Homeಮುಖಪುಟಬಾಬರಿ ಮಸೀದಿ ಧ್ವಂಸದಂದು ಶಾಲೆಗಳಲ್ಲಿ 'ಶೌರ್ಯ ದಿನಾಚರಣೆ'ಗೆ ಸೂಚಿಸಿದ ರಾಜಸ್ಥಾನದ ಬಿಜೆಪಿ ಸರ್ಕಾರ : 12...

ಬಾಬರಿ ಮಸೀದಿ ಧ್ವಂಸದಂದು ಶಾಲೆಗಳಲ್ಲಿ ‘ಶೌರ್ಯ ದಿನಾಚರಣೆ’ಗೆ ಸೂಚಿಸಿದ ರಾಜಸ್ಥಾನದ ಬಿಜೆಪಿ ಸರ್ಕಾರ : 12 ಗಂಟೆಯೊಳಗೆ ಆದೇಶ ವಾಪಸ್

- Advertisement -
- Advertisement -

ಬಾಬರಿ ಮಸೀದಿ ಧ್ವಂಸ ದಿನವಾದ ಡಿಸೆಂಬರ್ 6ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಶೌರ್ಯ ದಿನ’ ಆಚರಿಸುವಂತೆ ನೀಡಿದ್ದ ಆದೇಶವನ್ನು 12 ಗಂಟೆಗಳ ಒಳಗೆ ರಾಜಸ್ಥಾನದ ಬಿಜೆಪಿ ಸರ್ಕಾರ ವಾಪಸ್ ಪಡೆದಿದೆ.

ಡಿಸೆಂಬರ್ 6ರಂದು ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ‘ಶೌರ್ಯ ದಿನ’ ಆಚರಣೆ ಮಾಡುವಂತೆ ರಾಜಸ್ಥಾನದ ಶಿಕ್ಷಣ ಮತ್ತು ಪಂಚಾಯತ್ ರಾಜ್ ಸಚಿವ ಮದನ್ ದಿಲಾವರ್ ಶನಿವಾರ (ನವೆಂಬರ್ 29) ಆದೇಶಿಸಿದ್ದರು. ಆದರೆ, ವಿದ್ಯಾರ್ಥಿಗಳಿ ಪರೀಕ್ಷೆಯ ಕಾರಣ ನೀಡಿ ಭಾನುವಾರ (ನವೆಂಬರ್ 30) ಅದೇಶವನ್ನು ವಾಪಸ್ ಪಡೆದಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರೌಢ ಶಿಕ್ಷಣ ನಿರ್ದೇಶಕ ಸೀತಾರಾಮ್ ಜಾಟ್ ಅವರು ಶನಿವಾರ ಶಾಲೆಗಳಿಗೆ ಹೊರಡಿಸಿದ್ದ ಆದೇಶದಲ್ಲಿ, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯಲ್ಲಿ ‘ದೇಶಭಕ್ತಿ, ರಾಷ್ಟ್ರೀಯತೆ, ಶೌರ್ಯ, ಸಾಂಸ್ಕೃತಿಕ ಹೆಮ್ಮೆ ಮತ್ತು ರಾಷ್ಟ್ರೀಯ ಏಕತೆ’ಯನ್ನು ಉತ್ತೇಜಿಸಲು ಡಿಸೆಂಬರ್ 6ರಂದು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸುವಂತೆ ಸೂಚಿಸಿದ್ದರು ಎಂದು ವರದಿ ಹೇಳಿದೆ.

