Homeಮುಖಪುಟಬಾಬರಿ ಮಸೀದಿ ಧ್ವಂಸದಂದು ಶಾಲೆಗಳಲ್ಲಿ 'ಶೌರ್ಯ ದಿನಾಚರಣೆ'ಗೆ ಸೂಚಿಸಿದ ರಾಜಸ್ಥಾನದ ಬಿಜೆಪಿ ಸರ್ಕಾರ : 12...

ಬಾಬರಿ ಮಸೀದಿ ಧ್ವಂಸದಂದು ಶಾಲೆಗಳಲ್ಲಿ ‘ಶೌರ್ಯ ದಿನಾಚರಣೆ’ಗೆ ಸೂಚಿಸಿದ ರಾಜಸ್ಥಾನದ ಬಿಜೆಪಿ ಸರ್ಕಾರ : 12 ಗಂಟೆಯೊಳಗೆ ಆದೇಶ ವಾಪಸ್

- Advertisement -
- Advertisement -

ಬಾಬರಿ ಮಸೀದಿ ಧ್ವಂಸ ದಿನವಾದ ಡಿಸೆಂಬರ್ 6ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಶೌರ್ಯ ದಿನ’ ಆಚರಿಸುವಂತೆ ನೀಡಿದ್ದ ಆದೇಶವನ್ನು 12 ಗಂಟೆಗಳ ಒಳಗೆ ರಾಜಸ್ಥಾನದ ಬಿಜೆಪಿ ಸರ್ಕಾರ ವಾಪಸ್ ಪಡೆದಿದೆ.

ಡಿಸೆಂಬರ್ 6ರಂದು ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ‘ಶೌರ್ಯ ದಿನ’ ಆಚರಣೆ ಮಾಡುವಂತೆ ರಾಜಸ್ಥಾನದ ಶಿಕ್ಷಣ ಮತ್ತು ಪಂಚಾಯತ್ ರಾಜ್ ಸಚಿವ ಮದನ್ ದಿಲಾವರ್ ಶನಿವಾರ (ನವೆಂಬರ್ 29) ಆದೇಶಿಸಿದ್ದರು. ಆದರೆ, ವಿದ್ಯಾರ್ಥಿಗಳಿ ಪರೀಕ್ಷೆಯ ಕಾರಣ ನೀಡಿ ಭಾನುವಾರ (ನವೆಂಬರ್ 30) ಅದೇಶವನ್ನು ವಾಪಸ್ ಪಡೆದಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರೌಢ ಶಿಕ್ಷಣ ನಿರ್ದೇಶಕ ಸೀತಾರಾಮ್ ಜಾಟ್ ಅವರು ಶನಿವಾರ ಶಾಲೆಗಳಿಗೆ ಹೊರಡಿಸಿದ್ದ ಆದೇಶದಲ್ಲಿ, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯಲ್ಲಿ ‘ದೇಶಭಕ್ತಿ, ರಾಷ್ಟ್ರೀಯತೆ, ಶೌರ್ಯ, ಸಾಂಸ್ಕೃತಿಕ ಹೆಮ್ಮೆ ಮತ್ತು ರಾಷ್ಟ್ರೀಯ ಏಕತೆ’ಯನ್ನು ಉತ್ತೇಜಿಸಲು ಡಿಸೆಂಬರ್ 6ರಂದು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸುವಂತೆ ಸೂಚಿಸಿದ್ದರು ಎಂದು ವರದಿ ಹೇಳಿದೆ.

