Homeಮುಖಪುಟರಾಜಸ್ಥಾನ: ಗೆಹ್ಲೋಟ್‌ ಜೊತೆಗಿನ ಭಿನ್ನಾಭಿಪ್ರಾಯ ಮರೆತು ಒಟ್ಟಿಗೆ ಚುನಾವಣೆ ಎದುರಿಸುತ್ತೇವೆ; ಸಚಿನ್‌ ಪೈಲಟ್‌

ರಾಜಸ್ಥಾನ: ಗೆಹ್ಲೋಟ್‌ ಜೊತೆಗಿನ ಭಿನ್ನಾಭಿಪ್ರಾಯ ಮರೆತು ಒಟ್ಟಿಗೆ ಚುನಾವಣೆ ಎದುರಿಸುತ್ತೇವೆ; ಸಚಿನ್‌ ಪೈಲಟ್‌

- Advertisement -
- Advertisement -

ರಾಜಸ್ತಾನ ಕಾಂಗ್ರೆಸ್ ನಾಯಕರಲ್ಲಿನ ಕಿತ್ತಾಟಕ್ಕೆ ಇದೀಗ ಬ್ರೇಕ್ ಬಿದ್ದಿದ್ದು, ಅಶೋಕ್‌ ಗೆಹ್ಲೋಟ್‌ ಅವರೊಂದಿಗಿನ ಭಿನ್ನಾಭಿಪ್ರಾಯವನ್ನು ಮರೆಯುವುದಾಗಿ ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್‌ ಶನಿವಾರ ಹೇಳಿದ್ದಾರೆ. ಸಾಮೂಹಿಕ ನಾಯಕತ್ವವೇ ವಿಧಾನಸಭೆ ಚುನಾವಣೆಗೆ ಮುಂದಿರುವ ಏಕೈಕ ಮಾರ್ಗ ಎಂದಿದ್ದಾರೆ.

ಕೆಲದ ದಿನಗಳ ಹಿಂದಿನಿಂದ ಅಶೋಕ್‌ ಗೆಹ್ಲೋಟ್‌ ಹಾಗೂ ಸಚಿನ್‌ ಪೈಲಟ್‌ ನಡುವಿನ ಕಿತ್ತಾಟ ಕಾಂಗ್ರೆಸ್ ನಾಯಕರನ್ನು ಚಿಂತೆಗೀಡು ಮಾಡಿತ್ತು. ಆದರೆ ಇದೀಗ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಲಹೆ ಮೇರೆಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರೊಂದಿಗಿನ ಭಿನ್ನಾಭಿಪ್ರಾಯವನ್ನು ಮರೆಯುವುದಾಗಿ ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್‌ ಶನಿವಾರ ಹೇಳಿದ್ದು, ಸಾಮೂಹಿಕ ನಾಯಕತ್ವವೇ ವಿಧಾನಸಭೆ ಚುನಾವಣೆಗೆ ಮುಂದಿರುವ ಏಕೈಕ ಮಾರ್ಗ ಎಂದಿದ್ದಾರೆ. ಪಕ್ಷದ ನಿರ್ಣಾಯಕ ರಾಜಸ್ಥಾನ ಚುನಾವಣಾ ಕಾರ್ಯತಂತ್ರದ ಸಭೆಯ ಕೆಲವೇ ದಿನಗಳಲ್ಲಿ ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ.

”ಎಲ್ಲವನ್ನು  ಕ್ಷಮಿಸಿ, ಹಳೆಯದನ್ನು ಮರೆತು ಮುಂದೆ ಸಾಗಿ ಎಂದು ಖರ್ಗೆ ಸಲಹೆ ನೀಡಿದ್ದಾರೆ ಎಂದು ಹೇಳಿದ್ದಾರೆ. ”ಅಶೋಕ್ ಗೆಹ್ಲೋಟ್ ಜಿ ನನಗಿಂತ ಹಿರಿಯರು, ಅವರಿಗೆ ಹೆಚ್ಚು ಅನುಭವವಿದೆ, ಅವರ ಹೆಗಲ ಮೇಲೆ ಹೆಚ್ಚಿನ ಜವಾಬ್ದಾರಿಗಳಿವೆ. ನಾನು ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷನಾಗಿದ್ದಾಗ, ನಾನು ಎಲ್ಲರನ್ನು ಜತೆಗೆ ಕರೆದುಕೊಂಡು ಹೋಗಲು ಪ್ರಯತ್ನಿಸಿದೆ. ಇಂದು ಅವರು ಮುಖ್ಯಮಂತ್ರಿ (ಗೆಹ್ಲೋಟ್). ಆದ್ದರಿಂದ ಅವರು ಎಲ್ಲರನ್ನು ಜತೆಗೆ ಕರೆದುಕೊಂಡು ಹೋಗಲು ಪ್ರಯತ್ನಿಸುತ್ತಿದ್ದಾರೆ ಎಂದು ಭಾವಿಸುತ್ತೇನೆ” ಎಂದು ಸಚಿನ್‌ ಪೈಲಟ್‌ ಹೇಳಿದ್ದಾರೆ.

