Homeಮುಖಪುಟಬಾಬರಿ ಮಸೀದಿ ಧ್ವಂಸದಂದು ಶಾಲೆಗಳಲ್ಲಿ 'ಶೌರ್ಯ ದಿನಾಚರಣೆ'ಗೆ ಸೂಚಿಸಿದ ರಾಜಸ್ಥಾನದ ಬಿಜೆಪಿ ಸರ್ಕಾರ : 12...

ಬಾಬರಿ ಮಸೀದಿ ಧ್ವಂಸದಂದು ಶಾಲೆಗಳಲ್ಲಿ ‘ಶೌರ್ಯ ದಿನಾಚರಣೆ’ಗೆ ಸೂಚಿಸಿದ ರಾಜಸ್ಥಾನದ ಬಿಜೆಪಿ ಸರ್ಕಾರ : 12 ಗಂಟೆಯೊಳಗೆ ಆದೇಶ ವಾಪಸ್

- Advertisement -
- Advertisement -

ಬಾಬರಿ ಮಸೀದಿ ಧ್ವಂಸ ದಿನವಾದ ಡಿಸೆಂಬರ್ 6ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಶೌರ್ಯ ದಿನ’ ಆಚರಿಸುವಂತೆ ನೀಡಿದ್ದ ಆದೇಶವನ್ನು 12 ಗಂಟೆಗಳ ಒಳಗೆ ರಾಜಸ್ಥಾನದ ಬಿಜೆಪಿ ಸರ್ಕಾರ ವಾಪಸ್ ಪಡೆದಿದೆ.

ಡಿಸೆಂಬರ್ 6ರಂದು ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ‘ಶೌರ್ಯ ದಿನ’ ಆಚರಣೆ ಮಾಡುವಂತೆ ರಾಜಸ್ಥಾನದ ಶಿಕ್ಷಣ ಮತ್ತು ಪಂಚಾಯತ್ ರಾಜ್ ಸಚಿವ ಮದನ್ ದಿಲಾವರ್ ಶನಿವಾರ (ನವೆಂಬರ್ 29) ಆದೇಶಿಸಿದ್ದರು. ಆದರೆ, ವಿದ್ಯಾರ್ಥಿಗಳಿ ಪರೀಕ್ಷೆಯ ಕಾರಣ ನೀಡಿ ಭಾನುವಾರ (ನವೆಂಬರ್ 30) ಅದೇಶವನ್ನು ವಾಪಸ್ ಪಡೆದಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರೌಢ ಶಿಕ್ಷಣ ನಿರ್ದೇಶಕ ಸೀತಾರಾಮ್ ಜಾಟ್ ಅವರು ಶನಿವಾರ ಶಾಲೆಗಳಿಗೆ ಹೊರಡಿಸಿದ್ದ ಆದೇಶದಲ್ಲಿ, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯಲ್ಲಿ ‘ದೇಶಭಕ್ತಿ, ರಾಷ್ಟ್ರೀಯತೆ, ಶೌರ್ಯ, ಸಾಂಸ್ಕೃತಿಕ ಹೆಮ್ಮೆ ಮತ್ತು ರಾಷ್ಟ್ರೀಯ ಏಕತೆ’ಯನ್ನು ಉತ್ತೇಜಿಸಲು ಡಿಸೆಂಬರ್ 6ರಂದು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸುವಂತೆ ಸೂಚಿಸಿದ್ದರು ಎಂದು ವರದಿ ಹೇಳಿದೆ.