ಭಾನುವಾರ ಬೆಳಿಗ್ಗೆ 9.15ಕ್ಕೆ ಸಚಿವರು ಆದೇಶವನ್ನು ಹಿಂತೆಗೆದುಕೊಂಡಿದ್ದಾರೆ. “ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರಸ್ತುತ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುತ್ತಿವೆ. ಡಿಸೆಂಬರ್ 5 ಮತ್ತು 6ರಂದು ಪರೀಕ್ಷೆಗಳಿವೆ. ಹಾಗಾಗಿ, ಪರೀಕ್ಷಾ ಅವಧಿಯಲ್ಲಿ ಶಾಲೆಗಳಲ್ಲಿ ಯಾವುದೇ ಇತರ ಚಟುವಟಿಕೆಗಳು ಅಥವಾ ಕಾರ್ಯಕ್ರಮಗಳನ್ನು ನಡೆಸಲು ಸಾಧ್ಯವಿಲ್ಲ. ಆದ್ದರಿಂದ, ‘ಶೌರ್ಯ ದಿನ’ ಆಚರಣೆಯನ್ನು ಮುಂದೂಡಲಾಗಿದೆ” ಎಂದು ಸಚಿವ ದಿಲಾವರ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅದಾಗ್ಯೂ, ಶಾಲೆಗಳಲ್ಲಿ ಶೌರ್ಯ ದಿನ ಆಚರಿಸುವುದನ್ನು ದಿಲಾವರ್ ಸಮರ್ಥಿಸಿಕೊಂಡಿದ್ದಾರೆ. “ಶ್ರೀರಾಮನು ಭಾರತೀಯ ಸಂಸ್ಕೃತಿಯ ಆದರ್ಶಗಳನ್ನು ಪ್ರತಿನಿಧಿಸುತ್ತಾನೆ. ರಾಮ ಮಂದಿರ ಚಳುವಳಿ ಸಾಂಸ್ಕೃತಿಕ ಹೆಮ್ಮೆಯನ್ನು ಸಂಕೇತಿಸುತ್ತದೆ. ರಾಮ ಜನ್ಮಭೂಮಿ ಚಳುವಳಿಯ ಬಗ್ಗೆ ಕಲಿಯುವುದು ‘ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡುತ್ತದೆ. ದೇಶಭಕ್ತಿ ಮತ್ತು ರಾಷ್ಟ್ರೀಯ ಏಕತೆಯ ಮನೋಭಾವವನ್ನು ತುಂಬುತ್ತದೆ” ಎಂದು ಹೇಳಿದ್ದಾರೆ.

ಶೌರ್ಯ ದಿನದ ಭಾಗವಾಗಿ ಶಾಲೆಗಳಲ್ಲಿ ಭಾರತೀಯ ಸಂಸ್ಕೃತಿ ಮತ್ತು ರಾಮ ಮಂದಿರ ಚಳುವಳಿಯ ಕುರಿತು ಭಾಷಣ, ಪ್ರಬಂಧ ಸ್ಪರ್ಧೆಗಳನ್ನು ನಡೆಸುವಂತೆ ಹಾಗೂ ಅಯೋಧ್ಯಾ ರಾಮ ಮಂದಿರದ ವಿಷಯಾಧಾರಿತ ಚಿತ್ರಕಲೆ, ಪೋಸ್ಟರ್ ತಯಾರಿಕೆ ಚಟುವಟಿಕೆಗಳನ್ನು ಆಯೋಜಿಸುವಂತೆ ಸರ್ಕಾರದ ಆದೇಶದಲ್ಲಿ ಹೇಳಲಾಗಿತ್ತು. ದೇಶಭಕ್ತಿ ಗೀತೆ, ಜಾನಪದ ನೃತ್ಯ ಮತ್ತು ಐತಿಹಾಸಿಕ ಅಥವಾ ಪೌರಾಣಿಕ ಪ್ರಸಂಗಗಳನ್ನು ಆಧರಿಸಿದ ಕಿರು ನಾಟಕಗಳನ್ನು ಪ್ರದರ್ಶಿಸುವಂತೆಯೂ ಸೂಚಿಸಲಾಗಿತ್ತು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ವಿವರಿಸಿದೆ.

ರಾಮ ಜನ್ಮಭೂಮಿ ಚಳುವಳಿ ಮತ್ತು ಭಾರತೀಯ ಇತಿಹಾಸದ ಇತರ ‘ವೀರ ಘಟನೆಗಳಿಗೆ’ ಸಂಬಂಧಿಸಿದ ಛಾಯಾಚಿತ್ರಗಳು, ಲೇಖನಗಳು ಮತ್ತು ಕಲಾಕೃತಿಗಳನ್ನು ಪ್ರದರ್ಶಿಸುವಂತೆ ಹಾಗೂ ಸಾಮೂಹಿಕ ಸೂರ್ಯ ನಮಸ್ಕಾರ, ಯೋಗಾಭ್ಯಾಸ ಮತ್ತು ಶ್ರೀರಾಮನಿಗೆ ಸಮರ್ಪಿತವಾದ ಸ್ತೋತ್ರಗಳು ಮತ್ತು ಆರತಿಯೊಂದಿಗೆ ಪ್ರಾರಂಭವಾಗುವ ವಿಶೇಷ ಪ್ರಾರ್ಥನಾ ಸಭೆಯನ್ನು ನಡೆಸುವಂತೆ ಆದೇಶದಲ್ಲಿ ಹೇಳಲಾಗಿತ್ತು.

