HomeUncategorizedದೇವರನ್ನು ಅವಮಾನಿಸಿದ ಆರೋಪ: ದಲಿತ ಗಾಯಕನ ತಲೆ ಮೇಲೆ ಚಪ್ಪಲಿ ಇರಿಸಿ ಕ್ಷಮೆ ಕೇಳಿಸಿದ ಸವರ್ಣೀಯರು

ದೇವರನ್ನು ಅವಮಾನಿಸಿದ ಆರೋಪ: ದಲಿತ ಗಾಯಕನ ತಲೆ ಮೇಲೆ ಚಪ್ಪಲಿ ಇರಿಸಿ ಕ್ಷಮೆ ಕೇಳಿಸಿದ ಸವರ್ಣೀಯರು

- Advertisement -
- Advertisement -

ರಾಜಸ್ಥಾನದ ಚಿತ್ತೋರ್‌ಗಢ್‌ನ ದುಗರ್ ಗ್ರಾಮದಲ್ಲಿ 70 ವರ್ಷದ ದಲಿತ ಬಗ್ದಾವತ್ ಭಜನ್ (ಭಕ್ತಿಗೀತೆ) ಗಾಯಕನೊಬ್ಬ ತನ್ನ ಭಜನೆಯಲ್ಲಿ ಸ್ಥಳೀಯ ದೇವರನ್ನು ಅವಮಾನಿಸಿದ ಆರೋಪದ ಮೇಲೆ ‘ಶಿಕ್ಷೆ’ಯ ರೂಪವಾಗಿ ಆತನ ತಲೆಯ ಮೇಲೆ ಚಪ್ಪಲಿಯನ್ನು ಹೊರಿಸಿ, ಕ್ಷಮೆ ಕೇಳುವಂತೆ ಮಾಡಿರುವ ವೀಡಿಯೊ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ತಡರಾತ್ರಿ 10 ಜನರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್ 16 ರಂದು, ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಜನಾ ಗಾಯಕ ದಾಲ್ಚಂದ್ ಬಾಲಾಯ್ ಅವರು ತಮ್ಮ ತಲೆಯ ಮೇಲೆ ಪಾದರಕ್ಷೆಗಳನ್ನು ಹೊತ್ತುಕೊಂಡು ಸುಮಾರು 60 ರಿಂದ 70 ಜನರ ಎದುರು ಸಾರ್ವಜನಿಕವಾಗಿ ‘ಕ್ಷಮೆ’ ಕೇಳುವಂತೆ ಒತ್ತಾಯಿಸಲಾಯಿತು. ಅವರು ಬಗ್ದಾವತ್ ಹಾಡಿನ ನಿರೂಪಣೆಯ ಸಮಯದಲ್ಲಿ ಗುರ್ಜರ್ ಸಮುದಾಯದ ದೇವತೆಯಾದ ಸಾದು ಮಾತೆಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಹಿಂದಿ ಸುದ್ದಿವಾಹಿನಿಯೊಂದು ವರದಿ ಮಾಡಿದೆ.

ಘಟನೆ ಬಗ್ಗೆ ಮಾತನಾಡಿದ ಚಿತ್ತೋರ್‌ಗಢ ಪೊಲೀಸ್ ವರಿಷ್ಠಾಧಿಕಾರಿ ರಾಜನ್ ದುಶ್ಯಂತ್, ”ದುಗರ್ ಗ್ರಾಮದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ದಾಲು ಸಾಲ್ವಿ ಈ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಗುಜ್ಜರ್ ಸಮುದಾಯವನ್ನು ಕೆರಳಿಸಿತು ಮತ್ತು ನೂರಾರು ಜನರು ಜಾತಿ ಪಂಚಾಯತಿಗಾಗಿ ಜಮಾಯಿಸಿದರು ಮತ್ತು ಸಾಲ್ವಿಯನ್ನು ಕ್ಷಮೆಯಾಚಿಸಲು ಕೇಳಿದರು” ಎಂದು ತಿಳಿಸಿದ್ದಾರೆ.

ಸಾಲ್ವಿ ಭಯಭೀತರಾಗಿದ್ದರು ಮತ್ತು ಪೊಲೀಸರಿಗೆ ತಿಳಿಸುವ ಮೊದಲು ಕ್ಷಮೆಯಾಚಿಸಲು ತಲೆಯ ಮೇಲೆ ಬೂಟುಗಳನ್ನು ಇಟ್ಟುಕೊಂಡಿದ್ದರು. ಘಟನೆಯ ಬಗ್ಗೆ ನನಗೆ ತಿಳಿದಾಗ, ನಾನು ಸ್ಥಳೀಯ ಠಾಣಾಧಿಕಾರಿಯನ್ನು ಸಾಲ್ವಿ ಅವರ ಮನೆಗೆ ಕಳುಹಿಸಿದೆ ಆದರೆ ಅವರು ದೂರು ನೀಡಲು ನಿರಾಕರಿಸಿದರು. ಘಟನೆಯ ವಿಡಿಯೋ ಬುಧವಾರ ವೈರಲ್ ಆದಾಗ ನಾವು ಪ್ರಕರಣ ದಾಖಲಿಸಿಕೊಂಡೆವು” ಎಂದು ದುಶ್ಯಂತ್ ಹೇಳಿದರು.

