Homeಮುಖಪುಟರಾಜಸ್ಥಾನ: ಸಜೀವ ದಹನಕ್ಕೊಳಗಾದ ಮಹಿಳಾ ಶಿಕ್ಷಕಿ ಆಸ್ಪತ್ರೆಯಲ್ಲಿ ಸಾವು

ರಾಜಸ್ಥಾನ: ಸಜೀವ ದಹನಕ್ಕೊಳಗಾದ ಮಹಿಳಾ ಶಿಕ್ಷಕಿ ಆಸ್ಪತ್ರೆಯಲ್ಲಿ ಸಾವು

- Advertisement -
- Advertisement -

ರಾಜಸ್ಥಾನದ ಜೈಪುರ ಸಮೀಪದ ಹಳ್ಳಿಯಲ್ಲಿ ಆಗಸ್ಟ್ 10 ರಂದು ಸಜೀವ ದಹನಗೊಂಡಿದ್ದ ಮಹಿಳಾ ಶಿಕ್ಷಕಿ ಮಂಗಳವಾರ ತಡರಾತ್ರಿ ಎಸ್‌ಎಂಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆಯ ವೀಡಿಯೊಗಳು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಜನರು ರಾಜ್ಯದಲ್ಲಿ ಪೊಲೀಸರು ಮತ್ತು ಹದಗೆಟ್ಟ ಕಾನೂನು ಸುವ್ಯವಸ್ಥೆಯನ್ನು ಪ್ರಶ್ನಿಸಿದ್ದಾರೆ.

ಮೂಲಗಳ ಪ್ರಕಾರ, ಜೈಪುರದಿಂದ ಸುಮಾರು 80 ಕಿಮೀ ದೂರದಲ್ಲಿರುವ ರೈಸರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹತ್ಯೆಗೀಡಾದವರನ್ನು ವೀಣಾ ಸ್ಮಾರಕ ಶಾಲೆಯ ಶಿಕ್ಷಕಿಯಾಗಿದ್ದ ಅನಿತಾ ರೇಗರ್ (32) ಎಂದು ಗುರುತಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಗಸ್ಟ್ 10 ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಅನಿತಾ ತನ್ನ ಆರು ವರ್ಷದ ಮಗನ ಜೊತೆ ಶಾಲೆಗೆ ಹೋಗುತ್ತಿದ್ದಾಗ ಕೆಲ ದುಷ್ಕರ್ಮಿಗಳು ಅವರನ್ನು ಸುತ್ತುವರೆದಿದ್ದರು. ತನ್ನನ್ನು ರಕ್ಷಿಸಿಕೊಳ್ಳಲು ಅನಿತಾ ಅವರು ಕಾಲುರಾಮ್ ರೇಗರ್ ಎಂಬ ವ್ಯಕ್ತಿಯ ಮನೆಗೆ ಪ್ರವೇಶಿಸಿ ಸಹಾಯಕ್ಕಾಗಿ 100 ಅನ್ನು ಡಯಲ್ ಮಾಡಿದ್ದರು. ಆದರೂ ಪೊಲೀಸರು ಸ್ಥಳಕ್ಕೆ ಬಂದಿರಲಿಲ್ಲ. ಇದಾದ ಬಳಿಕ ಆರೋಪಿಗಳು ಅನಿತಾ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ ದಲಿತ ಬಾಲನಕ ಹತ್ಯೆ ಹಿನ್ನೆಲೆ: ತನ್ನ ತಂದೆ ಎದುರಿಸಿದ ಜಾತಿ ತಾರತಮ್ಯ ನೆನಪಿಸಿಕೊಂಡ ಮಾಜಿ ಸ್ಪೀಕರ್ ಮೀರಾ ಕುಮಾರ್‌

ಮಹಿಳೆ ನೋವಿನಿಂದ ಕಿರುಚುತ್ತಲೇ ಇದ್ದಾಗ, ಸುತ್ತಮುತ್ತಲಿನ ಜನರು ಆಕೆಯನ್ನು ರಕ್ಷಿಸುವ ಬದಲು ಘಟನೆಯನ್ನು ಚಿತ್ರೀಕರಿಸುತ್ತಿದ್ದರು.

