Homeಮುಖಪುಟರಾಜಸ್ಥಾನ: ಬಿಜೆಪಿ ಶಾಸಕನ ಕಿರುಕುಳಕ್ಕೆ ಬೇಸತ್ತು ಸಂತ ಆತ್ಮಹತ್ಯೆ- ಆರೋಪ

ರಾಜಸ್ಥಾನ: ಬಿಜೆಪಿ ಶಾಸಕನ ಕಿರುಕುಳಕ್ಕೆ ಬೇಸತ್ತು ಸಂತ ಆತ್ಮಹತ್ಯೆ- ಆರೋಪ

- Advertisement -
- Advertisement -

ರೆಸಾರ್ಟ್ ನಿರ್ಮಿಸುವುದಕ್ಕಾಗಿ ದಾರಿ ಬೇಕಿದ್ದು, ಅದಕ್ಕಾಗಿ ಆಶ್ರಮದ ಭೂಮಿಯನ್ನು ಬಿಟ್ಟುಕೊಡುವಂತೆ ಬಿಜೆಪಿ ಶಾಸಕ ಒತ್ತಡ ಹೇರಿದ ಕಾರಣದಿಂದ ಸಂತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಜಸ್ಥಾನ ಪೊಲೀಸರು ತಿಳಿಸಿದ್ದಾರೆ. ರಾಜಸ್ಥಾನದ ಜಲೋರ್‌ನಲ್ಲಿ ಘಟನೆ ನಡೆದಿದೆ.

ಸ್ಥಳದಲ್ಲಿದ್ದ ಡೆತ್‌ನೋಟ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆದರೆ ಡೆತ್‌ನೋಟ್‌ನಲ್ಲಿ ಏನಿದೆ ಎಂಬ ವಿಷಯವನ್ನು ಬಹಿರಂಗಪಡಿಸಿಲ್ಲ.

ರವಿನಾಥ್ (60) ಅವರ ದೇಹವು ಗುರುವಾರ ರಾತ್ರಿ ಜಾಲೋರ್‌ನ ರಾಜಾಪುರ ಗ್ರಾಮದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ನಂತರ, ಆಶ್ರಮದಲ್ಲಿದ್ದ ಭಕ್ತರು ಶವವನ್ನು ಕೆಳಗಿಳಿಸಲು ಪೊಲೀಸರಿಗೆ ಅವಕಾಶ ನೀಡಲಿಲ್ಲ. ಅದಕ್ಕೂ ಮೊದಲು ಡೆತ್‌ನೋಟ್‌ನಲ್ಲಿರುವ ವಿಷಯವನ್ನು ಬಹಿರಂಗಪಡಿಸಬೇಕು ಎಂದು ಅವರು ಒತ್ತಾಯಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದರ ನಡುವೆ ತನ್ನ ಮೇಲೆ ಬಂದಿರುವ ಆರೋಪಗಳನ್ನು ಭಿನ್ಮಾಲ್ ಶಾಸಕ ಪೂರರಾಮ್ ಚೌಧರಿ ನಿರಾಕರಿಸಿದ್ದಾರೆ. ನ್ಯಾಯಯುತವಾಗಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಆಶ್ರಮದ ಸಂತರು ನೀಡಿದ ದೂರಿನ ಮೇರೆಗೆ ಪೂರರಾಮ್‌ ಚೌದರಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಲಾಗಿದೆ ಎಂದು ಜಾಲೋರ್ ಎಸ್ಪಿ ಹರ್ಷವರ್ಧನ್ ಅಗರವಾಲಾ ತಿಳಿಸಿದ್ದಾರೆ.

“ಅವರು ಇನ್ನೂ ಶವವನ್ನು ಹೊರತೆಗೆದಿಲ್ಲ. ನಾವು ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡುವಂತೆ ಅವರಲ್ಲಿ ಕೋರಿದ್ದೇವೆ” ಎಂದು ಅಗರ್‌ವಾಲಾ ಹೇಳಿರುವುದಾಗಿ ‘ದಿ ಕ್ವಿಂಟ್’ ವರದಿ ಮಾಡಿದೆ.

