Homeಮುಖಪುಟಕೋರ್ಟ್ ತೀರ್ಮಾನದ ಮೇಲೆ ರಾಜಸ್ಥಾನ ಸರ್ಕಾರ ಉಳಿವು ಅಳಿವು

ಕೋರ್ಟ್ ತೀರ್ಮಾನದ ಮೇಲೆ ರಾಜಸ್ಥಾನ ಸರ್ಕಾರ ಉಳಿವು ಅಳಿವು

ಬಿಎಸ್ ಪಿ ಶಾಸಕರ ಕಾಂಗ್ರೆಸ್ ಸೇರ್ಪಡೆ ರಾಜಸ್ಥಾನ ಹೈಕೋರ್ಟ್ ನಲ್ಲಿ ನಾಳೆ ವಿಚಾರಣೆ

- Advertisement -
- Advertisement -

ರಾಜಸ್ಥಾನದಲ್ಲಿ 2019 ರ ಸೆಪ್ಟೆಂಬರ್‌ನಲ್ಲಿ ಬಹುಜನ ಸಮಾಜ ಪಕ್ಷದ ಆರು ಮಂದಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಮುಖ್ಯಮಂತ್ರಿ ಗೆಹ್ಲೋಟ್ ಸರ್ಕಾರಕ್ಕೆ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಸ್ಪೀಕರ್ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಆಗಸ್ಟ್ 11ರಂದು ನಡೆಯಲಿದೆ.

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳಿಸಿದ ವಿಧಾನಸಭಾಧ್ಯಕ್ಷ ಸಿ. ಪಿ. ಜೋಶಿ ಕ್ರಮ ಸರಿಯಾಗಿಲ್ಲ. ಇದಕ್ಕೆ ತಡೆಯಾಜ್ಞೆ ನೀಡಬೇಕೆಂದು ಬಿಜೆಪಿ ಶಾಸಕ ಮದನ್ ದಿಲಾವರ್ ಮತ್ತು ಬಿಎಸ್‌‌‌‌‌ಪಿ ರಾಷ್ಟ್ರೀಯ ಕಾರ್ಯದರ್ಶಿ ಸತೀಶ್ ಮಿಶ್ರ ಅವರು ಹೈಕೋರ್ಟ್ ಏಕಸದಸ್ಯ ಪೀಠದ ಮುಂದೆ ಪ್ರಶ್ನಿಸಿದ್ದರು.

ಅರ್ಜಿದಾರರ ಅರ್ಜಿಯನ್ನು ಸ್ವೀಕರಿಸಿದ ಏಕಸದಸ್ಯ ಪೀಠದ ನ್ಯಾ. ಮಹೇಂದ್ರ ಕುಮಾರ್ ಗೋಯಲ್ ತಡೆಯಾಜ್ಞೆ ನೀಡಲು ನಿರಾಕರಿಸಿದ್ದರು. ಆದರೆ ಸ್ಪೀಕರ್, ವಿಧಾನಸಭಾ ಕಾರ್ಯದರ್ಶಿ ಮತ್ತು ಬಿಎಸ್ಪಿ ಶಾಸಕರಿಗೆ ನೋಟಿಸ್ ನೀಡಿದ್ದರು.

ಏಕಸದಸ್ಯ ಪೀಠದ ತೀರ್ಮಾನ ತೃಪ್ತಿ ತಾರದ ಹಿನ್ನೆಲೆಯಲ್ಲಿ ಅರ್ಜಿದಾರರು ದ್ವಿಸದಸ್ಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿದರು. ಮುಖ್ಯನ್ಯಾಯಮೂರ್ತಿ ಇಂದ್ರಜಿತ್ ಮಹಂತಿ, ನ್ಯಾ. ಪ್ರಕಾಶ್ ಗುಪ್ತ ಅವರಿದ್ದ ಪೀಠ ಮೇಲ್ಮನವಿ ತಿರಸ್ಕರಿಸಿದರು. ಆದರೆ ಜೈಸಲ್‌ಮರ್ ಜಿಲ್ಲಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿ ಪತ್ರಿಕೆಗಳಿಗೆ ನೋಟಿಸ್ ನೀಡುವಂತೆ ತಿಳಿಸಿತು.

ಕಾಂಗ್ರೆಸ್ ಸೇರ್ಪಡೆಯಾಗಿರುವ ಬಿಎಸ್‌ಪಿ ಆರು ಮಂದಿ ಶಾಸಕರು ಅನರ್ಹತೆಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗೆ ವರ್ಗಾಯಿಸಬೇಕೆಂದು ಮನವಿ ಮಾಡಿದ್ದಾರೆ.