ಸುತ್ತೋಲೆಯ ಪ್ರಕಾರ ಶಾಲಾ ಆವರಣದಲ್ಲಿ ‘ಶೌರ್ಯ ಯಾತ್ರೆಗಳು’ ಮತ್ತು ಜಾಗೃತಿ ಮೆರವಣಿಗೆಗಳನ್ನು ಕೂಡ ಆಯೋಜಿಸಬೇಕಿತ್ತು. ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಲು ಮಿಲಿಟರಿ ಸಿಬ್ಬಂದಿ, ಸಾಮಾಜಿಕ ಕಾರ್ಯಕರ್ತರು ಮತ್ತು ಇತಿಹಾಸ ಉತ್ಸಾಹಿಗಳನ್ನು ಅತಿಥಿಗಳಾಗಿ ಆಹ್ವಾನಿಸಬೇಕಾಗಿತ್ತು.

ಮದನ್ ದಿಲಾವರ್ ವಿವಾದಾತ್ಮಕ ಹೇಳಿಕೆ

ಮದನ್ ದಿಲಾವರ್ ಶೌರ್ಯ ದಿನ ಆಚರಣೆಯಂತಹ ವಿವಾದಾತ್ಮಕ ಆದೇಶ, ಹೇಳಿಕೆ ನೀಡುವುದು ಹೊಸತಲ್ಲ. ಶಿಕ್ಷಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ದಿಲಾವರ್ ಹಲವಾರು ವಿವಾದಾತ್ಮಕ ಹೇಳಿಕೆಗಳು ಮತ್ತು ಆದೇಶಗಳನ್ನು ನೀಡಿದ್ದಾರೆ. ಮದರಸಾಗಳು ಸೇರಿದಂತೆ ಶಾಲೆಗಳಲ್ಲಿ ವಂದೇ ಮಾತರಂ ಕಡ್ಡಾಯಗೊಳಿಸುವ ಅವರ ಈ ಹಿಂದಿನ ಆದೇಶವು ಅಲ್ಪಸಂಖ್ಯಾತ ಗುಂಪುಗಳಿಂದ ತೀವ್ರ ಟೀಕೆಗೆ ಗುರಿಯಾಯಿತು. ಇದು ಒಂದು ಸಂಸ್ಕೃತಿಯ ಹೇರಿಕೆ ಎಂದು ಆಕ್ರೋಶ ವ್ಯಕ್ತವಾಗಿತ್ತು. ಅನೇಕ ಸಂದರ್ಭಗಳಲ್ಲಿ, ದಿಲಾವರ್ ಮೊಘಲ್ ದೊರೆ ಅಕ್ಬರ್ ಅನ್ನು ನಿರಂಕುಶಾಧಿಕಾರಿ ಎಂದು ಕರೆದಿದ್ದಾರೆ. ಈ ಹಿಂದಿನ ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಅಕ್ಬರ್‌ ಅನ್ನು ವೈಭವೀಕರಿಸಿತ್ತು ಎಂದು ಆರೋಪಿಸಿದ್ದಾರೆ.

ಸರ್ಕಾರಿ ಶಾಲೆಗಳ ಆವರಣದಲ್ಲಿರುವ ಅಕ್ರಮ ಅತಿಕ್ರಮಣಗಳು ಮತ್ತು ಧಾರ್ಮಿಕ ಸ್ಥಳಗಳನ್ನು ತಕ್ಷಣವೇ ತೆರವುಗೊಳಿಸಬೇಕು. ಯಾವುದೇ ಶಾಲೆಯಲ್ಲಿ ಅಂತಹ ಸ್ಥಳಗಳು ಕಂಡುಬಂದರೆ ಪ್ರಾಂಶುಪಾಲರು/ಮುಖ್ಯೋಪಾಧ್ಯಾಯರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು ಕೆಲ ದಿನಗಳ ಹಿಂದೆ ದಿಲಾವರ್ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...