ಡೆತ್‌ನೋಟ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಒಪ್ಪಿಕೊಂಡಿದ್ದರೂ ಅದರಲ್ಲಿನ ವಿಷಯವನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಬಹಿರಂಗಪಡಿಸಿದರೆ ತನಿಖೆಯ ಮೇಲೆ ಪರಿಣಾಮ ಬೀರಬಹುದು ಎಂದಿದ್ದಾರೆ.

ರಾಜಾಪುರದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಬಗ್ಗೆ ಶುಕ್ರವಾರ ಬೆಳಿಗ್ಗೆ ಮಾಹಿತಿ ಸಿಕ್ಕಿತು ಎಂದು ಎಸ್ಪಿ ತಿಳಿಸಿದ್ದಾರೆ.

ಆತ್ಮಹತ್ಯೆಗೆ ಭಿನ್ಮಲ್ ಶಾಸಕರೇ ಕಾರಣ ಎಂದು ಅಲ್ಲಿನ ಸಂತರು ಆರೋಪಿಸಿದ್ದಾರೆ. ಶಾಸಕರು ಕಳೆದ ಕೆಲವು ದಿನಗಳಿಂದ ಕಿರುಕುಳ ನೀಡುತ್ತಿದ್ದರು ಎಂಬುದು ತಿಳಿದುಬಂದಿದೆ. ಚೌಧರಿ ಅವರು ಆಶ್ರಮದ ಪಕ್ಕದಲ್ಲಿ ಒಂದು ತುಂಡು ಭೂಮಿಯನ್ನು ಹೊಂದಿದ್ದು ಅಲ್ಲಿ ರೆಸಾರ್ಟ್ ನಿರ್ಮಿಸಲು ಬಯಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿರಿ: ಸ್ಪಾ ಮ್ಯಾನೇಜರ್‌‌ ಮತ್ತು ಗ್ರಾಹಕನಿಂದ ಉದ್ಯೋಗಿಯ ಮೇಲೆ ಸಾಮೂಹಿಕ ಅತ್ಯಾಚಾರ

“ಆದರೆ ಚೌದರಿಯವರ ಜಾಗಕ್ಕೆ ತಲುಪಬೇಕಾದರೆ ಆಶ್ರಮದ ಮೂಲಕ ಸಾಗಬೇಕಿತ್ತು. ಇದಕ್ಕಾಗಿ ಚೌಧರಿಯವರು ಆಶ್ರಮದ ಭೂಮಿಯನ್ನು ನೀಡುವಂತೆ ರವಿನಾಥ್ ಅವರಲ್ಲಿ ಒತ್ತಾಯಿಸುತ್ತಿದ್ದರು” ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಆರೋಪಗಳನ್ನು ಶಾಸಕ ಚೌದರಿ ತಳ್ಳಿಹಾಕಿದ್ದಾರೆ. ರವಿನಾಥ್ ಅವರ ಆಶ್ರಮಕ್ಕೆ ನಾನೇ ಭೂಮಿಯನ್ನು ನೀಡಿದ್ದೇನೆ ಎಂದಿದ್ದಾರೆ.

“ಆರೋಪಗಳು ಸುಳ್ಳು. ನಾನು ನನ್ನ ಭೂಮಿಯನ್ನು ಆಶ್ರಮಕ್ಕೆ ನೀಡಿದ್ದೇನೆ. ಈ ವಿಷಯದ ಬಗ್ಗೆ ನ್ಯಾಯಯುತ ತನಿಖೆ ನಡೆಯಲೆಂದು ಆಗ್ರಹಿಸುತ್ತೇನೆ. ರವಿನಾಥ್ ಸಂತರನ್ನು ಯಾರೋ ಕೊಲೆ ಮಾಡಿರುವಂತೆ ಕಾಣುತ್ತಿದೆ. ಅವರ ಸಾವಿಗೆ ನ್ಯಾಯ ಸಿಗಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....