Homeಮುಖಪುಟರಾಜಸ್ಥಾನ: ಗೆಹ್ಲೋಟ್‌ ಜೊತೆಗಿನ ಭಿನ್ನಾಭಿಪ್ರಾಯ ಮರೆತು ಒಟ್ಟಿಗೆ ಚುನಾವಣೆ ಎದುರಿಸುತ್ತೇವೆ; ಸಚಿನ್‌ ಪೈಲಟ್‌

ರಾಜಸ್ಥಾನ: ಗೆಹ್ಲೋಟ್‌ ಜೊತೆಗಿನ ಭಿನ್ನಾಭಿಪ್ರಾಯ ಮರೆತು ಒಟ್ಟಿಗೆ ಚುನಾವಣೆ ಎದುರಿಸುತ್ತೇವೆ; ಸಚಿನ್‌ ಪೈಲಟ್‌

- Advertisement -
- Advertisement -

ರಾಜಸ್ತಾನ ಕಾಂಗ್ರೆಸ್ ನಾಯಕರಲ್ಲಿನ ಕಿತ್ತಾಟಕ್ಕೆ ಇದೀಗ ಬ್ರೇಕ್ ಬಿದ್ದಿದ್ದು, ಅಶೋಕ್‌ ಗೆಹ್ಲೋಟ್‌ ಅವರೊಂದಿಗಿನ ಭಿನ್ನಾಭಿಪ್ರಾಯವನ್ನು ಮರೆಯುವುದಾಗಿ ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್‌ ಶನಿವಾರ ಹೇಳಿದ್ದಾರೆ. ಸಾಮೂಹಿಕ ನಾಯಕತ್ವವೇ ವಿಧಾನಸಭೆ ಚುನಾವಣೆಗೆ ಮುಂದಿರುವ ಏಕೈಕ ಮಾರ್ಗ ಎಂದಿದ್ದಾರೆ.

ಕೆಲದ ದಿನಗಳ ಹಿಂದಿನಿಂದ ಅಶೋಕ್‌ ಗೆಹ್ಲೋಟ್‌ ಹಾಗೂ ಸಚಿನ್‌ ಪೈಲಟ್‌ ನಡುವಿನ ಕಿತ್ತಾಟ ಕಾಂಗ್ರೆಸ್ ನಾಯಕರನ್ನು ಚಿಂತೆಗೀಡು ಮಾಡಿತ್ತು. ಆದರೆ ಇದೀಗ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಲಹೆ ಮೇರೆಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರೊಂದಿಗಿನ ಭಿನ್ನಾಭಿಪ್ರಾಯವನ್ನು ಮರೆಯುವುದಾಗಿ ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್‌ ಶನಿವಾರ ಹೇಳಿದ್ದು, ಸಾಮೂಹಿಕ ನಾಯಕತ್ವವೇ ವಿಧಾನಸಭೆ ಚುನಾವಣೆಗೆ ಮುಂದಿರುವ ಏಕೈಕ ಮಾರ್ಗ ಎಂದಿದ್ದಾರೆ. ಪಕ್ಷದ ನಿರ್ಣಾಯಕ ರಾಜಸ್ಥಾನ ಚುನಾವಣಾ ಕಾರ್ಯತಂತ್ರದ ಸಭೆಯ ಕೆಲವೇ ದಿನಗಳಲ್ಲಿ ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ.

”ಎಲ್ಲವನ್ನು  ಕ್ಷಮಿಸಿ, ಹಳೆಯದನ್ನು ಮರೆತು ಮುಂದೆ ಸಾಗಿ ಎಂದು ಖರ್ಗೆ ಸಲಹೆ ನೀಡಿದ್ದಾರೆ ಎಂದು ಹೇಳಿದ್ದಾರೆ. ”ಅಶೋಕ್ ಗೆಹ್ಲೋಟ್ ಜಿ ನನಗಿಂತ ಹಿರಿಯರು, ಅವರಿಗೆ ಹೆಚ್ಚು ಅನುಭವವಿದೆ, ಅವರ ಹೆಗಲ ಮೇಲೆ ಹೆಚ್ಚಿನ ಜವಾಬ್ದಾರಿಗಳಿವೆ. ನಾನು ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷನಾಗಿದ್ದಾಗ, ನಾನು ಎಲ್ಲರನ್ನು ಜತೆಗೆ ಕರೆದುಕೊಂಡು ಹೋಗಲು ಪ್ರಯತ್ನಿಸಿದೆ. ಇಂದು ಅವರು ಮುಖ್ಯಮಂತ್ರಿ (ಗೆಹ್ಲೋಟ್). ಆದ್ದರಿಂದ ಅವರು ಎಲ್ಲರನ್ನು ಜತೆಗೆ ಕರೆದುಕೊಂಡು ಹೋಗಲು ಪ್ರಯತ್ನಿಸುತ್ತಿದ್ದಾರೆ ಎಂದು ಭಾವಿಸುತ್ತೇನೆ” ಎಂದು ಸಚಿನ್‌ ಪೈಲಟ್‌ ಹೇಳಿದ್ದಾರೆ.

