Homeಮುಖಪುಟರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

- Advertisement -
- Advertisement -

ಸಾಮೂಹಿಕ ವಿವಾಹ ಆಯೋಜಿಸಿದ್ದ ಆಯೋಜಕರು ಮದುವೆ ದಿನದಂದೆ ಮದುವೆಯ ಹಣದೊಂದಿಗೆ ಪರಾರಿಯಾಗಿರುವ ಅಘಾತಕಾರಿ ಘಟನೆ ರಾಜಸ್ಥಾನದ ರಾಜ್‌ಕೋಟ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಋಷಿವಂಶಿ ಸಮಾಜದ ಹೆಸರಿನಲ್ಲಿ ಆಯೋಜಿಸಲಾಗಿದ್ದ ಈ ಸಮಾರಂಭದಲ್ಲಿ ಎಲ್ಲಾ ಜಾತಿಗಳ 28 ಯುವತಿಯರ ಸಾಮೂಹಿಕ ವಿವಾಹ ನಡೆಸುವುದಾಗಿ ನಿರ್ಧರಿಸಲಾಗಿತ್ತು ಎಂದು ವರದಿಯಾಗಿದೆ. ರಾಜಸ್ಥಾನ

ಸಮಾರಂಭವು ಸುಗಮವಾಗಿ ನಡೆಯುತ್ತದೆ ಎಂದು ನಂಬಿ ಪ್ರತಿ ಕುಟುಂಬಗಳು ವಧು-ವರರ ಪರವಾಗಿ ಸುಮಾರು 40,000 ರೂ.ಗಳನ್ನು ಪಾವತಿಸಿದ್ದರು. ಆಯೋಜಕರು ನಾಪತ್ತೆಯಾಗಿರುವ ಸುದ್ದಿ ಸಿಗುತ್ತಿದ್ದಂತೆ ಗೊಂದಲವೇರ್ಪಟ್ಟಿದ್ದು, ಈ ವೇಳೆ ರಾಜ್‌ಕೋಟ್ ಪೊಲೀಸರು ಮಧ್ಯಪ್ರವೇಶಿಸಿ, ವಿವಾಹಗಳನ್ನು ಶಾಸ್ತ್ರೋಕ್ತವಾಗಿ ನಡೆಸುವಂತೆ ನೋಡಿಕೊಂಡರು ಎಂದು ವರದಿ ಹೇಳಿದೆ. ರಾಜಸ್ಥಾನ

ರಾಜ್‌ಕೋಟ್‌ನಲ್ಲಿ ಋಷಿವಂಶಿ ಸಮಾಜದ ಹೆಸರಿನಲ್ಲಿ ಆಯೋಜಿಸಲಾಗಿದ್ದ ಎಲ್ಲಾ ಜಾತಿಗಳ 28 ಹುಡುಗಿಯರ ಸಾಮೂಹಿಕ ವಿವಾಹ ಸಮಾರಂಭಕ್ಕೆ ವಧು-ವರದ ಕಡೆಯವರು 15,000 ರೂ.ಗಳಿಂದ 40,000 ರೂ.ಗಳವರೆಗೆ ಹಣವನ್ನು ಪಾವತಿಸಿದ್ದರು. ಮದುವೆಯ ದಿನ ಕುಟುಂಬಗಳು ಮಧಾಪರ್ ಬಳಿಯ ಮದುವೆಯ ಸ್ಥಳಕ್ಕೆ ಆಗಮಿಸಿದಾಗ ಯಾವುದೇ ವ್ಯವಸ್ಥೆಗಳು ಕಂಡುಬಂದಿರಲಿಲ್ಲ.

ರಾಜ್‌ಕೋಟ್ ಮತ್ತು ಹತ್ತಿರದ ಜಿಲ್ಲೆಗಳಿಂದ ಬಂದಿದ್ದ ಕುಟುಂಬಗಳು ತಾವು ಮೋಸ ಹೋಗಿರುವುದನ್ನು ತಿಳಿಯುತ್ತಿದ್ದಂತೆ ಆತಂಕಕ್ಕೆ ಒಳಗಾಗಿ ಕಣ್ಣೀರು ಹಾಕಿದ್ದಾರೆ. ಇದರ ನಂತರ ವಧುಗಳು ಹಿಂತಿರುಗಲು ಸಿದ್ಧರಾಗುತ್ತಿದ್ದಂತೆ, ಪೊಲೀಸರು ಸ್ಥಳಕ್ಕೆ ತಲುಪಿ, ಸ್ಥಗಿತಗೊಂಡ ವಿವಾಹಗಳನ್ನು ನಡೆಸಿಕೊಟ್ಟಿದ್ದಾರೆ.

