Homeಮುಖಪುಟರಾಜಸ್ಥಾನ: ವಿವಾಹಿತ ಮಹಿಳೆ ಮೇಲೆ ಪೊಲೀಸ್‌ ಪೇದೆಯಿಂದ ಅತ್ಯಾಚಾರ; ಸಾರ್ವಜನಿಕರಿಂದ ಗೂಸಾ

ರಾಜಸ್ಥಾನ: ವಿವಾಹಿತ ಮಹಿಳೆ ಮೇಲೆ ಪೊಲೀಸ್‌ ಪೇದೆಯಿಂದ ಅತ್ಯಾಚಾರ; ಸಾರ್ವಜನಿಕರಿಂದ ಗೂಸಾ

- Advertisement -
- Advertisement -

ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಪೊಲೀಸ್‌ ಕಾನ್‌ಸೈಬಲ್‌ನನ್ನು ಮಂಚಕ್ಕೆ ಕಟ್ಟಿ ಸ್ಥಳೀಯರು ಥಳಿಸಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ.

ಕಾನ್‌ಸೈಬಲ್‌ ಮಹಶ್ ಕುಮಾರ್ ಗುರ್ಜರ್ ಅತ್ಯಾಚಾರದ ಆರೋಪಿಯಾಗಿದ್ದು, ಈತ ಮಂಗಳವಾರ ರಾತ್ರಿ 30 ವರ್ಷದ ಮಹಿಳೆ ಮನೆಯಲ್ಲಿ ಒಂಟಿಯಾಗಿರುವಾಗ ಆಕೆಯ ಮನೆಗೆ ನುಗ್ಗಿ ಅತ್ಯಾಚಾರವೆಸಗಿದ್ದಾನೆ. ಆಕೆ ಕಿರುಚಿಕೊಂಡಾಗ ನೆರೆಹೊರೆಯವರು ಸಹಾಯಕ್ಕೆ ಬಂದು ಆರೋಪಿಯನ್ನು ಹಿಡಿದಿದ್ದಾರೆ.

ಅಷ್ಟರಲ್ಲಿ ಆಕೆಯ ಕುಟುಂಬಸರು ಆತನನ್ನು ಮಂಚಕ್ಕೆ ಕಟ್ಟಿ ಥಳಿಸಿದ್ದಾರೆ ಎಂದು ಸರ್ಕಲ್ ಆಫೀಸರ್ (ಸಿಒ) ಈಶ್ವರ್ ಸಿಂಗ್‌ ಹೇಳಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಬಸ್ಸಾ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಗುರ್ಜ‌ ಅವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯಿದ್ದು, ಬಳಿಕ ಗುರ್ಜರ್ ಅವರನ್ನು ಬಿಟ್ಟು ಕಳುಹಿಸಿದ್ದಾರೆ ಎಂದು ಸಿಂಗ್‌ ಹೇಳಿದ್ದಾರೆ. ಘಟನೆ ಸಂಬಂಧ ವಿವಾಹಿತ ಮಹಿಳೆ ದೂರು ನೀಡಿದ್ದಾರೆ.

ಗುರುವಾರ ಮಹಿಳೆ ಪೊಲೀಸರಿಗೆ ದೂರು ನೀಡಿದ ಬಳಿಕ ವಿಚಾರ ತಿಳಿದು ಬಂದಿದೆ. ಮಂಗಳವಾರವೇ ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಸ್ವಾ ಪೊಲೀಸ್ ಠಾಣೆಯ ಠಾಣಾಧಿಕಾರಿ ಮತ್ತು ಕಾನ್‌ಸ್ಟೆಬಲ್ ಗುರ್ಜರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ, ಆರೋಪಿ ಕಾನ್‌ಸ್ಟೆಬಲ್ ಪರಾರಿಯಾಗಿದ್ದು, ಆತನಿಗಾಗಿ ಬಲೆ ಬೀಸಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.

ಘಟನೆ ಬಗ್ಗೆ ಸರ್ಕಲ್ ಆಫೀಸರ್ (ಸಿಒ) ಈಶ್ವರ್ ಸಿಂಗ್‌ ಮಾಹಿತಿ ನೀಡಿದ್ದು, ”ಕಾನ್‌ಸ್ಟೆಬಲ್ ಗುರ್ಜರ್ ಮಂಗಳವಾರ ರಾತ್ರಿ ಬಸ್ವಾದಲ್ಲಿ 30 ವರ್ಷದ ಮಹಿಳೆಯ ಮನೆಗೆ ಪ್ರವೇಶಿಸಿದಾಗ ಈ ಗೊಂದಲದ ಘಟನೆ ಸಂಭವಿಸಿದೆ. ಆ ಸಮಯದಲ್ಲಿ ಮಹಿಳೆ ಒಬ್ಬಂಟಿಯಾಗಿದ್ದು, ಗುರ್ಜರ್ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ” ಎಂದರು.

”ಮಹಿಳೆ ಕಿರುಚಾಡುವುದನ್ನು ಕೇಳಿಸಿಕೊಂಡ ನೆರೆಹೊರೆಯಯವರು ತಕ್ಷಣ ಸಹಾಯಕ್ಕೆ ಬಂದು ಕಾನ್‌ಸ್ಟೆಬಲ್‌ನನ್ನು ಕಟ್ಟಿಹಾಕಿದ್ದಾರೆ. ಆ ಬಳಿಕ ಸಂತ್ರಸ್ತೆಯ, ಕುಟುಂಬ ಸದಸ್ಯರು ಬಂದಿದ್ದಾರೆ. ಆಗ ಅವರು ಗುರ್ಜರ್ ಅವರ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ” ಎಂದು ಹೇಳಿದರು.

ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಮಯಕ್ಕೆ ಬಸ್ವಾ ಪೊಲೀಸ್ ಠಾಣೆಯ ಸಿಬ್ಬಂದಿ ಮಧ್ಯಪ್ರವೇಶಿಸಿ, ಗುರ್ಜರ್‌ನನ್ನು ಬಚಾವ್ ಮಾಡಿದ್ದಾರೆ. ವೈದ್ಯಕೀಯ ಪರೀಕ್ಷೆಯ ನಂತರ, ಆತನನ್ನು ಬಿಡುಗಡೆ ಮಾಡಲಾಯಿತು.

ಬಸ್ವಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಮಂಗಳವಾರವೇ ಘಟನೆಯ ಕುರಿತು ಉನ್ನತ ಅಧಿಕಾರಿಗಳಿಗೆ ತಕ್ಷಣ ವರದಿ ಮಾಡಲು ವಿಫಲವಾದ ಕಾರಣದಿಂದ ಅಮಾನತುಗೊಂಡಿದ್ದಾರೆ. SHO ಜೊತೆಗೆ, ಗುರ್ಜರ್ ಕೂಡ ಬೇರೆ ಪೊಲೀಸ್ ಠಾಣೆಯಲ್ಲಿ ತಮ್ಮ ಕರ್ತವ್ಯದಿಂದ ಅಮಾನತುಗೊಂಡಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಬಿಜೆಪಿ ಕಚೇರಿಯಲ್ಲಿ ಬೆತ್ತಲೆ ಮೃತದೇಹ ಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...