Homeಮುಖಪುಟರಾಜಸ್ಥಾನ: ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಭುಗಿಲೆದ್ದ ಹಿಜಾಬ್‌ ವಿವಾದ

ರಾಜಸ್ಥಾನ: ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಭುಗಿಲೆದ್ದ ಹಿಜಾಬ್‌ ವಿವಾದ

- Advertisement -
- Advertisement -

ಕರ್ನಾಟಕದಲ್ಲಿ ಬಸವರಾಜ್‌ ಬೊಮ್ಮಯಿ ನೇತೃತ್ವದ ಬಿಜೆಪಿ ಸರಕಾರದ ಅವಧಿಯಲ್ಲಿ ಹಿಜಾಬ್‌ ವಿವಾದ ಸೃಷ್ಟಿಯಾಗಿತ್ತು. ಇದೀಗ ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಅಲ್ಲೂ ಹಿಜಾಬ್‌ ವಿವಾದ ಭುಗಿಲೆದ್ದಿದೆ. ರಾಜಸ್ಥಾನದಲ್ಲಿ ಬಿಜೆಪಿಯ ಭಜನ್​ಲಾಲ್​ ಶರ್ಮಾ ಅಧಿಕಾರಕ್ಕೇರಿದ ಬಳಿಕ ಮುಸ್ಲಿಂ ವಿರೋಧಿ ನೀತಿಗಳನ್ನು ಜಾರಿಗೆ ಮುಂದಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರಾಜಸ್ಥಾನದ ಸರ್ಕಾರಿ ಶಾಲೆಗಳಲ್ಲಿ ಮಾತ್ರವಲ್ಲದೆ ಖಾಸಗಿ ಶಾಲೆಗಳು ಮತ್ತು ಮದರಸಾಗಳಲ್ಲಿಯೂ ಹಿಜಾಬ್‌ನ್ನು ನಿಷೇಧಿಸಬೇಕು ಎಂದು ರಾಜಸ್ಥಾನದ ಹಿರಿಯ ಸಚಿವ ಕಿರೋರಿ ಲಾಲ್ ಮೀನಾ ಹೇಳಿದ್ದಾರೆ.

ಸಚಿವ ಕಿರೋರಿ ಲಾಲ್ ಮೀನಾ ಈ ಕುರಿತು ಮಾತನಾಡಿದ್ದು, ಶಾಲೆಗಳಲ್ಲಿ ಹಿಜಾಬ್ ಧರಿಸುವುದು ತಪ್ಪಾಗಿದೆ. ಶಾಲೆಗಳಲ್ಲಿ ಹಿಜಾಬ್ ಧರಿಸುವ ವಿಚಾರವನ್ನು ಬಿಜೆಪಿ ಶಾಸಕರು ಸರಿಯಾಗಿ ಪ್ರಸ್ತಾಪಿಸಿರುವುದರಿಂದ ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ಹೇಳಿದ್ದಾರೆ. ಶಾಲೆಯಲ್ಲಿ ಎರಡು ಡ್ರೆಸ್ ಕೋಡ್‌ಗಳ ಬಗ್ಗೆ ಬಿಜೆಪಿ ಶಾಸಕ ಬಲ್ಮುಕುಂದ್ ಆಚಾರ್ಯ ವಿಚಾರಣೆ ನಡೆಸಿರುವುದರ ವಿರುದ್ಧ ಜೈಪುರದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಸಚಿವ ಕಿರೋರಿ ಲಾಲ್ ಮೀನಾ ಈ ಹೇಳಿಕೆಯನ್ನು ನೀಡಿದ್ದಾರೆ.

