Homeಮುಖಪುಟರಾಜಸ್ಥಾನ: ವಿವಾಹಿತ ಮಹಿಳೆ ಮೇಲೆ ಪೊಲೀಸ್‌ ಪೇದೆಯಿಂದ ಅತ್ಯಾಚಾರ; ಸಾರ್ವಜನಿಕರಿಂದ ಗೂಸಾ

ರಾಜಸ್ಥಾನ: ವಿವಾಹಿತ ಮಹಿಳೆ ಮೇಲೆ ಪೊಲೀಸ್‌ ಪೇದೆಯಿಂದ ಅತ್ಯಾಚಾರ; ಸಾರ್ವಜನಿಕರಿಂದ ಗೂಸಾ

- Advertisement -
- Advertisement -

ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಪೊಲೀಸ್‌ ಕಾನ್‌ಸೈಬಲ್‌ನನ್ನು ಮಂಚಕ್ಕೆ ಕಟ್ಟಿ ಸ್ಥಳೀಯರು ಥಳಿಸಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ.

ಕಾನ್‌ಸೈಬಲ್‌ ಮಹಶ್ ಕುಮಾರ್ ಗುರ್ಜರ್ ಅತ್ಯಾಚಾರದ ಆರೋಪಿಯಾಗಿದ್ದು, ಈತ ಮಂಗಳವಾರ ರಾತ್ರಿ 30 ವರ್ಷದ ಮಹಿಳೆ ಮನೆಯಲ್ಲಿ ಒಂಟಿಯಾಗಿರುವಾಗ ಆಕೆಯ ಮನೆಗೆ ನುಗ್ಗಿ ಅತ್ಯಾಚಾರವೆಸಗಿದ್ದಾನೆ. ಆಕೆ ಕಿರುಚಿಕೊಂಡಾಗ ನೆರೆಹೊರೆಯವರು ಸಹಾಯಕ್ಕೆ ಬಂದು ಆರೋಪಿಯನ್ನು ಹಿಡಿದಿದ್ದಾರೆ.

ಅಷ್ಟರಲ್ಲಿ ಆಕೆಯ ಕುಟುಂಬಸರು ಆತನನ್ನು ಮಂಚಕ್ಕೆ ಕಟ್ಟಿ ಥಳಿಸಿದ್ದಾರೆ ಎಂದು ಸರ್ಕಲ್ ಆಫೀಸರ್ (ಸಿಒ) ಈಶ್ವರ್ ಸಿಂಗ್‌ ಹೇಳಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಬಸ್ಸಾ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಗುರ್ಜ‌ ಅವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯಿದ್ದು, ಬಳಿಕ ಗುರ್ಜರ್ ಅವರನ್ನು ಬಿಟ್ಟು ಕಳುಹಿಸಿದ್ದಾರೆ ಎಂದು ಸಿಂಗ್‌ ಹೇಳಿದ್ದಾರೆ. ಘಟನೆ ಸಂಬಂಧ ವಿವಾಹಿತ ಮಹಿಳೆ ದೂರು ನೀಡಿದ್ದಾರೆ.

ಗುರುವಾರ ಮಹಿಳೆ ಪೊಲೀಸರಿಗೆ ದೂರು ನೀಡಿದ ಬಳಿಕ ವಿಚಾರ ತಿಳಿದು ಬಂದಿದೆ. ಮಂಗಳವಾರವೇ ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಸ್ವಾ ಪೊಲೀಸ್ ಠಾಣೆಯ ಠಾಣಾಧಿಕಾರಿ ಮತ್ತು ಕಾನ್‌ಸ್ಟೆಬಲ್ ಗುರ್ಜರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ, ಆರೋಪಿ ಕಾನ್‌ಸ್ಟೆಬಲ್ ಪರಾರಿಯಾಗಿದ್ದು, ಆತನಿಗಾಗಿ ಬಲೆ ಬೀಸಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.

ಘಟನೆ ಬಗ್ಗೆ ಸರ್ಕಲ್ ಆಫೀಸರ್ (ಸಿಒ) ಈಶ್ವರ್ ಸಿಂಗ್‌ ಮಾಹಿತಿ ನೀಡಿದ್ದು, ”ಕಾನ್‌ಸ್ಟೆಬಲ್ ಗುರ್ಜರ್ ಮಂಗಳವಾರ ರಾತ್ರಿ ಬಸ್ವಾದಲ್ಲಿ 30 ವರ್ಷದ ಮಹಿಳೆಯ ಮನೆಗೆ ಪ್ರವೇಶಿಸಿದಾಗ ಈ ಗೊಂದಲದ ಘಟನೆ ಸಂಭವಿಸಿದೆ. ಆ ಸಮಯದಲ್ಲಿ ಮಹಿಳೆ ಒಬ್ಬಂಟಿಯಾಗಿದ್ದು, ಗುರ್ಜರ್ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ” ಎಂದರು.

”ಮಹಿಳೆ ಕಿರುಚಾಡುವುದನ್ನು ಕೇಳಿಸಿಕೊಂಡ ನೆರೆಹೊರೆಯಯವರು ತಕ್ಷಣ ಸಹಾಯಕ್ಕೆ ಬಂದು ಕಾನ್‌ಸ್ಟೆಬಲ್‌ನನ್ನು ಕಟ್ಟಿಹಾಕಿದ್ದಾರೆ. ಆ ಬಳಿಕ ಸಂತ್ರಸ್ತೆಯ, ಕುಟುಂಬ ಸದಸ್ಯರು ಬಂದಿದ್ದಾರೆ. ಆಗ ಅವರು ಗುರ್ಜರ್ ಅವರ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ” ಎಂದು ಹೇಳಿದರು.

ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಮಯಕ್ಕೆ ಬಸ್ವಾ ಪೊಲೀಸ್ ಠಾಣೆಯ ಸಿಬ್ಬಂದಿ ಮಧ್ಯಪ್ರವೇಶಿಸಿ, ಗುರ್ಜರ್‌ನನ್ನು ಬಚಾವ್ ಮಾಡಿದ್ದಾರೆ. ವೈದ್ಯಕೀಯ ಪರೀಕ್ಷೆಯ ನಂತರ, ಆತನನ್ನು ಬಿಡುಗಡೆ ಮಾಡಲಾಯಿತು.

ಬಸ್ವಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಮಂಗಳವಾರವೇ ಘಟನೆಯ ಕುರಿತು ಉನ್ನತ ಅಧಿಕಾರಿಗಳಿಗೆ ತಕ್ಷಣ ವರದಿ ಮಾಡಲು ವಿಫಲವಾದ ಕಾರಣದಿಂದ ಅಮಾನತುಗೊಂಡಿದ್ದಾರೆ. SHO ಜೊತೆಗೆ, ಗುರ್ಜರ್ ಕೂಡ ಬೇರೆ ಪೊಲೀಸ್ ಠಾಣೆಯಲ್ಲಿ ತಮ್ಮ ಕರ್ತವ್ಯದಿಂದ ಅಮಾನತುಗೊಂಡಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಬಿಜೆಪಿ ಕಚೇರಿಯಲ್ಲಿ ಬೆತ್ತಲೆ ಮೃತದೇಹ ಪತ್ತೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...