Homeಮುಖಪುಟರಾಜಸ್ಥಾನ: ನಾಲ್ವರು ವಿದ್ಯಾರ್ಥಿನಿಯರ ಮೇಲೆ ಶಾಲಾ ಶಿಕ್ಷಕರಿಂದ ಸಾಮೂಹಿಕ ಅತ್ಯಾಚಾರ ಆರೋಪ

ರಾಜಸ್ಥಾನ: ನಾಲ್ವರು ವಿದ್ಯಾರ್ಥಿನಿಯರ ಮೇಲೆ ಶಾಲಾ ಶಿಕ್ಷಕರಿಂದ ಸಾಮೂಹಿಕ ಅತ್ಯಾಚಾರ ಆರೋಪ

- Advertisement -
- Advertisement -

ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಾಲ್ವರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಶಾಲಾ ಸಿಬ್ಬಂದಿ ಸಾಮೂಹಿಕ ಅತ್ಯಾಚಾರ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಮತ್ತು ಕೃತ್ಯಕ್ಕೆ ಸಹಾಯ ಮಾಡಿದ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲರು ಸೇರಿದಂತೆ 15 ಸಿಬ್ಬಂದಿಗಳ ವಿರುದ್ದ ರಾಜಸ್ಥಾನ ಪೊಲೀಸರು ಮೂರು ಪ್ರಕರಣಗಳನ್ನು ದಾಖಲಿಸಿದ್ದಾರೆ. 

ದೌರ್ಜನ್ಯಕ್ಕೆ ತುತ್ತಾದ ವಿದ್ಯರ್ಥಿಯರು  3, 4, 6 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

“ತನ್ನ ಮೇಲೆ ಶಾಲೆಯ ಪ್ರಾಂಶುಪಾಲ ಮತ್ತು ಇತರ ಶಿಕ್ಷಕರು ಒಂದು ವರ್ಷದಿಂದ ಸಾಮೂಹಿಕ ಅತ್ಯಾಚಾರ ಎಸಗುತ್ತಿದ್ದಾರೆ. ಇಬ್ಬರು ಮಹಿಳಾ ಶಿಕ್ಷಕರು ಆ ಕೃತ್ಯದ ವಿಡಿಯೋಗಳನ್ನು ಕೂಡ ಮಾಡಿದ್ದಾರೆ” ಎಂದು 10ನೇ ತರಗತಿಯ ಸಂತ್ರಸ್ತ ವಿದ್ಯಾರ್ಥಿನಿ ದೂರಿದ್ದಾರೆ.

ಈ ಕೃತ್ಯದ ಬಗ್ಗೆ ಸಂತ್ರಸ್ತೆಯೊಬ್ಬರು ಮಹಿಳಾ ಶಿಕ್ಷಕರಿಗೆ ದೂರು ನೀಡಿದಾಗ, ಅವರೂ ಕೂಡ ಬಾಲಕಿಗೆ ಶಾಲಾ ಶುಲ್ಕ ಮತ್ತು ಪುಸ್ತಕಗಳನ್ನು ಕೊಡಿಸುವುದಾಗಿ ಆಮಿಷವೊಡ್ಡಿದರು ಮತ್ತು ಈ ಬಗ್ಗೆ ಯಾರಿಗೂ ದೂರು ನೀಡದಂತೆ ಕೇಳಿಕೊಂಡರು ಎಂದು ಸಂತ್ರಸ್ತ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

“ನಾಲ್ವರು ಸಂತ್ರಸ್ತ ಅಪ್ರಾಪ್ತ ಬಾಲಕಿಯರ ಕುಟುಂಬದ ಸದಸ್ಯರು ಮಂಗಳವಾರ ರಾತ್ರಿ ಮೂರು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಎಫ್‌ಐಆರ್‌ನಲ್ಲಿ ಶಾಲೆಯ ಒಟ್ಟು ಸಿಬ್ಬಂದಿ 15 ಜನರ ವಿರುದ್ದ ಸಾಮೂಹಿಕ ಅತ್ಯಾಚಾರ ಮತ್ತು ಕಿರುಕುಳದ ಆರೋಪ ಹೊರಿಸಿದ್ದಾರೆ” ಎಂದು ಭಿವಾಡಿ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಮೂರ್ತಿ ಜೋಶಿ ತಿಳಿಸಿದ್ದಾರೆ.

ಪ್ರತಿಕಾರದ ಆರೋಪ?

