HomeUncategorizedದೇವರನ್ನು ಅವಮಾನಿಸಿದ ಆರೋಪ: ದಲಿತ ಗಾಯಕನ ತಲೆ ಮೇಲೆ ಚಪ್ಪಲಿ ಇರಿಸಿ ಕ್ಷಮೆ ಕೇಳಿಸಿದ ಸವರ್ಣೀಯರು

ದೇವರನ್ನು ಅವಮಾನಿಸಿದ ಆರೋಪ: ದಲಿತ ಗಾಯಕನ ತಲೆ ಮೇಲೆ ಚಪ್ಪಲಿ ಇರಿಸಿ ಕ್ಷಮೆ ಕೇಳಿಸಿದ ಸವರ್ಣೀಯರು

- Advertisement -
- Advertisement -

ರಾಜಸ್ಥಾನದ ಚಿತ್ತೋರ್‌ಗಢ್‌ನ ದುಗರ್ ಗ್ರಾಮದಲ್ಲಿ 70 ವರ್ಷದ ದಲಿತ ಬಗ್ದಾವತ್ ಭಜನ್ (ಭಕ್ತಿಗೀತೆ) ಗಾಯಕನೊಬ್ಬ ತನ್ನ ಭಜನೆಯಲ್ಲಿ ಸ್ಥಳೀಯ ದೇವರನ್ನು ಅವಮಾನಿಸಿದ ಆರೋಪದ ಮೇಲೆ ‘ಶಿಕ್ಷೆ’ಯ ರೂಪವಾಗಿ ಆತನ ತಲೆಯ ಮೇಲೆ ಚಪ್ಪಲಿಯನ್ನು ಹೊರಿಸಿ, ಕ್ಷಮೆ ಕೇಳುವಂತೆ ಮಾಡಿರುವ ವೀಡಿಯೊ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ತಡರಾತ್ರಿ 10 ಜನರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್ 16 ರಂದು, ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಜನಾ ಗಾಯಕ ದಾಲ್ಚಂದ್ ಬಾಲಾಯ್ ಅವರು ತಮ್ಮ ತಲೆಯ ಮೇಲೆ ಪಾದರಕ್ಷೆಗಳನ್ನು ಹೊತ್ತುಕೊಂಡು ಸುಮಾರು 60 ರಿಂದ 70 ಜನರ ಎದುರು ಸಾರ್ವಜನಿಕವಾಗಿ ‘ಕ್ಷಮೆ’ ಕೇಳುವಂತೆ ಒತ್ತಾಯಿಸಲಾಯಿತು. ಅವರು ಬಗ್ದಾವತ್ ಹಾಡಿನ ನಿರೂಪಣೆಯ ಸಮಯದಲ್ಲಿ ಗುರ್ಜರ್ ಸಮುದಾಯದ ದೇವತೆಯಾದ ಸಾದು ಮಾತೆಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಹಿಂದಿ ಸುದ್ದಿವಾಹಿನಿಯೊಂದು ವರದಿ ಮಾಡಿದೆ.

ಘಟನೆ ಬಗ್ಗೆ ಮಾತನಾಡಿದ ಚಿತ್ತೋರ್‌ಗಢ ಪೊಲೀಸ್ ವರಿಷ್ಠಾಧಿಕಾರಿ ರಾಜನ್ ದುಶ್ಯಂತ್, ”ದುಗರ್ ಗ್ರಾಮದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ದಾಲು ಸಾಲ್ವಿ ಈ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಗುಜ್ಜರ್ ಸಮುದಾಯವನ್ನು ಕೆರಳಿಸಿತು ಮತ್ತು ನೂರಾರು ಜನರು ಜಾತಿ ಪಂಚಾಯತಿಗಾಗಿ ಜಮಾಯಿಸಿದರು ಮತ್ತು ಸಾಲ್ವಿಯನ್ನು ಕ್ಷಮೆಯಾಚಿಸಲು ಕೇಳಿದರು” ಎಂದು ತಿಳಿಸಿದ್ದಾರೆ.

ಸಾಲ್ವಿ ಭಯಭೀತರಾಗಿದ್ದರು ಮತ್ತು ಪೊಲೀಸರಿಗೆ ತಿಳಿಸುವ ಮೊದಲು ಕ್ಷಮೆಯಾಚಿಸಲು ತಲೆಯ ಮೇಲೆ ಬೂಟುಗಳನ್ನು ಇಟ್ಟುಕೊಂಡಿದ್ದರು. ಘಟನೆಯ ಬಗ್ಗೆ ನನಗೆ ತಿಳಿದಾಗ, ನಾನು ಸ್ಥಳೀಯ ಠಾಣಾಧಿಕಾರಿಯನ್ನು ಸಾಲ್ವಿ ಅವರ ಮನೆಗೆ ಕಳುಹಿಸಿದೆ ಆದರೆ ಅವರು ದೂರು ನೀಡಲು ನಿರಾಕರಿಸಿದರು. ಘಟನೆಯ ವಿಡಿಯೋ ಬುಧವಾರ ವೈರಲ್ ಆದಾಗ ನಾವು ಪ್ರಕರಣ ದಾಖಲಿಸಿಕೊಂಡೆವು” ಎಂದು ದುಶ್ಯಂತ್ ಹೇಳಿದರು.

