Homeನಿಜವೋ ಸುಳ್ಳೋಹಣ ಕೊಡದೇ ಬಸ್ ಬಿಡುವುದಿಲ್ಲ ಎಂದು ಮಧ್ಯರಾತ್ರಿಯಲ್ಲಿ ಹಠಹಿಡಿದ ರಾಜಸ್ತಾನ? ಸಂಬಿತ್‌ ಪಾತ್ರಾನ ಹೊಸ ಸುಳ್ಳು

ಹಣ ಕೊಡದೇ ಬಸ್ ಬಿಡುವುದಿಲ್ಲ ಎಂದು ಮಧ್ಯರಾತ್ರಿಯಲ್ಲಿ ಹಠಹಿಡಿದ ರಾಜಸ್ತಾನ? ಸಂಬಿತ್‌ ಪಾತ್ರಾನ ಹೊಸ ಸುಳ್ಳು

- Advertisement -
- Advertisement -

ಬಿಜೆಪಿಯ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಮೇ 21ರಂದು ಟ್ವೀಟ್ ಮಾಡಿ 19 ಲಕ್ಷ ರೂಗಳನ್ನು ಬರೆದಿರುವ ಚೆಕ್ ಚಿತ್ರವೊಂದನ್ನು ಪ್ರಕಟಿಸಿದ್ದರು. “ರಾಜಸ್ತಾನದ ಕೋಟದಿಂದ ತಮ್ಮ ವಿದ್ಯಾರ್ಥಿಗಳನ್ನು ಕರೆತರಲು ಉತ್ತರ ಪ್ರದೇಶದಿಂದ ಬಸ್‌ಗಳು ಹೊರಟಿದ್ದವು. ವಾಪಸ್ ಬರಲು ಪ್ರಿಯಾಂಕ ಗಾಂಧಿಯವರ ನೇತೃತ್ವದ ಗುಜರಾತ್ ಸರ್ಕಾರ ಆ ಬಸ್‌ಗಳಿಗೆ ಡೀಸೆಲ್ ತುಂಬಿಸಿತ್ತು. ಆದರೆ ಮಧ್ಯರಾತ್ರಿಯೊಳಗೆ ಅದರ ಬಿಲ್ 19,76,286/- ರೂಗಳನ್ನು ಕಳಿಸದಿದ್ದರೆ ಇಲ್ಲಿಂದ ಬಸ್ ಹೊರಡಲು ಬಿಡುವುದಿಲ್ಲ ಎಂದು ಹಠ ಮಾಡಿದ್ದಾರೆ. ವಾವ್ ಎಂತಹ ಸಹಾಯ! ಕಾಂಗ್ರೆಸ್‌ನ ಎರಡು ಮುಖ!” ಎಂದು ಟ್ವೀಟ್ ಮಾಡಿದ್ದರು.

ಇದನ್ನು ಕನಿಷ್ಟ 48 ಸಾವಿರ ಜನ ಲೈಕ್ ಮಾಡಿದ್ದರಲ್ಲದೇ 18 ಸಾವಿರಕ್ಕೂ ಹೆಚ್ಚು ಜನ ಹಂಚಿಕೊಂಡಿದ್ದರು.
ಸಂಬಿತ್ ಪಾತ್ರ ಪ್ರಕಾರ ಕೇವಲ 19 ಲಕ್ಷ ಹಣ ವಿಚಾರದಲ್ಲಿ ಹಣ ಕೊಡದಿದ್ದರೆ ಬಸ್ ಕಳಿಸುವುದಿಲ್ಲ ಎಂದು ಕಾಂಗ್ರೆಸ್ ಸರ್ಕಾರ ಧಮಕಿ ಹಾಕಿತ್ತು.

ಫ್ಯಾಕ್ಟ್‌ ಚೆಕ್

ಏಪ್ರಿಲ್ 17,18,19 ರಂದು ರಾಜಸ್ಥಾನದ ಕೋಟಾದಿಂದ ಉತ್ತರ ಪ್ರದೇಶಕ್ಕೆ 403 ಬಸ್‌ಗಳಲ್ಲಿ ವಿದ್ಯಾರ್ಥಿಗಳನ್ನು ಕರೆತರಲಾಗಿದೆ. ಆ ಬಸ್‌ಗಳಿಗೆ ರಾಜಸ್ಥಾನದಲ್ಲಿ ಡೀಸೆಲ್ ತುಂಬಿಸಲಾಗಿದೆ. ಒಪ್ಪಂದದಂತೆ ಅದರ ಹಣವನ್ನು ’ಮೇ 05 ರಂದ’ ಉತ್ತರ ಪ್ರದೇಶ ಸರ್ಕಾರ ರಾಜಸ್ಥಾನಕ್ಕೆ ತುಂಬಿಕೊಟ್ಟಿದೆ.

