Homeಮುಖಪುಟರಾಜಸ್ಥಾನದ: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿ ಸ್ಮಶಾನದಲ್ಲಿ ಜೀವಂತ, 4 ವೈದ್ಯರ ಅಮಾನತು

ರಾಜಸ್ಥಾನದ: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿ ಸ್ಮಶಾನದಲ್ಲಿ ಜೀವಂತ, 4 ವೈದ್ಯರ ಅಮಾನತು

- Advertisement -
- Advertisement -

ಅಂತಿಮ ವಿಧಿವಿಧಾನಗಳಿಗಾಗಿ ಚಿತಾಗಾರದ ಮೇಲೆ ಮಲಗಿರುವಾಗ ವ್ಯಕ್ತಿಯೊಬ್ಬರು ಜೀವಂತವಾಗಿದ್ದಾರೆ ಎಂದು ತಿಳಿದುಬಂದಿದ್ದು, ವ್ಯಕ್ತಿಯನ್ನು ಮೃತಪಟ್ಟಿದ್ದಾರೆ ಎಂದು ಘೋಷಿಸಿದ ಪ್ರಧಾನ ವೈದ್ಯಾಧಿಕಾರಿ ಸೇರಿದಂತೆ ನಾಲ್ವರು ವೈದ್ಯರನ್ನು ಅಮಾನತುಗೊಳಿಸಿರುವ ಪ್ರಕರಣ ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ನಡೆದಿದೆ.

ಅಂತಿಮ ವಿಧಿವಿಧಾನಗಳಿಗೆ ಕೆಲವೇ ಕ್ಷಣಗಳ ಮೊದಲು ಸ್ಮಶಾನದಲ್ಲಿ ಚಿತೆಯ ಮೇಲೆ ಇರುವಾಗ ವ್ಯಕ್ತಿ ಉಸಿರಾಡುತ್ತಿದ್ದ. ಅವರ ದೇಹ ಚಲಿಸುತ್ತಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೂಡಲೇ ಆಂಬ್ಯುಲೆನ್ಸ್ ಕರೆಸಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.

ಜಿಲ್ಲಾಧಿಕಾರಿ ರಾಮಾವತಾರ್ ಮೀನಾ ಅವರು ಕ್ಷಿಪ್ರ ಕ್ರಮ ಕೈಗೊಂಡು ಪ್ರಧಾನ ವೈದ್ಯಾಧಿಕಾರಿ ಹಾಗೂ ಮೂವರು ವೈದ್ಯರನ್ನು ಅಮಾನತುಗೊಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ರೋಹಿತಾಶ್ (25) ಕೆಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸಿದ ನಂತರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಾಥ, ಕಿವುಡ ಮತ್ತು ಮೂಗನಾಗಿರುವ ಈತ ಅನಾಥಾಶ್ರಮ ಕೇಂದ್ರದಲ್ಲಿ ನೆಲೆಸಿದ್ದಾನೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಜುಂಜುನುವಿನ ಬಿಡಿಕೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

ನಂತರ ಅವರ ದೇಹವನ್ನು ಶವಾಗಾರದಲ್ಲಿ ಇರಿಸಲಾಯಿತು ಮತ್ತು ನಂತರ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ನಂತರ ಆಂಬುಲೆನ್ಸ್‌ನಲ್ಲಿ ಸ್ಮಶಾನಕ್ಕೆ ಕೊಂಡೊಯ್ಯಲಾಯಿತು.

ರೋಹಿತಾಶನ ಶವವನ್ನು ಇಲ್ಲಿನ ಚಿತೆಯ ಮೇಲೆ ಇಟ್ಟಾಗ ಉಸಿರಾಟ ಶುರುವಾಗಿ, ದೇಹ ಚಲಿಸತೊಡಗಿತು. ಇದನ್ನು ಕಂಡು ಅಲ್ಲಿದ್ದವರು ಭಯಗೊಂಡರು. ಕೂಡಲೇ ಆಂಬ್ಯುಲೆನ್ಸ್ ಗೆ ಕರೆ ಮಾಡಿ ರೋಹಿತಾಶ್ ನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಜಿಲ್ಲಾಧಿಕಾರಿ ಆದೇಶದ ಮೇರೆಗೆ ತಹಸೀಲ್ದಾರ್ ಮಹೇಂದ್ರ ಮುಂಡ್, ಸಾಮಾಜಿಕ ನ್ಯಾಯ ಇಲಾಖೆಯ ಉಪನಿರ್ದೇಶಕ ಪವನ್ ಪೂನಿಯಾ ಕೂಡ ಆಸ್ಪತ್ರೆಗೆ ಆಗಮಿಸಿದರು. ವಿಷಯದ ಗಂಭೀರತೆಯನ್ನು ಗಮನಿಸಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಡಾ.ಸಂದೀಪ್ ಪಾಚಾರ್ ಸಮ್ಮುಖದಲ್ಲಿ ವೈದ್ಯರ ಸಭೆ ನಡೆಸಲಾಯಿತು.

ಜಿಲ್ಲಾಧಿಕಾರಿ ಡಾ.ಸಂದೀಪ್ ಪಚಾರ್, ಸಾಮಾಜಿಕ ನ್ಯಾಯ ಇಲಾಖೆಯ ಉಪನಿರ್ದೇಶಕ ಪವನ್ ಪೂನಿಯಾ ಹಾಗೂ ಇತರ ಅಧಿಕಾರಿಗಳನ್ನು ರಾತ್ರಿ 10.30ರ ಸುಮಾರಿಗೆ ತಮ್ಮ ಬಂಗಲೆಗೆ ಕರೆಸಿಕೊಂಡರು.

ಈ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಪ್ರಧಾನ ವೈದ್ಯಾಧಿಕಾರಿಯವರಿಂದಲೂ ವರದಿ ಕೇಳಲಾಗಿದೆ. ಈ ಬಗ್ಗೆ ವೈದ್ಯಕೀಯ ಇಲಾಖೆ ಕಾರ್ಯದರ್ಶಿಗೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುರುವಾರ ರಾತ್ರಿ ಜಿಲ್ಲಾಧಿಕಾರಿಗಳು ಜಿಂದ್ ಯುವಕ ಮೃತಪಟ್ಟಿದ್ದಾರೆ ಎಂದು ಘೋಷಿಸಿದ ಡಾ. ಯೋಗೇಶ್ ಜಾಖರ್, ಡಾ. ನವನೀತ್ ಮೀಲ್ ಮತ್ತು ಡಾ. ಸಂದೀಪ್ ಪಚಾರ್ ಅವರನ್ನು ಅಮಾನತುಗೊಳಿಸಿದ್ದಾರೆ.

ಇದನ್ನೂ ಓದಿ; ನ್ಯಾಯಮೂರ್ತಿ ಡಿ’ಕುನ್ಹಾ ವಿರುದ್ಧ ‘ಏಜೆಂಟ್’ ಆರೋಪ; ಸಾರ್ವಜನಿಕ ಕ್ಷಮೆಯಾಚಿಸಿದ ಕೇಂದ್ರ ಸಚಿವ ಜೋಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...