“ಸಾಮೂಹಿಕ ವಿವಾಹದ ಹೆಸರಿನಲ್ಲಿ ಇದು ಎಂದಿಗೂ ಸಂಭವಿಸಬಾರದು” ಎಂದು ರಾಜ್‌ಕೋಟ್‌ನಿಂದ ತನ್ನ ಮಗನ ಮದುವೆಗೆ ಆಗಮಿಸಿದ ವಿಠ್ಠಲಭಾಯಿ ವಿಷಾದಿಸಿದ್ದಾರೆ. “ಆಯೋಜಕರು ನಮ್ಮಿಂದ 40,000 ರೂ.ಗಳನ್ನು ತೆಗೆದುಕೊಂಡು ಕಣ್ಮರೆಯಾಗಿದ್ದಾರೆ. ಆದರೆ ಯಾವುದೇ ವ್ಯವಸ್ಥೆಗಳು ಕಂಡುಬಂದಿಲ್ಲ. ಇದರಿಂದಾಗಿ ಜನರು ಸಿಲುಕಿಕೊಂಡರು. ವಂಚನೆ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

“ಆಯೋಜಕರು ಎರಡೂ ಕಡೆಯಿಂದ 15,000 ರೂ.ಗಳನ್ನು ತೆಗೆದುಕೊಂಡು, ವರದಕ್ಷಿಣೆಯೊಂದಿಗೆ ಅದ್ಧೂರಿ ವಿವಾಹವನ್ನು ಮಾಡುವುದಾಗಿ ಭರವಸೆ ನೀಡಿದ್ದರು” ಎಂದು ತಮ್ಮ ಸೋದರ ಮಾವನ ಮಗಳ ಮದುವೆಗೆ ಹಾಜರಾದ ಶಿಲ್ಪಾಬೆನ್ ಬಗ್ಥಾರಿಯಾ ಹೇಳಿದ್ದಾರೆ.

“ಬೆಳಿಗ್ಗೆ 6 ಗಂಟೆಯೊಳಗೆ ಎಲ್ಲವೂ ಸಿದ್ಧವಾಗಲಿದೆ ಎಂದು ಅವರು ನಮಗೆ ಹೇಳಿದ್ದರು. ಆದರೆ ನಾವು ಬಂದಾಗ, ಯಾವುದೇ ವ್ಯವಸ್ಥೆಗಳು ಇರಲಿಲ್ಲ, ಸಂಘಟಕರು ಇರಲಿಲ್ಲ ಮತ್ತು ಮದುವೆ ನಡೆಸಬೇಕಾಗಿದ್ದ ಬ್ರಾಹ್ಮಣರು ಸಹ ಹೊರಟು ಹೋಗಿದ್ದರು” ಎಂದು ಅವರು ನಿರಾಶೆಯನ್ನು ವಿವರಿಸಿದ್ದಾರೆ.

ವಿವಾಹ ಸ್ಥಳದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದ್ದಂತೆ ರಾಜ್‌ಕೋಟ್ ಎಸಿಪಿ ರಾಧಿಕಾ ಭರೈ ನೇತೃತ್ವದ ಪೊಲೀಸ್ ಬೆಂಗಾವಲು ಪಡೆ ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳಕ್ಕೆ ಧಾವಿಸಿದೆ. ಆ ಹೊತ್ತಿಗೆ, ಕೆಲವು ವರರು ಈಗಾಗಲೇ ಹತಾಶೆಯಿಂದ ಹೊರಟುಹೋಗಿದ್ದರು, ಇದು ತೊಂದರೆಯನ್ನು ಮತ್ತಷ್ಟು ಹೆಚ್ಚಿಸಿತ್ತು.

ನಂತರ, ಪೊಲೀಸರು ಪರಿಸ್ಥಿತಿಯನ್ನು ಕೈಗೆತ್ತಿಕೊಂಡು ಮದುವೆಗಳು ನಡೆಯುವಂತೆ ನೋಡಿಕೊಳ್ಳಲು ಮುಂದಾದರು. ಈ ವೇಳೆ ಅವರು ಹೊರಟುಹೋದ ವರರನ್ನು ಸಂಪರ್ಕಿಸಿ, ಮದುವೆ ನಡೆಸುವುದಾಗಿ ಮತ್ತು ಹಿಂತಿರುಗುವಂತೆ ಒತ್ತಾಯಿಸಿದ್ದಾರೆ. “ಆಯೋಜಕರು ಕಣ್ಮರೆಯಾಗಿರುವುದರಿಂದ, ಪೊಲೀಸರು ಮದುವೆಗಳ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಮುಂದಾದರು” ಎಂದು ರಾಜ್‌ಕೋಟ್ ನಗರದ ಎಸಿಪಿ ರಾಧಿಕಾ ಭರೈ ಹೇಳಿದ್ದಾರೆ. “ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು” ಎಂದು ಅವರು ಇದೇ ವೇಳೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೈಸೂರು | ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ : ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್

ಮೈಸೂರು | ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ : ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...