Homeಮುಖಪುಟರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

- Advertisement -
- Advertisement -

ಸಾಮೂಹಿಕ ವಿವಾಹ ಆಯೋಜಿಸಿದ್ದ ಆಯೋಜಕರು ಮದುವೆ ದಿನದಂದೆ ಮದುವೆಯ ಹಣದೊಂದಿಗೆ ಪರಾರಿಯಾಗಿರುವ ಅಘಾತಕಾರಿ ಘಟನೆ ರಾಜಸ್ಥಾನದ ರಾಜ್‌ಕೋಟ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಋಷಿವಂಶಿ ಸಮಾಜದ ಹೆಸರಿನಲ್ಲಿ ಆಯೋಜಿಸಲಾಗಿದ್ದ ಈ ಸಮಾರಂಭದಲ್ಲಿ ಎಲ್ಲಾ ಜಾತಿಗಳ 28 ಯುವತಿಯರ ಸಾಮೂಹಿಕ ವಿವಾಹ ನಡೆಸುವುದಾಗಿ ನಿರ್ಧರಿಸಲಾಗಿತ್ತು ಎಂದು ವರದಿಯಾಗಿದೆ. ರಾಜಸ್ಥಾನ

ಸಮಾರಂಭವು ಸುಗಮವಾಗಿ ನಡೆಯುತ್ತದೆ ಎಂದು ನಂಬಿ ಪ್ರತಿ ಕುಟುಂಬಗಳು ವಧು-ವರರ ಪರವಾಗಿ ಸುಮಾರು 40,000 ರೂ.ಗಳನ್ನು ಪಾವತಿಸಿದ್ದರು. ಆಯೋಜಕರು ನಾಪತ್ತೆಯಾಗಿರುವ ಸುದ್ದಿ ಸಿಗುತ್ತಿದ್ದಂತೆ ಗೊಂದಲವೇರ್ಪಟ್ಟಿದ್ದು, ಈ ವೇಳೆ ರಾಜ್‌ಕೋಟ್ ಪೊಲೀಸರು ಮಧ್ಯಪ್ರವೇಶಿಸಿ, ವಿವಾಹಗಳನ್ನು ಶಾಸ್ತ್ರೋಕ್ತವಾಗಿ ನಡೆಸುವಂತೆ ನೋಡಿಕೊಂಡರು ಎಂದು ವರದಿ ಹೇಳಿದೆ. ರಾಜಸ್ಥಾನ

ರಾಜ್‌ಕೋಟ್‌ನಲ್ಲಿ ಋಷಿವಂಶಿ ಸಮಾಜದ ಹೆಸರಿನಲ್ಲಿ ಆಯೋಜಿಸಲಾಗಿದ್ದ ಎಲ್ಲಾ ಜಾತಿಗಳ 28 ಹುಡುಗಿಯರ ಸಾಮೂಹಿಕ ವಿವಾಹ ಸಮಾರಂಭಕ್ಕೆ ವಧು-ವರದ ಕಡೆಯವರು 15,000 ರೂ.ಗಳಿಂದ 40,000 ರೂ.ಗಳವರೆಗೆ ಹಣವನ್ನು ಪಾವತಿಸಿದ್ದರು. ಮದುವೆಯ ದಿನ ಕುಟುಂಬಗಳು ಮಧಾಪರ್ ಬಳಿಯ ಮದುವೆಯ ಸ್ಥಳಕ್ಕೆ ಆಗಮಿಸಿದಾಗ ಯಾವುದೇ ವ್ಯವಸ್ಥೆಗಳು ಕಂಡುಬಂದಿರಲಿಲ್ಲ.

ರಾಜ್‌ಕೋಟ್ ಮತ್ತು ಹತ್ತಿರದ ಜಿಲ್ಲೆಗಳಿಂದ ಬಂದಿದ್ದ ಕುಟುಂಬಗಳು ತಾವು ಮೋಸ ಹೋಗಿರುವುದನ್ನು ತಿಳಿಯುತ್ತಿದ್ದಂತೆ ಆತಂಕಕ್ಕೆ ಒಳಗಾಗಿ ಕಣ್ಣೀರು ಹಾಕಿದ್ದಾರೆ. ಇದರ ನಂತರ ವಧುಗಳು ಹಿಂತಿರುಗಲು ಸಿದ್ಧರಾಗುತ್ತಿದ್ದಂತೆ, ಪೊಲೀಸರು ಸ್ಥಳಕ್ಕೆ ತಲುಪಿ, ಸ್ಥಗಿತಗೊಂಡ ವಿವಾಹಗಳನ್ನು ನಡೆಸಿಕೊಟ್ಟಿದ್ದಾರೆ.

