Homeಮುಖಪುಟರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

- Advertisement -
- Advertisement -

ಸಾಮೂಹಿಕ ವಿವಾಹ ಆಯೋಜಿಸಿದ್ದ ಆಯೋಜಕರು ಮದುವೆ ದಿನದಂದೆ ಮದುವೆಯ ಹಣದೊಂದಿಗೆ ಪರಾರಿಯಾಗಿರುವ ಅಘಾತಕಾರಿ ಘಟನೆ ರಾಜಸ್ಥಾನದ ರಾಜ್‌ಕೋಟ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಋಷಿವಂಶಿ ಸಮಾಜದ ಹೆಸರಿನಲ್ಲಿ ಆಯೋಜಿಸಲಾಗಿದ್ದ ಈ ಸಮಾರಂಭದಲ್ಲಿ ಎಲ್ಲಾ ಜಾತಿಗಳ 28 ಯುವತಿಯರ ಸಾಮೂಹಿಕ ವಿವಾಹ ನಡೆಸುವುದಾಗಿ ನಿರ್ಧರಿಸಲಾಗಿತ್ತು ಎಂದು ವರದಿಯಾಗಿದೆ. ರಾಜಸ್ಥಾನ

ಸಮಾರಂಭವು ಸುಗಮವಾಗಿ ನಡೆಯುತ್ತದೆ ಎಂದು ನಂಬಿ ಪ್ರತಿ ಕುಟುಂಬಗಳು ವಧು-ವರರ ಪರವಾಗಿ ಸುಮಾರು 40,000 ರೂ.ಗಳನ್ನು ಪಾವತಿಸಿದ್ದರು. ಆಯೋಜಕರು ನಾಪತ್ತೆಯಾಗಿರುವ ಸುದ್ದಿ ಸಿಗುತ್ತಿದ್ದಂತೆ ಗೊಂದಲವೇರ್ಪಟ್ಟಿದ್ದು, ಈ ವೇಳೆ ರಾಜ್‌ಕೋಟ್ ಪೊಲೀಸರು ಮಧ್ಯಪ್ರವೇಶಿಸಿ, ವಿವಾಹಗಳನ್ನು ಶಾಸ್ತ್ರೋಕ್ತವಾಗಿ ನಡೆಸುವಂತೆ ನೋಡಿಕೊಂಡರು ಎಂದು ವರದಿ ಹೇಳಿದೆ. ರಾಜಸ್ಥಾನ

ರಾಜ್‌ಕೋಟ್‌ನಲ್ಲಿ ಋಷಿವಂಶಿ ಸಮಾಜದ ಹೆಸರಿನಲ್ಲಿ ಆಯೋಜಿಸಲಾಗಿದ್ದ ಎಲ್ಲಾ ಜಾತಿಗಳ 28 ಹುಡುಗಿಯರ ಸಾಮೂಹಿಕ ವಿವಾಹ ಸಮಾರಂಭಕ್ಕೆ ವಧು-ವರದ ಕಡೆಯವರು 15,000 ರೂ.ಗಳಿಂದ 40,000 ರೂ.ಗಳವರೆಗೆ ಹಣವನ್ನು ಪಾವತಿಸಿದ್ದರು. ಮದುವೆಯ ದಿನ ಕುಟುಂಬಗಳು ಮಧಾಪರ್ ಬಳಿಯ ಮದುವೆಯ ಸ್ಥಳಕ್ಕೆ ಆಗಮಿಸಿದಾಗ ಯಾವುದೇ ವ್ಯವಸ್ಥೆಗಳು ಕಂಡುಬಂದಿರಲಿಲ್ಲ.

ರಾಜ್‌ಕೋಟ್ ಮತ್ತು ಹತ್ತಿರದ ಜಿಲ್ಲೆಗಳಿಂದ ಬಂದಿದ್ದ ಕುಟುಂಬಗಳು ತಾವು ಮೋಸ ಹೋಗಿರುವುದನ್ನು ತಿಳಿಯುತ್ತಿದ್ದಂತೆ ಆತಂಕಕ್ಕೆ ಒಳಗಾಗಿ ಕಣ್ಣೀರು ಹಾಕಿದ್ದಾರೆ. ಇದರ ನಂತರ ವಧುಗಳು ಹಿಂತಿರುಗಲು ಸಿದ್ಧರಾಗುತ್ತಿದ್ದಂತೆ, ಪೊಲೀಸರು ಸ್ಥಳಕ್ಕೆ ತಲುಪಿ, ಸ್ಥಗಿತಗೊಂಡ ವಿವಾಹಗಳನ್ನು ನಡೆಸಿಕೊಟ್ಟಿದ್ದಾರೆ.

