Homeಮುಖಪುಟರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

- Advertisement -
- Advertisement -

ಸಾಮೂಹಿಕ ವಿವಾಹ ಆಯೋಜಿಸಿದ್ದ ಆಯೋಜಕರು ಮದುವೆ ದಿನದಂದೆ ಮದುವೆಯ ಹಣದೊಂದಿಗೆ ಪರಾರಿಯಾಗಿರುವ ಅಘಾತಕಾರಿ ಘಟನೆ ರಾಜಸ್ಥಾನದ ರಾಜ್‌ಕೋಟ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಋಷಿವಂಶಿ ಸಮಾಜದ ಹೆಸರಿನಲ್ಲಿ ಆಯೋಜಿಸಲಾಗಿದ್ದ ಈ ಸಮಾರಂಭದಲ್ಲಿ ಎಲ್ಲಾ ಜಾತಿಗಳ 28 ಯುವತಿಯರ ಸಾಮೂಹಿಕ ವಿವಾಹ ನಡೆಸುವುದಾಗಿ ನಿರ್ಧರಿಸಲಾಗಿತ್ತು ಎಂದು ವರದಿಯಾಗಿದೆ. ರಾಜಸ್ಥಾನ

ಸಮಾರಂಭವು ಸುಗಮವಾಗಿ ನಡೆಯುತ್ತದೆ ಎಂದು ನಂಬಿ ಪ್ರತಿ ಕುಟುಂಬಗಳು ವಧು-ವರರ ಪರವಾಗಿ ಸುಮಾರು 40,000 ರೂ.ಗಳನ್ನು ಪಾವತಿಸಿದ್ದರು. ಆಯೋಜಕರು ನಾಪತ್ತೆಯಾಗಿರುವ ಸುದ್ದಿ ಸಿಗುತ್ತಿದ್ದಂತೆ ಗೊಂದಲವೇರ್ಪಟ್ಟಿದ್ದು, ಈ ವೇಳೆ ರಾಜ್‌ಕೋಟ್ ಪೊಲೀಸರು ಮಧ್ಯಪ್ರವೇಶಿಸಿ, ವಿವಾಹಗಳನ್ನು ಶಾಸ್ತ್ರೋಕ್ತವಾಗಿ ನಡೆಸುವಂತೆ ನೋಡಿಕೊಂಡರು ಎಂದು ವರದಿ ಹೇಳಿದೆ. ರಾಜಸ್ಥಾನ

ರಾಜ್‌ಕೋಟ್‌ನಲ್ಲಿ ಋಷಿವಂಶಿ ಸಮಾಜದ ಹೆಸರಿನಲ್ಲಿ ಆಯೋಜಿಸಲಾಗಿದ್ದ ಎಲ್ಲಾ ಜಾತಿಗಳ 28 ಹುಡುಗಿಯರ ಸಾಮೂಹಿಕ ವಿವಾಹ ಸಮಾರಂಭಕ್ಕೆ ವಧು-ವರದ ಕಡೆಯವರು 15,000 ರೂ.ಗಳಿಂದ 40,000 ರೂ.ಗಳವರೆಗೆ ಹಣವನ್ನು ಪಾವತಿಸಿದ್ದರು. ಮದುವೆಯ ದಿನ ಕುಟುಂಬಗಳು ಮಧಾಪರ್ ಬಳಿಯ ಮದುವೆಯ ಸ್ಥಳಕ್ಕೆ ಆಗಮಿಸಿದಾಗ ಯಾವುದೇ ವ್ಯವಸ್ಥೆಗಳು ಕಂಡುಬಂದಿರಲಿಲ್ಲ.

ರಾಜ್‌ಕೋಟ್ ಮತ್ತು ಹತ್ತಿರದ ಜಿಲ್ಲೆಗಳಿಂದ ಬಂದಿದ್ದ ಕುಟುಂಬಗಳು ತಾವು ಮೋಸ ಹೋಗಿರುವುದನ್ನು ತಿಳಿಯುತ್ತಿದ್ದಂತೆ ಆತಂಕಕ್ಕೆ ಒಳಗಾಗಿ ಕಣ್ಣೀರು ಹಾಕಿದ್ದಾರೆ. ಇದರ ನಂತರ ವಧುಗಳು ಹಿಂತಿರುಗಲು ಸಿದ್ಧರಾಗುತ್ತಿದ್ದಂತೆ, ಪೊಲೀಸರು ಸ್ಥಳಕ್ಕೆ ತಲುಪಿ, ಸ್ಥಗಿತಗೊಂಡ ವಿವಾಹಗಳನ್ನು ನಡೆಸಿಕೊಟ್ಟಿದ್ದಾರೆ.