ಇದರ ನಡುವೆಯೇ ರಾಜಸ್ಥಾನ ಹೈಕೋರ್ಟ್ ನಲ್ಲಿ ಆಗಸ್ಟ್ 11ರಂದು ಸ್ಪೀಕರ್ ತೀರ್ಮಾನದ ವಿರುದ್ದ  ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಯಲಿದೆ.

ರಾಜಸ್ಥಾನದ ಗೆಹ್ಲೋಟ್ ನೇತೃತ್ವದ ಸರ್ಕಾರ ಆಗಸ್ಟ್ 14ರಂದು ಬಹುಮತ/ವಿಶ್ವಾಸ ಮತ ಯಾಚಿಸುವ ಸಾಧ್ಯತೆ ಇದೆ. 200 ಶಾಸಕರನ್ನೊಳಗೊಂಡ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್ 107 ಶಾಸಕರನ್ನು ಹೊಂದಿದೆ. ಇದರಲ್ಲಿ ಆರು ಮಂದಿ ಬಿಎಸ್‌ಪಿ ಶಾಸಕರು ಸೇರಿದ್ದಾರೆ. 10 ಮಂದಿ ಪಕ್ಷೇತರ ಶಾಸಕರು ಒಳಗೊಂಡಿದ್ದಾರೆ.

ಕಳೆದ ತಿಂಗಳು ಸಚಿನ್ ಪೈಲಟ್ ಸೇರಿದಂತೆ 19 ಮಂದಿ ಶಾಸಕರು ಗೆಹ್ಲೋಟ್ ನಾಯಕತ್ವದ ವಿರುದ್ದ ಬಂಡಾಯವೆದ್ದಿದ್ದು ರಾಜಸ್ಥಾನ ಸರ್ಕಾರ ಅಲ್ಪಮತಕ್ಕೆ ಕುಸಿಯುವಂತೆ ಮಾಡಿದ್ದಾರೆ.

ಹೀಗಾಗಿ 194ಕ್ಕೆ ಶಾಸಕರಲ್ಲಿ ಬಹುಮತಕ್ಕೆ 98 ಶಾಸಕರ ಬಲ ಬೇಕು. ಬಿಎಸ್ ಪಿ ಶಾಸಕರು ಸೇರಿ ಕಾಂಗ್ರೆಸ್ ಬಲ 98 ಇದೆ. ಒಂದೊಮ್ಮೆ ಸ್ಪೀಕರ್ ತೀರ್ಮಾನಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದರೆ ಗೆಹ್ಲೋಟ್ ಬೆಂಬಲ 92ಕ್ಕೆ ಕುಸಿಯಲಿದೆ. ಸಿಪಿಎಂ, ಬಿಟಿಪಿ ಸೇರಿದತೆ ಕಾಂಗ್ರೆಸ್ ಬಲ 95 ಆಗುತ್ತದೆ. ಸ್ಫೀಕರ್ ಸೇರಿದರೆ 96 ಆಗುತ್ತದೆ.

ರಾಜಸ್ಥಾನ ವಿಧಾನಸಭೆಯಲ್ಲಿ ಬಿಜೆಪಿ 72 ಶಾಸಕರನ್ನು ಹೊಂದಿದೆ. ಪೈಲಟ್ ಬೆಂಬಲಿಗ ಶಾಸಕರು ಸೇರಿದರೆ 97 ಶಾಸಕರ ಬಲ ಬಂದಂತೆ ಆಗುತ್ತದೆ. ಆಗ ಬಿಜೆಪಿ ಕೇವಲ ಒಂದು ಸ್ಥಾನದ ಕೊರತೆ ಬೀಳುತ್ತದೆ.

ಈ ಹಿನ್ನೆಲೆಯಲ್ಲಿ ಹೈಕೋರ್ಟ್ ತೀರ್ಪಿನ ಮೇಲೆ ಗೆಹ್ಲೋಟ್ ಸರ್ಕಾರ ಏಳುಬೀಳು ನಿಂತಿದೆ.


ಓದಿ: ರಾಹುಲ್ ಭೇಟಿಯಾದ ಸಚಿನ್ ಪೈಲಟ್: ರಾಜಸ್ಥಾನದಲ್ಲಿ ಗರಿಗೆದರಿದ ರಾಜಕೀಯ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...