ಇದನ್ನೂ ಓದಿ: ರಾಜಸ್ಥಾನ: ಶಿಕ್ಷಕನಿಂದ ದಲಿತ ಬಾಲಕನ ಹತ್ಯೆ ಪ್ರಕರಣ; ರಾಜಕೀಯ ಬಿಕ್ಕಟ್ಟಿನಲ್ಲಿ ಸಿಎಂ ಗೆಹ್ಲೋಟ್‌

ಘಟನೆಯ ಬಗ್ಗೆ ಮಾಹಿತಿ ಪಡೆದ ಮಹಿಳೆಯ ಪತಿ ತಾರಾಚಂದ್ ತನ್ನ ಕುಟುಂಬ ಸದಸ್ಯರೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ. 70 ರಷ್ಟು ಸುಟ್ಟಗಾಯಗಳೊಂದಿಗೆ ಅನಿತಾ ಅವರನ್ನು ಜಮ್ವರಮ್‌ಗಢದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿಂದ ಅವರನ್ನು ಜೈಪುರದ ಎಸ್‌ಎಂಎಸ್ ಆಸ್ಪತ್ರೆಗೆ ಕಳುಹಿಸಲಾಯಿದೆ. ಏಳು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಅನಿತಾ ಅವರು ಮಂಗಳವಾರ ರಾತ್ರಿ ಸಾವನ್ನಪ್ಪಿದ್ದಾರೆ.

ಮೂಲಗಳ ಪ್ರಕಾರ, ಅನಿತಾ ಅವರು ಆರೋಪಿಗಳಿಗೆ 2.5 ಲಕ್ಷ ರೂ. ಸಾಲ ನೀಡಿದ್ದರು. ನಂತರ ಅವರು ಆರೋಪಿಗಳಿಂದ ಹಣ ವಾಪಸ್ ಕೇಳಿದಾಗ ಆಕೆಯನ್ನು ನಿಂದಿಸಿ ಥಳಿಸಿದ್ದರೆ. ಈ ಬಗ್ಗೆ ಅನಿತಾ ಅವರು ಮೇ 7 ರಂದು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಪೊಲೀಸರು ಯಾವುದೇ ಕ್ರಮ ಕೈಗೊಳ್ಳದಿರುವುದು ಆರೋಪಿಗಳಿಗೆ ಮತ್ತಷ್ಟು ಉತ್ತೇಜನ ನೀಡಿದೆ ಎನ್ನಲಾಗಿದೆ. ಆರೋಪಿಗಳು ತಮ್ಮ ಸಂಬಂಧಿಕರು ಎಂದು ಅನಿತಾ ಅವರ ಪತಿ ತಾರಾಚಂದ್ ಹೇಳಿಕೊಂಡಿದ್ದಾರೆ.

ಆಗಸ್ಟ್ 10 ರಂದು ಅನಿತಾ ಅವರಿಗೆ ಬೆಂಕಿ ಹಚ್ಚಿದ ವೀಡಿಯೊಗಳನ್ನು ಚಿತ್ರೀಕರಿಸಿದಾಗ, ಅವುಗಳನ್ನು ಯಾರೊಂದಿಗೂ ಹಂಚಿಕೊಳ್ಳದಂತೆ ಪೊಲೀಸರು ಜನರನ್ನು ಕೇಳಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಡಿಎನ್‌ಎ ತಿಳಿಸಿವೆ. ಆದರೆ ಮಹಿಳೆ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಬಂದ ನಂತರ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ರಾಜಸ್ಥಾನ: ಪಾತ್ರೆ ಮುಟ್ಟಿದ ದಲಿತ ಬಾಲಕನನ್ನು ಥಳಿಸಿ ಕೊಂದ ಶಿಕ್ಷಕ; ಎಫ್‌ಐಆರ್‌ ದಾಖಲು

ಆರೋಪಿಗಳನ್ನು ಶೀಘ್ರವೇ ಬಂಧಿಸುವುದಾಗಿ ಪೊಲೀಸರು ಹೇಳಿದ್ದಾರೆ. ಆದರೆ ಮಹಿಳೆಯ ಸಾವಿನ ನಂತರವೂ ಆರೋಪಿಗಳನ್ನು ಬಂಧಿಸಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಎಎಸ್ಪಿ ಧರ್ಮೇಂದ್ರ ಯಾದವ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...