ಶಾಲೆಗಳಲ್ಲಿ ಡ್ರೆಸ್ ಕೋಡ್‌ನ್ನು ಅನುಸರಿಸಬೇಕು, ಇಲ್ಲದಿದ್ದರೆ ಶಾಲೆಗಳಲ್ಲಿ ಯಾವುದೇ ಶಿಸ್ತು ಇರುವುದಿಲ್ಲ. ಡ್ರೆಸ್ ಕೋಡ್ ಅನುಸರಿಸದಿದ್ದರೆ ಪೊಲೀಸರೂ ಸಹ ಒಂದು ದಿನ ಧೋತಿಯಲ್ಲಿ ಬರಬಹುದು. ಅನೇಕ ದೇಶಗಳಲ್ಲಿ ಹಿಜಾಬ್‌ಗಳನ್ನು ನಿಷೇಧಿಸಲಾಗಿದೆ. ಮುಸ್ಲಿಮರ ಮೂಲಭೂತವಾದಿ ಧೋರಣೆ ಮತ್ತು ಕಾಂಗ್ರೆಸ್‌ನ ಮುಸ್ಲಿಮರ ಓಲೈಕೆ ನೀತಿ ಸಮುದಾಯವನ್ನು ಹಿಂದುಳಿದಂತೆ ಮಾಡಿದೆ. ಮುಸ್ಲಿಮರಲ್ಲಿ ಶಿಕ್ಷಣ ಮತ್ತು ಪ್ರಗತಿಪರ ಚಿಂತನೆಯ ಕೊರತೆಯಿದೆ. ಆದ್ದರಿಂದ ಅವರು ಅಪರಾಧದಲ್ಲಿ ಹೆಚ್ಚು ತೊಡಗುತ್ತಾರೆ ಎಂದು ಹೇಳಿದ್ದಾರೆ.

ಗಂಗಾಪೋಲ್ ಸರ್ಕಾರಿ ಬಾಲಕಿಯರ ಹಿರಿಯ ಮಾಧ್ಯಮಿಕ ಶಾಲೆಯ ಮುಸ್ಲಿಂ ವಿದ್ಯಾರ್ಥಿನಿಯರು ಶಾಲೆಯಲ್ಲಿ ಹಿಜಾಬ್  ಧರಿಸಿರುವುದನ್ನು ವಿರೋಧಿಸಿದ ಹವಾ ಮಹಲ್ ಶಾಸಕ ಆಚಾರ್ಯ ಬಲ್ಮುಕುಂದ್ ಅವರು ಕ್ಷಮೆಯಾಚಿಸುವಂತೆ ಒತ್ತಾಯಿಸಿ ಪೊಲೀಸ್ ಠಾಣೆಯ ಹೊರಗೆ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ‘ಹಿಜಾಬ್  ಮೈ ಐಡೆಂಟಿಟಿ ಮತ್ತು ಹಿಜಾಬ್ ಕೋ ಮಿಟವಾನೆ ವಾಲೇ ಮಿಟ್ಟಿ ಮಿ ಮಿಲ್ ಜಾಯೇಂಗೆ’ ಎಂಬ ಫಲಕಗಳೊಂದಿಗೆ ಪೊಲೀಸ್ ಠಾಣೆಗೆ ಘೇರಾವ್ ಹಾಕಿ, ಹಿಜಾಬ್ ಮತ್ತು ಬುರ್ಖಾ ಧರಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದಾರೆ. ಬಾಲ್ಮುಕುಂದ್ ಆಚಾರ್ಯ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಕೂಡ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಬಾಲ್ಮುಕುಂದ್ ಅವರು ಶಾಲೆಯೊಂದಕ್ಕೆ ಹೋಗಿದ್ದ ವಿಡಿಯೋ ವೈರಲ್‌ ಆಗಿತ್ತು.  ಹಿಜಾಬ್ ಮತ್ತು ಬುರ್ಖಾವನ್ನು ಧರಿಸಿರುವ ಮುಸ್ಲಿಂ ವಿದ್ಯಾರ್ಥಿನಿಯರನ್ನು ನೋಡಿ ಶಾಲೆಯ ಡ್ರೆಸ್ ಕೋಡ್ ಬಗ್ಗೆ ಪ್ರಿನ್ಸಿಪಾಲ್‌ಗೆ ಪ್ರಶ್ನಿಸಿದ್ದಾರೆ. ಶಾಲೆಯಲ್ಲಿ ಎರಡು ರೀತಿಯ ಡ್ರೆಸ್ ಕೋಡ್ ಇದೆಯೇ ಎಂದು ಪ್ರಾಂಶುಪಾಲರನ್ನು ಕೇಳಿದ್ದಾರೆ. ಒಂದು ಮುಸ್ಲಿಮರಿಗೆ ಮತ್ತು ಇನ್ನೊಂದು ಹಿಂದೂಗಳಿಗೆ ಬೇರೆ ಬೇರೆ ಡ್ರೆಸ್‌ ಕೋಡ್‌ ಇದೆಯಾ?  ಪ್ರಾಂಶುಪಾಲರು ಶಾಲೆಯಲ್ಲಿ ಒಂದೇ ಡ್ರೆಸ್ ಕೋಡ್ ಮಾತ್ರ ಇದೆ ಎಂದು ಹೇಳಿದ್ದು, ಕೆಲ ಬಾಲಕಿಯರು ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಹೇಳಿದ್ದಾರೆ.  ಶಾಲೆಗಳಲ್ಲಿ ಡ್ರೆಸ್ ಕೋಡ್ ಬಗ್ಗೆ ಚರ್ಚೆ ನಡೆಸಬೇಕಿದೆ ಎಂದು ಅವರು ಈ ವೇಳೆ ಹೇಳಿದ್ದಾರೆ.