“ಸಾಮೂಹಿಕ ವಿವಾಹದ ಹೆಸರಿನಲ್ಲಿ ಇದು ಎಂದಿಗೂ ಸಂಭವಿಸಬಾರದು” ಎಂದು ರಾಜ್‌ಕೋಟ್‌ನಿಂದ ತನ್ನ ಮಗನ ಮದುವೆಗೆ ಆಗಮಿಸಿದ ವಿಠ್ಠಲಭಾಯಿ ವಿಷಾದಿಸಿದ್ದಾರೆ. “ಆಯೋಜಕರು ನಮ್ಮಿಂದ 40,000 ರೂ.ಗಳನ್ನು ತೆಗೆದುಕೊಂಡು ಕಣ್ಮರೆಯಾಗಿದ್ದಾರೆ. ಆದರೆ ಯಾವುದೇ ವ್ಯವಸ್ಥೆಗಳು ಕಂಡುಬಂದಿಲ್ಲ. ಇದರಿಂದಾಗಿ ಜನರು ಸಿಲುಕಿಕೊಂಡರು. ವಂಚನೆ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

“ಆಯೋಜಕರು ಎರಡೂ ಕಡೆಯಿಂದ 15,000 ರೂ.ಗಳನ್ನು ತೆಗೆದುಕೊಂಡು, ವರದಕ್ಷಿಣೆಯೊಂದಿಗೆ ಅದ್ಧೂರಿ ವಿವಾಹವನ್ನು ಮಾಡುವುದಾಗಿ ಭರವಸೆ ನೀಡಿದ್ದರು” ಎಂದು ತಮ್ಮ ಸೋದರ ಮಾವನ ಮಗಳ ಮದುವೆಗೆ ಹಾಜರಾದ ಶಿಲ್ಪಾಬೆನ್ ಬಗ್ಥಾರಿಯಾ ಹೇಳಿದ್ದಾರೆ.

“ಬೆಳಿಗ್ಗೆ 6 ಗಂಟೆಯೊಳಗೆ ಎಲ್ಲವೂ ಸಿದ್ಧವಾಗಲಿದೆ ಎಂದು ಅವರು ನಮಗೆ ಹೇಳಿದ್ದರು. ಆದರೆ ನಾವು ಬಂದಾಗ, ಯಾವುದೇ ವ್ಯವಸ್ಥೆಗಳು ಇರಲಿಲ್ಲ, ಸಂಘಟಕರು ಇರಲಿಲ್ಲ ಮತ್ತು ಮದುವೆ ನಡೆಸಬೇಕಾಗಿದ್ದ ಬ್ರಾಹ್ಮಣರು ಸಹ ಹೊರಟು ಹೋಗಿದ್ದರು” ಎಂದು ಅವರು ನಿರಾಶೆಯನ್ನು ವಿವರಿಸಿದ್ದಾರೆ.

ವಿವಾಹ ಸ್ಥಳದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದ್ದಂತೆ ರಾಜ್‌ಕೋಟ್ ಎಸಿಪಿ ರಾಧಿಕಾ ಭರೈ ನೇತೃತ್ವದ ಪೊಲೀಸ್ ಬೆಂಗಾವಲು ಪಡೆ ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳಕ್ಕೆ ಧಾವಿಸಿದೆ. ಆ ಹೊತ್ತಿಗೆ, ಕೆಲವು ವರರು ಈಗಾಗಲೇ ಹತಾಶೆಯಿಂದ ಹೊರಟುಹೋಗಿದ್ದರು, ಇದು ತೊಂದರೆಯನ್ನು ಮತ್ತಷ್ಟು ಹೆಚ್ಚಿಸಿತ್ತು.

ನಂತರ, ಪೊಲೀಸರು ಪರಿಸ್ಥಿತಿಯನ್ನು ಕೈಗೆತ್ತಿಕೊಂಡು ಮದುವೆಗಳು ನಡೆಯುವಂತೆ ನೋಡಿಕೊಳ್ಳಲು ಮುಂದಾದರು. ಈ ವೇಳೆ ಅವರು ಹೊರಟುಹೋದ ವರರನ್ನು ಸಂಪರ್ಕಿಸಿ, ಮದುವೆ ನಡೆಸುವುದಾಗಿ ಮತ್ತು ಹಿಂತಿರುಗುವಂತೆ ಒತ್ತಾಯಿಸಿದ್ದಾರೆ. “ಆಯೋಜಕರು ಕಣ್ಮರೆಯಾಗಿರುವುದರಿಂದ, ಪೊಲೀಸರು ಮದುವೆಗಳ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಮುಂದಾದರು” ಎಂದು ರಾಜ್‌ಕೋಟ್ ನಗರದ ಎಸಿಪಿ ರಾಧಿಕಾ ಭರೈ ಹೇಳಿದ್ದಾರೆ. “ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು” ಎಂದು ಅವರು ಇದೇ ವೇಳೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೈಸೂರು | ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ : ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್

ಮೈಸೂರು | ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ : ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...