Homeಮುಖಪುಟರಾಜಸ್ಥಾನ: ನಾಲ್ವರು ವಿದ್ಯಾರ್ಥಿನಿಯರ ಮೇಲೆ ಶಾಲಾ ಶಿಕ್ಷಕರಿಂದ ಸಾಮೂಹಿಕ ಅತ್ಯಾಚಾರ ಆರೋಪ

ರಾಜಸ್ಥಾನ: ನಾಲ್ವರು ವಿದ್ಯಾರ್ಥಿನಿಯರ ಮೇಲೆ ಶಾಲಾ ಶಿಕ್ಷಕರಿಂದ ಸಾಮೂಹಿಕ ಅತ್ಯಾಚಾರ ಆರೋಪ

- Advertisement -
- Advertisement -

ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಾಲ್ವರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಶಾಲಾ ಸಿಬ್ಬಂದಿ ಸಾಮೂಹಿಕ ಅತ್ಯಾಚಾರ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಮತ್ತು ಕೃತ್ಯಕ್ಕೆ ಸಹಾಯ ಮಾಡಿದ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲರು ಸೇರಿದಂತೆ 15 ಸಿಬ್ಬಂದಿಗಳ ವಿರುದ್ದ ರಾಜಸ್ಥಾನ ಪೊಲೀಸರು ಮೂರು ಪ್ರಕರಣಗಳನ್ನು ದಾಖಲಿಸಿದ್ದಾರೆ. 

ದೌರ್ಜನ್ಯಕ್ಕೆ ತುತ್ತಾದ ವಿದ್ಯರ್ಥಿಯರು  3, 4, 6 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

“ತನ್ನ ಮೇಲೆ ಶಾಲೆಯ ಪ್ರಾಂಶುಪಾಲ ಮತ್ತು ಇತರ ಶಿಕ್ಷಕರು ಒಂದು ವರ್ಷದಿಂದ ಸಾಮೂಹಿಕ ಅತ್ಯಾಚಾರ ಎಸಗುತ್ತಿದ್ದಾರೆ. ಇಬ್ಬರು ಮಹಿಳಾ ಶಿಕ್ಷಕರು ಆ ಕೃತ್ಯದ ವಿಡಿಯೋಗಳನ್ನು ಕೂಡ ಮಾಡಿದ್ದಾರೆ” ಎಂದು 10ನೇ ತರಗತಿಯ ಸಂತ್ರಸ್ತ ವಿದ್ಯಾರ್ಥಿನಿ ದೂರಿದ್ದಾರೆ.

ಈ ಕೃತ್ಯದ ಬಗ್ಗೆ ಸಂತ್ರಸ್ತೆಯೊಬ್ಬರು ಮಹಿಳಾ ಶಿಕ್ಷಕರಿಗೆ ದೂರು ನೀಡಿದಾಗ, ಅವರೂ ಕೂಡ ಬಾಲಕಿಗೆ ಶಾಲಾ ಶುಲ್ಕ ಮತ್ತು ಪುಸ್ತಕಗಳನ್ನು ಕೊಡಿಸುವುದಾಗಿ ಆಮಿಷವೊಡ್ಡಿದರು ಮತ್ತು ಈ ಬಗ್ಗೆ ಯಾರಿಗೂ ದೂರು ನೀಡದಂತೆ ಕೇಳಿಕೊಂಡರು ಎಂದು ಸಂತ್ರಸ್ತ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

“ನಾಲ್ವರು ಸಂತ್ರಸ್ತ ಅಪ್ರಾಪ್ತ ಬಾಲಕಿಯರ ಕುಟುಂಬದ ಸದಸ್ಯರು ಮಂಗಳವಾರ ರಾತ್ರಿ ಮೂರು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಎಫ್‌ಐಆರ್‌ನಲ್ಲಿ ಶಾಲೆಯ ಒಟ್ಟು ಸಿಬ್ಬಂದಿ 15 ಜನರ ವಿರುದ್ದ ಸಾಮೂಹಿಕ ಅತ್ಯಾಚಾರ ಮತ್ತು ಕಿರುಕುಳದ ಆರೋಪ ಹೊರಿಸಿದ್ದಾರೆ” ಎಂದು ಭಿವಾಡಿ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಮೂರ್ತಿ ಜೋಶಿ ತಿಳಿಸಿದ್ದಾರೆ.

ಪ್ರತಿಕಾರದ ಆರೋಪ?