”ಸ್ವಲ್ಪ ಆಚೆ ಈಚೆ ಆದರೆ ಅದು ದೊಡ್ಡ ಸಮಸ್ಯೆಯಲ್ಲ. ಏಕೆಂದರೆ ಯಾವುದೇ ವ್ಯಕ್ತಿಗಿಂತ ಪಕ್ಷ ಮತ್ತು ಸಾರ್ವಜನಿಕರೇ ಮುಖ್ಯ. ನನಗೂ ಇದು ಅರ್ಥವಾಗಿದೆ ಮತ್ತು ಅವರಿಗೂ ಅರ್ಥವಾಗಿದೆ” ಎಂದು ಹೇಳಿದ್ದಾರೆ.

ಹಿಂದಿನ ವಸುಂಧರಾ ರಾಜೇ ಸರ್ಕಾರದ ಭ್ರಷ್ಟಾಚಾರದಂತಹ ವಿಷಯಗಳ ಬಗ್ಗೆ ತನಿಖೆ ನಡೆಸದೇ ಇರುವುದಕ್ಕಾಗಿ ಗೆಹ್ಲೋಟ್ ಸರ್ಕಾರವನ್ನು ಟೀಕಿಸಿದ ಬಗ್ಗೆ ಕೇಳಲಾದ ಪ್ರಶ್ನೆಗೆ ಪೈಲಟ್, ”ಆ ಸಮಯ ಕಳೆದು ಹೋಗಿದೆ, ಅದು ಮತ್ತೆ ಬರುವುದಿಲ್ಲ, ನಾವು ಭವಿಷ್ಯದ ಬಗ್ಗೆ ಚಿಂತಿಸಬೇಕು ಎಂದು ಖರ್ಗೆ ಹೇಳಿದ್ದಾರೆ” ಎಂದು ಉತ್ತರಿಸಿದ್ದಾರೆ.

ಸಭೆ ಬಳಿಕ ಕಾಂಗ್ರೆಸ್, ಒಗ್ಗಟ್ಟಿನಿಂದ ಇದ್ದರೆ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಬಹುದು ಎಂದು ಪ್ರತಿಪಾದಿಸಿತು. ಅದೇ ವೇಳೆ ಶಿಸ್ತು ಕಾಪಾಡದ ಮತ್ತು ಪಕ್ಷದ ವೇದಿಕೆಯ ಹೊರಗೆ ಮಾತನಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಎಂದಿಗೂ ಘೋಷಿಸುವುದಿಲ್ಲ ಎಂಬ ಕಾಂಗ್ರೆಸ್ ಸಂಘಟನೆಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರ ಹೇಳಿಕೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ, ಪೈಲಟ್ ”ವೇಣುಗೋಪಾಲ್ ಜಿ ಅವರು ಹೇಳಿದ್ದು ತಪ್ಪಲ್ಲ ಎಂದು ನಾನು ಭಾವಿಸುತ್ತೇನೆ. ನಾವು ಪ್ರತಿ ಬಾರಿ ಚುನಾವಣೆಗೆ ಸ್ಪರ್ಧಿಸಿದಾಗ ಅದು ವೈಯಕ್ತಿಕವಾಗಿರುವ ಸ್ಪರ್ಧೆಯಲ್ಲ. 2018ರಲ್ಲಿ ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದೆ. ನಾವು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದಾಗ ಎಕ್ಸ್, ವೈ, ಝಡ್ ಮುಖ್ಯಮಂತ್ರಿಗಳಾಗುತ್ತಾರೆ ಎಂದು ಹೇಳಿರಲಿಲ್ಲ. ಅದು ಚುನಾವಣೆಯ ನಂತರದ ನಿರ್ಧಾರ” ಎಂದು ಉತ್ತರಿಸಿದರು.

ಇದನ್ನೂ ಓದಿ: ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವವರಿಗೆ ಜೀವಾವಧಿ ಶಿಕ್ಷೆ..!: ಮಸೂದೆ ಅಂಗೀಕಾರಕ್ಕೆ ಮುಂದಾದ ರಾಜಸ್ಥಾನ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...