“ಸಾಮೂಹಿಕ ವಿವಾಹದ ಹೆಸರಿನಲ್ಲಿ ಇದು ಎಂದಿಗೂ ಸಂಭವಿಸಬಾರದು” ಎಂದು ರಾಜ್‌ಕೋಟ್‌ನಿಂದ ತನ್ನ ಮಗನ ಮದುವೆಗೆ ಆಗಮಿಸಿದ ವಿಠ್ಠಲಭಾಯಿ ವಿಷಾದಿಸಿದ್ದಾರೆ. “ಆಯೋಜಕರು ನಮ್ಮಿಂದ 40,000 ರೂ.ಗಳನ್ನು ತೆಗೆದುಕೊಂಡು ಕಣ್ಮರೆಯಾಗಿದ್ದಾರೆ. ಆದರೆ ಯಾವುದೇ ವ್ಯವಸ್ಥೆಗಳು ಕಂಡುಬಂದಿಲ್ಲ. ಇದರಿಂದಾಗಿ ಜನರು ಸಿಲುಕಿಕೊಂಡರು. ವಂಚನೆ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

“ಆಯೋಜಕರು ಎರಡೂ ಕಡೆಯಿಂದ 15,000 ರೂ.ಗಳನ್ನು ತೆಗೆದುಕೊಂಡು, ವರದಕ್ಷಿಣೆಯೊಂದಿಗೆ ಅದ್ಧೂರಿ ವಿವಾಹವನ್ನು ಮಾಡುವುದಾಗಿ ಭರವಸೆ ನೀಡಿದ್ದರು” ಎಂದು ತಮ್ಮ ಸೋದರ ಮಾವನ ಮಗಳ ಮದುವೆಗೆ ಹಾಜರಾದ ಶಿಲ್ಪಾಬೆನ್ ಬಗ್ಥಾರಿಯಾ ಹೇಳಿದ್ದಾರೆ.

“ಬೆಳಿಗ್ಗೆ 6 ಗಂಟೆಯೊಳಗೆ ಎಲ್ಲವೂ ಸಿದ್ಧವಾಗಲಿದೆ ಎಂದು ಅವರು ನಮಗೆ ಹೇಳಿದ್ದರು. ಆದರೆ ನಾವು ಬಂದಾಗ, ಯಾವುದೇ ವ್ಯವಸ್ಥೆಗಳು ಇರಲಿಲ್ಲ, ಸಂಘಟಕರು ಇರಲಿಲ್ಲ ಮತ್ತು ಮದುವೆ ನಡೆಸಬೇಕಾಗಿದ್ದ ಬ್ರಾಹ್ಮಣರು ಸಹ ಹೊರಟು ಹೋಗಿದ್ದರು” ಎಂದು ಅವರು ನಿರಾಶೆಯನ್ನು ವಿವರಿಸಿದ್ದಾರೆ.

ವಿವಾಹ ಸ್ಥಳದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದ್ದಂತೆ ರಾಜ್‌ಕೋಟ್ ಎಸಿಪಿ ರಾಧಿಕಾ ಭರೈ ನೇತೃತ್ವದ ಪೊಲೀಸ್ ಬೆಂಗಾವಲು ಪಡೆ ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳಕ್ಕೆ ಧಾವಿಸಿದೆ. ಆ ಹೊತ್ತಿಗೆ, ಕೆಲವು ವರರು ಈಗಾಗಲೇ ಹತಾಶೆಯಿಂದ ಹೊರಟುಹೋಗಿದ್ದರು, ಇದು ತೊಂದರೆಯನ್ನು ಮತ್ತಷ್ಟು ಹೆಚ್ಚಿಸಿತ್ತು.

ನಂತರ, ಪೊಲೀಸರು ಪರಿಸ್ಥಿತಿಯನ್ನು ಕೈಗೆತ್ತಿಕೊಂಡು ಮದುವೆಗಳು ನಡೆಯುವಂತೆ ನೋಡಿಕೊಳ್ಳಲು ಮುಂದಾದರು. ಈ ವೇಳೆ ಅವರು ಹೊರಟುಹೋದ ವರರನ್ನು ಸಂಪರ್ಕಿಸಿ, ಮದುವೆ ನಡೆಸುವುದಾಗಿ ಮತ್ತು ಹಿಂತಿರುಗುವಂತೆ ಒತ್ತಾಯಿಸಿದ್ದಾರೆ. “ಆಯೋಜಕರು ಕಣ್ಮರೆಯಾಗಿರುವುದರಿಂದ, ಪೊಲೀಸರು ಮದುವೆಗಳ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಮುಂದಾದರು” ಎಂದು ರಾಜ್‌ಕೋಟ್ ನಗರದ ಎಸಿಪಿ ರಾಧಿಕಾ ಭರೈ ಹೇಳಿದ್ದಾರೆ. “ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು” ಎಂದು ಅವರು ಇದೇ ವೇಳೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೈಸೂರು | ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ : ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್

ಮೈಸೂರು | ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ : ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...