ಭಾನುವಾರ ಬೆಳಿಗ್ಗೆ 9.15ಕ್ಕೆ ಸಚಿವರು ಆದೇಶವನ್ನು ಹಿಂತೆಗೆದುಕೊಂಡಿದ್ದಾರೆ. “ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರಸ್ತುತ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುತ್ತಿವೆ. ಡಿಸೆಂಬರ್ 5 ಮತ್ತು 6ರಂದು ಪರೀಕ್ಷೆಗಳಿವೆ. ಹಾಗಾಗಿ, ಪರೀಕ್ಷಾ ಅವಧಿಯಲ್ಲಿ ಶಾಲೆಗಳಲ್ಲಿ ಯಾವುದೇ ಇತರ ಚಟುವಟಿಕೆಗಳು ಅಥವಾ ಕಾರ್ಯಕ್ರಮಗಳನ್ನು ನಡೆಸಲು ಸಾಧ್ಯವಿಲ್ಲ. ಆದ್ದರಿಂದ, ‘ಶೌರ್ಯ ದಿನ’ ಆಚರಣೆಯನ್ನು ಮುಂದೂಡಲಾಗಿದೆ” ಎಂದು ಸಚಿವ ದಿಲಾವರ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅದಾಗ್ಯೂ, ಶಾಲೆಗಳಲ್ಲಿ ಶೌರ್ಯ ದಿನ ಆಚರಿಸುವುದನ್ನು ದಿಲಾವರ್ ಸಮರ್ಥಿಸಿಕೊಂಡಿದ್ದಾರೆ. “ಶ್ರೀರಾಮನು ಭಾರತೀಯ ಸಂಸ್ಕೃತಿಯ ಆದರ್ಶಗಳನ್ನು ಪ್ರತಿನಿಧಿಸುತ್ತಾನೆ. ರಾಮ ಮಂದಿರ ಚಳುವಳಿ ಸಾಂಸ್ಕೃತಿಕ ಹೆಮ್ಮೆಯನ್ನು ಸಂಕೇತಿಸುತ್ತದೆ. ರಾಮ ಜನ್ಮಭೂಮಿ ಚಳುವಳಿಯ ಬಗ್ಗೆ ಕಲಿಯುವುದು ‘ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡುತ್ತದೆ. ದೇಶಭಕ್ತಿ ಮತ್ತು ರಾಷ್ಟ್ರೀಯ ಏಕತೆಯ ಮನೋಭಾವವನ್ನು ತುಂಬುತ್ತದೆ” ಎಂದು ಹೇಳಿದ್ದಾರೆ.

ಶೌರ್ಯ ದಿನದ ಭಾಗವಾಗಿ ಶಾಲೆಗಳಲ್ಲಿ ಭಾರತೀಯ ಸಂಸ್ಕೃತಿ ಮತ್ತು ರಾಮ ಮಂದಿರ ಚಳುವಳಿಯ ಕುರಿತು ಭಾಷಣ, ಪ್ರಬಂಧ ಸ್ಪರ್ಧೆಗಳನ್ನು ನಡೆಸುವಂತೆ ಹಾಗೂ ಅಯೋಧ್ಯಾ ರಾಮ ಮಂದಿರದ ವಿಷಯಾಧಾರಿತ ಚಿತ್ರಕಲೆ, ಪೋಸ್ಟರ್ ತಯಾರಿಕೆ ಚಟುವಟಿಕೆಗಳನ್ನು ಆಯೋಜಿಸುವಂತೆ ಸರ್ಕಾರದ ಆದೇಶದಲ್ಲಿ ಹೇಳಲಾಗಿತ್ತು. ದೇಶಭಕ್ತಿ ಗೀತೆ, ಜಾನಪದ ನೃತ್ಯ ಮತ್ತು ಐತಿಹಾಸಿಕ ಅಥವಾ ಪೌರಾಣಿಕ ಪ್ರಸಂಗಗಳನ್ನು ಆಧರಿಸಿದ ಕಿರು ನಾಟಕಗಳನ್ನು ಪ್ರದರ್ಶಿಸುವಂತೆಯೂ ಸೂಚಿಸಲಾಗಿತ್ತು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ವಿವರಿಸಿದೆ.

ರಾಮ ಜನ್ಮಭೂಮಿ ಚಳುವಳಿ ಮತ್ತು ಭಾರತೀಯ ಇತಿಹಾಸದ ಇತರ ‘ವೀರ ಘಟನೆಗಳಿಗೆ’ ಸಂಬಂಧಿಸಿದ ಛಾಯಾಚಿತ್ರಗಳು, ಲೇಖನಗಳು ಮತ್ತು ಕಲಾಕೃತಿಗಳನ್ನು ಪ್ರದರ್ಶಿಸುವಂತೆ ಹಾಗೂ ಸಾಮೂಹಿಕ ಸೂರ್ಯ ನಮಸ್ಕಾರ, ಯೋಗಾಭ್ಯಾಸ ಮತ್ತು ಶ್ರೀರಾಮನಿಗೆ ಸಮರ್ಪಿತವಾದ ಸ್ತೋತ್ರಗಳು ಮತ್ತು ಆರತಿಯೊಂದಿಗೆ ಪ್ರಾರಂಭವಾಗುವ ವಿಶೇಷ ಪ್ರಾರ್ಥನಾ ಸಭೆಯನ್ನು ನಡೆಸುವಂತೆ ಆದೇಶದಲ್ಲಿ ಹೇಳಲಾಗಿತ್ತು.

