Homeಮುಖಪುಟಕೋರ್ಟ್ ತೀರ್ಮಾನದ ಮೇಲೆ ರಾಜಸ್ಥಾನ ಸರ್ಕಾರ ಉಳಿವು ಅಳಿವು

ಕೋರ್ಟ್ ತೀರ್ಮಾನದ ಮೇಲೆ ರಾಜಸ್ಥಾನ ಸರ್ಕಾರ ಉಳಿವು ಅಳಿವು

ಬಿಎಸ್ ಪಿ ಶಾಸಕರ ಕಾಂಗ್ರೆಸ್ ಸೇರ್ಪಡೆ ರಾಜಸ್ಥಾನ ಹೈಕೋರ್ಟ್ ನಲ್ಲಿ ನಾಳೆ ವಿಚಾರಣೆ

- Advertisement -
- Advertisement -

ರಾಜಸ್ಥಾನದಲ್ಲಿ 2019 ರ ಸೆಪ್ಟೆಂಬರ್‌ನಲ್ಲಿ ಬಹುಜನ ಸಮಾಜ ಪಕ್ಷದ ಆರು ಮಂದಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಮುಖ್ಯಮಂತ್ರಿ ಗೆಹ್ಲೋಟ್ ಸರ್ಕಾರಕ್ಕೆ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಸ್ಪೀಕರ್ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಆಗಸ್ಟ್ 11ರಂದು ನಡೆಯಲಿದೆ.

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳಿಸಿದ ವಿಧಾನಸಭಾಧ್ಯಕ್ಷ ಸಿ. ಪಿ. ಜೋಶಿ ಕ್ರಮ ಸರಿಯಾಗಿಲ್ಲ. ಇದಕ್ಕೆ ತಡೆಯಾಜ್ಞೆ ನೀಡಬೇಕೆಂದು ಬಿಜೆಪಿ ಶಾಸಕ ಮದನ್ ದಿಲಾವರ್ ಮತ್ತು ಬಿಎಸ್‌‌‌‌‌ಪಿ ರಾಷ್ಟ್ರೀಯ ಕಾರ್ಯದರ್ಶಿ ಸತೀಶ್ ಮಿಶ್ರ ಅವರು ಹೈಕೋರ್ಟ್ ಏಕಸದಸ್ಯ ಪೀಠದ ಮುಂದೆ ಪ್ರಶ್ನಿಸಿದ್ದರು.

ಅರ್ಜಿದಾರರ ಅರ್ಜಿಯನ್ನು ಸ್ವೀಕರಿಸಿದ ಏಕಸದಸ್ಯ ಪೀಠದ ನ್ಯಾ. ಮಹೇಂದ್ರ ಕುಮಾರ್ ಗೋಯಲ್ ತಡೆಯಾಜ್ಞೆ ನೀಡಲು ನಿರಾಕರಿಸಿದ್ದರು. ಆದರೆ ಸ್ಪೀಕರ್, ವಿಧಾನಸಭಾ ಕಾರ್ಯದರ್ಶಿ ಮತ್ತು ಬಿಎಸ್ಪಿ ಶಾಸಕರಿಗೆ ನೋಟಿಸ್ ನೀಡಿದ್ದರು.

ಏಕಸದಸ್ಯ ಪೀಠದ ತೀರ್ಮಾನ ತೃಪ್ತಿ ತಾರದ ಹಿನ್ನೆಲೆಯಲ್ಲಿ ಅರ್ಜಿದಾರರು ದ್ವಿಸದಸ್ಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿದರು. ಮುಖ್ಯನ್ಯಾಯಮೂರ್ತಿ ಇಂದ್ರಜಿತ್ ಮಹಂತಿ, ನ್ಯಾ. ಪ್ರಕಾಶ್ ಗುಪ್ತ ಅವರಿದ್ದ ಪೀಠ ಮೇಲ್ಮನವಿ ತಿರಸ್ಕರಿಸಿದರು. ಆದರೆ ಜೈಸಲ್‌ಮರ್ ಜಿಲ್ಲಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿ ಪತ್ರಿಕೆಗಳಿಗೆ ನೋಟಿಸ್ ನೀಡುವಂತೆ ತಿಳಿಸಿತು.

ಕಾಂಗ್ರೆಸ್ ಸೇರ್ಪಡೆಯಾಗಿರುವ ಬಿಎಸ್‌ಪಿ ಆರು ಮಂದಿ ಶಾಸಕರು ಅನರ್ಹತೆಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗೆ ವರ್ಗಾಯಿಸಬೇಕೆಂದು ಮನವಿ ಮಾಡಿದ್ದಾರೆ.