“ಸಾಮೂಹಿಕ ವಿವಾಹದ ಹೆಸರಿನಲ್ಲಿ ಇದು ಎಂದಿಗೂ ಸಂಭವಿಸಬಾರದು” ಎಂದು ರಾಜ್‌ಕೋಟ್‌ನಿಂದ ತನ್ನ ಮಗನ ಮದುವೆಗೆ ಆಗಮಿಸಿದ ವಿಠ್ಠಲಭಾಯಿ ವಿಷಾದಿಸಿದ್ದಾರೆ. “ಆಯೋಜಕರು ನಮ್ಮಿಂದ 40,000 ರೂ.ಗಳನ್ನು ತೆಗೆದುಕೊಂಡು ಕಣ್ಮರೆಯಾಗಿದ್ದಾರೆ. ಆದರೆ ಯಾವುದೇ ವ್ಯವಸ್ಥೆಗಳು ಕಂಡುಬಂದಿಲ್ಲ. ಇದರಿಂದಾಗಿ ಜನರು ಸಿಲುಕಿಕೊಂಡರು. ವಂಚನೆ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

“ಆಯೋಜಕರು ಎರಡೂ ಕಡೆಯಿಂದ 15,000 ರೂ.ಗಳನ್ನು ತೆಗೆದುಕೊಂಡು, ವರದಕ್ಷಿಣೆಯೊಂದಿಗೆ ಅದ್ಧೂರಿ ವಿವಾಹವನ್ನು ಮಾಡುವುದಾಗಿ ಭರವಸೆ ನೀಡಿದ್ದರು” ಎಂದು ತಮ್ಮ ಸೋದರ ಮಾವನ ಮಗಳ ಮದುವೆಗೆ ಹಾಜರಾದ ಶಿಲ್ಪಾಬೆನ್ ಬಗ್ಥಾರಿಯಾ ಹೇಳಿದ್ದಾರೆ.

“ಬೆಳಿಗ್ಗೆ 6 ಗಂಟೆಯೊಳಗೆ ಎಲ್ಲವೂ ಸಿದ್ಧವಾಗಲಿದೆ ಎಂದು ಅವರು ನಮಗೆ ಹೇಳಿದ್ದರು. ಆದರೆ ನಾವು ಬಂದಾಗ, ಯಾವುದೇ ವ್ಯವಸ್ಥೆಗಳು ಇರಲಿಲ್ಲ, ಸಂಘಟಕರು ಇರಲಿಲ್ಲ ಮತ್ತು ಮದುವೆ ನಡೆಸಬೇಕಾಗಿದ್ದ ಬ್ರಾಹ್ಮಣರು ಸಹ ಹೊರಟು ಹೋಗಿದ್ದರು” ಎಂದು ಅವರು ನಿರಾಶೆಯನ್ನು ವಿವರಿಸಿದ್ದಾರೆ.

ವಿವಾಹ ಸ್ಥಳದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದ್ದಂತೆ ರಾಜ್‌ಕೋಟ್ ಎಸಿಪಿ ರಾಧಿಕಾ ಭರೈ ನೇತೃತ್ವದ ಪೊಲೀಸ್ ಬೆಂಗಾವಲು ಪಡೆ ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳಕ್ಕೆ ಧಾವಿಸಿದೆ. ಆ ಹೊತ್ತಿಗೆ, ಕೆಲವು ವರರು ಈಗಾಗಲೇ ಹತಾಶೆಯಿಂದ ಹೊರಟುಹೋಗಿದ್ದರು, ಇದು ತೊಂದರೆಯನ್ನು ಮತ್ತಷ್ಟು ಹೆಚ್ಚಿಸಿತ್ತು.

ನಂತರ, ಪೊಲೀಸರು ಪರಿಸ್ಥಿತಿಯನ್ನು ಕೈಗೆತ್ತಿಕೊಂಡು ಮದುವೆಗಳು ನಡೆಯುವಂತೆ ನೋಡಿಕೊಳ್ಳಲು ಮುಂದಾದರು. ಈ ವೇಳೆ ಅವರು ಹೊರಟುಹೋದ ವರರನ್ನು ಸಂಪರ್ಕಿಸಿ, ಮದುವೆ ನಡೆಸುವುದಾಗಿ ಮತ್ತು ಹಿಂತಿರುಗುವಂತೆ ಒತ್ತಾಯಿಸಿದ್ದಾರೆ. “ಆಯೋಜಕರು ಕಣ್ಮರೆಯಾಗಿರುವುದರಿಂದ, ಪೊಲೀಸರು ಮದುವೆಗಳ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಮುಂದಾದರು” ಎಂದು ರಾಜ್‌ಕೋಟ್ ನಗರದ ಎಸಿಪಿ ರಾಧಿಕಾ ಭರೈ ಹೇಳಿದ್ದಾರೆ. “ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು” ಎಂದು ಅವರು ಇದೇ ವೇಳೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೈಸೂರು | ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ : ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್

ಮೈಸೂರು | ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ : ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...