ಸುತ್ತೋಲೆಯ ಪ್ರಕಾರ ಶಾಲಾ ಆವರಣದಲ್ಲಿ ‘ಶೌರ್ಯ ಯಾತ್ರೆಗಳು’ ಮತ್ತು ಜಾಗೃತಿ ಮೆರವಣಿಗೆಗಳನ್ನು ಕೂಡ ಆಯೋಜಿಸಬೇಕಿತ್ತು. ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಲು ಮಿಲಿಟರಿ ಸಿಬ್ಬಂದಿ, ಸಾಮಾಜಿಕ ಕಾರ್ಯಕರ್ತರು ಮತ್ತು ಇತಿಹಾಸ ಉತ್ಸಾಹಿಗಳನ್ನು ಅತಿಥಿಗಳಾಗಿ ಆಹ್ವಾನಿಸಬೇಕಾಗಿತ್ತು.

ಮದನ್ ದಿಲಾವರ್ ವಿವಾದಾತ್ಮಕ ಹೇಳಿಕೆ

ಮದನ್ ದಿಲಾವರ್ ಶೌರ್ಯ ದಿನ ಆಚರಣೆಯಂತಹ ವಿವಾದಾತ್ಮಕ ಆದೇಶ, ಹೇಳಿಕೆ ನೀಡುವುದು ಹೊಸತಲ್ಲ. ಶಿಕ್ಷಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ದಿಲಾವರ್ ಹಲವಾರು ವಿವಾದಾತ್ಮಕ ಹೇಳಿಕೆಗಳು ಮತ್ತು ಆದೇಶಗಳನ್ನು ನೀಡಿದ್ದಾರೆ. ಮದರಸಾಗಳು ಸೇರಿದಂತೆ ಶಾಲೆಗಳಲ್ಲಿ ವಂದೇ ಮಾತರಂ ಕಡ್ಡಾಯಗೊಳಿಸುವ ಅವರ ಈ ಹಿಂದಿನ ಆದೇಶವು ಅಲ್ಪಸಂಖ್ಯಾತ ಗುಂಪುಗಳಿಂದ ತೀವ್ರ ಟೀಕೆಗೆ ಗುರಿಯಾಯಿತು. ಇದು ಒಂದು ಸಂಸ್ಕೃತಿಯ ಹೇರಿಕೆ ಎಂದು ಆಕ್ರೋಶ ವ್ಯಕ್ತವಾಗಿತ್ತು. ಅನೇಕ ಸಂದರ್ಭಗಳಲ್ಲಿ, ದಿಲಾವರ್ ಮೊಘಲ್ ದೊರೆ ಅಕ್ಬರ್ ಅನ್ನು ನಿರಂಕುಶಾಧಿಕಾರಿ ಎಂದು ಕರೆದಿದ್ದಾರೆ. ಈ ಹಿಂದಿನ ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಅಕ್ಬರ್‌ ಅನ್ನು ವೈಭವೀಕರಿಸಿತ್ತು ಎಂದು ಆರೋಪಿಸಿದ್ದಾರೆ.

ಸರ್ಕಾರಿ ಶಾಲೆಗಳ ಆವರಣದಲ್ಲಿರುವ ಅಕ್ರಮ ಅತಿಕ್ರಮಣಗಳು ಮತ್ತು ಧಾರ್ಮಿಕ ಸ್ಥಳಗಳನ್ನು ತಕ್ಷಣವೇ ತೆರವುಗೊಳಿಸಬೇಕು. ಯಾವುದೇ ಶಾಲೆಯಲ್ಲಿ ಅಂತಹ ಸ್ಥಳಗಳು ಕಂಡುಬಂದರೆ ಪ್ರಾಂಶುಪಾಲರು/ಮುಖ್ಯೋಪಾಧ್ಯಾಯರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು ಕೆಲ ದಿನಗಳ ಹಿಂದೆ ದಿಲಾವರ್ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...