Homeಮುಖಪುಟರಾಜಸ್ಥಾನ: ಗೋವು ಕಳ್ಳಸಾಗಣೆ ಆರೋಪದಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಕೊಲೆ

ರಾಜಸ್ಥಾನ: ಗೋವು ಕಳ್ಳಸಾಗಣೆ ಆರೋಪದಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಕೊಲೆ

- Advertisement -
- Advertisement -

ಹಸುಗಳ ಕಳ್ಳಸಾಗಣೆ ಆರೋಪದ ಮೇಲೆ ವ್ಯಕ್ತಿಯ ಮೇಲೆ ಜನರ ಗುಂಪೊಂದು ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ರಾಜಸ್ಥಾನದ ಚಿತ್ತೋರ್‌ಗಢದಲ್ಲಿ ನಡೆದಿದೆ. ಮತ್ತೊಬ್ಬ ವ್ಯಕ್ತಿಯ ಮೇಲೆ ತೀವ್ರ ಹಲ್ಲೆ ನಡೆಸಲಾಗಿದೆ.

ಮೃತ ವ್ಯಕ್ತಿಯನ್ನು ಬಾಬು ಲಾಲ್ ಭಿಲ್ ಎಂದು ಗುರುತಿಸಲಾಗಿದ್ದು, ಮಧ್ಯಪ್ರದೇಶದ ಅಚಲ್‌ಪುರದ ನಿವಾಸಿ ಎನ್ನಲಾಗಿದೆ. ಮೃತ ಬಾಬು ಮತ್ತು ಇನ್ನೊಬ್ಬ ವ್ಯಕ್ತಿ ಗಾಯಾಳು ಪಿಂಟು ಭಿಲ್ ವಾಹನದಲ್ಲಿ ತೆರಳುತಿದ್ದಾಗ ಜನರ ಗುಂಪೊಂದು ವಾಹನ ನಿಲ್ಲಿಸುವಂತೆ ಒತ್ತಾಯಿಸಿ, ಇಬ್ಬರನ್ನು ಹೊರಗೆಳೆದು ಹಲ್ಲೆ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳು ಪಿಂಟು ಭಿಲ್ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೇಗು ಎಂಬ ಪಟ್ಟಣದ ಬಳಿ ಈ ದಾಳಿ ನಡೆದಿದ್ದು, ಘಟನೆ ಸಂಬಂಧ ಪೊಲೀಸರು ಕೆಲವು ಜನರನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಪ್ರವೇಶಕ್ಕೆ ಕೊರೋನಾ ಟೆಸ್ಟ್‌ ನೆಗೆಟಿವ್‌ ವರದಿ ಕಡ್ಡಾಯ- ಸಿಎಂ ಬಿ.ಎಸ್‌ ಯಡಿಯೂರಪ್ಪ

“ಹಸುಗಳನ್ನು ಸಾಗಿಸುತ್ತಿದ್ದ ವಾಹನ ನಿಲ್ಲಿಸಿ ಕೆಲವರು ಹಲ್ಲೆ ನಡೆಸುತ್ತಿದ್ದಾರೆ ಎಂದು ಮಧ್ಯರಾತ್ರಿ ಠಾಣೆಗೆ ಮಾಹಿತಿ ದೊರೆಯಿತು. ನಮ್ಮ ಅಧಿಕಾರಿಗಳು ಸ್ಥಳಕ್ಕೆ ತಲುಪಿದಾಗ, ಹತ್ತಿರದ ರೈಟಿ ಗ್ರಾಮ ಮತ್ತು ಸುತ್ತಮುತ್ತಲಿನ ಜನರು, ಬಾಬು ಮತ್ತು ಪಿಂಟು ಎಂಬ ಇಬ್ಬರು ವ್ಯಕ್ತಿಗಳ ಮೇಲೆ ದಾಳಿ ನಡೆಸುತ್ತಿದ್ದರು” ಎಂದು ಐಜಿ(ಉದಯಪುರ ಶ್ರೇಣಿ) ಸತ್ಯವೀರ್ ಸಿಂಗ್ ಹೇಳಿದ್ದಾರೆ.

“ದಾಳಿಕೋರರು, ಹಲ್ಲೆಗೊಳಗಾದ ಇಬ್ಬರ ದಾಖಲೆಗಳು ಮತ್ತು ಮೊಬೈಲ್ ಫೋನ್‌ಗಳನ್ನು ಕಸಿದುಕೊಂಡಿದ್ದರು. ಪೊಲೀಸರು ಸ್ಥಳಕ್ಕೆ ಬಂದಾಗ ಹಲ್ಲೆ ನಡೆಸುತ್ತಿದ್ದವರು ಓಡಿಹೋದರು. ನಮ್ಮ ಅಧಿಕಾರಿಗಳು ಇಬ್ಬರನ್ನೂ ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದರು, ಆದರೆ, ಆಸ್ಪತ್ರೆಯಲ್ಲಿ ಬಾಬು ನಿಧನರಾದರು. ಗಾಯಾಳು ಪಿಂಟು ಚೇತರಿಸಿಕೊಳ್ಳುತ್ತಿದ್ದಾರೆ” ಎಂದು ಹೇಳಿದ್ದಾರೆ.

“ನಾವು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದೇವೆ. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಯುತ್ತಿದೆ. ಯಾವುದೇ ಆರೋಪಿಗಳನ್ನು ಬಿಡುವುದಿಲ್ಲ. ಈಗಾಗಲೇ ನಾವು ಕೆಲವರನ್ನೂ ವಶಕ್ಕೆ ಪಡೆದಿದ್ದೇವೆ” ಎಂದು ಸತ್ಯವೀರ್ ಸಿಂಗ್ ಹೇಳಿದ್ದಾರೆ.


ಇದನ್ನೂ ಓದಿ: ಜೀವ ಬೆದರಿಕೆಯಿದೆ ಎಂದು ಪೊಲೀಸರಿಗೆ ತಿಳಿಸಿದ್ದ ಪತ್ರಕರ್ತ ಸಾವು: ಅಪಘಾತ ಎಂದ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...