Homeಮುಖಪುಟಹೊಸದಾಗಿ 19 ಜಿಲ್ಲೆ 3 ವಿಭಾಗೀಯ ಕೇಂದ್ರ ರಚಿಸಲು ರಾಜಸ್ಥಾನ ಸರ್ಕಾರ ನಿರ್ಧಾರ; ಬಿಜೆಪಿ ಟೀಕೆ

ಹೊಸದಾಗಿ 19 ಜಿಲ್ಲೆ 3 ವಿಭಾಗೀಯ ಕೇಂದ್ರ ರಚಿಸಲು ರಾಜಸ್ಥಾನ ಸರ್ಕಾರ ನಿರ್ಧಾರ; ಬಿಜೆಪಿ ಟೀಕೆ

- Advertisement -
- Advertisement -

19 ಹೊಸ ಜಿಲ್ಲೆಗಳನ್ನು ಮತ್ತು ಮೂರು ವಿಭಾಗೀಯ ಕೇಂದ್ರಗಳನ್ನು ರಚಿಸುವುದಾಗಿ ಕಾಂಗ್ರೆಸ್ ನೇತೃತ್ವದ ರಾಜಸ್ಥಾನ ಸರ್ಕಾರ ಶುಕ್ರವಾರ ಘೋಷಿಸಿದೆ. “ರಾಜ್ಯದ ನಿವಾಸಿಗಳಿಗೆ ಆಡಳಿತ ಕಚೇರಿಗಳು ಹತ್ತಿರದಲ್ಲಿರಬೇಕು ಎಂಬ ಕಾರಣಕ್ಕಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸ್ಪಷ್ಟಪಡಿಸಿದ್ದಾರೆ.

“ಈ ನಿರ್ಧಾರದ ಹಿಂದೆ ರಾಜಕೀಯ ದುರುದ್ದೇಶಗಳಿವೆ. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ತೆಗೆದುಕೊಳ್ಳಲಾಗಿದೆ” ಎಂದು ಭಾರತೀಯ ಜನತಾ ಪಕ್ಷ ಆರೋಪಿಸಿದೆ.

ಅನುಪ್‌ಗಢ್, ಬಲೋತ್ರಾ, ಬೇವಾರ್, ದೀಗ್, ದಿದ್ವಾನಾ-ಕುಚಮನ್, ದುಡು, ಗಂಗಾಪುರ ನಗರ, ಜೈಪುರ ಉತ್ತರ, ಜೈಪುರ ದಕ್ಷಿಣ, ಜೋಧ್‌ಪುರ ಪೂರ್ವ, ಜೋಧ್‌ಪುರ ಪಶ್ಚಿಮ, ಕೇಕ್ರಿ, ಕೊಟ್‌ಪುಟ್ಲಿ-ಬೆಹ್ರೋರ್, ಖೈರ್ತಾಲ್, ನೀಮ್ ಕಾ ಥಾನಾ, ಫಲೋಡಿ, ಸಾಲುಂಬಾರ್, ಸಂಚೋರ್ ಮತ್ತು ಶಹಪುರ ಹೊಸ ಜಿಲ್ಲೆಗಳಾಗಲಿವೆ.

ಈ ನಿರ್ಧಾರದಿಂದಾಗಿ ರಾಜಸ್ಥಾನವು ಒಟ್ಟು 50 ಜಿಲ್ಲೆಗಳನ್ನು ಹೊಂದಲಿದೆ. ಮೂರು ಹೊಸ ವಿಭಾಗೀಯ ಪ್ರಧಾನ ಕಚೇರಿಗಳಾಗಿ ಪಾಲಿ, ಸಿಕರ್ ಮತ್ತು ಬನ್ಸ್ವಾರಾ ಸೇರಿಕೊಳ್ಳಲಿವೆ.

“ರಾಜಸ್ಥಾನವು ಭೌಗೋಳಿಕ ವಿಸ್ತೀರ್ಣದಲ್ಲಿ ದೇಶದ ಅತಿದೊಡ್ಡ ರಾಜ್ಯವಾಗಿದೆ. ಜನರು ಸುಲಭವಾಗಿ ಜಿಲ್ಲಾ ಕೇಂದ್ರಗಳನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಆಡಳಿತ ವ್ಯವಸ್ಥೆಯು ಪ್ರತಿ ಕುಟುಂಬವನ್ನು ತಲುಪಲು ಆಗುತ್ತಿಲ್ಲ” ಎಂದು ಗೆಹ್ಲೋಟ್ ಶುಕ್ರವಾರ ರಾಜ್ಯ ವಿಧಾನಸಭೆಯಲ್ಲಿ ಹೇಳಿದ್ದಾರೆ.

“ಕಾನೂನು ಮತ್ತು ಸುವ್ಯವಸ್ಥೆಯನ್ನು ಹೆಚ್ಚು ಪರಿಣಾಮಕಾರಿ ಜಾರಿಗೊಳಿಸಲು, ಉತ್ತಮ ಆಡಳಿತ ವ್ಯವಸ್ಥೆಯನ್ನು ತರಲು ಸಣ್ಣ ಜಿಲ್ಲೆಗಳು ಸಹಾಯ ಮಾಡುತ್ತದೆ” ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟಿದ್ದಾರೆ.

ಹೊಸ ಜಿಲ್ಲೆಗಳಲ್ಲಿ ಮೂಲಸೌಕರ್ಯ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿಗೆ 2,000 ಕೋಟಿ ರೂ.ಗಳ ಬಜೆಟ್ ಮಂಡಿಸಿದ್ದಾರೆ.