”ಸಾಲ್ವಿಯನ್ನು ಈ ರೀತಿಯಾಗಿ ಕ್ಷಮೆಯಾಚಿಸಲು ಪ್ರೇರೇಪಿಸಿದಕ್ಕಾಗಿ ಭಾರತೀಯ ದಂಡ ಸಂಹಿತೆ ಮತ್ತು ಕಟ್ಟುನಿಟ್ಟಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯಿದೆಯಡಿಯಲ್ಲಿ ಹನ್ನೆರಡು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ದುಶ್ಯಂತ್ ಹೇಳಿದ್ದಾರೆ.

ಸಾಲ್ವಿಯ ಸಹ ಗಾಯಕ ಭೂರಾ ಗುಜ್ಜರ್‌ಗೆ ಜಾತಿ ಪಂಚಾಯತ್ ₹1,100 ದಂಡವನ್ನು ವಿಧಿಸಿದೆ. ಪಂಚಾಯತಿಯು ತನ್ನ ವಿರುದ್ಧ ದಂಡವನ್ನು ಘೋಷಿಸುವ ಮೊದಲು, ಕೆಲವರು ಕೂಗಲು ಪ್ರಾರಂಭಿಸಿದರು ಮತ್ತು ತನ್ನನ್ನು ಹಿಂಸಿಸಲು ಪ್ರಯತ್ನಿಸಿದರು ಎಂದು ಸಾಲ್ವಿ ಪೊಲೀಸರಿಗೆ ತಿಳಿಸಿದರು. ಅವರು ಭಯಭೀತರಾಗಿದ್ದರು ಮತ್ತು ಅದಕ್ಕಾಗಿಯೇ ಅವರು ತಮ್ಮ ಬೂಟುಗಳನ್ನು ತೆಗೆದುಕೊಂಡು ತಮ್ಮ ಮೇಲೆ ಹಲ್ಲೆ ನಡೆಸುತ್ತಾರೆ ಎಂಬ ಭಯದಿಂದ ತಲೆಯ ಮೇಲೆ ಇಟ್ಟುಕೊಂಡರು.

”ಧಾರ್ಮಿಕ ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿದ್ದರು ಮತ್ತು ಅವರಲ್ಲಿ ಹಲವರು ವೀಡಿಯೊಗಳನ್ನು ಮಾಡುತ್ತಿದ್ದರು. ಆಗ ನನ್ನ ಹೇಳಿಕೆಗೆ ಆಕ್ಷೇಪಗಳು ಬರಲಿಲ್ಲ ಆದರೆ ಒಂದು ವಾರದ ನಂತರ ವ್ಯಕ್ತಿಯೊಬ್ಬರು ನನಗೆ ಫೋನ್ ಮಾಡಿ, ಜಾತಿ ನಿಂದನೆ ಮಾಡಿದ್ದಾರೆ” ಎಂದು ಸಾಲ್ವಿ ಹೇಳಿಕೊಂಡಿದ್ದಾರೆ.

ದಲಿತ ಸಂಘಟನೆಗಳು ನನ್ನ ಬೆಂಬಲಕ್ಕೆ ನಿಂತು ಚಿತ್ತೋರ್‌ಗಢ ಜಿಲ್ಲಾಧಿಕಾರಿಗಳಿಗೆ ಜ್ಞಾಪಕ ಪತ್ರವನ್ನು ನೀಡಿದೆವು. ಆಗ ನಾನು ಪೊಲೀಸ್ ದೂರು ದಾಖಲಿಸಿದೆ ಎಂದು ಸಾಲ್ವಿ ಹೇಳಿದರು.

ಸಾಲ್ವಿಯನ್ನು ಬೆದರಿಸಿದ ವ್ಯಕ್ತಿಗಳನ್ನು ಗುರುತಿಸಲು, ಈ ಪ್ರಕರಣದ ತನಿಖೆ ಮಾಡಲು ಮತ್ತು ಆರೋಪಿಗಳನ್ನು ಬಂಧಿಸಲು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ದುಶ್ಯಂತ್ ಹೇಳಿದರು. ಹೆಚ್ಚಿನ ಬಂಧನಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ದಲಿತರು, ಮುಸ್ಲಿಮರ ಕುರಿತ ರಾಹುಲ್ ಮಾತಿನಲ್ಲಿ ಕಹಿಸತ್ಯವಿದೆ: ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...