ಪ್ರತಿಭಟನಾ ನಿರತ ಬಾಲಕಿಯರು ಈ ಪ್ರದೇಶದಲ್ಲಿ ರಸ್ತೆ ತಡೆ ನಡೆಸಿದ್ದಾರೆ. ಆದರ್ಶನಗರದ ಕಾಂಗ್ರೆಸ್ ಶಾಸಕ ರಫೀಕ್ ಖಾನ್ ಮಧ್ಯಸ್ಥಿಕೆ ವಹಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಿದ್ದಾರೆ. ಈ ವಿಚಾರದಲ್ಲಿ ವಿಧಾನಸೌಧದಲ್ಲೂ ವಿಷಯ ಪ್ರಸ್ತಾಪಿಸಲು ಅವರು ಯತ್ನಿಸಿದ್ದರು ಅದರೆ ಸ್ಪೀಕರ್ ಅದಕ್ಕೆ ಅವಕಾಶ ನೀಡಿರಲಿಲ್ಲ.

ಮೊದಲ ಬಾರಿಗೆ ಶಾಸಕರಾಗಿರುವ ಬಲ್ಮುಕುಂದ್ ಆಚಾರ್ಯ ಅವರು ಹವಾ ಮಹಲ್ ಸ್ಥಾನವನ್ನು ಪ್ರತಿನಿಧಿಸುತ್ತಿದ್ದಾರೆ. ಬಲ್ಮುಕುಂದ್ ಆಚಾರ್ಯ ಗೆಲವಿನ ಬಳಿಕ ಹಲವು ವಿವಾದವನ್ನು ಸೃಷ್ಟಿಸುತ್ತಿದ್ದಾರೆ. ಈ ಮೊದಲು ಮಾಂಸದ ವ್ಯಾಪಾರಿಗಳನ್ನು  ಭೇಟಿ ಮಾಡಿ ಅಗತ್ಯ ಪರವಾನಗಿ ಇಲ್ಲದೆ ಇದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಸಿದ್ದರು.

ಇದನ್ನು ಓದಿ: 2024ರ ಚುನಾವಣೆ ಪ್ರಜಾಪ್ರಭುತ್ವ ಉಳಿಸಲು ಜನರಿಗಿರುವ ಕೊನೆಯ ಅವಕಾಶ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...