Homeಮುಖಪುಟರಾಜಸ್ಥಾನ: ನಾಲ್ವರು ವಿದ್ಯಾರ್ಥಿನಿಯರ ಮೇಲೆ ಶಾಲಾ ಶಿಕ್ಷಕರಿಂದ ಸಾಮೂಹಿಕ ಅತ್ಯಾಚಾರ ಆರೋಪ

ರಾಜಸ್ಥಾನ: ನಾಲ್ವರು ವಿದ್ಯಾರ್ಥಿನಿಯರ ಮೇಲೆ ಶಾಲಾ ಶಿಕ್ಷಕರಿಂದ ಸಾಮೂಹಿಕ ಅತ್ಯಾಚಾರ ಆರೋಪ

- Advertisement -
- Advertisement -

ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಾಲ್ವರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಶಾಲಾ ಸಿಬ್ಬಂದಿ ಸಾಮೂಹಿಕ ಅತ್ಯಾಚಾರ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಮತ್ತು ಕೃತ್ಯಕ್ಕೆ ಸಹಾಯ ಮಾಡಿದ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲರು ಸೇರಿದಂತೆ 15 ಸಿಬ್ಬಂದಿಗಳ ವಿರುದ್ದ ರಾಜಸ್ಥಾನ ಪೊಲೀಸರು ಮೂರು ಪ್ರಕರಣಗಳನ್ನು ದಾಖಲಿಸಿದ್ದಾರೆ. 

ದೌರ್ಜನ್ಯಕ್ಕೆ ತುತ್ತಾದ ವಿದ್ಯರ್ಥಿಯರು  3, 4, 6 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

“ತನ್ನ ಮೇಲೆ ಶಾಲೆಯ ಪ್ರಾಂಶುಪಾಲ ಮತ್ತು ಇತರ ಶಿಕ್ಷಕರು ಒಂದು ವರ್ಷದಿಂದ ಸಾಮೂಹಿಕ ಅತ್ಯಾಚಾರ ಎಸಗುತ್ತಿದ್ದಾರೆ. ಇಬ್ಬರು ಮಹಿಳಾ ಶಿಕ್ಷಕರು ಆ ಕೃತ್ಯದ ವಿಡಿಯೋಗಳನ್ನು ಕೂಡ ಮಾಡಿದ್ದಾರೆ” ಎಂದು 10ನೇ ತರಗತಿಯ ಸಂತ್ರಸ್ತ ವಿದ್ಯಾರ್ಥಿನಿ ದೂರಿದ್ದಾರೆ.

ಈ ಕೃತ್ಯದ ಬಗ್ಗೆ ಸಂತ್ರಸ್ತೆಯೊಬ್ಬರು ಮಹಿಳಾ ಶಿಕ್ಷಕರಿಗೆ ದೂರು ನೀಡಿದಾಗ, ಅವರೂ ಕೂಡ ಬಾಲಕಿಗೆ ಶಾಲಾ ಶುಲ್ಕ ಮತ್ತು ಪುಸ್ತಕಗಳನ್ನು ಕೊಡಿಸುವುದಾಗಿ ಆಮಿಷವೊಡ್ಡಿದರು ಮತ್ತು ಈ ಬಗ್ಗೆ ಯಾರಿಗೂ ದೂರು ನೀಡದಂತೆ ಕೇಳಿಕೊಂಡರು ಎಂದು ಸಂತ್ರಸ್ತ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

“ನಾಲ್ವರು ಸಂತ್ರಸ್ತ ಅಪ್ರಾಪ್ತ ಬಾಲಕಿಯರ ಕುಟುಂಬದ ಸದಸ್ಯರು ಮಂಗಳವಾರ ರಾತ್ರಿ ಮೂರು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಎಫ್‌ಐಆರ್‌ನಲ್ಲಿ ಶಾಲೆಯ ಒಟ್ಟು ಸಿಬ್ಬಂದಿ 15 ಜನರ ವಿರುದ್ದ ಸಾಮೂಹಿಕ ಅತ್ಯಾಚಾರ ಮತ್ತು ಕಿರುಕುಳದ ಆರೋಪ ಹೊರಿಸಿದ್ದಾರೆ” ಎಂದು ಭಿವಾಡಿ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಮೂರ್ತಿ ಜೋಶಿ ತಿಳಿಸಿದ್ದಾರೆ.

ಪ್ರತಿಕಾರದ ಆರೋಪ?

