Homeಮುಖಪುಟರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

- Advertisement -
- Advertisement -

ಸಾಮೂಹಿಕ ವಿವಾಹ ಆಯೋಜಿಸಿದ್ದ ಆಯೋಜಕರು ಮದುವೆ ದಿನದಂದೆ ಮದುವೆಯ ಹಣದೊಂದಿಗೆ ಪರಾರಿಯಾಗಿರುವ ಅಘಾತಕಾರಿ ಘಟನೆ ರಾಜಸ್ಥಾನದ ರಾಜ್‌ಕೋಟ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಋಷಿವಂಶಿ ಸಮಾಜದ ಹೆಸರಿನಲ್ಲಿ ಆಯೋಜಿಸಲಾಗಿದ್ದ ಈ ಸಮಾರಂಭದಲ್ಲಿ ಎಲ್ಲಾ ಜಾತಿಗಳ 28 ಯುವತಿಯರ ಸಾಮೂಹಿಕ ವಿವಾಹ ನಡೆಸುವುದಾಗಿ ನಿರ್ಧರಿಸಲಾಗಿತ್ತು ಎಂದು ವರದಿಯಾಗಿದೆ. ರಾಜಸ್ಥಾನ

ಸಮಾರಂಭವು ಸುಗಮವಾಗಿ ನಡೆಯುತ್ತದೆ ಎಂದು ನಂಬಿ ಪ್ರತಿ ಕುಟುಂಬಗಳು ವಧು-ವರರ ಪರವಾಗಿ ಸುಮಾರು 40,000 ರೂ.ಗಳನ್ನು ಪಾವತಿಸಿದ್ದರು. ಆಯೋಜಕರು ನಾಪತ್ತೆಯಾಗಿರುವ ಸುದ್ದಿ ಸಿಗುತ್ತಿದ್ದಂತೆ ಗೊಂದಲವೇರ್ಪಟ್ಟಿದ್ದು, ಈ ವೇಳೆ ರಾಜ್‌ಕೋಟ್ ಪೊಲೀಸರು ಮಧ್ಯಪ್ರವೇಶಿಸಿ, ವಿವಾಹಗಳನ್ನು ಶಾಸ್ತ್ರೋಕ್ತವಾಗಿ ನಡೆಸುವಂತೆ ನೋಡಿಕೊಂಡರು ಎಂದು ವರದಿ ಹೇಳಿದೆ. ರಾಜಸ್ಥಾನ

ರಾಜ್‌ಕೋಟ್‌ನಲ್ಲಿ ಋಷಿವಂಶಿ ಸಮಾಜದ ಹೆಸರಿನಲ್ಲಿ ಆಯೋಜಿಸಲಾಗಿದ್ದ ಎಲ್ಲಾ ಜಾತಿಗಳ 28 ಹುಡುಗಿಯರ ಸಾಮೂಹಿಕ ವಿವಾಹ ಸಮಾರಂಭಕ್ಕೆ ವಧು-ವರದ ಕಡೆಯವರು 15,000 ರೂ.ಗಳಿಂದ 40,000 ರೂ.ಗಳವರೆಗೆ ಹಣವನ್ನು ಪಾವತಿಸಿದ್ದರು. ಮದುವೆಯ ದಿನ ಕುಟುಂಬಗಳು ಮಧಾಪರ್ ಬಳಿಯ ಮದುವೆಯ ಸ್ಥಳಕ್ಕೆ ಆಗಮಿಸಿದಾಗ ಯಾವುದೇ ವ್ಯವಸ್ಥೆಗಳು ಕಂಡುಬಂದಿರಲಿಲ್ಲ.

ರಾಜ್‌ಕೋಟ್ ಮತ್ತು ಹತ್ತಿರದ ಜಿಲ್ಲೆಗಳಿಂದ ಬಂದಿದ್ದ ಕುಟುಂಬಗಳು ತಾವು ಮೋಸ ಹೋಗಿರುವುದನ್ನು ತಿಳಿಯುತ್ತಿದ್ದಂತೆ ಆತಂಕಕ್ಕೆ ಒಳಗಾಗಿ ಕಣ್ಣೀರು ಹಾಕಿದ್ದಾರೆ. ಇದರ ನಂತರ ವಧುಗಳು ಹಿಂತಿರುಗಲು ಸಿದ್ಧರಾಗುತ್ತಿದ್ದಂತೆ, ಪೊಲೀಸರು ಸ್ಥಳಕ್ಕೆ ತಲುಪಿ, ಸ್ಥಗಿತಗೊಂಡ ವಿವಾಹಗಳನ್ನು ನಡೆಸಿಕೊಟ್ಟಿದ್ದಾರೆ.

