Homeಮುಖಪುಟರಾಜಸ್ಥಾನ: ವಿವಾಹಿತ ಮಹಿಳೆ ಮೇಲೆ ಪೊಲೀಸ್‌ ಪೇದೆಯಿಂದ ಅತ್ಯಾಚಾರ; ಸಾರ್ವಜನಿಕರಿಂದ ಗೂಸಾ

ರಾಜಸ್ಥಾನ: ವಿವಾಹಿತ ಮಹಿಳೆ ಮೇಲೆ ಪೊಲೀಸ್‌ ಪೇದೆಯಿಂದ ಅತ್ಯಾಚಾರ; ಸಾರ್ವಜನಿಕರಿಂದ ಗೂಸಾ

- Advertisement -
- Advertisement -

ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಪೊಲೀಸ್‌ ಕಾನ್‌ಸೈಬಲ್‌ನನ್ನು ಮಂಚಕ್ಕೆ ಕಟ್ಟಿ ಸ್ಥಳೀಯರು ಥಳಿಸಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ.

ಕಾನ್‌ಸೈಬಲ್‌ ಮಹಶ್ ಕುಮಾರ್ ಗುರ್ಜರ್ ಅತ್ಯಾಚಾರದ ಆರೋಪಿಯಾಗಿದ್ದು, ಈತ ಮಂಗಳವಾರ ರಾತ್ರಿ 30 ವರ್ಷದ ಮಹಿಳೆ ಮನೆಯಲ್ಲಿ ಒಂಟಿಯಾಗಿರುವಾಗ ಆಕೆಯ ಮನೆಗೆ ನುಗ್ಗಿ ಅತ್ಯಾಚಾರವೆಸಗಿದ್ದಾನೆ. ಆಕೆ ಕಿರುಚಿಕೊಂಡಾಗ ನೆರೆಹೊರೆಯವರು ಸಹಾಯಕ್ಕೆ ಬಂದು ಆರೋಪಿಯನ್ನು ಹಿಡಿದಿದ್ದಾರೆ.

ಅಷ್ಟರಲ್ಲಿ ಆಕೆಯ ಕುಟುಂಬಸರು ಆತನನ್ನು ಮಂಚಕ್ಕೆ ಕಟ್ಟಿ ಥಳಿಸಿದ್ದಾರೆ ಎಂದು ಸರ್ಕಲ್ ಆಫೀಸರ್ (ಸಿಒ) ಈಶ್ವರ್ ಸಿಂಗ್‌ ಹೇಳಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಬಸ್ಸಾ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಗುರ್ಜ‌ ಅವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯಿದ್ದು, ಬಳಿಕ ಗುರ್ಜರ್ ಅವರನ್ನು ಬಿಟ್ಟು ಕಳುಹಿಸಿದ್ದಾರೆ ಎಂದು ಸಿಂಗ್‌ ಹೇಳಿದ್ದಾರೆ. ಘಟನೆ ಸಂಬಂಧ ವಿವಾಹಿತ ಮಹಿಳೆ ದೂರು ನೀಡಿದ್ದಾರೆ.

ಗುರುವಾರ ಮಹಿಳೆ ಪೊಲೀಸರಿಗೆ ದೂರು ನೀಡಿದ ಬಳಿಕ ವಿಚಾರ ತಿಳಿದು ಬಂದಿದೆ. ಮಂಗಳವಾರವೇ ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಸ್ವಾ ಪೊಲೀಸ್ ಠಾಣೆಯ ಠಾಣಾಧಿಕಾರಿ ಮತ್ತು ಕಾನ್‌ಸ್ಟೆಬಲ್ ಗುರ್ಜರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ, ಆರೋಪಿ ಕಾನ್‌ಸ್ಟೆಬಲ್ ಪರಾರಿಯಾಗಿದ್ದು, ಆತನಿಗಾಗಿ ಬಲೆ ಬೀಸಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.

ಘಟನೆ ಬಗ್ಗೆ ಸರ್ಕಲ್ ಆಫೀಸರ್ (ಸಿಒ) ಈಶ್ವರ್ ಸಿಂಗ್‌ ಮಾಹಿತಿ ನೀಡಿದ್ದು, ”ಕಾನ್‌ಸ್ಟೆಬಲ್ ಗುರ್ಜರ್ ಮಂಗಳವಾರ ರಾತ್ರಿ ಬಸ್ವಾದಲ್ಲಿ 30 ವರ್ಷದ ಮಹಿಳೆಯ ಮನೆಗೆ ಪ್ರವೇಶಿಸಿದಾಗ ಈ ಗೊಂದಲದ ಘಟನೆ ಸಂಭವಿಸಿದೆ. ಆ ಸಮಯದಲ್ಲಿ ಮಹಿಳೆ ಒಬ್ಬಂಟಿಯಾಗಿದ್ದು, ಗುರ್ಜರ್ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ” ಎಂದರು.

”ಮಹಿಳೆ ಕಿರುಚಾಡುವುದನ್ನು ಕೇಳಿಸಿಕೊಂಡ ನೆರೆಹೊರೆಯಯವರು ತಕ್ಷಣ ಸಹಾಯಕ್ಕೆ ಬಂದು ಕಾನ್‌ಸ್ಟೆಬಲ್‌ನನ್ನು ಕಟ್ಟಿಹಾಕಿದ್ದಾರೆ. ಆ ಬಳಿಕ ಸಂತ್ರಸ್ತೆಯ, ಕುಟುಂಬ ಸದಸ್ಯರು ಬಂದಿದ್ದಾರೆ. ಆಗ ಅವರು ಗುರ್ಜರ್ ಅವರ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ” ಎಂದು ಹೇಳಿದರು.

ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಮಯಕ್ಕೆ ಬಸ್ವಾ ಪೊಲೀಸ್ ಠಾಣೆಯ ಸಿಬ್ಬಂದಿ ಮಧ್ಯಪ್ರವೇಶಿಸಿ, ಗುರ್ಜರ್‌ನನ್ನು ಬಚಾವ್ ಮಾಡಿದ್ದಾರೆ. ವೈದ್ಯಕೀಯ ಪರೀಕ್ಷೆಯ ನಂತರ, ಆತನನ್ನು ಬಿಡುಗಡೆ ಮಾಡಲಾಯಿತು.

ಬಸ್ವಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಮಂಗಳವಾರವೇ ಘಟನೆಯ ಕುರಿತು ಉನ್ನತ ಅಧಿಕಾರಿಗಳಿಗೆ ತಕ್ಷಣ ವರದಿ ಮಾಡಲು ವಿಫಲವಾದ ಕಾರಣದಿಂದ ಅಮಾನತುಗೊಂಡಿದ್ದಾರೆ. SHO ಜೊತೆಗೆ, ಗುರ್ಜರ್ ಕೂಡ ಬೇರೆ ಪೊಲೀಸ್ ಠಾಣೆಯಲ್ಲಿ ತಮ್ಮ ಕರ್ತವ್ಯದಿಂದ ಅಮಾನತುಗೊಂಡಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಬಿಜೆಪಿ ಕಚೇರಿಯಲ್ಲಿ ಬೆತ್ತಲೆ ಮೃತದೇಹ ಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...