ಈ ಕ್ರಮವನ್ನು ಟೀಕಿಸಿದ ಬಿಜೆಪಿ, “ಹೊಸ ಜಿಲ್ಲೆಗಳ ರಚನೆಗೆ ಶಿಫಾರಸುಗಳನ್ನು ನೀಡಲು ಆರು ದಿನಗಳ ಹಿಂದೆ ರಚಿಸಲಾಗಿದ್ದ ರಾಮ್ ಲುಭಯಾ ಸಮಿತಿಯ ಅವಧಿಯನ್ನು ರಾಜ್ಯ ಸರ್ಕಾರವು ವಿಸ್ತರಿಸಿದೆ” ಎಂದು ಟೀಕಿಸಿದೆ.

“ಲುಭಯಾ ಸಮಿತಿಯ ಅಧಿಕಾರಾವಧಿಯನ್ನು ಸಿಎಂ ವಿಸ್ತರಿಸಿದ್ದಾರೆ. ಅದರ ವರದಿಯನ್ನು ಸ್ವೀಕರಿಸಲು ವಿಳಂಬವಾಗಿದೆ ಎಂದು ಹೇಳಿದ್ದಾರೆ” ಎಂದು ಬಿಜೆಪಿ ಶಾಸಕ ಮತ್ತು ವಿರೋಧ ಪಕ್ಷದ ಉಪ ನಾಯಕ ರಾಜೇಂದ್ರ ರಾಥೋಡ್ ಪ್ರತಿಕ್ರಿಯಿಸಿದ್ದಾರೆ.

“ವರದಿಯನ್ನು ಸ್ವೀಕರಿಸದೆ ಈಗ 19 ಜಿಲ್ಲೆಗಳನ್ನು ಹೇಗೆ ಘೋಷಿಸಲಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಕಷ್ಟ” ಎಂದು ಬಿಜೆಪಿ ಟೀಕಿಸಿದೆ.

ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕಿ ವಸುಂಧರಾ ರಾಜೆ ಅವರು ಪ್ರತಿಕ್ರಿಯಿಸಿ, “ರಾಜಕೀಯ ಉದ್ದೇಶಗಳನ್ನು ಈಡೇರಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ಆರೋಪಿಸಿದ್ದಾರೆ.

“ಹೊಸ ಜಿಲ್ಲೆಗಳನ್ನು ಘೋಷಿಸಿದ ವಿಧಾನವು [ರಾಜ್ಯ] ಬಜೆಟ್ ಮತ್ತು ಆರ್ಥಿಕ ರಚನೆಯನ್ನು ಅಪಾಯಕ್ಕೆ ಸಿಲುಕಿಸಿದೆ” ಎಂದು ದೂರಿದ್ದಾರೆ.

ಇದನ್ನೂ ಓದಿರಿ: ರಾಪರ್‌ ಸ್ಟಾನ್‌ ಸಂಗೀತ ಕಾರ್ಯಕ್ರಮಕ್ಕೆ ಬಜರಂಗದಳದಿಂದ ಅಡ್ಡಿ; ರದ್ದು

ಮತ್ತೊಂದೆಡೆ ಅಸ್ಸಾಂನಲ್ಲಿ ಬಿಜೆಪಿ ಸರ್ಕಾರವು ಡಿಸೆಂಬರ್‌ನಲ್ಲಿ ನಾಲ್ಕು ಜಿಲ್ಲೆಗಳನ್ನು ಇತರ ನಾಲ್ಕು ಜಿಲ್ಲೆಗಳೊಂದಿಗೆ ವಿಲೀನಗೊಳಿಸಲು ನಿರ್ಧರಿಸಿತ್ತು. ಬಿಸ್ವನಾಥ್ ಜಿಲ್ಲೆಯನ್ನು ಸೋನಿತ್‌ಪುರದೊಂದಿಗೆ, ಹೋಜೈ ಅನ್ನು ನಾಗಾಂವ್‌ನೊಂದಿಗೆ, ಬಜಾಲಿಯನ್ನು ಬರ್ಪೇಟಾದೊಂದಿಗೆ ಮತ್ತು ತಮುಲ್‌ಪುರವನ್ನು ಬಕ್ಸಾದೊಂದಿಗೆ ವಿಲೀನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘೋಷಿಸಿದ್ದರು.

ಹೊಸ ಆಡಳಿತಾತ್ಮಕ ಘಟಕಗಳನ್ನು ರಚಿಸುವುದನ್ನು ತಡೆಯುವ ನಿಟ್ಟಿನಲ್ಲಿ ಚುನಾವಣಾ ಆಯೋಗ ನಿಷೇಧ ಹೇರುವ ಒಂದು ದಿನದ ಮೊದಲು ಈ ನಿರ್ಧಾರವನ್ನು ಹೊರಬಿದ್ದಿತ್ತು. ವಿಧಾನಸಭಾ, ಲೋಕಸಭಾ ಕ್ಷೇತ್ರಗಳು ಮತ್ತು ಸ್ಥಳೀಯ ಸಂಸ್ಥೆಗಳ ವಾರ್ಡ್‌ಗಳ ಗಡಿಗಳನ್ನು ಗುರುತಿಸುವ ನಿಟ್ಟಿನಲ್ಲಿ ಕ್ಷೇತ್ರ ಪುನರ್‌ ವಿಂಗಡಣೆಗೆ ಚುನಾವಣಾ ಸಮಿತಿ ಕ್ರಮ ಕೈಗೊಳ್ಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...