ಭಾನುವಾರ ಬೆಳಿಗ್ಗೆ 9.15ಕ್ಕೆ ಸಚಿವರು ಆದೇಶವನ್ನು ಹಿಂತೆಗೆದುಕೊಂಡಿದ್ದಾರೆ. “ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರಸ್ತುತ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುತ್ತಿವೆ. ಡಿಸೆಂಬರ್ 5 ಮತ್ತು 6ರಂದು ಪರೀಕ್ಷೆಗಳಿವೆ. ಹಾಗಾಗಿ, ಪರೀಕ್ಷಾ ಅವಧಿಯಲ್ಲಿ ಶಾಲೆಗಳಲ್ಲಿ ಯಾವುದೇ ಇತರ ಚಟುವಟಿಕೆಗಳು ಅಥವಾ ಕಾರ್ಯಕ್ರಮಗಳನ್ನು ನಡೆಸಲು ಸಾಧ್ಯವಿಲ್ಲ. ಆದ್ದರಿಂದ, ‘ಶೌರ್ಯ ದಿನ’ ಆಚರಣೆಯನ್ನು ಮುಂದೂಡಲಾಗಿದೆ” ಎಂದು ಸಚಿವ ದಿಲಾವರ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅದಾಗ್ಯೂ, ಶಾಲೆಗಳಲ್ಲಿ ಶೌರ್ಯ ದಿನ ಆಚರಿಸುವುದನ್ನು ದಿಲಾವರ್ ಸಮರ್ಥಿಸಿಕೊಂಡಿದ್ದಾರೆ. “ಶ್ರೀರಾಮನು ಭಾರತೀಯ ಸಂಸ್ಕೃತಿಯ ಆದರ್ಶಗಳನ್ನು ಪ್ರತಿನಿಧಿಸುತ್ತಾನೆ. ರಾಮ ಮಂದಿರ ಚಳುವಳಿ ಸಾಂಸ್ಕೃತಿಕ ಹೆಮ್ಮೆಯನ್ನು ಸಂಕೇತಿಸುತ್ತದೆ. ರಾಮ ಜನ್ಮಭೂಮಿ ಚಳುವಳಿಯ ಬಗ್ಗೆ ಕಲಿಯುವುದು ‘ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡುತ್ತದೆ. ದೇಶಭಕ್ತಿ ಮತ್ತು ರಾಷ್ಟ್ರೀಯ ಏಕತೆಯ ಮನೋಭಾವವನ್ನು ತುಂಬುತ್ತದೆ” ಎಂದು ಹೇಳಿದ್ದಾರೆ.

ಶೌರ್ಯ ದಿನದ ಭಾಗವಾಗಿ ಶಾಲೆಗಳಲ್ಲಿ ಭಾರತೀಯ ಸಂಸ್ಕೃತಿ ಮತ್ತು ರಾಮ ಮಂದಿರ ಚಳುವಳಿಯ ಕುರಿತು ಭಾಷಣ, ಪ್ರಬಂಧ ಸ್ಪರ್ಧೆಗಳನ್ನು ನಡೆಸುವಂತೆ ಹಾಗೂ ಅಯೋಧ್ಯಾ ರಾಮ ಮಂದಿರದ ವಿಷಯಾಧಾರಿತ ಚಿತ್ರಕಲೆ, ಪೋಸ್ಟರ್ ತಯಾರಿಕೆ ಚಟುವಟಿಕೆಗಳನ್ನು ಆಯೋಜಿಸುವಂತೆ ಸರ್ಕಾರದ ಆದೇಶದಲ್ಲಿ ಹೇಳಲಾಗಿತ್ತು. ದೇಶಭಕ್ತಿ ಗೀತೆ, ಜಾನಪದ ನೃತ್ಯ ಮತ್ತು ಐತಿಹಾಸಿಕ ಅಥವಾ ಪೌರಾಣಿಕ ಪ್ರಸಂಗಗಳನ್ನು ಆಧರಿಸಿದ ಕಿರು ನಾಟಕಗಳನ್ನು ಪ್ರದರ್ಶಿಸುವಂತೆಯೂ ಸೂಚಿಸಲಾಗಿತ್ತು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ವಿವರಿಸಿದೆ.

ರಾಮ ಜನ್ಮಭೂಮಿ ಚಳುವಳಿ ಮತ್ತು ಭಾರತೀಯ ಇತಿಹಾಸದ ಇತರ ‘ವೀರ ಘಟನೆಗಳಿಗೆ’ ಸಂಬಂಧಿಸಿದ ಛಾಯಾಚಿತ್ರಗಳು, ಲೇಖನಗಳು ಮತ್ತು ಕಲಾಕೃತಿಗಳನ್ನು ಪ್ರದರ್ಶಿಸುವಂತೆ ಹಾಗೂ ಸಾಮೂಹಿಕ ಸೂರ್ಯ ನಮಸ್ಕಾರ, ಯೋಗಾಭ್ಯಾಸ ಮತ್ತು ಶ್ರೀರಾಮನಿಗೆ ಸಮರ್ಪಿತವಾದ ಸ್ತೋತ್ರಗಳು ಮತ್ತು ಆರತಿಯೊಂದಿಗೆ ಪ್ರಾರಂಭವಾಗುವ ವಿಶೇಷ ಪ್ರಾರ್ಥನಾ ಸಭೆಯನ್ನು ನಡೆಸುವಂತೆ ಆದೇಶದಲ್ಲಿ ಹೇಳಲಾಗಿತ್ತು.