“ಕಳೆದ ವರ್ಷ ಡಿಸೆಂಬರ್ 17 ರಂದು ಅದೇ ಶಾಲೆಯ ಶಿಕ್ಷಕರೊಬ್ಬರು ದಲಿತ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ನಂತರ ಶಿಕ್ಷಕನನ್ನು ಬಂಧಿಸಿ, ಪ್ರಕರಣದ ಆರೋಪಪಟ್ಟಿಯನ್ನು ಪೊಲೀಸರು ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಆರೋಪಿ ಶಿಕ್ಷಕನಿಗೆ ಇತ್ತೀಚೆಗೆ ಜಾಮೀನು ಸಿಕ್ಕಿದೆ. ಈಗ ಹೊಸದಾಗಿ ದಾಖಲಾಗಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಸಿಬ್ಬಂದಿಗಳೆಲ್ಲರೂ ಆ ಆರೋಪಿ ಶಿಕ್ಷಕನ ವಿರುದ್ಧದ ಸಾಕ್ಷಿಯಾಗಿ ಹೇಳಿಕೆ ನೀಡಿದ್ದವರೇ ಆಗಿದ್ದಾರೆ. ಹೀಗಾಗಿ, ಇತ್ತೀಚೆಗೆ ದಾಖಲಾದ ಎಫ್‌ಐಆರ್‌ಗಳ ಹಿಂದೆ ಆತನ ಕೈವಾಡವಿದೆಯೇ ಎಂದು ಅನುಮಾನಿಸಲಾಗಿದೆ. ಅದಕ್ಕಾಗಿ, ನಾವು ಸಂಭವನೀಯ ಸಾಕ್ಷಿ, ಕಿರುಕುಳದ ಆಯಾಮವನ್ನು ಸಹ ತನಿಖೆ ಮಾಡುತ್ತಿದ್ದೇವೆ” ಎಂದು ಜೋಶಿ ಹೇಳಿದ್ದಾರೆ.

“ಇತ್ತೀಚಿನ ಪ್ರಕರಣವನ್ನು ಪ್ರತ್ಯೇಕವಾಗಿ ನೋಡಲಾಗುವುದಿಲ್ಲ. ಏಕೆಂದರೆ ಎಲ್ಲಾ ಆರೋಪಿಗಳು ತಮ್ಮ ಮಾಜಿ ಸಹೋದ್ಯೋಗಿಯ ವಿರುದ್ಧ ಸಾಕ್ಷ್ಯ ನುಡಿದಿದ್ದಾರೆ. ಆ ಆರೋಪಿ ಶಿಕ್ಷಕ ನಿನ್ನೆ ಎಫ್‌ಐಆರ್ ದಾಖಲಿಸಲು ಬಾಲಕಿಯರ ಪೋಷಕರನ್ನು ಪೊಲೀಸ್ ಠಾಣೆಗೆ ಕರೆತಂದಿದ್ದಾನೆ. ಆತ ಪೊಲೀಸ್ ಠಾಣೆಗೆ ಪ್ರವೇಶಿಸಲಿಲ್ಲ. ಆದರೆ ಹೊರಗೆ ಕಾಯುತ್ತಿದ್ದ. ಇದು ಅನುಮಾನವನ್ನು ಹುಟ್ಟುಹಾಕಿದ್ದು, ನೈಜವಾಗಿ ಅಪರಾಧ ನಡೆದಿದೆಯೇ ಎಂಬುದನ್ನೂ ಒಳಗೊಂಡಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದೇವೆ ಎಂದು ಎಸ್‌ಪಿ ಜೋಶಿ ತಿಳಿಸಿದ್ದಾರೆ.

ಈವರೆಗೆ ಯಾರನ್ನೂ ಬಂಧಿಸಿಲ್ಲ. ಐಪಿಸಿ ಸೆಕ್ಷನ್‌ಗಳು ಹಾಗೂ ಪೋಕ್ಸೊ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನಿಜವಾಗಿಯೂ ವಿದ್ಯಾರ್ಥಿನಿಗಳ ಮೇಲೆ ಲೈಂಗಿಕ ಕಿರುಕುಳ ನಡೆದಿರುವ ಸಂಭವವೂ ಇದೆ. ಹಿಂದಿನ ಆರೋಪಿ ಶಿಕ್ಷಕ ಮತ್ತು ಹೀಗಿನ ಆರೋಪಿ ಶಿಕ್ಷಕರೆಲ್ಲಾ ಕೂಡಿಯೇ ವಿದ್ಯಾರ್ಥಿನಿಗಳ ಮೇಲೆ ಅತ್ಯಾಚಾರ ಎಸಗಿರುವ ಸಂಭವವೂ ಇದೆ. ತಾನು ಮಾತ್ರ ಸಿಕ್ಕಿಬಿದ್ದಿದ್ದು, ಉಳಿದವರು ತನ್ನ ವಿರುದ್ಧ ಸಾಕ್ಷಿ ಹೇಳಿದ್ದಾರೆ ಎಂದು ಆತ ಎಲ್ಲರ ಮೇಲೆ ದೂರು ನೀಡುವಂತೆ ಒತ್ತಾಯಿಸಿರುವ ಅನುಮಾನಗಳಿವೆ. ಹಾಗಾಗಿ ಈ ಪ್ರಕರಣವನ್ನು ಪೊಲೀಸರು ಕೂಲಂಕುಷವಾಗಿ ಪರಿಗಣಿಸಿ ಆರೋಪಿಗಿಗಳಿಗೆ ಶಿಕ್ಷೆ ಆಗುವಂತೆ ಮತ್ತು ಈ ರೀತಿಯ ಪ್ರಕರಣಗಳು ಮತ್ತೆ ನಡೆಯದಂತೆ ನೋಡಿಕೊಳ್ಳಬೇಕಿದೆ.


ಇದನ್ನೂ ಓದಿ: ವಾರಣಾಸಿಯಲ್ಲಿ ಹೇಯ ಕೃತ್ಯ: 3 ನೇ ತರಗತಿ ಬಾಲಕಿ ಮೇಲೆ ಶಾಲಾ ಸಿಬ್ಬಂದಿಯಿಂದ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...