Homeಮುಖಪುಟರಾಜ್ಯ ವಿಶ್ವವಿದ್ಯಾಲಯಗಳ ಯುಜಿ, ಪಿಜಿ ಪರೀಕ್ಷೆಗಳನ್ನು ರದ್ದುಗೊಳಿಸಿದ ರಾಜಸ್ಥಾನ ಸರ್ಕಾರ

ರಾಜ್ಯ ವಿಶ್ವವಿದ್ಯಾಲಯಗಳ ಯುಜಿ, ಪಿಜಿ ಪರೀಕ್ಷೆಗಳನ್ನು ರದ್ದುಗೊಳಿಸಿದ ರಾಜಸ್ಥಾನ ಸರ್ಕಾರ

- Advertisement -
- Advertisement -

ಈ ವರ್ಷ ರಾಜ್ಯ ವಿಶ್ವವಿದ್ಯಾಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ನಡೆಸದಿರಲು ರಾಜಸ್ಥಾನ ಸರ್ಕಾರ ನಿರ್ಧರಿಸಲಾಗಿದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ.

ತಮ್ಮ ನಿವಾಸದಲ್ಲಿ ಉನ್ನತ ಮಟ್ಟದ ಸಭೆಯ ನಂತರ ಮಾತನಾಡಿದ ಅವರು ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ, ಈ ವರ್ಷ ಎಲ್ಲಾ ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರವು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು, ಕಾಲೇಜುಗಳು ಮತ್ತು ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ ಎಂದಿದ್ದಾರೆ.

ಈ ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಯಿಲ್ಲದೆ ಬಡ್ತಿ ನೀಡಲಾಗುವುದು ಮತ್ತು ಮುಂದಿನ ಕೆಲವು ದಿನಗಳಲ್ಲಿ ನೀಡಲಾಗುವ ಶಿಕ್ಷಣ ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ ಅವರಿಗೆ ಅಂಕಗಳನ್ನು ನೀಡಲಾಗುವುದು ಎಂದು ಅವರು ಟ್ವೀಟ್‌ ಮಾಡಿದ್ದಾರೆ.

“ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಲ್ಲದೆ ಮುಂದಿನ ವರ್ಷಕ್ಕೆ ಬಡ್ತಿ ನೀಡಲಾಗುವುದು. ಬಡ್ತಿ ಪಡೆಯುವ ವಿದ್ಯಾರ್ಥಿಗಳ ಅಂಕಗಳನ್ನು ನಿರ್ಧರಿಸಲು, ಮುಂದಿನ ಕೆಲವೇ ದಿನಗಳಲ್ಲಿ ಮಾರ್ಗಸೂಚಿಗಳನ್ನು ಅಧ್ಯಯನ ಮಾಡಿದ ನಂತರ ಭಾರತ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ” ಎಂದು ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.

ಜೈಪುರದ ರಾಜಸ್ಥಾನ್ ವಿಶ್ವವಿದ್ಯಾಲಯವು ಯುಜಿ ಮತ್ತು ಪಿಜಿ ಪರೀಕ್ಷೆಗಳನ್ನು ಜುಲೈ 15 ರಿಂದ ಆಗಸ್ಟ್ 18, 2020 ರವರೆಗೆ ನಡೆಸಲಾಗುವುದು ಎಂದು ಘೋಷಿಸಿದ ಕೆಲವೇ ದಿನಗಳಲ್ಲಿ ಸರ್ಕಾರ ಈ ನಿರ್ಧಾರ ಘೋಷಿಸಿದೆ.

ರಾಜಸ್ಥಾನದಲ್ಲಿ ಭಾನುವಾರ ಆರು ಕೋವಿಡ್-19 ಸಾವುಗಳು ಮತ್ತು 224 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಒಟ್ಟು 19,756 ಪ್ರಕರಣಗಳು ದಾಖಲಾಗಿವೆ.

ರಾಜಸ್ಥಾನ ಆರೋಗ್ಯ ಸಚಿವ ಡಾ.ರಘು ಶರ್ಮಾ ಅವರು ತಮ್ಮ ಕೋವಿಡ್ -19 ಪರೀಕ್ಷಾ ಸಾಮರ್ಥ್ಯವನ್ನು ದಿನಕ್ಕೆ 41,000 ಮಾದರಿಗಳಿಗೆ ಏರಿಸಿದ್ದು, ಶೀಘ್ರದಲ್ಲೇ ಅದನ್ನು 50,000 ಕ್ಕೆ ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ. COVID-19 ಪರೀಕ್ಷೆಗಳನ್ನು 20 ಜಿಲ್ಲೆಗಳಲ್ಲಿ ಪ್ರಾರಂಭಿಸಲಾಗಿದ್ದು, ಶೀಘ್ರದಲ್ಲೇ ರಾಜ್ಯದ ಉಳಿದ 13 ಜಿಲ್ಲೆಗಳಿಗೆ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ರೋಗಿಗಳನ್ನು ದಾಖಲಿಸಿಕೊಳ್ಳದ ಆಸ್ಪತ್ರೆಗಳ ಮೇಲೆ ಕ್ರಿಮಿನಲ್ ಕೇಸ್: ಸಚಿವ ಸುಧಾಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...