Homeಮುಖಪುಟರಾಜಸ್ಥಾನ: ಗೆಹ್ಲೋಟ್‌ ಜೊತೆಗಿನ ಭಿನ್ನಾಭಿಪ್ರಾಯ ಮರೆತು ಒಟ್ಟಿಗೆ ಚುನಾವಣೆ ಎದುರಿಸುತ್ತೇವೆ; ಸಚಿನ್‌ ಪೈಲಟ್‌

ರಾಜಸ್ಥಾನ: ಗೆಹ್ಲೋಟ್‌ ಜೊತೆಗಿನ ಭಿನ್ನಾಭಿಪ್ರಾಯ ಮರೆತು ಒಟ್ಟಿಗೆ ಚುನಾವಣೆ ಎದುರಿಸುತ್ತೇವೆ; ಸಚಿನ್‌ ಪೈಲಟ್‌

- Advertisement -
- Advertisement -

ರಾಜಸ್ತಾನ ಕಾಂಗ್ರೆಸ್ ನಾಯಕರಲ್ಲಿನ ಕಿತ್ತಾಟಕ್ಕೆ ಇದೀಗ ಬ್ರೇಕ್ ಬಿದ್ದಿದ್ದು, ಅಶೋಕ್‌ ಗೆಹ್ಲೋಟ್‌ ಅವರೊಂದಿಗಿನ ಭಿನ್ನಾಭಿಪ್ರಾಯವನ್ನು ಮರೆಯುವುದಾಗಿ ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್‌ ಶನಿವಾರ ಹೇಳಿದ್ದಾರೆ. ಸಾಮೂಹಿಕ ನಾಯಕತ್ವವೇ ವಿಧಾನಸಭೆ ಚುನಾವಣೆಗೆ ಮುಂದಿರುವ ಏಕೈಕ ಮಾರ್ಗ ಎಂದಿದ್ದಾರೆ.

ಕೆಲದ ದಿನಗಳ ಹಿಂದಿನಿಂದ ಅಶೋಕ್‌ ಗೆಹ್ಲೋಟ್‌ ಹಾಗೂ ಸಚಿನ್‌ ಪೈಲಟ್‌ ನಡುವಿನ ಕಿತ್ತಾಟ ಕಾಂಗ್ರೆಸ್ ನಾಯಕರನ್ನು ಚಿಂತೆಗೀಡು ಮಾಡಿತ್ತು. ಆದರೆ ಇದೀಗ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಲಹೆ ಮೇರೆಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರೊಂದಿಗಿನ ಭಿನ್ನಾಭಿಪ್ರಾಯವನ್ನು ಮರೆಯುವುದಾಗಿ ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್‌ ಶನಿವಾರ ಹೇಳಿದ್ದು, ಸಾಮೂಹಿಕ ನಾಯಕತ್ವವೇ ವಿಧಾನಸಭೆ ಚುನಾವಣೆಗೆ ಮುಂದಿರುವ ಏಕೈಕ ಮಾರ್ಗ ಎಂದಿದ್ದಾರೆ. ಪಕ್ಷದ ನಿರ್ಣಾಯಕ ರಾಜಸ್ಥಾನ ಚುನಾವಣಾ ಕಾರ್ಯತಂತ್ರದ ಸಭೆಯ ಕೆಲವೇ ದಿನಗಳಲ್ಲಿ ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ.

”ಎಲ್ಲವನ್ನು  ಕ್ಷಮಿಸಿ, ಹಳೆಯದನ್ನು ಮರೆತು ಮುಂದೆ ಸಾಗಿ ಎಂದು ಖರ್ಗೆ ಸಲಹೆ ನೀಡಿದ್ದಾರೆ ಎಂದು ಹೇಳಿದ್ದಾರೆ. ”ಅಶೋಕ್ ಗೆಹ್ಲೋಟ್ ಜಿ ನನಗಿಂತ ಹಿರಿಯರು, ಅವರಿಗೆ ಹೆಚ್ಚು ಅನುಭವವಿದೆ, ಅವರ ಹೆಗಲ ಮೇಲೆ ಹೆಚ್ಚಿನ ಜವಾಬ್ದಾರಿಗಳಿವೆ. ನಾನು ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷನಾಗಿದ್ದಾಗ, ನಾನು ಎಲ್ಲರನ್ನು ಜತೆಗೆ ಕರೆದುಕೊಂಡು ಹೋಗಲು ಪ್ರಯತ್ನಿಸಿದೆ. ಇಂದು ಅವರು ಮುಖ್ಯಮಂತ್ರಿ (ಗೆಹ್ಲೋಟ್). ಆದ್ದರಿಂದ ಅವರು ಎಲ್ಲರನ್ನು ಜತೆಗೆ ಕರೆದುಕೊಂಡು ಹೋಗಲು ಪ್ರಯತ್ನಿಸುತ್ತಿದ್ದಾರೆ ಎಂದು ಭಾವಿಸುತ್ತೇನೆ” ಎಂದು ಸಚಿನ್‌ ಪೈಲಟ್‌ ಹೇಳಿದ್ದಾರೆ.