ಇದರ ನಡುವೆಯೇ ರಾಜಸ್ಥಾನ ಹೈಕೋರ್ಟ್ ನಲ್ಲಿ ಆಗಸ್ಟ್ 11ರಂದು ಸ್ಪೀಕರ್ ತೀರ್ಮಾನದ ವಿರುದ್ದ  ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಯಲಿದೆ.

ರಾಜಸ್ಥಾನದ ಗೆಹ್ಲೋಟ್ ನೇತೃತ್ವದ ಸರ್ಕಾರ ಆಗಸ್ಟ್ 14ರಂದು ಬಹುಮತ/ವಿಶ್ವಾಸ ಮತ ಯಾಚಿಸುವ ಸಾಧ್ಯತೆ ಇದೆ. 200 ಶಾಸಕರನ್ನೊಳಗೊಂಡ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್ 107 ಶಾಸಕರನ್ನು ಹೊಂದಿದೆ. ಇದರಲ್ಲಿ ಆರು ಮಂದಿ ಬಿಎಸ್‌ಪಿ ಶಾಸಕರು ಸೇರಿದ್ದಾರೆ. 10 ಮಂದಿ ಪಕ್ಷೇತರ ಶಾಸಕರು ಒಳಗೊಂಡಿದ್ದಾರೆ.

ಕಳೆದ ತಿಂಗಳು ಸಚಿನ್ ಪೈಲಟ್ ಸೇರಿದಂತೆ 19 ಮಂದಿ ಶಾಸಕರು ಗೆಹ್ಲೋಟ್ ನಾಯಕತ್ವದ ವಿರುದ್ದ ಬಂಡಾಯವೆದ್ದಿದ್ದು ರಾಜಸ್ಥಾನ ಸರ್ಕಾರ ಅಲ್ಪಮತಕ್ಕೆ ಕುಸಿಯುವಂತೆ ಮಾಡಿದ್ದಾರೆ.

ಹೀಗಾಗಿ 194ಕ್ಕೆ ಶಾಸಕರಲ್ಲಿ ಬಹುಮತಕ್ಕೆ 98 ಶಾಸಕರ ಬಲ ಬೇಕು. ಬಿಎಸ್ ಪಿ ಶಾಸಕರು ಸೇರಿ ಕಾಂಗ್ರೆಸ್ ಬಲ 98 ಇದೆ. ಒಂದೊಮ್ಮೆ ಸ್ಪೀಕರ್ ತೀರ್ಮಾನಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದರೆ ಗೆಹ್ಲೋಟ್ ಬೆಂಬಲ 92ಕ್ಕೆ ಕುಸಿಯಲಿದೆ. ಸಿಪಿಎಂ, ಬಿಟಿಪಿ ಸೇರಿದತೆ ಕಾಂಗ್ರೆಸ್ ಬಲ 95 ಆಗುತ್ತದೆ. ಸ್ಫೀಕರ್ ಸೇರಿದರೆ 96 ಆಗುತ್ತದೆ.

ರಾಜಸ್ಥಾನ ವಿಧಾನಸಭೆಯಲ್ಲಿ ಬಿಜೆಪಿ 72 ಶಾಸಕರನ್ನು ಹೊಂದಿದೆ. ಪೈಲಟ್ ಬೆಂಬಲಿಗ ಶಾಸಕರು ಸೇರಿದರೆ 97 ಶಾಸಕರ ಬಲ ಬಂದಂತೆ ಆಗುತ್ತದೆ. ಆಗ ಬಿಜೆಪಿ ಕೇವಲ ಒಂದು ಸ್ಥಾನದ ಕೊರತೆ ಬೀಳುತ್ತದೆ.

ಈ ಹಿನ್ನೆಲೆಯಲ್ಲಿ ಹೈಕೋರ್ಟ್ ತೀರ್ಪಿನ ಮೇಲೆ ಗೆಹ್ಲೋಟ್ ಸರ್ಕಾರ ಏಳುಬೀಳು ನಿಂತಿದೆ.


ಓದಿ: ರಾಹುಲ್ ಭೇಟಿಯಾದ ಸಚಿನ್ ಪೈಲಟ್: ರಾಜಸ್ಥಾನದಲ್ಲಿ ಗರಿಗೆದರಿದ ರಾಜಕೀಯ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...