“ಸಾಮೂಹಿಕ ವಿವಾಹದ ಹೆಸರಿನಲ್ಲಿ ಇದು ಎಂದಿಗೂ ಸಂಭವಿಸಬಾರದು” ಎಂದು ರಾಜ್‌ಕೋಟ್‌ನಿಂದ ತನ್ನ ಮಗನ ಮದುವೆಗೆ ಆಗಮಿಸಿದ ವಿಠ್ಠಲಭಾಯಿ ವಿಷಾದಿಸಿದ್ದಾರೆ. “ಆಯೋಜಕರು ನಮ್ಮಿಂದ 40,000 ರೂ.ಗಳನ್ನು ತೆಗೆದುಕೊಂಡು ಕಣ್ಮರೆಯಾಗಿದ್ದಾರೆ. ಆದರೆ ಯಾವುದೇ ವ್ಯವಸ್ಥೆಗಳು ಕಂಡುಬಂದಿಲ್ಲ. ಇದರಿಂದಾಗಿ ಜನರು ಸಿಲುಕಿಕೊಂಡರು. ವಂಚನೆ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

“ಆಯೋಜಕರು ಎರಡೂ ಕಡೆಯಿಂದ 15,000 ರೂ.ಗಳನ್ನು ತೆಗೆದುಕೊಂಡು, ವರದಕ್ಷಿಣೆಯೊಂದಿಗೆ ಅದ್ಧೂರಿ ವಿವಾಹವನ್ನು ಮಾಡುವುದಾಗಿ ಭರವಸೆ ನೀಡಿದ್ದರು” ಎಂದು ತಮ್ಮ ಸೋದರ ಮಾವನ ಮಗಳ ಮದುವೆಗೆ ಹಾಜರಾದ ಶಿಲ್ಪಾಬೆನ್ ಬಗ್ಥಾರಿಯಾ ಹೇಳಿದ್ದಾರೆ.

“ಬೆಳಿಗ್ಗೆ 6 ಗಂಟೆಯೊಳಗೆ ಎಲ್ಲವೂ ಸಿದ್ಧವಾಗಲಿದೆ ಎಂದು ಅವರು ನಮಗೆ ಹೇಳಿದ್ದರು. ಆದರೆ ನಾವು ಬಂದಾಗ, ಯಾವುದೇ ವ್ಯವಸ್ಥೆಗಳು ಇರಲಿಲ್ಲ, ಸಂಘಟಕರು ಇರಲಿಲ್ಲ ಮತ್ತು ಮದುವೆ ನಡೆಸಬೇಕಾಗಿದ್ದ ಬ್ರಾಹ್ಮಣರು ಸಹ ಹೊರಟು ಹೋಗಿದ್ದರು” ಎಂದು ಅವರು ನಿರಾಶೆಯನ್ನು ವಿವರಿಸಿದ್ದಾರೆ.

ವಿವಾಹ ಸ್ಥಳದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದ್ದಂತೆ ರಾಜ್‌ಕೋಟ್ ಎಸಿಪಿ ರಾಧಿಕಾ ಭರೈ ನೇತೃತ್ವದ ಪೊಲೀಸ್ ಬೆಂಗಾವಲು ಪಡೆ ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳಕ್ಕೆ ಧಾವಿಸಿದೆ. ಆ ಹೊತ್ತಿಗೆ, ಕೆಲವು ವರರು ಈಗಾಗಲೇ ಹತಾಶೆಯಿಂದ ಹೊರಟುಹೋಗಿದ್ದರು, ಇದು ತೊಂದರೆಯನ್ನು ಮತ್ತಷ್ಟು ಹೆಚ್ಚಿಸಿತ್ತು.

ನಂತರ, ಪೊಲೀಸರು ಪರಿಸ್ಥಿತಿಯನ್ನು ಕೈಗೆತ್ತಿಕೊಂಡು ಮದುವೆಗಳು ನಡೆಯುವಂತೆ ನೋಡಿಕೊಳ್ಳಲು ಮುಂದಾದರು. ಈ ವೇಳೆ ಅವರು ಹೊರಟುಹೋದ ವರರನ್ನು ಸಂಪರ್ಕಿಸಿ, ಮದುವೆ ನಡೆಸುವುದಾಗಿ ಮತ್ತು ಹಿಂತಿರುಗುವಂತೆ ಒತ್ತಾಯಿಸಿದ್ದಾರೆ. “ಆಯೋಜಕರು ಕಣ್ಮರೆಯಾಗಿರುವುದರಿಂದ, ಪೊಲೀಸರು ಮದುವೆಗಳ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಮುಂದಾದರು” ಎಂದು ರಾಜ್‌ಕೋಟ್ ನಗರದ ಎಸಿಪಿ ರಾಧಿಕಾ ಭರೈ ಹೇಳಿದ್ದಾರೆ. “ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು” ಎಂದು ಅವರು ಇದೇ ವೇಳೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೈಸೂರು | ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ : ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್

ಮೈಸೂರು | ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ : ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...