ಸುತ್ತೋಲೆಯ ಪ್ರಕಾರ ಶಾಲಾ ಆವರಣದಲ್ಲಿ ‘ಶೌರ್ಯ ಯಾತ್ರೆಗಳು’ ಮತ್ತು ಜಾಗೃತಿ ಮೆರವಣಿಗೆಗಳನ್ನು ಕೂಡ ಆಯೋಜಿಸಬೇಕಿತ್ತು. ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಲು ಮಿಲಿಟರಿ ಸಿಬ್ಬಂದಿ, ಸಾಮಾಜಿಕ ಕಾರ್ಯಕರ್ತರು ಮತ್ತು ಇತಿಹಾಸ ಉತ್ಸಾಹಿಗಳನ್ನು ಅತಿಥಿಗಳಾಗಿ ಆಹ್ವಾನಿಸಬೇಕಾಗಿತ್ತು.

ಮದನ್ ದಿಲಾವರ್ ವಿವಾದಾತ್ಮಕ ಹೇಳಿಕೆ

ಮದನ್ ದಿಲಾವರ್ ಶೌರ್ಯ ದಿನ ಆಚರಣೆಯಂತಹ ವಿವಾದಾತ್ಮಕ ಆದೇಶ, ಹೇಳಿಕೆ ನೀಡುವುದು ಹೊಸತಲ್ಲ. ಶಿಕ್ಷಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ದಿಲಾವರ್ ಹಲವಾರು ವಿವಾದಾತ್ಮಕ ಹೇಳಿಕೆಗಳು ಮತ್ತು ಆದೇಶಗಳನ್ನು ನೀಡಿದ್ದಾರೆ. ಮದರಸಾಗಳು ಸೇರಿದಂತೆ ಶಾಲೆಗಳಲ್ಲಿ ವಂದೇ ಮಾತರಂ ಕಡ್ಡಾಯಗೊಳಿಸುವ ಅವರ ಈ ಹಿಂದಿನ ಆದೇಶವು ಅಲ್ಪಸಂಖ್ಯಾತ ಗುಂಪುಗಳಿಂದ ತೀವ್ರ ಟೀಕೆಗೆ ಗುರಿಯಾಯಿತು. ಇದು ಒಂದು ಸಂಸ್ಕೃತಿಯ ಹೇರಿಕೆ ಎಂದು ಆಕ್ರೋಶ ವ್ಯಕ್ತವಾಗಿತ್ತು. ಅನೇಕ ಸಂದರ್ಭಗಳಲ್ಲಿ, ದಿಲಾವರ್ ಮೊಘಲ್ ದೊರೆ ಅಕ್ಬರ್ ಅನ್ನು ನಿರಂಕುಶಾಧಿಕಾರಿ ಎಂದು ಕರೆದಿದ್ದಾರೆ. ಈ ಹಿಂದಿನ ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಅಕ್ಬರ್‌ ಅನ್ನು ವೈಭವೀಕರಿಸಿತ್ತು ಎಂದು ಆರೋಪಿಸಿದ್ದಾರೆ.

ಸರ್ಕಾರಿ ಶಾಲೆಗಳ ಆವರಣದಲ್ಲಿರುವ ಅಕ್ರಮ ಅತಿಕ್ರಮಣಗಳು ಮತ್ತು ಧಾರ್ಮಿಕ ಸ್ಥಳಗಳನ್ನು ತಕ್ಷಣವೇ ತೆರವುಗೊಳಿಸಬೇಕು. ಯಾವುದೇ ಶಾಲೆಯಲ್ಲಿ ಅಂತಹ ಸ್ಥಳಗಳು ಕಂಡುಬಂದರೆ ಪ್ರಾಂಶುಪಾಲರು/ಮುಖ್ಯೋಪಾಧ್ಯಾಯರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು ಕೆಲ ದಿನಗಳ ಹಿಂದೆ ದಿಲಾವರ್ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...