Homeಮುಖಪುಟರಾಜಸ್ಥಾನ - ಸರ್ಕಾರಿ ಆಸ್ಪತ್ರೆಯಲ್ಲಿ ಇಲಿ ಕಡಿತಕ್ಕೊಳಗಾದ 10 ವರ್ಷದ ಕ್ಯಾನ್ಸರ್ ರೋಗಿ ಸಾವು

ರಾಜಸ್ಥಾನ – ಸರ್ಕಾರಿ ಆಸ್ಪತ್ರೆಯಲ್ಲಿ ಇಲಿ ಕಡಿತಕ್ಕೊಳಗಾದ 10 ವರ್ಷದ ಕ್ಯಾನ್ಸರ್ ರೋಗಿ ಸಾವು

- Advertisement -
- Advertisement -

ರಾಜಸ್ಥಾನದ ಜೈಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಇಲಿ ಕಡಿತಕ್ಕೊಳಗಾದ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದ 10 ವರ್ಷದ ಬಾಲಕರೊಬ್ಬರ ಮೃತಪಟ್ಟಿದ್ದಾರೆ ಎಂದು ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ ಎಂದು ವರದಿಯಾಗಿದೆ. ರಾಜಸ್ಥಾನ

ಕ್ಯಾನ್ಸರ್ ಪೀಡಿತ ಬಾಲಕನನ್ನು ಡಿಸೆಂಬರ್ 11 ರಂದು ಸರ್ಕಾರಿ ಕ್ಯಾನ್ಸರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ವರದಿ ಉಲ್ಲೇಖಿಸಿವೆ. ಇಲಿ ಕಡಿತದ ಆರೋಪದ ಬಗ್ಗೆ ಆಸ್ಪತ್ರೆ ನಿರಾಕರಿಸಿದ್ದು, ಬಾಲಕನ ಸಾವು “ಸೆಪ್ಟಿಸೆಮಿಯಾ ಆಘಾತ ಮತ್ತು ಹೆಚ್ಚಿನ ಸೋಂಕಿನಿಂದ” ಸಂಭವಿಸಿದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅದಾಗ್ಯೂ, ರಾಜಸ್ಥಾನ ಸರ್ಕಾರವು ಈ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಿದೆ. ಆಸ್ಪತ್ರೆಯ ಅಧೀಕ್ಷಕ ಡಾ.ಸಂದೀಪ್ ಜಸುಜಾ ಮಾತನಾಡಿ, “ಮಗುವಿಗೆ ಜ್ವರ ಮತ್ತು ನ್ಯುಮೋನಿಯಾ ಕೂಡ ಇತ್ತು. ಶುಕ್ರವಾರ ಹೆಚ್ಚಿನ ಸೋಂಕಿನ ಸೆಪ್ಟಿಸೆಮಿಯಾ ಆಘಾತದಿಂದ ಅವರು ಸಾವನ್ನಪ್ಪಿದ್ದಾರೆ” ಎಂದು ಹೇಳಿದ್ದಾರೆ.

ಘಟನೆಯ ಬಗ್ಗೆ ವೈದ್ಯಕೀಯ ಶಿಕ್ಷಣ ಕಾರ್ಯದರ್ಶಿ ಅಂಬರೀಶ್ ಕುಮಾರ್ ಅವರು ರಾಜ್ಯ ಕ್ಯಾನ್ಸರ್ ಸಂಸ್ಥೆಗೆ ಸಂಬಂಧಿಸಿದ ಸವಾಯಿ ಮಾನ್ ಸಿಂಗ್ (ಎಸ್‌ಎಂಎಸ್) ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಿಂದ ವರದಿ ಕೇಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜಸ್ಥಾನ

ಸ್ಥಳೀಯ ಭಾಷೆಯ ದಿನಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿ ವರದಿಯ ಪ್ರಕಾರ, ಪ್ರವೇಶ ಪಡೆದ ಸ್ವಲ್ಪ ಸಮಯದ ನಂತರ ಮಗು ಅಳಲು ಪ್ರಾರಂಭಿಸಿತು. ಅವರ ಕುಟುಂಬ ಸದಸ್ಯರು ಅವರು ಮಲಗಿದ್ದ ಹೊದಿಕೆಯನ್ನು ಸರಿಸಿದಾಗ, ಇಲಿ ಕಡಿತದಿಂದ ಅವರ ಕಾಲ್ಬೆರಳುಗಳಿಂದ ರಕ್ತ ಸೋರುವುದನ್ನು ನೋಡಿದ್ದಾರೆ. ಈ ವೇಳೆ ಕುಟುಂಬಸ್ಥರು ಅಲ್ಲಿದ್ದ ನರ್ಸಿಂಗ್ ಸಿಬ್ಬಂದಿಗೆ ಅದನ್ನು ತಿಳಿಸಿದ್ದು, ಅವರು ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಕಾಲಿಗೆ ಬ್ಯಾಂಡೇಜ್ ಹಾಕಿದ್ದರು.

ಇಲಿ ಕಚ್ಚಿದ ಮಾಹಿತಿ ಬಂದ ಕೂಡಲೇ ಮಗುವಿಗೆ ಚಿಕಿತ್ಸೆ ನೀಡಿದ್ದೇವೆ ಎಂದು ಸ್ಪತ್ರೆಯ ಅಧೀಕ್ಷಕ ಡಾ.ಸಂದೀಪ್ ಜಸುಜಾ ತಿಳಿಸಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಶುಚಿತ್ವ ಕಾಪಾಡಲು ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ದೇಶ ವಿಭಜನೆಗೆ ಕಾರಣ ವಿ.ಡಿ. ಸಾವರ್ಕರ್ ಹೊರತು ಜಿನ್ನಾ ಅಲ್ಲ – ಡಿಎಂಕೆ ಸಂಸದ ಎ. ರಾಜಾ

ದೇಶ ವಿಭಜನೆಗೆ ಕಾರಣ ವಿ.ಡಿ. ಸಾವರ್ಕರ್ ಹೊರತು ಜಿನ್ನಾ ಅಲ್ಲ – ಡಿಎಂಕೆ ಸಂಸದ ಎ. ರಾಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...