”ಸ್ವಲ್ಪ ಆಚೆ ಈಚೆ ಆದರೆ ಅದು ದೊಡ್ಡ ಸಮಸ್ಯೆಯಲ್ಲ. ಏಕೆಂದರೆ ಯಾವುದೇ ವ್ಯಕ್ತಿಗಿಂತ ಪಕ್ಷ ಮತ್ತು ಸಾರ್ವಜನಿಕರೇ ಮುಖ್ಯ. ನನಗೂ ಇದು ಅರ್ಥವಾಗಿದೆ ಮತ್ತು ಅವರಿಗೂ ಅರ್ಥವಾಗಿದೆ” ಎಂದು ಹೇಳಿದ್ದಾರೆ.

ಹಿಂದಿನ ವಸುಂಧರಾ ರಾಜೇ ಸರ್ಕಾರದ ಭ್ರಷ್ಟಾಚಾರದಂತಹ ವಿಷಯಗಳ ಬಗ್ಗೆ ತನಿಖೆ ನಡೆಸದೇ ಇರುವುದಕ್ಕಾಗಿ ಗೆಹ್ಲೋಟ್ ಸರ್ಕಾರವನ್ನು ಟೀಕಿಸಿದ ಬಗ್ಗೆ ಕೇಳಲಾದ ಪ್ರಶ್ನೆಗೆ ಪೈಲಟ್, ”ಆ ಸಮಯ ಕಳೆದು ಹೋಗಿದೆ, ಅದು ಮತ್ತೆ ಬರುವುದಿಲ್ಲ, ನಾವು ಭವಿಷ್ಯದ ಬಗ್ಗೆ ಚಿಂತಿಸಬೇಕು ಎಂದು ಖರ್ಗೆ ಹೇಳಿದ್ದಾರೆ” ಎಂದು ಉತ್ತರಿಸಿದ್ದಾರೆ.

ಸಭೆ ಬಳಿಕ ಕಾಂಗ್ರೆಸ್, ಒಗ್ಗಟ್ಟಿನಿಂದ ಇದ್ದರೆ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಬಹುದು ಎಂದು ಪ್ರತಿಪಾದಿಸಿತು. ಅದೇ ವೇಳೆ ಶಿಸ್ತು ಕಾಪಾಡದ ಮತ್ತು ಪಕ್ಷದ ವೇದಿಕೆಯ ಹೊರಗೆ ಮಾತನಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಎಂದಿಗೂ ಘೋಷಿಸುವುದಿಲ್ಲ ಎಂಬ ಕಾಂಗ್ರೆಸ್ ಸಂಘಟನೆಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರ ಹೇಳಿಕೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ, ಪೈಲಟ್ ”ವೇಣುಗೋಪಾಲ್ ಜಿ ಅವರು ಹೇಳಿದ್ದು ತಪ್ಪಲ್ಲ ಎಂದು ನಾನು ಭಾವಿಸುತ್ತೇನೆ. ನಾವು ಪ್ರತಿ ಬಾರಿ ಚುನಾವಣೆಗೆ ಸ್ಪರ್ಧಿಸಿದಾಗ ಅದು ವೈಯಕ್ತಿಕವಾಗಿರುವ ಸ್ಪರ್ಧೆಯಲ್ಲ. 2018ರಲ್ಲಿ ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದೆ. ನಾವು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದಾಗ ಎಕ್ಸ್, ವೈ, ಝಡ್ ಮುಖ್ಯಮಂತ್ರಿಗಳಾಗುತ್ತಾರೆ ಎಂದು ಹೇಳಿರಲಿಲ್ಲ. ಅದು ಚುನಾವಣೆಯ ನಂತರದ ನಿರ್ಧಾರ” ಎಂದು ಉತ್ತರಿಸಿದರು.

ಇದನ್ನೂ ಓದಿ: ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವವರಿಗೆ ಜೀವಾವಧಿ ಶಿಕ್ಷೆ..!: ಮಸೂದೆ ಅಂಗೀಕಾರಕ್ಕೆ ಮುಂದಾದ ರಾಜಸ್ಥಾನ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...