ಈ ಕುರಿತು ಆಲ್ಟ್‌ನ್ಯೂಸ್ ಕೋಟಾದ ಜಿಲ್ಲಾಧಿಕಾರಿ ಓಂ ಕೇಸರ್ ಮತ್ತು ಜೈಪುರದ ಸಾರಿಗೆ ಅಧಿಕಾರಿ ನವೀನ್ ಜೈನ್‌ರವರನ್ನು ಮಾತನಾಡಿಸಿದೆ. ಅವರಿಬ್ಬರೂ ಎರಡೂ ರಾಜ್ಯಗಳ ಒಪ್ಪಂದದಂತೆ ಕೆಲಸ ಸುಗಮವಾಗಿ ನಡೆದಿದೆ. ಏಪ್ರಿಲ್ 17,18,19 ರಂದು ಡೀಸೆಲ್ ತುಂಬಿಸಿದ್ದಕ್ಕಾಗಿ ಮೇ 05ರಂದು ಹಣ ತಲುಪಿದೆ. ಇದರಲ್ಲಿ ತಡರಾತ್ರಿ ಬಸ್ ತಡೆಯುವ ಪ್ರಮೇಯವೇ ಉದ್ಭವಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅಲ್ಲದೇ ಯುಪಿ ಸರ್ಕಾರದ ವತಿಯಿಂದಲೂ ಕೂಡ ಹಣ ನೀಡಿರುವುದನ್ನು ಪತ್ರಿಕಾ ಗೋಷ್ಟಿಯಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿಗಳನ್ನು ಕರೆತರುವ ಯೋಜನೆಯ ಭಾಗವಾಗಿದ್ದ ಉತ್ತರ ಪ್ರದೇಶದ ಸಾರಿಗೆ ಇಲಾಖೆಯ ಅಧಿಕಾರಿಯೊಬ್ಬರು ನಮ್ಮ ಬೇಡಿಕೆಗಳಿಗೆ ರಾಜಸ್ಥಾನ ಸರ್ಕಾರವು ಸಂಪೂರ್ಣವಾಗಿ ಸಹಕರಿಸಿತು. ಕೊರತೆ ಬಂದ ಬಸ್‌ಗಳನ್ನು ಸಹ ರಾಜಸ್ಥಾನ ಸರ್ಕಾರವೇ ಕಳಿಸಿಕೊಟ್ಟಿತು. ಅದಕ್ಕೆ ಯುಪಿ ಸರ್ಕಾರ ಹಣ ಪಾವತಿಸಿದೆ. ಯಾವುದೇ ಅಡೆತಡೆಗಳು ಸಂಭವಿಸಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಅಲ್ಲಿಗೆ ಸಂಬಿತ್ ಪಾತ್ರ ಹೇಳಿದ್ದು ಸಂಪೂರ್ಣ ಸುಳ್ಳು ಎಂಬುದು ಸ್ಪಷ್ಟವಾಗಿದೆ. ಕೊರೊನಾ ವಿರುದ್ಧ ಎಲ್ಲಾ ರಾಜ್ಯಗಳು ರಾಜಕೀಯ ಮರೆತು ಜನರಿಗಾಗಿ ಕೆಲಸ ಮಾಡುತ್ತಿವೆ. ಆದರೆ ಸಂಬಿತ್‌ ಪಾತ್ರರಂತಹ ವ್ಯಕ್ತಿಗಳು ಈ ರೀತಿ ರಾಜ್ಯಗಳ ನಡುವೆ ಬಿರುಕು ಮೂಡಿಸುವ ಕೆಲಸ ಮಾಡಬಾರದು ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಮೋದಿ ಪಶ್ಚಿಮ ಬಂಗಾಳ ಭೇಟಿ ವೇಳೆ ಚೌಕಿದಾರ್‌ ಚೋರ್‌ ಹೈ ಘೋಷಣೆ ಕೂಗಿದ್ದು ನಿಜವೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...