”ಸ್ವಲ್ಪ ಆಚೆ ಈಚೆ ಆದರೆ ಅದು ದೊಡ್ಡ ಸಮಸ್ಯೆಯಲ್ಲ. ಏಕೆಂದರೆ ಯಾವುದೇ ವ್ಯಕ್ತಿಗಿಂತ ಪಕ್ಷ ಮತ್ತು ಸಾರ್ವಜನಿಕರೇ ಮುಖ್ಯ. ನನಗೂ ಇದು ಅರ್ಥವಾಗಿದೆ ಮತ್ತು ಅವರಿಗೂ ಅರ್ಥವಾಗಿದೆ” ಎಂದು ಹೇಳಿದ್ದಾರೆ.

ಹಿಂದಿನ ವಸುಂಧರಾ ರಾಜೇ ಸರ್ಕಾರದ ಭ್ರಷ್ಟಾಚಾರದಂತಹ ವಿಷಯಗಳ ಬಗ್ಗೆ ತನಿಖೆ ನಡೆಸದೇ ಇರುವುದಕ್ಕಾಗಿ ಗೆಹ್ಲೋಟ್ ಸರ್ಕಾರವನ್ನು ಟೀಕಿಸಿದ ಬಗ್ಗೆ ಕೇಳಲಾದ ಪ್ರಶ್ನೆಗೆ ಪೈಲಟ್, ”ಆ ಸಮಯ ಕಳೆದು ಹೋಗಿದೆ, ಅದು ಮತ್ತೆ ಬರುವುದಿಲ್ಲ, ನಾವು ಭವಿಷ್ಯದ ಬಗ್ಗೆ ಚಿಂತಿಸಬೇಕು ಎಂದು ಖರ್ಗೆ ಹೇಳಿದ್ದಾರೆ” ಎಂದು ಉತ್ತರಿಸಿದ್ದಾರೆ.

ಸಭೆ ಬಳಿಕ ಕಾಂಗ್ರೆಸ್, ಒಗ್ಗಟ್ಟಿನಿಂದ ಇದ್ದರೆ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಬಹುದು ಎಂದು ಪ್ರತಿಪಾದಿಸಿತು. ಅದೇ ವೇಳೆ ಶಿಸ್ತು ಕಾಪಾಡದ ಮತ್ತು ಪಕ್ಷದ ವೇದಿಕೆಯ ಹೊರಗೆ ಮಾತನಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಎಂದಿಗೂ ಘೋಷಿಸುವುದಿಲ್ಲ ಎಂಬ ಕಾಂಗ್ರೆಸ್ ಸಂಘಟನೆಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರ ಹೇಳಿಕೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ, ಪೈಲಟ್ ”ವೇಣುಗೋಪಾಲ್ ಜಿ ಅವರು ಹೇಳಿದ್ದು ತಪ್ಪಲ್ಲ ಎಂದು ನಾನು ಭಾವಿಸುತ್ತೇನೆ. ನಾವು ಪ್ರತಿ ಬಾರಿ ಚುನಾವಣೆಗೆ ಸ್ಪರ್ಧಿಸಿದಾಗ ಅದು ವೈಯಕ್ತಿಕವಾಗಿರುವ ಸ್ಪರ್ಧೆಯಲ್ಲ. 2018ರಲ್ಲಿ ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದೆ. ನಾವು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದಾಗ ಎಕ್ಸ್, ವೈ, ಝಡ್ ಮುಖ್ಯಮಂತ್ರಿಗಳಾಗುತ್ತಾರೆ ಎಂದು ಹೇಳಿರಲಿಲ್ಲ. ಅದು ಚುನಾವಣೆಯ ನಂತರದ ನಿರ್ಧಾರ” ಎಂದು ಉತ್ತರಿಸಿದರು.

ಇದನ್ನೂ ಓದಿ: ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವವರಿಗೆ ಜೀವಾವಧಿ ಶಿಕ್ಷೆ..!: ಮಸೂದೆ ಅಂಗೀಕಾರಕ್ಕೆ ಮುಂದಾದ ರಾಜಸ್ಥಾನ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...