Homeನಿಜವೋ ಸುಳ್ಳೋಹಣ ಕೊಡದೇ ಬಸ್ ಬಿಡುವುದಿಲ್ಲ ಎಂದು ಮಧ್ಯರಾತ್ರಿಯಲ್ಲಿ ಹಠಹಿಡಿದ ರಾಜಸ್ತಾನ? ಸಂಬಿತ್‌ ಪಾತ್ರಾನ ಹೊಸ ಸುಳ್ಳು

ಹಣ ಕೊಡದೇ ಬಸ್ ಬಿಡುವುದಿಲ್ಲ ಎಂದು ಮಧ್ಯರಾತ್ರಿಯಲ್ಲಿ ಹಠಹಿಡಿದ ರಾಜಸ್ತಾನ? ಸಂಬಿತ್‌ ಪಾತ್ರಾನ ಹೊಸ ಸುಳ್ಳು

- Advertisement -
- Advertisement -

ಬಿಜೆಪಿಯ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಮೇ 21ರಂದು ಟ್ವೀಟ್ ಮಾಡಿ 19 ಲಕ್ಷ ರೂಗಳನ್ನು ಬರೆದಿರುವ ಚೆಕ್ ಚಿತ್ರವೊಂದನ್ನು ಪ್ರಕಟಿಸಿದ್ದರು. “ರಾಜಸ್ತಾನದ ಕೋಟದಿಂದ ತಮ್ಮ ವಿದ್ಯಾರ್ಥಿಗಳನ್ನು ಕರೆತರಲು ಉತ್ತರ ಪ್ರದೇಶದಿಂದ ಬಸ್‌ಗಳು ಹೊರಟಿದ್ದವು. ವಾಪಸ್ ಬರಲು ಪ್ರಿಯಾಂಕ ಗಾಂಧಿಯವರ ನೇತೃತ್ವದ ಗುಜರಾತ್ ಸರ್ಕಾರ ಆ ಬಸ್‌ಗಳಿಗೆ ಡೀಸೆಲ್ ತುಂಬಿಸಿತ್ತು. ಆದರೆ ಮಧ್ಯರಾತ್ರಿಯೊಳಗೆ ಅದರ ಬಿಲ್ 19,76,286/- ರೂಗಳನ್ನು ಕಳಿಸದಿದ್ದರೆ ಇಲ್ಲಿಂದ ಬಸ್ ಹೊರಡಲು ಬಿಡುವುದಿಲ್ಲ ಎಂದು ಹಠ ಮಾಡಿದ್ದಾರೆ. ವಾವ್ ಎಂತಹ ಸಹಾಯ! ಕಾಂಗ್ರೆಸ್‌ನ ಎರಡು ಮುಖ!” ಎಂದು ಟ್ವೀಟ್ ಮಾಡಿದ್ದರು.

ಇದನ್ನು ಕನಿಷ್ಟ 48 ಸಾವಿರ ಜನ ಲೈಕ್ ಮಾಡಿದ್ದರಲ್ಲದೇ 18 ಸಾವಿರಕ್ಕೂ ಹೆಚ್ಚು ಜನ ಹಂಚಿಕೊಂಡಿದ್ದರು.
ಸಂಬಿತ್ ಪಾತ್ರ ಪ್ರಕಾರ ಕೇವಲ 19 ಲಕ್ಷ ಹಣ ವಿಚಾರದಲ್ಲಿ ಹಣ ಕೊಡದಿದ್ದರೆ ಬಸ್ ಕಳಿಸುವುದಿಲ್ಲ ಎಂದು ಕಾಂಗ್ರೆಸ್ ಸರ್ಕಾರ ಧಮಕಿ ಹಾಕಿತ್ತು.

ಫ್ಯಾಕ್ಟ್‌ ಚೆಕ್

ಏಪ್ರಿಲ್ 17,18,19 ರಂದು ರಾಜಸ್ಥಾನದ ಕೋಟಾದಿಂದ ಉತ್ತರ ಪ್ರದೇಶಕ್ಕೆ 403 ಬಸ್‌ಗಳಲ್ಲಿ ವಿದ್ಯಾರ್ಥಿಗಳನ್ನು ಕರೆತರಲಾಗಿದೆ. ಆ ಬಸ್‌ಗಳಿಗೆ ರಾಜಸ್ಥಾನದಲ್ಲಿ ಡೀಸೆಲ್ ತುಂಬಿಸಲಾಗಿದೆ. ಒಪ್ಪಂದದಂತೆ ಅದರ ಹಣವನ್ನು ’ಮೇ 05 ರಂದ’ ಉತ್ತರ ಪ್ರದೇಶ ಸರ್ಕಾರ ರಾಜಸ್ಥಾನಕ್ಕೆ ತುಂಬಿಕೊಟ್ಟಿದೆ.

