Homeನಿಜವೋ ಸುಳ್ಳೋಹಣ ಕೊಡದೇ ಬಸ್ ಬಿಡುವುದಿಲ್ಲ ಎಂದು ಮಧ್ಯರಾತ್ರಿಯಲ್ಲಿ ಹಠಹಿಡಿದ ರಾಜಸ್ತಾನ? ಸಂಬಿತ್‌ ಪಾತ್ರಾನ ಹೊಸ ಸುಳ್ಳು

ಹಣ ಕೊಡದೇ ಬಸ್ ಬಿಡುವುದಿಲ್ಲ ಎಂದು ಮಧ್ಯರಾತ್ರಿಯಲ್ಲಿ ಹಠಹಿಡಿದ ರಾಜಸ್ತಾನ? ಸಂಬಿತ್‌ ಪಾತ್ರಾನ ಹೊಸ ಸುಳ್ಳು

- Advertisement -
- Advertisement -

ಬಿಜೆಪಿಯ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಮೇ 21ರಂದು ಟ್ವೀಟ್ ಮಾಡಿ 19 ಲಕ್ಷ ರೂಗಳನ್ನು ಬರೆದಿರುವ ಚೆಕ್ ಚಿತ್ರವೊಂದನ್ನು ಪ್ರಕಟಿಸಿದ್ದರು. “ರಾಜಸ್ತಾನದ ಕೋಟದಿಂದ ತಮ್ಮ ವಿದ್ಯಾರ್ಥಿಗಳನ್ನು ಕರೆತರಲು ಉತ್ತರ ಪ್ರದೇಶದಿಂದ ಬಸ್‌ಗಳು ಹೊರಟಿದ್ದವು. ವಾಪಸ್ ಬರಲು ಪ್ರಿಯಾಂಕ ಗಾಂಧಿಯವರ ನೇತೃತ್ವದ ಗುಜರಾತ್ ಸರ್ಕಾರ ಆ ಬಸ್‌ಗಳಿಗೆ ಡೀಸೆಲ್ ತುಂಬಿಸಿತ್ತು. ಆದರೆ ಮಧ್ಯರಾತ್ರಿಯೊಳಗೆ ಅದರ ಬಿಲ್ 19,76,286/- ರೂಗಳನ್ನು ಕಳಿಸದಿದ್ದರೆ ಇಲ್ಲಿಂದ ಬಸ್ ಹೊರಡಲು ಬಿಡುವುದಿಲ್ಲ ಎಂದು ಹಠ ಮಾಡಿದ್ದಾರೆ. ವಾವ್ ಎಂತಹ ಸಹಾಯ! ಕಾಂಗ್ರೆಸ್‌ನ ಎರಡು ಮುಖ!” ಎಂದು ಟ್ವೀಟ್ ಮಾಡಿದ್ದರು.

ಇದನ್ನು ಕನಿಷ್ಟ 48 ಸಾವಿರ ಜನ ಲೈಕ್ ಮಾಡಿದ್ದರಲ್ಲದೇ 18 ಸಾವಿರಕ್ಕೂ ಹೆಚ್ಚು ಜನ ಹಂಚಿಕೊಂಡಿದ್ದರು.
ಸಂಬಿತ್ ಪಾತ್ರ ಪ್ರಕಾರ ಕೇವಲ 19 ಲಕ್ಷ ಹಣ ವಿಚಾರದಲ್ಲಿ ಹಣ ಕೊಡದಿದ್ದರೆ ಬಸ್ ಕಳಿಸುವುದಿಲ್ಲ ಎಂದು ಕಾಂಗ್ರೆಸ್ ಸರ್ಕಾರ ಧಮಕಿ ಹಾಕಿತ್ತು.

ಫ್ಯಾಕ್ಟ್‌ ಚೆಕ್

ಏಪ್ರಿಲ್ 17,18,19 ರಂದು ರಾಜಸ್ಥಾನದ ಕೋಟಾದಿಂದ ಉತ್ತರ ಪ್ರದೇಶಕ್ಕೆ 403 ಬಸ್‌ಗಳಲ್ಲಿ ವಿದ್ಯಾರ್ಥಿಗಳನ್ನು ಕರೆತರಲಾಗಿದೆ. ಆ ಬಸ್‌ಗಳಿಗೆ ರಾಜಸ್ಥಾನದಲ್ಲಿ ಡೀಸೆಲ್ ತುಂಬಿಸಲಾಗಿದೆ. ಒಪ್ಪಂದದಂತೆ ಅದರ ಹಣವನ್ನು ’ಮೇ 05 ರಂದ’ ಉತ್ತರ ಪ್ರದೇಶ ಸರ್ಕಾರ ರಾಜಸ್ಥಾನಕ್ಕೆ ತುಂಬಿಕೊಟ್ಟಿದೆ.