“ಕಳೆದ ವರ್ಷ ಡಿಸೆಂಬರ್ 17 ರಂದು ಅದೇ ಶಾಲೆಯ ಶಿಕ್ಷಕರೊಬ್ಬರು ದಲಿತ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ನಂತರ ಶಿಕ್ಷಕನನ್ನು ಬಂಧಿಸಿ, ಪ್ರಕರಣದ ಆರೋಪಪಟ್ಟಿಯನ್ನು ಪೊಲೀಸರು ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಆರೋಪಿ ಶಿಕ್ಷಕನಿಗೆ ಇತ್ತೀಚೆಗೆ ಜಾಮೀನು ಸಿಕ್ಕಿದೆ. ಈಗ ಹೊಸದಾಗಿ ದಾಖಲಾಗಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಸಿಬ್ಬಂದಿಗಳೆಲ್ಲರೂ ಆ ಆರೋಪಿ ಶಿಕ್ಷಕನ ವಿರುದ್ಧದ ಸಾಕ್ಷಿಯಾಗಿ ಹೇಳಿಕೆ ನೀಡಿದ್ದವರೇ ಆಗಿದ್ದಾರೆ. ಹೀಗಾಗಿ, ಇತ್ತೀಚೆಗೆ ದಾಖಲಾದ ಎಫ್‌ಐಆರ್‌ಗಳ ಹಿಂದೆ ಆತನ ಕೈವಾಡವಿದೆಯೇ ಎಂದು ಅನುಮಾನಿಸಲಾಗಿದೆ. ಅದಕ್ಕಾಗಿ, ನಾವು ಸಂಭವನೀಯ ಸಾಕ್ಷಿ, ಕಿರುಕುಳದ ಆಯಾಮವನ್ನು ಸಹ ತನಿಖೆ ಮಾಡುತ್ತಿದ್ದೇವೆ” ಎಂದು ಜೋಶಿ ಹೇಳಿದ್ದಾರೆ.

“ಇತ್ತೀಚಿನ ಪ್ರಕರಣವನ್ನು ಪ್ರತ್ಯೇಕವಾಗಿ ನೋಡಲಾಗುವುದಿಲ್ಲ. ಏಕೆಂದರೆ ಎಲ್ಲಾ ಆರೋಪಿಗಳು ತಮ್ಮ ಮಾಜಿ ಸಹೋದ್ಯೋಗಿಯ ವಿರುದ್ಧ ಸಾಕ್ಷ್ಯ ನುಡಿದಿದ್ದಾರೆ. ಆ ಆರೋಪಿ ಶಿಕ್ಷಕ ನಿನ್ನೆ ಎಫ್‌ಐಆರ್ ದಾಖಲಿಸಲು ಬಾಲಕಿಯರ ಪೋಷಕರನ್ನು ಪೊಲೀಸ್ ಠಾಣೆಗೆ ಕರೆತಂದಿದ್ದಾನೆ. ಆತ ಪೊಲೀಸ್ ಠಾಣೆಗೆ ಪ್ರವೇಶಿಸಲಿಲ್ಲ. ಆದರೆ ಹೊರಗೆ ಕಾಯುತ್ತಿದ್ದ. ಇದು ಅನುಮಾನವನ್ನು ಹುಟ್ಟುಹಾಕಿದ್ದು, ನೈಜವಾಗಿ ಅಪರಾಧ ನಡೆದಿದೆಯೇ ಎಂಬುದನ್ನೂ ಒಳಗೊಂಡಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದೇವೆ ಎಂದು ಎಸ್‌ಪಿ ಜೋಶಿ ತಿಳಿಸಿದ್ದಾರೆ.

ಈವರೆಗೆ ಯಾರನ್ನೂ ಬಂಧಿಸಿಲ್ಲ. ಐಪಿಸಿ ಸೆಕ್ಷನ್‌ಗಳು ಹಾಗೂ ಪೋಕ್ಸೊ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನಿಜವಾಗಿಯೂ ವಿದ್ಯಾರ್ಥಿನಿಗಳ ಮೇಲೆ ಲೈಂಗಿಕ ಕಿರುಕುಳ ನಡೆದಿರುವ ಸಂಭವವೂ ಇದೆ. ಹಿಂದಿನ ಆರೋಪಿ ಶಿಕ್ಷಕ ಮತ್ತು ಹೀಗಿನ ಆರೋಪಿ ಶಿಕ್ಷಕರೆಲ್ಲಾ ಕೂಡಿಯೇ ವಿದ್ಯಾರ್ಥಿನಿಗಳ ಮೇಲೆ ಅತ್ಯಾಚಾರ ಎಸಗಿರುವ ಸಂಭವವೂ ಇದೆ. ತಾನು ಮಾತ್ರ ಸಿಕ್ಕಿಬಿದ್ದಿದ್ದು, ಉಳಿದವರು ತನ್ನ ವಿರುದ್ಧ ಸಾಕ್ಷಿ ಹೇಳಿದ್ದಾರೆ ಎಂದು ಆತ ಎಲ್ಲರ ಮೇಲೆ ದೂರು ನೀಡುವಂತೆ ಒತ್ತಾಯಿಸಿರುವ ಅನುಮಾನಗಳಿವೆ. ಹಾಗಾಗಿ ಈ ಪ್ರಕರಣವನ್ನು ಪೊಲೀಸರು ಕೂಲಂಕುಷವಾಗಿ ಪರಿಗಣಿಸಿ ಆರೋಪಿಗಿಗಳಿಗೆ ಶಿಕ್ಷೆ ಆಗುವಂತೆ ಮತ್ತು ಈ ರೀತಿಯ ಪ್ರಕರಣಗಳು ಮತ್ತೆ ನಡೆಯದಂತೆ ನೋಡಿಕೊಳ್ಳಬೇಕಿದೆ.


ಇದನ್ನೂ ಓದಿ: ವಾರಣಾಸಿಯಲ್ಲಿ ಹೇಯ ಕೃತ್ಯ: 3 ನೇ ತರಗತಿ ಬಾಲಕಿ ಮೇಲೆ ಶಾಲಾ ಸಿಬ್ಬಂದಿಯಿಂದ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...