ಈ ಕುರಿತು ಆಲ್ಟ್‌ನ್ಯೂಸ್ ಕೋಟಾದ ಜಿಲ್ಲಾಧಿಕಾರಿ ಓಂ ಕೇಸರ್ ಮತ್ತು ಜೈಪುರದ ಸಾರಿಗೆ ಅಧಿಕಾರಿ ನವೀನ್ ಜೈನ್‌ರವರನ್ನು ಮಾತನಾಡಿಸಿದೆ. ಅವರಿಬ್ಬರೂ ಎರಡೂ ರಾಜ್ಯಗಳ ಒಪ್ಪಂದದಂತೆ ಕೆಲಸ ಸುಗಮವಾಗಿ ನಡೆದಿದೆ. ಏಪ್ರಿಲ್ 17,18,19 ರಂದು ಡೀಸೆಲ್ ತುಂಬಿಸಿದ್ದಕ್ಕಾಗಿ ಮೇ 05ರಂದು ಹಣ ತಲುಪಿದೆ. ಇದರಲ್ಲಿ ತಡರಾತ್ರಿ ಬಸ್ ತಡೆಯುವ ಪ್ರಮೇಯವೇ ಉದ್ಭವಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅಲ್ಲದೇ ಯುಪಿ ಸರ್ಕಾರದ ವತಿಯಿಂದಲೂ ಕೂಡ ಹಣ ನೀಡಿರುವುದನ್ನು ಪತ್ರಿಕಾ ಗೋಷ್ಟಿಯಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿಗಳನ್ನು ಕರೆತರುವ ಯೋಜನೆಯ ಭಾಗವಾಗಿದ್ದ ಉತ್ತರ ಪ್ರದೇಶದ ಸಾರಿಗೆ ಇಲಾಖೆಯ ಅಧಿಕಾರಿಯೊಬ್ಬರು ನಮ್ಮ ಬೇಡಿಕೆಗಳಿಗೆ ರಾಜಸ್ಥಾನ ಸರ್ಕಾರವು ಸಂಪೂರ್ಣವಾಗಿ ಸಹಕರಿಸಿತು. ಕೊರತೆ ಬಂದ ಬಸ್‌ಗಳನ್ನು ಸಹ ರಾಜಸ್ಥಾನ ಸರ್ಕಾರವೇ ಕಳಿಸಿಕೊಟ್ಟಿತು. ಅದಕ್ಕೆ ಯುಪಿ ಸರ್ಕಾರ ಹಣ ಪಾವತಿಸಿದೆ. ಯಾವುದೇ ಅಡೆತಡೆಗಳು ಸಂಭವಿಸಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಅಲ್ಲಿಗೆ ಸಂಬಿತ್ ಪಾತ್ರ ಹೇಳಿದ್ದು ಸಂಪೂರ್ಣ ಸುಳ್ಳು ಎಂಬುದು ಸ್ಪಷ್ಟವಾಗಿದೆ. ಕೊರೊನಾ ವಿರುದ್ಧ ಎಲ್ಲಾ ರಾಜ್ಯಗಳು ರಾಜಕೀಯ ಮರೆತು ಜನರಿಗಾಗಿ ಕೆಲಸ ಮಾಡುತ್ತಿವೆ. ಆದರೆ ಸಂಬಿತ್‌ ಪಾತ್ರರಂತಹ ವ್ಯಕ್ತಿಗಳು ಈ ರೀತಿ ರಾಜ್ಯಗಳ ನಡುವೆ ಬಿರುಕು ಮೂಡಿಸುವ ಕೆಲಸ ಮಾಡಬಾರದು ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಮೋದಿ ಪಶ್ಚಿಮ ಬಂಗಾಳ ಭೇಟಿ ವೇಳೆ ಚೌಕಿದಾರ್‌ ಚೋರ್‌ ಹೈ ಘೋಷಣೆ ಕೂಗಿದ್ದು ನಿಜವೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....