ಈ ಕುರಿತು ಆಲ್ಟ್‌ನ್ಯೂಸ್ ಕೋಟಾದ ಜಿಲ್ಲಾಧಿಕಾರಿ ಓಂ ಕೇಸರ್ ಮತ್ತು ಜೈಪುರದ ಸಾರಿಗೆ ಅಧಿಕಾರಿ ನವೀನ್ ಜೈನ್‌ರವರನ್ನು ಮಾತನಾಡಿಸಿದೆ. ಅವರಿಬ್ಬರೂ ಎರಡೂ ರಾಜ್ಯಗಳ ಒಪ್ಪಂದದಂತೆ ಕೆಲಸ ಸುಗಮವಾಗಿ ನಡೆದಿದೆ. ಏಪ್ರಿಲ್ 17,18,19 ರಂದು ಡೀಸೆಲ್ ತುಂಬಿಸಿದ್ದಕ್ಕಾಗಿ ಮೇ 05ರಂದು ಹಣ ತಲುಪಿದೆ. ಇದರಲ್ಲಿ ತಡರಾತ್ರಿ ಬಸ್ ತಡೆಯುವ ಪ್ರಮೇಯವೇ ಉದ್ಭವಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅಲ್ಲದೇ ಯುಪಿ ಸರ್ಕಾರದ ವತಿಯಿಂದಲೂ ಕೂಡ ಹಣ ನೀಡಿರುವುದನ್ನು ಪತ್ರಿಕಾ ಗೋಷ್ಟಿಯಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿಗಳನ್ನು ಕರೆತರುವ ಯೋಜನೆಯ ಭಾಗವಾಗಿದ್ದ ಉತ್ತರ ಪ್ರದೇಶದ ಸಾರಿಗೆ ಇಲಾಖೆಯ ಅಧಿಕಾರಿಯೊಬ್ಬರು ನಮ್ಮ ಬೇಡಿಕೆಗಳಿಗೆ ರಾಜಸ್ಥಾನ ಸರ್ಕಾರವು ಸಂಪೂರ್ಣವಾಗಿ ಸಹಕರಿಸಿತು. ಕೊರತೆ ಬಂದ ಬಸ್‌ಗಳನ್ನು ಸಹ ರಾಜಸ್ಥಾನ ಸರ್ಕಾರವೇ ಕಳಿಸಿಕೊಟ್ಟಿತು. ಅದಕ್ಕೆ ಯುಪಿ ಸರ್ಕಾರ ಹಣ ಪಾವತಿಸಿದೆ. ಯಾವುದೇ ಅಡೆತಡೆಗಳು ಸಂಭವಿಸಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಅಲ್ಲಿಗೆ ಸಂಬಿತ್ ಪಾತ್ರ ಹೇಳಿದ್ದು ಸಂಪೂರ್ಣ ಸುಳ್ಳು ಎಂಬುದು ಸ್ಪಷ್ಟವಾಗಿದೆ. ಕೊರೊನಾ ವಿರುದ್ಧ ಎಲ್ಲಾ ರಾಜ್ಯಗಳು ರಾಜಕೀಯ ಮರೆತು ಜನರಿಗಾಗಿ ಕೆಲಸ ಮಾಡುತ್ತಿವೆ. ಆದರೆ ಸಂಬಿತ್‌ ಪಾತ್ರರಂತಹ ವ್ಯಕ್ತಿಗಳು ಈ ರೀತಿ ರಾಜ್ಯಗಳ ನಡುವೆ ಬಿರುಕು ಮೂಡಿಸುವ ಕೆಲಸ ಮಾಡಬಾರದು ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಮೋದಿ ಪಶ್ಚಿಮ ಬಂಗಾಳ ಭೇಟಿ ವೇಳೆ ಚೌಕಿದಾರ್‌ ಚೋರ್‌ ಹೈ ಘೋಷಣೆ ಕೂಗಿದ್ದು ನಿಜವೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...