“ಕಳೆದ ವರ್ಷ ಡಿಸೆಂಬರ್ 17 ರಂದು ಅದೇ ಶಾಲೆಯ ಶಿಕ್ಷಕರೊಬ್ಬರು ದಲಿತ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ನಂತರ ಶಿಕ್ಷಕನನ್ನು ಬಂಧಿಸಿ, ಪ್ರಕರಣದ ಆರೋಪಪಟ್ಟಿಯನ್ನು ಪೊಲೀಸರು ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಆರೋಪಿ ಶಿಕ್ಷಕನಿಗೆ ಇತ್ತೀಚೆಗೆ ಜಾಮೀನು ಸಿಕ್ಕಿದೆ. ಈಗ ಹೊಸದಾಗಿ ದಾಖಲಾಗಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಸಿಬ್ಬಂದಿಗಳೆಲ್ಲರೂ ಆ ಆರೋಪಿ ಶಿಕ್ಷಕನ ವಿರುದ್ಧದ ಸಾಕ್ಷಿಯಾಗಿ ಹೇಳಿಕೆ ನೀಡಿದ್ದವರೇ ಆಗಿದ್ದಾರೆ. ಹೀಗಾಗಿ, ಇತ್ತೀಚೆಗೆ ದಾಖಲಾದ ಎಫ್‌ಐಆರ್‌ಗಳ ಹಿಂದೆ ಆತನ ಕೈವಾಡವಿದೆಯೇ ಎಂದು ಅನುಮಾನಿಸಲಾಗಿದೆ. ಅದಕ್ಕಾಗಿ, ನಾವು ಸಂಭವನೀಯ ಸಾಕ್ಷಿ, ಕಿರುಕುಳದ ಆಯಾಮವನ್ನು ಸಹ ತನಿಖೆ ಮಾಡುತ್ತಿದ್ದೇವೆ” ಎಂದು ಜೋಶಿ ಹೇಳಿದ್ದಾರೆ.

“ಇತ್ತೀಚಿನ ಪ್ರಕರಣವನ್ನು ಪ್ರತ್ಯೇಕವಾಗಿ ನೋಡಲಾಗುವುದಿಲ್ಲ. ಏಕೆಂದರೆ ಎಲ್ಲಾ ಆರೋಪಿಗಳು ತಮ್ಮ ಮಾಜಿ ಸಹೋದ್ಯೋಗಿಯ ವಿರುದ್ಧ ಸಾಕ್ಷ್ಯ ನುಡಿದಿದ್ದಾರೆ. ಆ ಆರೋಪಿ ಶಿಕ್ಷಕ ನಿನ್ನೆ ಎಫ್‌ಐಆರ್ ದಾಖಲಿಸಲು ಬಾಲಕಿಯರ ಪೋಷಕರನ್ನು ಪೊಲೀಸ್ ಠಾಣೆಗೆ ಕರೆತಂದಿದ್ದಾನೆ. ಆತ ಪೊಲೀಸ್ ಠಾಣೆಗೆ ಪ್ರವೇಶಿಸಲಿಲ್ಲ. ಆದರೆ ಹೊರಗೆ ಕಾಯುತ್ತಿದ್ದ. ಇದು ಅನುಮಾನವನ್ನು ಹುಟ್ಟುಹಾಕಿದ್ದು, ನೈಜವಾಗಿ ಅಪರಾಧ ನಡೆದಿದೆಯೇ ಎಂಬುದನ್ನೂ ಒಳಗೊಂಡಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದೇವೆ ಎಂದು ಎಸ್‌ಪಿ ಜೋಶಿ ತಿಳಿಸಿದ್ದಾರೆ.

ಈವರೆಗೆ ಯಾರನ್ನೂ ಬಂಧಿಸಿಲ್ಲ. ಐಪಿಸಿ ಸೆಕ್ಷನ್‌ಗಳು ಹಾಗೂ ಪೋಕ್ಸೊ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನಿಜವಾಗಿಯೂ ವಿದ್ಯಾರ್ಥಿನಿಗಳ ಮೇಲೆ ಲೈಂಗಿಕ ಕಿರುಕುಳ ನಡೆದಿರುವ ಸಂಭವವೂ ಇದೆ. ಹಿಂದಿನ ಆರೋಪಿ ಶಿಕ್ಷಕ ಮತ್ತು ಹೀಗಿನ ಆರೋಪಿ ಶಿಕ್ಷಕರೆಲ್ಲಾ ಕೂಡಿಯೇ ವಿದ್ಯಾರ್ಥಿನಿಗಳ ಮೇಲೆ ಅತ್ಯಾಚಾರ ಎಸಗಿರುವ ಸಂಭವವೂ ಇದೆ. ತಾನು ಮಾತ್ರ ಸಿಕ್ಕಿಬಿದ್ದಿದ್ದು, ಉಳಿದವರು ತನ್ನ ವಿರುದ್ಧ ಸಾಕ್ಷಿ ಹೇಳಿದ್ದಾರೆ ಎಂದು ಆತ ಎಲ್ಲರ ಮೇಲೆ ದೂರು ನೀಡುವಂತೆ ಒತ್ತಾಯಿಸಿರುವ ಅನುಮಾನಗಳಿವೆ. ಹಾಗಾಗಿ ಈ ಪ್ರಕರಣವನ್ನು ಪೊಲೀಸರು ಕೂಲಂಕುಷವಾಗಿ ಪರಿಗಣಿಸಿ ಆರೋಪಿಗಿಗಳಿಗೆ ಶಿಕ್ಷೆ ಆಗುವಂತೆ ಮತ್ತು ಈ ರೀತಿಯ ಪ್ರಕರಣಗಳು ಮತ್ತೆ ನಡೆಯದಂತೆ ನೋಡಿಕೊಳ್ಳಬೇಕಿದೆ.


ಇದನ್ನೂ ಓದಿ: ವಾರಣಾಸಿಯಲ್ಲಿ ಹೇಯ ಕೃತ್ಯ: 3 ನೇ ತರಗತಿ ಬಾಲಕಿ ಮೇಲೆ ಶಾಲಾ ಸಿಬ್ಬಂದಿಯಿಂದ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...