”ಸಾಲ್ವಿಯನ್ನು ಈ ರೀತಿಯಾಗಿ ಕ್ಷಮೆಯಾಚಿಸಲು ಪ್ರೇರೇಪಿಸಿದಕ್ಕಾಗಿ ಭಾರತೀಯ ದಂಡ ಸಂಹಿತೆ ಮತ್ತು ಕಟ್ಟುನಿಟ್ಟಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯಿದೆಯಡಿಯಲ್ಲಿ ಹನ್ನೆರಡು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ದುಶ್ಯಂತ್ ಹೇಳಿದ್ದಾರೆ.

ಸಾಲ್ವಿಯ ಸಹ ಗಾಯಕ ಭೂರಾ ಗುಜ್ಜರ್‌ಗೆ ಜಾತಿ ಪಂಚಾಯತ್ ₹1,100 ದಂಡವನ್ನು ವಿಧಿಸಿದೆ. ಪಂಚಾಯತಿಯು ತನ್ನ ವಿರುದ್ಧ ದಂಡವನ್ನು ಘೋಷಿಸುವ ಮೊದಲು, ಕೆಲವರು ಕೂಗಲು ಪ್ರಾರಂಭಿಸಿದರು ಮತ್ತು ತನ್ನನ್ನು ಹಿಂಸಿಸಲು ಪ್ರಯತ್ನಿಸಿದರು ಎಂದು ಸಾಲ್ವಿ ಪೊಲೀಸರಿಗೆ ತಿಳಿಸಿದರು. ಅವರು ಭಯಭೀತರಾಗಿದ್ದರು ಮತ್ತು ಅದಕ್ಕಾಗಿಯೇ ಅವರು ತಮ್ಮ ಬೂಟುಗಳನ್ನು ತೆಗೆದುಕೊಂಡು ತಮ್ಮ ಮೇಲೆ ಹಲ್ಲೆ ನಡೆಸುತ್ತಾರೆ ಎಂಬ ಭಯದಿಂದ ತಲೆಯ ಮೇಲೆ ಇಟ್ಟುಕೊಂಡರು.

”ಧಾರ್ಮಿಕ ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿದ್ದರು ಮತ್ತು ಅವರಲ್ಲಿ ಹಲವರು ವೀಡಿಯೊಗಳನ್ನು ಮಾಡುತ್ತಿದ್ದರು. ಆಗ ನನ್ನ ಹೇಳಿಕೆಗೆ ಆಕ್ಷೇಪಗಳು ಬರಲಿಲ್ಲ ಆದರೆ ಒಂದು ವಾರದ ನಂತರ ವ್ಯಕ್ತಿಯೊಬ್ಬರು ನನಗೆ ಫೋನ್ ಮಾಡಿ, ಜಾತಿ ನಿಂದನೆ ಮಾಡಿದ್ದಾರೆ” ಎಂದು ಸಾಲ್ವಿ ಹೇಳಿಕೊಂಡಿದ್ದಾರೆ.

ದಲಿತ ಸಂಘಟನೆಗಳು ನನ್ನ ಬೆಂಬಲಕ್ಕೆ ನಿಂತು ಚಿತ್ತೋರ್‌ಗಢ ಜಿಲ್ಲಾಧಿಕಾರಿಗಳಿಗೆ ಜ್ಞಾಪಕ ಪತ್ರವನ್ನು ನೀಡಿದೆವು. ಆಗ ನಾನು ಪೊಲೀಸ್ ದೂರು ದಾಖಲಿಸಿದೆ ಎಂದು ಸಾಲ್ವಿ ಹೇಳಿದರು.

ಸಾಲ್ವಿಯನ್ನು ಬೆದರಿಸಿದ ವ್ಯಕ್ತಿಗಳನ್ನು ಗುರುತಿಸಲು, ಈ ಪ್ರಕರಣದ ತನಿಖೆ ಮಾಡಲು ಮತ್ತು ಆರೋಪಿಗಳನ್ನು ಬಂಧಿಸಲು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ದುಶ್ಯಂತ್ ಹೇಳಿದರು. ಹೆಚ್ಚಿನ ಬಂಧನಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ದಲಿತರು, ಮುಸ್ಲಿಮರ ಕುರಿತ ರಾಹುಲ್ ಮಾತಿನಲ್ಲಿ ಕಹಿಸತ್ಯವಿದೆ: ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...