೀಸರಿಗೆ ತಿಳಿಸುವ ಮೊದಲು ಕ್ಷಮೆಯಾಚಿಸಲು ತಲೆಯ ಮೇಲೆ ಬೂಟುಗಳನ್ನು ಇಟ್ಟುಕೊಂಡಿದ್ದರು. ಘಟನೆಯ ಬಗ್ಗೆ ನನಗೆ ತಿಳಿದಾಗ, ನಾನು ಸ್ಥಳೀಯ ಠಾಣಾಧಿಕಾರಿಯನ್ನು ಸಾಲ್ವಿ ಅವರ ಮನೆಗೆ ಕಳುಹಿಸಿದೆ ಆದರೆ ಅವರು ದೂರು ನೀಡಲು ನಿರಾಕರಿಸಿದರು. ಘಟನೆಯ ವಿಡಿಯೋ ಬುಧವಾರ ವೈರಲ್ ಆದಾಗ ನಾವು ಪ್ರಕರಣ ದಾಖಲಿಸಿಕೊಂಡೆವು” ಎಂದು ದುಶ್ಯಂತ್ ಹೇಳಿದರು.

”ಸಾಲ್ವಿಯನ್ನು ಈ ರೀತಿಯಾಗಿ ಕ್ಷಮೆಯಾಚಿಸಲು ಪ್ರೇರೇಪಿಸಿದಕ್ಕಾಗಿ ಭಾರತೀಯ ದಂಡ ಸಂಹಿತೆ ಮತ್ತು ಕಟ್ಟುನಿಟ್ಟಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯಿದೆಯಡಿಯಲ್ಲಿ ಹನ್ನೆರಡು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ದುಶ್ಯಂತ್ ಹೇಳಿದ್ದಾರೆ.

ಸಾಲ್ವಿಯ ಸಹ ಗಾಯಕ ಭೂರಾ ಗುಜ್ಜರ್‌ಗೆ ಜಾತಿ ಪಂಚಾಯತ್ ₹1,100 ದಂಡವನ್ನು ವಿಧಿಸಿದೆ. ಪಂಚಾಯತಿಯು ತನ್ನ ವಿರುದ್ಧ ದಂಡವನ್ನು ಘೋಷಿಸುವ ಮೊದಲು, ಕೆಲವರು ಕೂಗಲು ಪ್ರಾರಂಭಿಸಿದರು ಮತ್ತು ತನ್ನನ್ನು ಹಿಂಸಿಸಲು ಪ್ರಯತ್ನಿಸಿದರು ಎಂದು ಸಾಲ್ವಿ ಪೊಲೀಸರಿಗೆ ತಿಳಿಸಿದರು. ಅವರು ಭಯಭೀತರಾಗಿದ್ದರು ಮತ್ತು ಅದಕ್ಕಾಗಿಯೇ ಅವರು ತಮ್ಮ ಬೂಟುಗಳನ್ನು ತೆಗೆದುಕೊಂಡು ತಮ್ಮ ಮೇಲೆ ಹಲ್ಲೆ ನಡೆಸುತ್ತಾರೆ ಎಂಬ ಭಯದಿಂದ ತಲೆಯ ಮೇಲೆ ಇಟ್ಟುಕೊಂಡರು.

”ಧಾರ್ಮಿಕ ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿದ್ದರು ಮತ್ತು ಅವರಲ್ಲಿ ಹಲವರು ವೀಡಿಯೊಗಳನ್ನು ಮಾಡುತ್ತಿದ್ದರು. ಆಗ ನನ್ನ ಹೇಳಿಕೆಗೆ ಆಕ್ಷೇಪಗಳು ಬರಲಿಲ್ಲ ಆದರೆ ಒಂದು ವಾರದ ನಂತರ ವ್ಯಕ್ತಿಯೊಬ್ಬರು ನನಗೆ ಫೋನ್ ಮಾಡಿ, ಜಾತಿ ನಿಂದನೆ ಮಾಡಿದ್ದಾರೆ” ಎಂದು ಸಾಲ್ವಿ ಹೇಳಿಕೊಂಡಿದ್ದಾರೆ.

ದಲಿತ ಸಂಘಟನೆಗಳು ನನ್ನ ಬೆಂಬಲಕ್ಕೆ ನಿಂತು ಚಿತ್ತೋರ್‌ಗಢ ಜಿಲ್ಲಾಧಿಕಾರಿಗಳಿಗೆ ಜ್ಞಾಪಕ ಪತ್ರವನ್ನು ನೀಡಿದೆವು. ಆಗ ನಾನು ಪೊಲೀಸ್ ದೂರು ದಾಖಲಿಸಿದೆ ಎಂದು ಸಾಲ್ವಿ ಹೇಳಿದರು.

ಸಾಲ್ವಿಯನ್ನು ಬೆದರಿಸಿದ ವ್ಯಕ್ತಿಗಳನ್ನು ಗುರುತಿಸಲು, ಈ ಪ್ರಕರಣದ ತನಿಖೆ ಮಾಡಲು ಮತ್ತು ಆರೋಪಿಗಳನ್ನು ಬಂಧಿಸಲು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ದುಶ್ಯಂತ್ ಹೇಳಿದರು. ಹೆಚ್ಚಿನ ಬಂಧನಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ದಲಿತರು, ಮುಸ್ಲಿಮರ ಕುರಿತ ರಾಹುಲ್ ಮಾತಿನಲ್ಲಿ ಕಹಿಸತ್ಯವಿದೆ: ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...